Just In
- 1 min ago ರಾಜ್ಯದ ಕೈಜಾರಿ ತಮಿಳುನಾಡು ಸೇರಿದ 9000 ಕೋಟಿಯ ಪ್ರಾಜೆಕ್ಟ್: JLR ಇವಿ ಹಬ್ಗೆ ಸಿದ್ದವಾದ ನೆರೆ-ರಾಜ್ಯ!
- 15 min ago Google Maps: ಇವಿ ಮಾಲೀಕರೇ ಆತಂಕ ಬಿಡಿ... ಗೂಗಲ್ ಮ್ಯಾಪ್ಸ್ ಭರ್ಜರಿ ಅಪ್ಡೇಟ್!
- 41 min ago ಫ್ಯಾಮಿಲಿ ಕಾರಾಗಿ ಜನರ ಮನಗೆದ್ದ ಹ್ಯುಂಡೈ ಅಲ್ಕಾಜರ್ ಎಸ್ಯುವಿಯ ಮೇಲೆ ಭರ್ಜರಿ ಡಿಸ್ಕೌಂಟ್
- 1 hr ago Elevate: ಶ್ರೀಸಾಮಾನ್ಯನ ಬಿಎಂಡಬ್ಲ್ಯೂ.. ಹೋಂಡಾ ಎಲಿವೇಟ್ ಖರೀದಿಸಬೇಕೇ? ಆನ್-ರೋಡ್ ಬೆಲೆ ಎಷ್ಟು, EMI ಏನು?
Don't Miss!
- Movies 'ಅವತಾರ ಪುರುಷ 2'ದಿಂದ ನಿರ್ಮಾಪಕ ಜೇಬು ತುಂಬಿತೇ? ಪುಷ್ಕರ್ಗೆ ಹಕ್ಕುಗಳಿಂದ ಬಂದ ಹಣವೆಷ್ಟು?
- News Lok Sabha Election: ಗೂಗಲ್ನಲ್ಲೂ ಪ್ರಜಾಪ್ರಭುತ್ವದ ಹಬ್ಬದ ಸಂಭ್ರಮ
- Finance ಇಳಿಕೆ ಕಂಡ ನೆಸ್ಲೆ ಇಂಡಿಯಾ ಷೇರು: ಸೆರೆಲಾಕ್ನಲ್ಲಿ ಸಕ್ಕರೆ ಬಗ್ಗೆ ಸಂಸ್ಥೆಯ ಸ್ಪಷ್ಟನೆ ಏನು?
- Technology ವಿವೋ V30e ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಬೆಲೆ, ಕ್ಯಾಮೆರಾ, ವಿನ್ಯಾಸ ವಿವರ ಇಲ್ಲಿದೆ..
- Lifestyle ಸ್ವತಂತ್ರ ಭಾರತದ ಮೊದಲ ಮತದಾರನಿಲ್ಲದ ಮೊದಲ ಚುನಾವಣೆ ಇದು..! ಯಾರು ಈ ಮತದಾರ ಗೊತ್ತಾ?
- Sports IPL 2024: ಪಂಜಾಬ್ ಕಿಂಗ್ಸ್ ವಿರುದ್ಧ ಗೆದ್ದರೂ ಹಾರ್ದಿಕ್ ಪಾಂಡ್ಯಗೆ ಭಾರೀ ಮೊತ್ತದ ದಂಡ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೇಂದ್ರ ಬಜೆಟ್; ವಾಹನೋದ್ಯಮದ ಮೇಲಿನ ಪರಿಣಾಮ ಏನು?
ನಿರೀಕ್ಷೆಯಂತೆಯೇ 2014ರ ಕೇಂದ್ರ ಬಜೆಟ್ ವಾಹನೋದ್ಯಮದ ಮೇಲೆ ಅಷ್ಟೊಂದು ಕೆಟ್ಟ ಪರಿಣಾಮವನ್ನುಂಟು ಮಾಡಿಲ್ಲ. ಅಬಕಾರಿ ಸುಂಕ ರಿಯಾಯಿತಿ ಡಿಸೆಂಬರ್ ವರೆಗೆ ಮುಂದುವರಿಸಿರುವುದು ವಾಹನೋದ್ಯಮದ ಪುನಶ್ಚೇತನಕ್ಕೆ ಸಹಕಾರಿಯಾಗುವ ಭರವಸೆಯಿದೆ.
ವಿತ್ತ ಸಚಿವ ಅರುಣ್ ಜೇಟ್ಲಿ ಮಂಡಿಸಿರುವ 2014-15ನೇ ಸಾಲಿನ ಕೇಂದ್ರ ಬಜೆಟ್ನಲ್ಲಿ ತೆರಿಗೆದಾರರಿಗೆ ಉಳಿತಾಯ ಆಯ್ಕೆಯನ್ನು ಹೆಚ್ಚಿಸಿರುವುದು ವಾಹನ ಜಗತ್ತಿನ ಮೇಲೆ ಸಕರಾತ್ಮಕ ಪರಿಣಾಮ ಬೀರುವ ಸಾಧ್ಯತೆಯಿದ್ದು, ಕಾರು ಹಾಗೂ ಬೈಕ್ ಮಾರಾಟದಲ್ಲಿ ಹೆಚ್ಚಳ ಕಂಡುಬರುವ ನಿರೀಕ್ಷೆಯಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಸಿಯಾಮ್ ಸಹ ನಿರ್ದೇಶಕ ಸುಗಾಟೊ ಸೆನ್, 'ತೆರಿಗೆದಾರರಿಗೆ ಉಳಿತಾಯ ಮಾಡುವ ಆಯ್ಕೆಯನ್ನು ತೆರೆಯುವ ಮೂಲಕ ವಾಹನಗಳ ಖರೀದಿಗೆ ಉತ್ತೇಜನ ತುಂಬಿದಂತಾಗಿದೆ' ಎಂದಿದ್ದಾರೆ.
ವಾಹನಗಳ ಮೇಲಿನ ಅಬಕಾರಿ ಸುಂಕ ರಿಯಾಯಿತಿಯನ್ನು ಮುಂದಿನ ಆರು ತಿಂಗಳ ವರೆಗೆ ಮುಂದುವರಿಸಿರುವುದರಿಂದ ಜುಲೈ ತಿಂಗಳಲ್ಲಿ ಯಾವುದೇ ದರ ಏರಿಕೆ ಕಂಡುಬದಿಲ್ಲ. ಇದು ಸಹ ವಾಹನಗಳ ಮಾರಾಟ ಏರಿಕೆಯಲ್ಲಿ ಧನಾತ್ಮಕ ಪರಿಣಾಮ ಬೀರಲಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.
ಈ ನಡುವೆ ಬಜೆಟ್ ಮುಂಗಡ ಪತ್ರದಲ್ಲಿ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳಿಗೆ 37,880 ಕೋಟಿ ರು. ಮೀಸಲಿಡಲಾಗಿದೆ. ಇದಲ್ಲದೆ ಪ್ರಧಾನ್ ಮಂತ್ರಿ ಗ್ರಾಮ್ ಸಡಕ್ ಯೋಜನೆಯಂಗವಾಗಿ ಗ್ರಾಮೀಣ ಪ್ರದೇಶದ ರಸ್ತೆ ಅಭಿವೃದ್ಧಿಗೆ ಹೆಚ್ಚುವರಿ 14,389 ಕೋಟಿ ರು.ಗಳನ್ನು ಬಿಡುಗಡೆಗೊಳಿಸಿತ್ತು.
ಏತನ್ಮಧ್ಯೆ ಪ್ರತಿಕ್ರಿಯಿಸಿರುವ ಮರ್ಸಿಡಿಸ್ ಬೆಂಝ್ ಎಂಡಿ ಹಾಗೂ ಸಿಇಒ ಎಬೆರ್ಹಾರ್ಡ್ ಕೆರ್ನ್, ಒಟ್ಟಾರೆ ಬೆಳವಣಿಗೆಗೆ ಬಜೆಟ್ ಪ್ರಸ್ತಾಪಿಸಲಾಗಿದೆ. ಮೂಲಸೌಲಭ್ಯ ಅಭಿವೃದ್ಧಿಗಳಿಗೆ ಅನೇಕ ಗಮನಾರ್ಹ ಯೋಜನೆಗಳನ್ನು ಪ್ರಕಟಿಸಲಾಗಿದೆ. ಈ ಎಲ್ಲ ವಿಚಾರಗಳು ದೀರ್ಘಾವಧಿಯಲ್ಲಿ ವಾಹನೋದ್ಯಮದ ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂದಿದ್ದಾರೆ. ಇವೆಲ್ಲದರ ನಡುವೆ ವಿದ್ಯುತ್ ಚಾಲಿತ ವಾಹನಗಳಿಗೆ ಉತ್ತೇಜನ ತುಂಬಲು 24 ಕೋಟಿ ರು. ಮೀಸಲಿಡಲಾಗಿದೆ.