Just In
- 22 min ago ಅಪ್ಪ-ಮಗಳ ಭಾಂದವ್ಯ.. ಪ್ರೀತಿಯ ಪುತ್ರಿಗೆ ತಂದೆಯಿಂದ 2 ಕೋಟಿಯ ಪೋರ್ಷೆ ಕಾರು ಗಿಫ್ಟ್
- 1 hr ago ಯುವಕರಿಗೆ ಸಿಹಿಸುದ್ದಿ: ಕೈಗೆಟುಕುವ ಬೆಲೆ, ಮಾಸ್ ಲುಕ್ನಲ್ಲಿ ಬರುತ್ತಿದೆ ಹೊಸ ಬಜಾಜ್ ಪಲ್ಸರ್ 400 ಬೈಕ್
- 2 hrs ago Ola: ಓಲಾದಿಂದ ಕಡಿಮೆ ಬೆಲೆಯ 'ಎಸ್1 ಎಕ್ಸ್' ಎಲೆಕ್ಟ್ರಿಕ್ ಸ್ಕೂಟರ್ ಬಗ್ಗೆ ದೊಡ್ಡ ಘೋಷಣೆ.. ಏನದು?
- 3 hrs ago ಫೋಕ್ಸ್ವ್ಯಾಗನ್ ವರ್ಟಸ್ ಕಾರಿಗೆ ಮನಸೋತ ಗ್ರಾಹಕರು: ಭಾರೀ ಬೇಡಿಕೆ
Don't Miss!
- News ಮೋದಿ, ಅಮಿತ್ ಶಾ ಯಾವ ಮುಖ ಇಟ್ಟುಕೊಂಡು ಕರ್ನಾಟಕಕ್ಕೆ ಬರುತ್ತಾರೆ: ಸಿದ್ದರಾಮಯ್ಯ ಗರಂ
- Lifestyle ಚಪಾತಿ, ಅನ್ನಕ್ಕೆ ಟೊಮೆಟೋ ಬೇಳೆ ಸಾರು ಸಖತ್ ರುಚಿ..! ಮಾಡೋದು ಸುಲಭ..!
- Finance ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 10 ಹಳದಿ ಅನಕೊಂಡ ಸಹಿತ ವ್ಯಕ್ತಿ ಬಂಧನ
- Movies Sathya : ತಾಜ್ ಮಹಲ್ ಎದುರು ನಿಂತ ಸತ್ಯಾ, ಪತಿ ಜೊತೆ ಗೌತಮಿ ಪ್ರವಾಸ...!
- Sports ಟಿ20 ವಿಶ್ವಕಪ್-2024: "ಬಾಗಿಲು ಮುಚ್ಚಿದ್ದೇನೆ" ಎಂದಿದ್ದೇಕೆ ಸ್ಪಿನ್ ಮಾಂತ್ರಿಕ ನರೈನ್
- Technology Google: ಗೂಗಲ್ ಪಿಕ್ಸೆಲ್ 8a ಬೆಲೆ ಮಾಹಿತಿ ಲೀಕ್! ಈ ಫೋನ್ ಫೀಚರ್ಸ್ ಏನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಡಿಸೆಂಬರ್ ಅಂತ್ಯದ ವರೆಗೆ ಅಬಕಾರಿ ಸುಂಕ ಏರಿಕೆಯಿಲ್ಲ
ಗಮನಾರ್ಹ ಬೆಳವಣಿಗೆಯೊಂದರಲ್ಲಿ ವಾಹನಗಳ ಮೇಲಿನ ಅಬಕಾರಿ ಸುಂಕವನ್ನು 2014 ಡಿಸೆಂಬರ್ 31ರ ವರೆಗೆ ಏರಿಕೆ ಮಾಡದಿರಲು ನೂತನ ಕೇಂದ್ರ ಸರಕಾರ ನಿರ್ಧರಿಸಿದೆ. ಇದರಿಂದಾಗಿ ಭಾರತೀಯ ವಾಹನ ತಯಾರಕ ಸಂಸ್ಥೆಗಳ ಜೊತೆಗೆ ನೂತನ ಖರೀದಿಗಾರರು ನಿಟ್ಟುಸಿರು ಬಿಡುವಂತಾಗಿದೆ.
ಕಳೆದ ಕೇಂದ್ರ ಸರಕಾರ ಮಂಡಿಸಿದ್ದ ತಾತ್ಕಾಲಿಕ ಬಜೆಟ್ನಲ್ಲಿ ವಾಹನಗಳ ಮೇಲಿನ ಅಬಕಾರಿ ಸುಂಕವನ್ನು ಇಳಿಕೆಗೊಳಿಸಲಾಗಿತ್ತು. ಇದು ಜೂನ್ 30ರ ವರೆಗೆ ಜಾರಿಯಲ್ಲಿರಲಿದೆ. ಇದರಿಂದಾಗಿ ನೂತನ ಸರಕಾರ ದರ ಏರಿಕೆ ನೀತಿ ಅನುಸರಿಸಿತೇ ಎಂಬುದು ತೀವ್ರ ಕುತೂಹಲ ಕೆರಳಿಸಿತ್ತು.
ಆದರೆ ಈ ಸಂಬಂಧ ಹೇಳಿಕೆ ಹೊರಡಿಸಿರುವ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರಕಾರದ ವಿತ್ತ ಸಚಿವ ಅರುಣ್ ಜೇಟ್ಲಿ ವಾಹನಗಳ ಮೇಲಿನ ಅಬಕಾರಿ ಸುಂಕವು 2014 ಡಿಸೆಂಬರ್ 31ರ ವರೆಗೆ ಶೇಕಡಾ 3ರಿಂದ 6ರಂತೆಯೇ ಮುಂದುವರಿಯಲಿದೆ ಎಂದಿದ್ದಾರೆ.
ಕೇಂದ್ರ ಸರಕಾರದಿಂದ ವ್ಯಕ್ತವಾಗಿರುವ ಪೂರಕ ನಿಲುವನ್ನು ಸ್ವಾಗತಿಸಿರುವ ಭಾರತೀಯ ವಾಹನ ತಯಾರಕ ಸಂಸ್ಥೆಗಳ ಒಕ್ಕೂಟದ (ಸಿಯಾಮ್) ಅಧ್ಯಕ್ಷ ವಿಕ್ರಮ್ ಕಿರ್ಲೊಸ್ಕರ್, "ಅಬಕಾರಿ ಸುಂಕ ಇಳಿಕೆಯ ಕಾಲಾವಧಿಯನ್ನು ಮುಂದುವರಿಸಿರುವುದು ಗ್ರಾಹಕರ ಮನೋಭಾವದ ಮೇಲೆ ಧನಾತ್ಮಕ ಪರಿಣಾಮ ಬೀರಲಿದ್ದು, ಈ ಮೂಲಕ ಕಳೆದ ಎರಡು ವರ್ಷಗಳಿಂದ ಕುಸಿದು ಹೋಗಿರುವ ವಾಹನೋದ್ಯಮ ಕೈಗಾರಿಕಾ ಕ್ಷೇತ್ರದಲ್ಲಿ ನಿರಂತರ ಚೇತರಿಕೆ ಕಾಣಬಹುದಾಗಿದೆ" ಎಂಬ ಆಶಾಭಾವನೆ ವ್ಯಕ್ತಪಡಿಸಿದ್ದಾರೆ.
ಮಾತು ಮುಂದುವರಿಸಿದ ಅವರು, "ದೀರ್ಘಾವಧಿಯಲ್ಲಿ ವಾಹನ ಕ್ಷೇತ್ರದಲ್ಲಿ ಬೆಳವಣಿಗೆ ಮರು ತರುವಲ್ಲಿ ಇದರಿಂದ ಸಾಧ್ಯವಾಗಲಿದ್ದು, ಉದ್ಯಮದಲ್ಲಿ ಹೂಡಿಕೆ ಹೆಚ್ಚುವ ಮೂಲಕ ಹೆಚ್ಚಿನ ಉದ್ಯೋಗ ಉತ್ತೇಜಿಸಬಹುದಾಗಿದೆ. ಇಂತಹದೊಂದು ಕ್ರಮ ಕೈಗೊಂಡಿರುವ ಕೇಂದ್ರ ಸರಕಾರಕ್ಕೆ ಧನ್ಯವಾದ ಸಲ್ಲಿಸುತ್ತಿದ್ದೇವೆ" ಎಂದಿದ್ದಾರೆ.
ಅಬಕಾರಿ ಸುಂಕ ಕಡಿತಗೊಳಿಸಿರುವ ನಿಜವಾದ ಶ್ರೇಯ ಕಳೆದ ಯುಪಿಎ ಸರಕಾರದ ವಿತ್ತ ಸಚಿವರಾಗಿದ್ದ ಪಿ ಚಿದಂಬರಂ ಅವರಿಗೆ ಸಲ್ಲುತ್ತದೆ. ಅಂದಿನ ತಾತ್ಕಾಲಿಕ ಬಜೆಟ್ನಲ್ಲಿ ಎಸ್ಯುವಿ ಶೇಕಡಾ 24, ಮಧ್ಯ ಗಾತ್ರದ ವಾಹನಗಳಿಗೆ ಶೇಕಡಾ 20ರಿಂದ 24 ಹಾಗೆಯೇ ದ್ವಿಚಕ್ರ ವಾಹನಗಳಿಗೆ ಶೇಕಡಾ 8ರಷ್ಟು ಅಬಕಾರಿ ಸುಂಕ ವಿಧಿಸಲಾಗಿತ್ತು.