Just In
- 31 min ago Self-Driving Car: ಭಾರತೀಯರು ಅಸಮಾನ್ಯರು... ಬೊಲೆರೋದಲ್ಲಿ ಭವಿಷ್ಯ ಬದಲಿಸುವ ತಂತ್ರಜ್ಞಾನ!
- 2 hrs ago ನಟ ವಿಜಯ್ ನೋಡಲು ಬಂದ ಜನಸಾಗರ: ಅಭಿಮಾನಿಗಳಿಂದ ನಟನ ಕಾರಿಗೆ ಹಾನಿ!
- 2 hrs ago ಕಾಶ್ಮೀರ ಟು ಕನ್ಯಾಕುಮಾರಿ ಟ್ರಿಪ್ ಮುಗಿಸಿದ ಎಲೆಕ್ಟ್ರಿಕ್ ಸ್ಕೂಟರ್: ಗೇಮ್ ಚೇಂಜರ್ ಅಖಾಡಕ್ಕೆ
- 3 hrs ago Mahindra Bolero: ಅಪಘಾತವಾದ ಕಾರಿಗೆ ಅದ್ದೂರಿ ಮಾಡಿಫಿಕೇಷನ್: ವಿಡಿಯೋಗೆ ವಾವ್ ಎನ್ನಲೇಬೇಕು!
Don't Miss!
- News ಚಿತ್ರದುರ್ಗ: ಬೆಂಕಿ ಹಚ್ಚಿಕೊಂಡು ಇಬ್ಬರು ಮಕ್ಕಳ ಜೊತೆ ತಾಯಿ ಆತ್ಮಹತ್ಯೆ
- Lifestyle ಕೊನೆಗೂ ಬೆಂಗಳೂರಿಗೆ ಮಳೆ ಭಾಗ್ಯ..! ಹವಾಮಾನ ಇಲಾಖೆ ಸೂಚಿಸಿದ ದಿನಾಂಕವಿದು..!
- Movies ಹೆಂಗಿದ್ದ ನಟ ಹೆಂಗಾದ ನೋಡಿ; ಪಾತ್ರಕ್ಕಾಗಿ 30 ಕೆಜಿ ತೂಕ ಇಳಿಸಿಕೊಂಡ ರಣ್ದೀಪ್ ಹೂಡ!
- Sports Viral look: IPL 2024 ಆರಂಭಕ್ಕೂ ಮುನ್ನ ಸಾಮಾಜಿಕ ತಾಣದಲ್ಲಿ ಸಂಚಲನ ಮೂಡಿಸಿರುವ ವಿರಾಟ್ ಕೊಹ್ಲಿ Trendy look
- Technology Lava: ಭಾರತದಲ್ಲಿ ಸುನಾಮಿ ಎಬ್ಬಿಸಲಿದೆ ಲಾವಾ O2! ನಿರೀಕ್ಷಿತ ಫೀಚರ್ಸ್ ಬಗ್ಗೆ ತಿಳಿಯಿರಿ
- Finance ಬೆಂಗಳೂರಿನ ಮೇಘನಾ ಫುಡ್ಸ್ ಹೋಟೆಲ್ ಮಳಿಗೆಗಳ ಮೇಲೆ ಐಟಿ ದಾಳಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೆಎಸ್ಆರ್ಟಿಸಿ ಬಲವರ್ಧನೆ; ಮಾರ್ಚ್ ವೇಳೆಗೆ 6,000 ಹೊಸ ಬಸ್ಸುಗಳ ಸೇರ್ಪಡೆ
ಮುಂದಿನ ವರ್ಷ ಮಾರ್ಚ್ ವೇಳೆಯಾಗುವಾಗ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಡಿಯಲ್ಲಿ (ಕೆಎಸ್ ಆರ್ ಟಿಸಿ) ಕಾರ್ಯ ನಿರ್ವಹಿಸುತ್ತಿರುವ ಎಲ್ಲ ನಾಲ್ಕು ನಿಗಮಗಳಿಗೆ ಒಟ್ಟು 6,000 ಬಸ್ಸುಗಳನ್ನು ಹಸ್ತಾಂತರಿಸಲಾಗುವುದು ಎಂದು ರಾಜ್ಯ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನ ಶಾಂತಿನಗರ ಕೆಎಸ್ ಆರ್ ಟಿಸಿ ನಿಲ್ದಾಣದಲ್ಲಿ ಕರ್ನಾಟಕ ಸಾರಿಗೆಯ 70 ನೂತನ ಬಸ್ಸುಗಳಿಗೆ ಚಾಲನೆ ನೀಡಿ ಮಾತನಾಡಿದ್ದ ರಾಮಲಿಂಗಾ ರೆಡ್ಡಿ, ದೇಶದಲ್ಲೇ ಅತ್ಯುತ್ತಮ ಸಾರಿಗೆ ಸೇವೆಯನ್ನು ನೀಡಲಾಗುತ್ತಿದೆ ಎಂದಿದ್ದಾರೆ.
ಇದೇ ಮೊದಲ ಬಾರಿಗೆ ಐಚರ್ ಮೋಟಾರ್ಸ್ ನಿಂದ ಕರ್ನಾಟಕ ಸಾರಿಗೆ ಬಸ್ಸುಗಳನ್ನು ಖರೀದಿಸಲಾಗಿದೆ. ಇತರೆ ಬಸ್ಸುಗಳಿಗೆ ಹೋಲಿಸಿದಾಗ ಇದು ಹೆಚ್ಚು ಮೈಲೇಜ್ ನೀಡುವಲ್ಲಿ ಯಶಸ್ವಿಯಾಗಲಿದೆ.
ಇದಕ್ಕೂ ಮೊದಲು ಟಾಟಾ ಮೋಟಾರ್ಸ್ ಹಾಗೂ ಅಶೋಕ್ ಲೇಲ್ಯಾಂಡ್ ನಿಂದಲೂ ಟೆಂಡರ್ ಪಡೆಯಲಾಗಿತ್ತು. ಆದರೆ ಎಲ್ಲ ರೀತಿಯ ಸಾಧಕ ಬಾಧಕಗಳನ್ನು ಪರಿಶೋಧಿಸಿದ ಬಳಿಕ ಐಚರ್ ಮೋಟಾರ್ಸ್ ಬಸ್ಸುಗಳಿಗೆ ಮೊರೆ ಹೋಗಲಾಗಿದೆ.
19.20 ಲಕ್ಷ ರುಪಾಯಿಗಳಷ್ಟು ದುಬಾರಿಯೆನಿಸಿರುವ ಈ ಡೀಸೆಲ್ ಬಸ್ಸುಗಳು ಪ್ರತಿ ಲೀಟರ್ ಗೆ 5.8 ಕೀ.ಮೀ. ಗಳಷ್ಟು ಇಂಧನ ಕ್ಷಮತೆ ನೀಡಲಿದೆ. ಮುಂದಿನ ವರ್ಷದಲ್ಲಿ ಐಚರ್ ನಿಂದ ಇಂತಹ 1594 ಬಸ್ಸುಗಳನ್ನು ಖರೀದಿ ಮಾಡಲಾಗುವುದು.