Just In
- 2 hrs ago ಇನ್ಮುಂದೆ ಟೋಲ್ ಪ್ಲಾಜಾಗಳು ಕಣ್ಮರೆ: ಖುಷಿ ಪಡುವ ಮುನ್ನ ಈ ಸುದ್ದಿ ನೋಡಿ...
- 2 hrs ago Bullet Train: ಭಾರತದಲ್ಲಿ ಮೊದಲ ಬಾರಿಗೆ ನವೀನ ರೀತಿಯ ಹಳಿ ಬಳಕೆ.. 320 ಕಿ.ಮೀ ವೇಗದಲ್ಲಿ ಓಡುತ್ತೆ ರೈಲು!
- 2 hrs ago ಬ್ರಿಟೀಷ್ ಮಾರುಕಟ್ಟೆಯನ್ನು ಆಳಲು ಹೊರಟ ಭಾರತೀಯ ಬೈಕ್: ಯುಕೆ ನಲ್ಲಿ ಟ್ರಯಂಫ್ಗೆ ನೇರ ಹಣಾಹಣಿ!
- 2 hrs ago Tata Curvv Vs Citroen Basalt: ಟಾಟಾಗೆ ಸೆಡ್ಡು ಹೊಡೆಯುವ ತಾಕತ್ತಿದೆಯೇ?
Don't Miss!
- News Poornachandra Tejaswi: ವಿಸ್ಮಯಲೋಕವನ್ನೇ ತೆರೆದಿಡುವ ತೇಜಸ್ವಿಯವರ ಪುಸ್ತಕಗಳು
- Lifestyle ಗ್ರಹಣ ಕಾಲದಲ್ಲಿ ಆಹಾರ ಸೇವಿಸಬಾರದೇಕೆ.? ಹಿರಿಯರ ವಾದವೇನು..?
- Technology ಬಜೆಟ್ ದರದಲ್ಲಿ ಬೆಸ್ಟ್ 5G ಫೋನ್ ಬೇಕಿದ್ರೆ, ಈ ಲಿಸ್ಟ್ ಒಮ್ಮೆ ಗಮನಿಸಿ!
- Finance ಆದಾಯ ತೆರಿಗೆ ಇಲಾಖೆಯಿಂದ ಕಾಂಗ್ರೆಸ್ಗೆ 1,823 ಕೋಟಿ ರೂ. ನೋಟಿಸ್: ತೆರಿಗೆ ಭಯೋತ್ಪಾದನೆ ನಿಲ್ಲಲೇಬೇಕು ಎಂದ ಪಕ್ಷ
- Sports Kohli vs Gambhir: ಹೈ-ವೋಲ್ಟೇಜ್ ಪಂದ್ಯದ ಬಗ್ಗೆ ಕೌಂಟರ್ ನೀಡಿದ ದಿನೇಶ್ ಕಾರ್ತಿಕ್
- Movies ಲಂಡನ್ನಲ್ಲಿ ಬಾಡಿಗೆಗೆ ಪಡೆದಿದ್ದ ಬಂಗಲೆಯನ್ನೇ ಖರೀದಿಸಿದ್ರಾ ಪ್ರಭಾಸ್?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಿಯಾಯಿತಿ ನೀಡಿದ್ದರ ಪರಿಣಾಮ ವಾಹನ ತಯಾರಕ ಸಂಸ್ಥೆಗಳಿಗೆ ಆಗಿರುವ ನಷ್ಟ ರೂ 12 ಸಾವಿರ ಕೋಟಿ ಅಷ್ಟೇ !!
ಭಾರತದಲ್ಲಿ ಈಗಾಗಲೇ ಬಿಎಸ್-III ಎಂಜಿನ್ ಹೊಂದಿರುವ ವಾಹನಗಳ ಉತ್ಪಾದನೆ ಮತ್ತು ಮಾರಾಟ ನಿಷೇದ ಮಾಡಲಾಗಿದ್ದು, ಇದರ ಪರಿಣಾಮವಾಗಿ ರೂ. 5,000 ಕೋಟಿ ಮೌಲ್ಯದ ವಾಹನಗಳು ಮಾರಾಟವಾಗದೆ ಉಳಿದಿವೆ.
ಸುಪ್ರೀಂ ಕೋರ್ಟ್ ಏಪ್ರಿಲ್ 1ರಿಂದ ದೇಶದಲ್ಲಿ ಬಿಎಸ್-III ಎಂಜಿನ್ ಹೊಂದಿರುವ ವಾಹನಗಳ ಉತ್ಪಾದನೆ ಮತ್ತು ಮಾರಾಟ ನಿಷೇಧ ಮಾಡಿದ್ದು, ಇದರಿಂದಾಗಿ ಸರಿ ಸುಮಾರು ರೂ. 5,000 ಕೋಟಿಯಷ್ಟು ಬೆಲೆಬಾಳುವ ಬಿಎಸ್- III ವಾಹನಗಳು ಮಾರಾಟವಾಗದೆ ಹಾಗೆ ಉಳಿದಿದ್ದು, ಇದರಿಂದಾಗಿ ವಾಹನ ತಯಾರಕ ಕಂಪನಿಗಳು ಇಕ್ಕಟ್ಟಿಗೆ ಸಿಲುಕಿವೆ.
ವಾಹನ ತಯಾರಕರು ಬಿಎಸ್-III ವಾಹನಗಳ ಮೇಲೆ ಭಾರೀ ರಿಯಾಯಿತಿ ನೀಡಿದ ಹೊರತಾಗಿಯೂ ಹೆಚ್ಚು ಕಡಿಮೆ 5 ಸಾವಿರ ಕೋಟಿ ನಷ್ಟ ಸಂಭವಿಸಿರುವುದು, ಕಂಪನಿಗಳಿಗೆ ದೊಡ್ಡ ಮಟ್ಟದ ಹಿನ್ನಡೆ ಉಂಟು ಮಾಡಿದೆ.
ಅಂಕಿ ಅಂಶಗಳ ಪ್ರಕಾರ ಇಲ್ಲಿಯವರೆಗೆ ಬಿಎಸ್-III ವಾಹನಗಳ ಮಾರಾಟ ಮತ್ತು ನೋಂದಣಿ ಮೇಲಿನ ನಿಷೇಧದಿಂದಾಗಿ ಆಟೋ ತಯಾರಕ ಸಂಸ್ಥೆಗಳಿಗೆ 20,000 ಕೋಟಿ ರೂ ನಷ್ಟವಾಗಿದೆ ಎನ್ನಲಾಗಿದೆ.
ಏಪ್ರಿಲ್ 1ರ ಒಳಗಾಗಿ ಬಿಎಸ್-III ವಾಹನಗಳನ್ನು ಮಾರಾಟ ಮಾಡಲೇ ಬೇಕು ಎಂಬ ಇಕ್ಕಟಿಗೆ ಸಿಲುಕಿ ಹೋಂಡಾ, ಬಜಾಜ್ ಸೇರಿ ಮತ್ತಿತರ ಕಂಪನಿಗಳು ವಾಹನಗಳ ಮೇಲೆ ಭಾರಿ ರಿಯಾಯಿತಿ ನೀಡಿದ್ದವು.
ನೀವು ನಂಬಿದರೆ ನಂಬಿ ಬಿಟ್ಟರೆ ಬಿಡಿ, ಈ ರೀತಿಯ ರಿಯಾಯಿತಿ ನೀಡಿದ್ದರ ಪರಿಣಾಮ ವಾಹನ ತಯಾರಕ ಸಂಸ್ಥೆಗಳಿಗೆ ಆಗಿರುವ ನಷ್ಟ ರೂ 1,2000 ಕೋಟಿ ಅಷ್ಟೇ !!
ವ್ಯವಹಾರದಲ್ಲಿ ಅನಿರೀಕ್ಷಿತ ಬೆಳವಣಿಗೆಗಳಿಂದಾಗಿ ಆಟೋ ಮೊಬೈಲ್ ಕ್ಷೇತ್ರದ ಹೂಡಿಕೆಯ ಮೇಲೆ ನೇರ ಪರಿಣಾಮ ಬೀರಲಿದೆ ಎಂಬ ಅಭಿಪ್ರಾಯವನ್ನು ಸೊಸೈಟಿ ಆಫ್ ಇಂಡಿಯನ್ ಆಟೋಮೊಬೈಲ್ ತಯಾರಕರ ಸಂಸ್ಥೆ (SIAM) ವ್ಯಕ್ತಪಡಿಸಿದೆ.
ಎಸ್ಐಎಎಂ ಮಹಾನಿರ್ದೇಶಕ ವಿಷ್ಣು ಮಾಥುರ್ ಹೇಳುವ ಪ್ರಕಾರ, ಸದ್ಯ 1.2 ಲಕ್ಷ ಬಿಎಸ್-III ವಾಹನಗಳು ಮಾರಾಟವಾಗದೆ ಉಳಿದಿದ್ದು, ಈ 1.2 ಲಕ್ಷ ಬಿಎಸ್-III ವಾಹನಗಳ ಬೆಲೆ ರೂ. 5,000 ಎನ್ನಲಾಗಿದೆ.
ಈ ರಿಯಾಯತಿ ನೀಡುವ ಸ್ಪರ್ಧೆಯಲ್ಲಿ ಹೆಚ್ಚಿನ ಮಟ್ಟದ ಯಶಸ್ಸು ಸಾಧಿಸಿದ್ದು ಕೇವಲ ದ್ವಿಚಕರ ವಾಹನಗಳು ಎನ್ನುವುದನ್ನು ಎಸ್ಐಎಎಂ ಮಹಾನಿರ್ದೇಶಕ ವಿಷ್ಣು ಮಾಥುರ್ ಒಪ್ಪಿಕೊಳ್ಳುತ್ತಾರೆ.
ಇನ್ನು ಆದೇಶದ ಬಗ್ಗೆ ಹೇಳುವುದಾದರೆ, ಕಳೆದ ವರ್ಷ ಈ ಬಿಎಸ್ III ಎಂಜಿನ್ ಹೊಂದಿರುವ ವಾಹನಗಳಿಂದ ಪರಿಸರಕ್ಕೆ ಆಗುತ್ತಿರುವ ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಸುಪ್ರೀಂ ಕೋರ್ಟಿನಲ್ಲಿ ಅರ್ಜಿ ಸಲ್ಲಿಸಿತ್ತು.
ಅರ್ಜಿ ಬಗ್ಗೆ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾದ ಮದನ್ ಬಿ ಲೋಕುರ್ ಮತ್ತು ದೀಪಕ್ ಗುಪ್ತಾ ಬೆಂಚ್, ವಾಣಿಜ್ಯ ಹಿತಾಸಕ್ತಿಗಿಂತ ಲಕ್ಷಾಂತರ ಜನರ ಆರೋಗ್ಯದ ಹಿತಾಸಕ್ತಿ ಮುಖ್ಯ ಎಂಬ ತೀರ್ಪು ನೀಡಿತ್ತು.
ಸುಪ್ರೀಂ ಕೋರ್ಟ್ ಮಾರ್ಚ್ 31ರ ಬಳಿಕ ಬಿಎಸ್ III (ಭಾರತ್ ಸ್ಟೇಜ್ III) ಎಂಜಿನ್ ಹೊಂದಿರುವ ವಾಹನಗಳ ನೋಂದಣಿ ಪ್ರಕ್ರಿಯೆ ನಿಲ್ಲಿಸುವಂತೆ ಸರ್ಕಾರಕ್ಕೆ ಆದೇಶಿಸಿ ತೀರ್ಪನ್ನು ನೀಡಿತ್ತು.