Just In
- 9 hrs ago ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- 10 hrs ago KTM Duke 125 ಬೆಲೆಗೆ ಯಾವೆಲ್ಲಾ ಬೈಕ್ಗಳು ಸಿಗುತ್ತೆ ಗೊತ್ತಾ?: ಪಲ್ಸರ್ನಿಂದ ಹಿಡಿದು MT 15 ವರೆಗೆ
- 11 hrs ago ಅಡ್ವೆಂಚರ್ ಬೈಕ್ ಪ್ರಿಯರಿಗೆ ಸಿಹಿಸುದ್ದಿ: ಬಿಡುಗಡೆಗೆ ಸಜ್ಜಾದ ಸುಜುಕಿ V-Strom 800 DE ಬೈಕ್
- 11 hrs ago Maruti Suzuki: 2024ರ ಮಾರುತಿ ಸ್ವಿಫ್ಟ್ ವಿಶೇಷತೆಗಳು: ಸನ್ರೂಫ್, 35 ಕಿ.ಮೀ ಮೈಲೇಜ್!
Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Movies "ನಾವು ದಕ್ಷಿಣ ಭಾರತದವರಾಗಿದ್ರೂ ಭಾಷೆ ಬರುತ್ತೆ, ಸುಂದರವಾಗಿಯೂ ಇದ್ದೇವೆ"; ನಟಿ ಪ್ರಿಯಾಮಣಿ
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಾರುತಿ ನೆಕ್ಸಾ ಶೋರಂನಲ್ಲಿ ಅಗ್ನಿ ಅವಘಡ- ಇಬ್ಬರು ಸಜೀವ ದಹನ
ಆಕಸ್ಮಿಕ ಅಗ್ನಿ ಅವಘಡ ಹಿನ್ನೆಲೆ ಮಾರುತಿ ನೆಕ್ಸಾ ಕಾರು ಶೋರಂ ಹೊತ್ತಿ ಉರಿದಿರುವ ಘಟನೆ ಮುಂಬೈನಲ್ಲಿ ನಡೆದಿದೆ.
ಮಾರುತಿ ನೆಕ್ಸಾ ಕಾರು ಶೋರಂನಲ್ಲಿ ಸಂಭವಿಸಿದ ಅಗ್ನಿಅವಘಡದಲ್ಲಿ ಇಬ್ಬರು ಕಾರ್ಮಿಕರು ಸಜೀವ ದಹನವಾಗಿರುವ ಘಟನೆ ಮುಂಬೈನಲ್ಲಿ ನಡೆದಿದ್ದು, ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಬೆಳ್ಳಂಬೆಳಗ್ಗೆ 5 ಗಂಟೆಗೆ ಈ ಘಟನೆ ನಡೆದಿದ್ದು, ಕಾರು ಶೋರಂನಲ್ಲಿ ತಂಗಿದ್ದ ಇಬ್ಬರು ಕಾರ್ಮಿಕರು ಅಗ್ನಿ ಅವಘಡದಲ್ಲಿ ಸಿಲುಕಿ ಸಾವನ್ನಪ್ಪಿದ್ದಾರೆ.
ಪ್ರಾಥಮಿಕ ವರದಿಗಳ ಪ್ರಕಾರ ಘಟನೆಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ಹೇಳಲಾಗುತ್ತಿದ್ದು, ತನಿಖೆ ಪೂರ್ಣಗೊಂಡ ನಂತರವೇ ಘಟನೆಗೆ ನಿಖರ ಕಾರಣ ತಿಳಿಯಲಿದೆ.
ಇನ್ನು ಬೆಂಕಿಯ ಕೆನ್ನಾಲಿಗೆಯನ್ನು ತಡೆಯಲು ಹರಸಾಹಸ ಪಟ್ಟ ಅಗ್ನಿಶಾಮಕ ದಳ ಸಿಬ್ಬಂದಿ, ಬೆಂಕಿ ಅವಘಡದಲ್ಲಿ ಸಿಲುಕಿದ್ದ ಕಾರ್ಮಿಕರನ್ನು ರಕ್ಷಿಸಲು ಪಟ್ಟ ಸಾಹಸ ಅಷ್ಟಿಷ್ಟಲ್ಲ.
ಅದರ ಹೊರತಾಗಿಯೂ ಇಬ್ಬರು ಕಾರ್ಮಿಕರು ಬೆಂಕಿ ಜ್ವಾಲೆಗೆ ಶೋರಂ ಒಳಭಾಗದಲ್ಲೇ ಬೆಂದು ಹೋಗಿದ್ದು, ಸಾವನ್ನಪ್ಪಿದ ಕಾರ್ಮಿಕರು ಯಾರು ಎಂಬುದು ಇನ್ನು ಪತ್ತೆಯಾಗಿಲ್ಲವಾದರೂ ಸೆಕ್ಯೂರಿಟಿ ಗಾರ್ಡ್ ಎಂಬುವುದು ಮಾತ್ರ ತಿಳಿದು ಬಂದಿದೆ.
ಈ ಮಧ್ಯೆ ಘಟನೆ ನಡೆಯುತ್ತಿದ್ದಂತೆ ಶೋರಂ ಮಾಲೀಕನನ್ನು ವಶಕ್ಕೆ ಪಡೆದಿರುವ ಪೊಲೀಸರು, ಸುರಕ್ಷಾ ಕ್ರಮಗಳನ್ನು ಕೈಗೊಳ್ಳದಿರುವ ಬಗ್ಗೆ ತನಿಖೆ ನಡೆಸಿದ್ದಾರೆ. ಹೀಗಾಗಿ ಘಟನೆಗೆ ಮಾಲೀಕನ್ನೇ ಹೊಣೆ ಮಾಡಲಾಗಿದ್ದು, ಕಠಿಣ ಕ್ರಮ ಕೈಗೊಳ್ಳುವ ಸಾಧ್ಯತೆಗಳಿವೆ.
ಆದ್ರೆ ಅದೇನೇ ಇರಲಿ ಶೋರಂನಲ್ಲಿ ಸರಿಯಾದ ಸುರಕ್ಷಾ ಕ್ರಮ ಇದ್ದಿದ್ದರೇ ಇಬ್ಬರು ಅಮಾಯಕರ ಜೀವ ಉಳಿಯುತ್ತಿತ್ತು. ಹೀಗಾಗಿ ಇಗಲಾದ್ರೂ ಸುರಕ್ಷಾ ಕ್ರಮಗಳನ್ನು ಕೈಗೊಳ್ಳುವಂತೆ ಹೊಸ ಮಾರ್ಗಸೂಚಿಗಳನ್ನು ರೂಪಿಸಬೇಕಿರುವ ಪೊಲೀಸರು, ಇಂತವರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕಿದೆ.