Just In
- 3 min ago Tata Nexon: ಟಾಟಾ ನೆಕ್ಸಾನ್ ಹೊಸ ರೂಪಾಂತರಗಳು ಬಿಡುಗಡೆ, ರೂ.10 ಲಕ್ಷ ಬೆಲೆ.. ಆಕರ್ಷಕ ವೈಶಿಷ್ಟ್ಯಗಳು
- 1 hr ago Jonty Rhodes: ರಾಯಲ್ ಎನ್ಫೀಲ್ಡ್ ಬೈಕ್ಗಳಿಗೆ ಮನಸೋತ ದ.ಆಫ್ರಿಕಾ ಕ್ರಿಕೆಟರ್!
- 14 hrs ago ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- 15 hrs ago KTM Duke 125 ಬೆಲೆಗೆ ಯಾವೆಲ್ಲಾ ಬೈಕ್ಗಳು ಸಿಗುತ್ತೆ ಗೊತ್ತಾ?: ಪಲ್ಸರ್ನಿಂದ ಹಿಡಿದು MT 15 ವರೆಗೆ
Don't Miss!
- Sports Riyan Parag: 'ಗಾಯದಿಂದ ಮೂರು ದಿನ ಒದ್ದಾಡಿ ಹೋಗಿದ್ದೆ': ರಿಯಾನ್ ಪರಾಗ್
- News RCB vs KKR: ಕ್ರಿಕೆಟ್ ಪ್ರೇಮಿಗಳೇ... ಪ್ರಯಾಣಿಕರೇ ರಸ್ತೆಗಿಳಿಯುವ ಮುನ್ನ ಒಮ್ಮೆ ಗಮನಿಸಿ
- Finance ಇನ್ಮುಂದೆ ದುಬಾರಿಯಾಗಲಿದೆ ಎಸ್ಬಿಐ ಡೆಬಿಟ್, ಕ್ರೆಡಿಟ್ ಕಾರ್ಡ್ ನಿರ್ವಹಣಾ ಶುಲ್ಕ
- Lifestyle ಗುಡ್ಫ್ರೈಡೆ ಆಚರಣೆ ಹುಟ್ಟಿದ್ದು ಹೇಗೆ? ಇದರ ಮಹತ್ವವೇನು ಗೊತ್ತಾ?
- Movies ಮಂಗಳ ಗ್ರಹದಿಂದ ಬಂದಿದ್ದಾರೆ ಎಂಬಷ್ಟು ವಿಚಿತ್ರ ವ್ಯಕ್ತಿ ರಾಹುಲ್ ಗಾಂಧಿ ; ಕಂಗನಾ ರಣಾವತ್..!
- Technology ಬಿಎಸ್ಎನ್ಎಲ್ ಗ್ರಾಹಕರಿಗೆ ಸಿಹಿಸುದ್ದಿ!..ಬಜೆಟ್ ದರದಲ್ಲಿ ಹೊಸ ಪ್ಲ್ಯಾನ್ ಲಾಂಚ್!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಾರು ಅಪಘಾತದಲ್ಲಿ ಸಚಿವರ ಪುತ್ರ ಸೇರಿ ಇಬ್ಬರು ದುರ್ಮರಣ
ಹೈದ್ರಾಬಾದ್ ಬಳಿ ಭೀಕರ ರಸ್ತೆ ಅಪಘಾತ ನಡೆದಿದ್ದು, ಸಚಿವರೊಬ್ಬರ ಪುತ್ರ ಸೇರಿ ಇಬ್ಬರು ಸಾವನ್ನಪ್ಪಿದ್ದಾರೆ.
ಹೈದ್ರಾಬಾದಿನ ಜ್ಯುಬಿಲಿ ಹಿಲ್ಸ್ ಬಳಿಯೇ ಈ ಭೀಕರ ಅಪಘಾತ ನಡೆದಿದ್ದು, ಆಂಧ್ರಪ್ರದೇಶದ ಸಚಿವ ಪಿ.ನಾರಾಯಣ್ ಪುತ್ರ ಸೇರಿದಂತೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಪೌರಾಡಳಿತ ಹಾಗೂ ನಗರಾಭಿವೃದ್ಧಿ ಖಾತೆ ಸಚಿವ ಡಾ. ಪಿ. ನಾರಾಯಣ್ ಅವರ ಪುತ್ರ ನಿಶಿತ್ ನಾರಾಯಣ್(23) ಹಾಗೂ ನಿಶಿತ್ ನಾರಾಯಣ್ ಸ್ನೇಹಿತ ರಾಜಾ ರವಿವರ್ಮಾ ಸಾವನ್ನಪ್ಪಿದ್ದಾರೆ.
ಮರ್ಸಿಡೆಸ್ ಬೆಂಜ್ ಎಸ್.ಯು.ವಿ. ಕಾರಿನಲ್ಲಿ ಅತಿವೇಗವಾಗಿ ಪ್ರಯಾಣ ಮಾಡುತ್ತಿದ್ದಾಗ ಈ ಘಟನೆ ನಡೆದಿದ್ದಾಗಿ ತಿಳಿದುಬಂದಿದೆ.
ಅತಿವೇಗದ ಚಾಲನೆಯಿಂದಲೇ ನಡೆದ ದುರಂತ
ಅತಿವೇಗವಾಗಿ ತೆರಳುತ್ತಿದ್ದಾಗ ನಿಯಂತ್ರಣ ತಪ್ಪಿದ ಕಾರು ಮೆಟ್ರೋ ರೈಲಿನ ಪಿಲ್ಲರ್ ಗೆ ಡಿಕ್ಕಿ ಹೊಡೆದಿದೆ.
ತಡರಾತ್ರಿ ಪಾರ್ಟಿ ತಂದ ಆಪತ್ತು
ತಡರಾತ್ರಿ ಸ್ನೇಹಿತರೊಂದಿಗೆ ಪಾರ್ಟಿ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಈ ದುರಂತ ಘಟನೆ ನಡೆದಿದೆ.
ಜ್ಯುಬಿಲಿ ಹಿಲ್ಸ್ನ ಮಾದಾಪುರ ರಸ್ತೆಯಲ್ಲಿರುವ ಪೆದ್ದಮ್ಮ ದೇವಸ್ಥಾನ ಬಳಿ ಮೆಟ್ರೋ ಮಾರ್ಗ ಹಾಯ್ದು ಹೊಗಿದ್ದು, ನಿಯಂತ್ರಣ ತಪ್ಪಿ ಮೆಟ್ರೋ ಪಿಲ್ಲರ್ಗೆ ರಭಸವಾಗಿ ಗುದ್ದಿದೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು,ಇಬ್ಬರನ್ನು ಆಸ್ಪತ್ರೆಗೆ ಸೇರಿಸಲಾಯಿತಾದರೂ ಈ ವೇಳೆಗಾಗಲೇ ಇಬ್ಬರು ಮೃತಪಟ್ಟಿದ್ದರು ಎನ್ನಲಾಗಿದೆ.
ಇನ್ನು ಘಟನೆ ಕುರಿತಂತೆ ಮಾಹಿತಿ ಪಡೆದಿರುವ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಸಚಿವ ಪಿ.ನಾರಾಯಣ್ ಪುತ್ರನ ಸಾವಿಗೆ ಸಂತಾಪ ಸೂಚಿಸಿದ್ದಾರೆ.
ಆದ್ರೆ ಕುಡಿದು ರಾತ್ರಿ ವೇಳೆ ಅತಿವೇಗವಾಗಿ ಚಾಲನೆ ಮಾಡುವುದು ಪ್ರಾಣಕ್ಕೆ ಕುತ್ತು ಎನ್ನುವುದಕ್ಕೆ ಈ ಘಟನೆಯೇ ಸಾಕ್ಷಿ.
ಸುದ್ದಿ ಮೂಲ- V6 NEWS