Just In
- 1 hr ago ಫೋಕ್ಸ್ವ್ಯಾಗನ್ ವರ್ಟಸ್ ಕಾರಿಗೆ ಮನಸೋತ ಗ್ರಾಹಕರು: ಭಾರೀ ಬೇಡಿಕೆ
- 1 hr ago ಸಾಮಾನ್ಯರಂತೆ ಹಳ್ಳಿಯಲ್ಲಿರುವ ದೇಶದ 55ನೇ ಶ್ರೀಮಂತ ಶ್ರೀಧರ್ ವೆಂಬು: ಕಚೇರಿಗೆ ಹೋಗಲು ಎಲೆಕ್ಟ್ರಿಕ್ ಆಟೋ ಖರೀದಿ!
- 4 hrs ago ಹ್ಯುಂಡೈ ವೆರ್ನಾ ಕಾರಿಗೆ ಭಾರೀ ಡಿಸ್ಕೌಂಟ್: ರಾಶಿ ಫೀಚರ್ನ ಕಾರಿಗೆ ಇಷ್ಟು ಆಫರ್ ಯಾಕೆಂದ ನೆಟ್ಟಿಗರು!
- 17 hrs ago ಮಾರುಕಟ್ಟೆಯಲ್ಲಿ ಸುನಾಮಿ ಎಬ್ಬಿಸಲು ಹೊಸ ಟೊಯೊಟಾ ಫಾರ್ಚುನರ್ ಲೀಡರ್ ಎಡಿಷನ್ ಅನಾವರಣ
Don't Miss!
- News Ballari Lok Sabha Election: ಶ್ರೀರಾಮುಲು ಪತ್ನಿ ನಾಮಪತ್ರ ವಾಪಸ್, ಅಂತಿಮ ಕಣದಲ್ಲಿ 10 ಅಭ್ಯರ್ಥಿಗಳು
- Technology ನಾಳೆ ವಿವೋದ ಈ ಹೊಸ ಫೋನ್ ಫಸ್ಟ್ ಸೇಲ್!..ಬಜೆಟ್ ಬೆಲೆಗೆ ಲಭ್ಯ!
- Movies ಕಲರ್ಫುಲ್ ಲೈಟು.. ಡಿಂಪಲ್ ಸ್ಮೈಲು.. 'ಸಂಜು ವೆಡ್ಸ್ ಗೀತಾ 2' ಒಂದು ಹಾಡಿನ ಸೆಟ್ಟಿಗೆ ಬರೋಬ್ಬರಿ ₹50 ಲಕ್ಷ!
- Lifestyle ಪ್ರತಿ ಲೀ ಕತ್ತೆ ಹಾಲಿಗೆ ₹5,000..! 20 ಕತ್ತೆಗಳ ಮೂಲಕ ₹2.5 ಕೋಟಿ ವ್ಯವಹಾರ..!
- Sports T20 World Cup 2024: ಟಿ20 ವಿಶ್ವಕಪ್ನಲ್ಲಿ ಟೀಮ್ ಇಂಡಿಯಾ ಆರಂಭಿಕರನ್ನು ಸೂಚಿಸಿದ ಸೌರವ್ ಗಂಗೂಲಿ
- Finance Bengaluru Karaga: ಇಂದು ಈ ರಸ್ತೆಗಳಲ್ಲಿ ಸಂಚಾರ ಬಂದ್, ಬದಲಿ ಮಾರ್ಗ ವಿವರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಇನ್ಮೇಲೆ ಇಂಧನ ಬೆಲೆ ಜಾಸ್ತಿ ಅಥವಾ ಕಮ್ಮಿ ಆಯ್ತು ಅಂತ ಗೊತ್ತೇ ಆಗಲ್ಲ !! ಹೇಗೆ ಅಂತೀರಾ ?
ಮೇ 1ರ ನಂತರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಹಿಂದೂಸ್ತಾನ್ ಪೆಟ್ರೋಲಿಯಂ ಹಾಗೂ ಭಾರತ್ ಪೆಟ್ರೋಲಿಯಂ ಕಂಪನಿಗಳು ಪ್ರತಿದಿನವು ಪರಿಷ್ಕರಣೆ ನೆಡೆಸಲು ಕೇಂದ್ರ ಒಪ್ಪಿಗೆ ನೀಡಿದೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯ ದರವನ್ನು ಆಧರಿಸಿ ಮುಂದಿನ ತಿಂಗಳಿನಿಂದ ದೇಶದ ಪ್ರಮುಖ ನಗರಗಳಲ್ಲಿ ಪ್ರತಿ ದಿನವೂ ಪೆಟ್ರೋಲ್, ಡೀಸೆಲ್ ದರ ಪರಿಷ್ಕರಣೆ ಮಾಡಲು ಇಂಡಿಯನ್ ಆಯಿಲ್ ಕಾರ್ಪೊರೇಷನ್ ತೀರ್ಮಾನ ಕೈಗೊಂಡಿದೆ.
ಕಳೆದ ವಾರ, ಇಂಡಿಯನ್ ಆಯಿಲ್ ಕಾರ್ಪೋರೇಷನ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಂಪನಿಗಳು ಒಂದುಗೂಡಿ, ಪ್ರತಿದಿನ ತೈಲ ಬೆಲೆಯನ್ನು ಪರಿಷ್ಕರಿಸುವ ಪ್ರಸ್ತಾಪವನ್ನು ಕೇಂದ್ರದ ಮುಂದಿಟ್ಟಿದ್ದವು.
ಸದ್ಯ ಮೊದಲ ಹಂತದಲ್ಲಿ ಪುದುಚೇರಿ, ವೈಜಾಕ್, ಉದಯ್ಪುರ್, ಜಮಶೇಡ್ಪುರದಲ್ಲಿ ಮತ್ತು ಚಂಡಿಘರ್ ನಗರಗಳಲ್ಲಿ ಪ್ರತಿದಿನವೂ ಪರಿಷ್ಕರಣೆ ನೆಡೆಸಲು ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದೆ.
ಎಲ್ಲರಿಗೂ ತಿಳಿದಿರುವಂತೆ, ಚಿನ್ನ, ಬೆಳ್ಳಿ ಬೆಲೆಗಳನ್ನು ಪ್ರತಿದಿನವೂ ಪರಿಷ್ಕರಿಸಲಾಗುತ್ತಿದ್ದು, ಇದೇ ರೀತಿಯ ನಿಯಮವನ್ನು ಇಂಧನ ಬೆಲೆ ಪರಿಷ್ಕರಣೆಗೂ ತರಲು ಈ ಮೊದಲೇ ಕಂಪನಿಗಳು ನಿರ್ದರಿಸಿದ್ದವು.
ಸದ್ಯ ಐದು ನಗರಗಳಲ್ಲಿ ಕಾರ್ಯರೂಪಕ್ಕೆ ತರಲು ಉದ್ದೇಶಿಸಿರುವ ಈ ಪ್ರತಿ ದಿನ ತೈಲ ದರ ಪರಿಷ್ಕರಣೆ ನಿರ್ಣಯದಿಂದಾಗಿ ಪೆಟ್ರೋಲಿಯಂ ಸಂಸ್ಥೆಗಳಿಗೆ ಲಾಭವಾದಲ್ಲಿ ಭಾರತದ ಎಲ್ಲೆಡೆ ವಿಸ್ತರಿಸಲು ಸಂಸ್ಥೆಗಳು ಮುಂದಾಗಲಿವೆ.
ತೈಲ ಕಂಪನಿಗಳು ಹೊಸ ವ್ಯವಸ್ಥೆ ಜಾರಿಯ ಕುರಿತಾಗಿ ಪೆಟ್ರೋಲಿಯಂ ಖಾತೆ ಸಚಿವ ಧರ್ಮೇಂದ್ರ ಪ್ರಧಾನ್ ಅವರೊಂದಿಗೆ ಕಳೆದ ವಾರ ಚರ್ಚೆ ನೆಡೆಸಿದ್ದರಲ್ಲದೆ, ಇದರಿಂದಾಗುವ ಪ್ರಯೋಜನಗಳನ್ನು ಸವಿವರವಾಗಿ ತಿಳಿಸಿದ್ದರು.
15 ದಿನಗಳಿಗೆ ಒಮ್ಮೆ ತೈಲ ದರ ಪರಿಷ್ಕರಣೆಯಾಗುತ್ತಿರುವುದರಿಂದ ತೈಲ ಮಾರುಕಟ್ಟೆ ಸಂಸ್ಥೆಗಳಿಗೆ ನಷ್ಟ ಉಂಟಾಗುತ್ತಿದ್ದು, ಈ ಕಾರಣಕ್ಕೆ ಈ ನಿರ್ಧಾರಕ್ಕೆ ಬರಲಾಗಿದೆ ಎನ್ನಲಾಗಿದೆ.
ಅಂತಾರಾಷ್ಟ್ರೀಯ ಮಾನದಂಡಕ್ಕೆ ಅನುಗುಣವಾಗಿ ಪ್ರತಿದಿನ ದರ ಬದಲಾದರೆ ಗ್ರಾಹಕರಿಗೆ ಮತ್ತು ವಿತರಕರಿಗೆ ಲಾಭವಾಗಲಿದೆ ಎಂದು ಕಂಪನಿಯ ಹಿರಿಯ ಅಧಿಕಾರಿಯೊಬ್ಬರು ಹೇಳಿಕೆ ನೀಡಿದ್ದಾರೆ.
ಈ ರೀತಿ ಮಾಡುವುದರಿಂದ ಮತ್ತೊಂದು ಕಂಪನಿಗಳಿಗೆ ಲಾಭವೇನೆಂದರೆ ಪ್ರತಿ ದಿನ ಪೈಸೆಗಳ ಲೆಕ್ಕದಲ್ಲಿ ಏರಿಕೆ ಅಥವಾ ಇಳಿಕೆಯಾಗುವುದರಿಂದ ಗ್ರಾಹಕರು ಇಂಧನದ ಬಗ್ಗೆ ಹೆಚ್ಚು ಗಮನ ಕೊಡದೆ ಇರುವ ಸಾಧ್ಯತೆ ಹೆಚ್ಚಿದೆ.