Just In
- 38 min ago Tata: ಮಧ್ಯಮ ವರ್ಗದವರಿಗೆ ಸಿಹಿಸುದ್ದಿ.. ಮುಂಬರಲಿರುವ ಟಾಟಾ ಕಾರುಗಳಿವು, ಒಂದಕ್ಕಿಂತ ಒಂದು ಭರ್ಜರಿಯಾಗಿವೆ!
- 41 min ago ಯಾವುದೇ ಬೆಟ್ಟ, ಗುಡ್ಡಗಳು ಇದರ ಮುಂದೆ ಲೆಕ್ಕಕ್ಕಿಲ್ಲ: ಫೋರ್ಸ್ ಗೂರ್ಖಾ 5-ಡೋರ್ ಬಿಡುಗಡೆಗೆ ಸಜ್ಜು
- 46 min ago 5 ರೂ. ಚಿಲ್ಲರೆ ಕೊಟ್ಟಿಲ್ಲವೆಂದು ರೊಚ್ಚಿಗೆದ್ದ ಪ್ರಯಾಣಿಕ: ಸಾಮಾಜಿಕ ಜಾಲತಾಣದಲ್ಲಿ ಮಾಡಿದ್ದೇನು ಗೊತ್ತಾ?
- 2 hrs ago ಆಕರ್ಷಕ ಯಮಹಾ ಏರಾಕ್ಸ್ 155 ವರ್ಷನ್ ಎಸ್ ಸ್ಕೂಟರ್ ಬಿಡುಗಡೆ
Don't Miss!
- Lifestyle ದುಬೈ ಪ್ರವಾಹದ ವೈರಲ್ ವೀಡಿಯೋಗಳು: ಒಂದೊಂದು ದೃಶ್ಯವೂ ಬದುಕಿನ ಪಾಠ ಹೇಳುತ್ತೆ
- News ರಾಜ್ಯದಲ್ಲಿ ಮೊದಲ ಬಾರಿಗೆ ಲೈಂಗಿಕ ದೌರ್ಜನ್ಯಕ್ಕೊಳಗಾದ ಬಾಲಕನಿಗೆ ₹1 ಲಕ್ಷ ಪರಿಹಾರ-ಯಾವ ಜಿಲ್ಲೆಯಲ್ಲಿ?
- Finance Binance: ಫೈನ್ ಕಟ್ಟಿ ಭಾರತಕ್ಕೆ ಮರಳಿ ಬರಲಿದೆ ಕ್ರಿಫ್ಟೋಕರೆನ್ಸಿ ವಿನಿಮಯ ಕೇಂದ್ರ!
- Movies ಶಿವಣ್ಣ ಹಾಗೂ ಗೀತಾ ಶಿವರಾಜ್ಕುಮಾರ್ ಹಣೆಯ ಕುಂಕುಮ ಅಳಿಸಿದ್ದು ನಿಜವೇ?
- Technology Realme: ರಿಯಲ್ಮಿ C65 5G ಸ್ಮಾರ್ಟ್ಫೋನ್ ಫೀಚರ್ಸ್ ಲೀಕ್! 6.67″ 120Hz ಡಿಸ್ಪ್ಲೆ...
- Sports ಟಿ20 ವಿಶ್ವಕಪ್ ಬಗ್ಗೆ ಸ್ಪಷ್ಟನೆ ಕೇಳಿದ ವಿರಾಟ್ ಕೊಹ್ಲಿ; ಕಹಾನಿ ಮೇ ಟ್ವಿಸ್ಟ್ ನೀಡಿದ ಬಿಸಿಸಿಐ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವೇಗದ ಪ್ರಯಾಣ ತಂದ ಆಪತ್ತು- ಅಪಘಾತದಲ್ಲಿ ಕಾರ್ ರೇಸ್ ಚಾಂಪಿಯನ್ ಸಜೀವ ದಹನ..!!
ಭಾರತೀಯ ಉದಯೋನ್ಮುಖ ಕಾರು ರೇಸರ್ ಅಶ್ವಿನ್ ಸುಂದರ್ ಹಾಗೂ ಅವರ ಪತ್ನಿ ನಿವೇದಿತಾ ಕಾರು ಅಪಘಾತದಲ್ಲಿ ದುರಂತವಾಗಿ ಸಾವನ್ನಪ್ಪಿರುವ ಘಟನೆ ಚೆನ್ನೈನಲ್ಲಿ ನಡೆದಿದೆ.
ಭಾರತೀಯ ಉದಯೋನ್ಮುಖ ಕಾರು ರೇಸರ್ ಅಶ್ವಿನ್ ಸುಂದರ್ ಹಾಗೂ ಅವರ ಪತ್ನಿ ನಿವೇದಿತಾ ಕಾರು ಅಪಘಾದಲ್ಲಿ ದುರಂತವಾಗಿ ಸಾವನ್ನಪ್ಪಿದ್ದಾರೆ. ಐಷಾರಾಮಿ ಬಿಎಂಡಬ್ಲ್ಯು ಕಾರಿನಲ್ಲಿ ಪ್ರಯಾಣ ಮಾಡುವಾಗ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದ್ದು, ಬೆಂಕಿ ಹೊತ್ತಿಕೊಂಡ ಪರಿಣಾಮ ಇಬ್ಬರು ಸಜೀವ ದಹನವಾಗಿರುವ ಘಟನೆ ಚೆನ್ನೈನಲ್ಲಿ ನಡೆದಿದೆ.
ಚೆನ್ನೈನ ಸಂತೋಮೆ ರಸ್ತೆಯಲ್ಲಿ ಶನಿವಾರ ಮುಂಜಾನೆ 1.30ರ ಸುಮಾರಿಗೆ ಈ ದುರಂತ ಘಟನೆ ನಡೆದಿದ್ದು, ಅಶ್ವಿನ್ ಹಾಗೂ ನಿವೇದಿತಾ ಅವರಿದ್ದ ಕಾರು ರಸ್ತೆ ಬದಿಯಲ್ಲಿದ್ದ ಮರಕ್ಕೆ ಜೋರಾಗಿ ಅಪ್ಪಳಿಸಿದೆ. ಗುದ್ದಿದ ರಭಸಕ್ಕೆ ಕಾರಿನ ಎಂಜಿನ್ ಸ್ಫೋಟಗೊಂಡಿದ್ದು, ಬೆಂಕಿಯ ಕೆನ್ನಾಲಿಗೆಗೆ ಇಬ್ಬರು ಸುಟ್ಟು ಭಸ್ಮವಾಗಿದ್ದಾರೆ.
ಅಶ್ವಿನ್ ಸುಂದರ್ ಹಾಗೂ ನಿವೇದಿತಾ ಅವರು ತಡರಾತ್ರಿ ಸ್ನೇಹಿತರೊಬ್ಬರ ಮನೆಯಲ್ಲಿ ಪಾರ್ಟಿ ಮುಗಿಸಿಕೊಂಡು ಮನೆಗೆ ಹಿಂತಿರುಗುತ್ತಿದ್ದಾಗ ಈ ದುರಂತ ಘಟನೆ ನಡೆದಿದೆ. ಮರಕ್ಕೆ ಜೋರಾಗಿ ಗುದ್ದಿದ ಪರಿಣಾಮ ಕಾರು ಹೊತ್ತಿಉರಿದಿದ್ದು, ಸ್ಥಳೀಯರು ನೆರವಿಗೆ ಬರುವಷ್ಟರಲ್ಲಿ ಸುಟ್ಟುಭಸ್ಮವಾಗಿದ್ದಾರೆ.
ಮೊದಮೊದಲು ಕಾರಿನೊಳಗಿದ್ದವರು ಯಾರು ಎಂದು ಗುರುತು ಪತ್ತೆಹಚ್ಚಲು ಸ್ಥಳೀಯರಿಗೆ ಸಾಧ್ಯವಾಗಿಲ್ಲ. ನೆರವಿಗಾಗಿ ಪೊಲೀಸ್ ಮತ್ತು ಅಗ್ನಿಶಾಮಕದಳಕ್ಕೆ ಕರೆ ಮಾಡಲಾಗಿತ್ತಾದರೂ ರಕ್ಷಣೆ ಮಾಡುವಷ್ಟರಲ್ಲಿ ಬೆಂಕಿಯ ಕೆನ್ನಾಲಿಗೆ ದಂಪತಿಗಳಿಬ್ಬರ ಪ್ರಾಣವನ್ನೇ ಪಡೆದುಕೊಂಡಿತ್ತು.
ಕಾರಿನ ನೋಂದಣಿ ಸಂಖ್ಯೆಯ ಫಲಕದಲ್ಲಿ ಸಿಕ್ಕ ಸಣ್ಣ ಸುಳಿವಿನಿಂದಲೇ ಕಾರಿನಲ್ಲಿದ್ದವರು ಸುಂದರ್ ಹಾಗೂ ಅವರ ಪತ್ನಿ ನಿವೇದಿತಾ ಎಂಬುವುದು ಖಚಿತವಾಗಿದೆ. ಇನ್ನು ದುರಂತಕ್ಕೆ ನಿಖರ ಕಾರಣ ಏನು ಎಂಬುವುದು ತಿಳಿಯದೇ ಇದ್ದರೂ ವೇಗದ ಪ್ರಯಾಣದ ವೇಳೆ ನಿಯಂತ್ರಣ ತಪ್ಪಿದಿದ್ದೇ ಅಪಘಾತಕ್ಕೆ ಕಾರಣವೆನ್ನಲಾಗಿದೆ.
ಎಫ್-4 ವಿಭಾಗದಲ್ಲಿ ಕಾರು ರೇಸ್ ಚಾಂಪಿಯನ್ ಆಗಿರುವ ಅಶ್ವಿನ್, 2012 ಮತ್ತು 2013ರಲ್ಲಿ ರಾಷ್ಟ್ರೀಯ ಚಾಂಪಿಯನ್ ಕೂಡಾ ಆಗಿದ್ದಾರೆ. ಆದ್ರೆ ಮರಕ್ಕೆ ಡಿಕ್ಕಿ ಹೊಡೆದ ಮಾತ್ರಕ್ಕೆ ಕಾರಿನಲ್ಲಿ ಬೆಂಕಿ ಹೊತ್ತಿಕೊಂಡಿದ್ದು ಎಲ್ಲರ ಆಶ್ಚರ್ಯಕ್ಕೂ ಕಾರಣವಾಗಿದೆ. ಹೀಗಾಗಿ ಐಷಾರಾಮಿ ಕಾರು ಬಿಎಂಡಬ್ಲ್ಯು 4ನಲ್ಲೂ ಸರಿಯಾದ ಸುರಕ್ಷಾ ಕ್ರಮಗಳಿಲ್ಲವೇ ಎನ್ನುವ ಪ್ರಶ್ನೆ ಮೂಡತೊಡಗಿದೆ.
ಸದ್ಯ ಅಪಘಾತ ಸ್ಥಳದಲ್ಲಿ ಅಸ್ಥಿಪಂಜರ ಮಾತ್ರ ಉಳಿದಿದ್ದು, ಭೀಕರ ಅಪಘಾತ ಕಂಡ ಸ್ಥಳೀಯರು ಕೂಡಾ ಫುಲ್ ಶಾಕ್ ಆಗಿದ್ದಾರೆ. ಇನ್ನು ಅಗಲಿದ ಸುಂದರ್ ಹಾಗೂ ನಿವೇದಿತಾ ದಂಪತಿಗೆ ಗಣ್ಯಾತಿಗಣ್ಯರು ಸಂತಾಪ ವ್ಯಕ್ತಪಡಿಸುತ್ತಿದ್ದಾರೆ.
ಸುರಕ್ಷಾ ಕ್ರಮಗಳಿಲ್ಲದೇ ಐಷಾರಾಮಿ ಕಾರುಗಳಲ್ಲಿನ ವೇಗದ ಪ್ರಯಾಣ ಪ್ರಾಣಕ್ಕೆ ಕುತ್ತು ಎಂಬುದು ಮತ್ತೆ ಮತ್ತೆ ಸಾಬೀತಾಗುತ್ತಲೇ ಇದೆ. ವೃತ್ತಿಪರ ಕಾರ್ ರೇಸರ್ ಸುಂದರ್ ಅಶ್ವಿನ್ ಹೀಗೇ ದುರಂತವಾಗಿ ಸಾವನ್ನಪ್ಪಿದ್ದು ಅವರ ಅಭಿಮಾನಿಗಳ ಬಳಗಕ್ಕೆ ಭಾರೀ ಆಘಾತ ಉಂಟುಮಾಡಿದ್ದು ಮಾತ್ರ ಸುಳ್ಳಲ್ಲ.
ಡೈವ್ಸ್ವಾರ್ಕ್ನಲ್ಲಿ ನಿಮಗಾಗಿ ಮತ್ತಷ್ಚು ಸುದ್ಧಿಗಳು
ದುಬೈ ಪೊಲೀಸರ ಈ ಪ್ಲ್ಯಾನ್ ಇಂಡಿಯಾದಲ್ಲೂ ಬಂದ್ರೆ ವರ್ಕೌಟ್ ಆಗುತ್ತಾ..?
ಅಂಬಾನಿ ಮಗನ ಕಾರಿನಲ್ಲಿರುವ ಈ ಗಡಿಯಾರದ ಬೆಲೆ ಕೇವಲ 1.95 ಕೋಟಿ !! ಇನ್ನು ಈ ಕಾರಿನ ಬೆಲೆ ಕೇಳ್ಬೇಡಿ
ದುಬಾರಿ ಬೈಕ್ ಖರೀದಿ ಇನ್ನು ಅಷ್ಟು ಸುಲಭವಲ್ಲ- ಬೃಹತ್ ಆದಾಯಕ್ಕೆ ಕೈ ಹಾಕಿದ ಸಿಎಂ ಸಿದ್ದರಾಮಯ್ಯ..!!
F1 ರೇಸ್ ಕಾರ್ ಇದೀಗ ಪಿಂಕ್ ಮಯ- ಟ್ರೋಲ್ ಹೈಕ್ಳಿಗೆ ಆಹಾರವಾದ ವಿಜಯ್ ಮಲ್ಯ..!!
ಭಾರತಕ್ಕೆ ಎಂಟ್ರಿ ಕೊಟ್ಟ ಹಾರ್ಲೆ ಡೇವಿಡ್ಸನ್ ಸ್ಟ್ರೀಟ್ ರಾಡ್ 750; ಬೆಲೆ ಮತ್ತು ಗ್ಯಾಲರಿ ಇಲ್ಲಿದೆ
ಡೈವ್ಸ್ಪಾರ್ಕ್ ಫೋಟೋ ಗ್ಯಾಲರಿ
ಬಿಡುಗಡೆಗೆ ಸಜ್ಜುಗೊಂಡಿರುವ ಟಾಟಾ ಟಿಗೋರ್ ಕಾರಿನ ಚಿತ್ರಗಳ ವೀಕ್ಷಣೆ ಮಾಡಿ.
ವಿನೂತನ ಹಾರ್ಲೆ ಡೇವಿಡ್ಸನ್ ಸ್ಟ್ರೀಟ್ ರಾಡ್ 750
2017ರ ವಿನೂತನ ಮಾರುತಿ ಸ್ವಿಫ್ಟ್ ಕಾರು