Just In
- 6 min ago Brezza: ಮಾರುತಿ ಸುಜುಕಿ ಬ್ರೆಝಾ ಖರೀದಿಸಬೇಕೇ.. ಆನ್ ರೋಡ್ ಬೆಲೆ ಎಷ್ಟು? EMI ಏನು?
- 2 hrs ago ಭಾರತದಲ್ಲಿ ಬಿಡುಗಡೆಗೆ ಸಜ್ಜಾದ ಬಹುನಿರೀಕ್ಷಿತ ಹೊಸ ಸ್ಕೋಡಾ ಸೂಪರ್ಬ್ ಕಾರು
- 2 hrs ago ಓಲಾ ಎಸ್ 1 ಪ್ರೋ VS ಏಥರ್ 450X: ಮದಗಜಗಳ ಹಣಾಹಣಿಯಲ್ಲಿ ಯಾರು ಬೆಸ್ಟ್?
- 2 hrs ago Ather: ಬೆಂಗಳೂರಿನ ಎಥರ್ನಿಂದ ಫ್ಯಾಮಿಲಿ ಇ-ಸ್ಕೂಟರ್ 'ರಿಜ್ಟಾ' ಬುಕ್ಕಿಂಗ್ ಆರಂಭ, ರೂ.999 ಪಾವತಿಸಿದರೆ ಸಾಕು!
Don't Miss!
- News ಒಂದಲ್ಲ.. ಎರಡಲ್ಲ.. 128 ಲಕ್ಷ ಕೋಟಿ ರೂಪಾಯಿ ಲಾಭ!
- Sports IPL 2024: RCB ವಿರುದ್ಧ ಪಂದ್ಯಕ್ಕೆ KKRನ ಆಡುವ 11ರ ಬಳಗ ಮರೆತ ಶ್ರೇಯಸ್ ಅಯ್ಯರ್
- Movies "ನನ್ನೇನು ಅಭಿಮನ್ಯು ಅಂದುಕೊಂಡ್ಯ..; ಕೆಲವ್ರು ಕುಡಿದ ಮೇಲೆ ಗಂಡಸರಾಗ್ತಾರೆ.. 'ಯುವ' ಡೈಲಾಗ್ ಪಂಚ್
- Lifestyle ಏಪ್ರಿಲ್ 1ರಿಂದ 800 ಔಷಧಗಳು ದುಬಾರಿ..! ಎಷ್ಟು ಬೆಲೆ ಹೆಚ್ಚಳ.?
- Technology WhatsApp: ವಾಟ್ಸಾಪ್ನಲ್ಲಿ ಈ ಕರೆಗಳನ್ನು ಸ್ವೀಕರಿಸದಂತೆ ಕೇಂದ್ರದಿಂದ ಎಚ್ಚರಿಕೆ! ಯಾಕೆ ಗೊತ್ತಾ?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಭಾರತದ ಅತಿ ಉದ್ದದ ಸುರಂಗ ಮಾರ್ಗ ಲೋಕಾರ್ಪಣೆಗೊಳಿಸಿದ ಪ್ರಧಾನಿ ಮೋದಿ
ಭಾರತದ ಅತಿ ಉದ್ದದ ‘ಚೆನಾನಿ – ನಶ್ರೀ ಸುರಂಗ’ವನ್ನು ಭಾರತ ದೇಶದ ಪ್ರಧಾನಿ ನರೇಂದ್ರ ಮೋದಿಯವರು ಉದ್ಘಾಟನೆ ಮಾಡಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸರಿ ಸುಮಾರು 9 ಕಿಲೋ ಮೀಟರ್ ಉದ್ದ ಇರುವ ಚೆನಾನಿ - ನಶ್ರೀ ಸುರಂಗ ಸುರಂಗ ಮಾರ್ಗವನ್ನು ಲೋಪಾರ್ಪಣೆಗೊಳಿಸಿದರು.
ಈ ಸುರಂಗ ಮಾರ್ಗವು ಜಮ್ಮು ಮತ್ತು ಶ್ರೀನಗರವನ್ನು ಸಂಪರ್ಕಿಸಲಿದ್ದು, ಚೆನಾನಿ ಮತ್ತು ನಶ್ರೀ ಎಂಬ ಎರಡು ನಗರಗಳ ನಡುವಿನ ಪ್ರಯಾಣದ ಅವಧಿಯನ್ನು 2 ಗಂಟೆಗಳವರೆಗೆ ಉಳಿಸಲಿದೆ.
ಚೆನಾನಿ ಮತ್ತು ನಶ್ರೀ ಮಾರ್ಗದ ನಡುವೆ ನಿರ್ಮಾಣವಾಗಿರುವ ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿರುವ ಈ ಸುರಂಗ ಮಾರ್ಗವು ನೈಸರ್ಗಿಕ ವಿಕೋಪಗಳನ್ನು ತಡೆದುಕೊಳ್ಳುವ ಶಕ್ತಿ ಹೊಂದಿದೆ.
ಕಳೆದ ಸೋಮವಾರ ಉದ್ಘಾಟನೆಗೊಂಡ ರಾಷ್ಟ್ರೀಯ ಹೆದ್ದಾರಿ -44ರಲ್ಲಿರುವ ಈ ಸುರಂಗ ಮಾರ್ಗವು, ಜಮ್ಮು ಕಾಶ್ಮೀರ ರಾಜ್ಯದ ಆರ್ಥಿಕ ಚಟುವಟಿಕೆ ಹಾಗೂ ಪ್ರವಾಸೋದ್ಯಮವನ್ನು ಉತ್ತೇಜಿಸಲಿದೆ.
ಚೀನಾ ದೇಶದಲ್ಲಿ ಇರುವ 20 ಕಿ.ಮೀ. ಉದ್ದದ 'ವೂಷಾವೋಲಿಂಗ್' ನಂತರದ ಸ್ಥಾನದಲ್ಲಿ ಇರುವ ಈ ಚೆನಾನಿ-ನಶ್ರೀ ಸುರಂಗವು ಏಷ್ಯಾದ ಎರಡನೇ ಉದ್ದದ ರಸ್ತೆ ಸುರಂಗ ಮಾರ್ಗ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
ಆಸ್ಟ್ರೀಯಾದ ಸುರಂಗ ನಿರ್ಮಾಣದ ಪದ್ಧತಿ ಮತ್ತು ದೇಶದಲ್ಲಿಯೇ ಪ್ರಥಮ ಬಾರಿಗೆ ದೆಹಲಿ ಮೆಟ್ರೊ ನಿರ್ಮಾಣದಲ್ಲಿ ಬಳಸಲಾದ ಅತ್ಯಾಧುನಿಕ ತಂತ್ರಜ್ಞಾನವನ್ನು ಈ ಸುರಂಗ ಮಾರ್ಗ ಪಡೆದುಕೊಂಡಿದೆ.
ಎತ್ತರ ಶ್ರೇಣಿಯಲ್ಲಿ ಸಾಗಬೇಕಿದ್ದ ಮಾರ್ಗದ ದೂರವನ್ನು 31 ಕಿಲೋ ಮೀಟರ್ ಕಡಿಮೆ ಮಾಡುವ ಮೂಲಕ ಪ್ರತಿ ವರ್ಷ ಸರಿ ಸುಮಾರು ರೂ.100 ಕೋಟಿ ಮೊಲ್ಯದ ಇಂಧನದ ಉಳಿತಾಯ ಮಾಡಬಹುದು ಎನ್ನಲಾಗಿದೆ.
ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ ನಿರ್ಮಿಸಿರುವ ಈ ಬಹು ಕೋಟಿ ವೆಚ್ಚದ ಅತ್ಯಾಧುನಿಕ ಸುರಂಗ ಮಾರ್ಗ, ವಾಣಿಜ್ಯ ಉದ್ದೇಶದ ಜೊತೆ ಟ್ರಾಫಿಕ್ ಸಮಸ್ಯೆ ತಗ್ಗಿಸುವ ಉದ್ದೇಶ ಹೊಂದಲಾಗಿದೆ.
ಸದ್ಯದ ಮಾಹಿತಿ ಪ್ರಕಾರ ಕೆಲವು ದಿನಗಳವರೆಗೂ ಯಾವುದೇ ರೀತಿಯ ಸಂಚಾರಿ ಶುಲ್ಕ ವಿಧಿಸದಿರಲು ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ ತೀರ್ಮಾನಿಸಿದ್ದು, ಮುಂಬರುವ ದಿನಗಳಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಿದೆ.
ಹೆಚ್ಚಿನ ಪ್ರಮಾಣದಲ್ಲಿ ಅರಣ್ಯ ನಾಶ ಮತ್ತು ಮರಗಳಿಗೆ ಕೊಡಲಿ ಇಡುವುದನ್ನು ತಪ್ಪಿಸಿರುವ ಈ ಸುರಂಗವು, ಪರಿಸರಸ್ನೇಹಿ ಎಂಬ ಬಿರುದನ್ನು ಪಡೆದುಕೊಂಡಿದೆ.
ತುರ್ತು ಪರಿಸ್ಥಿತಿಗಳನ್ನು ಎದುರಿಸಲು ಸುರಂಗ ಮಾರ್ಗದ ಒಳಗಿನ ಕೆಲವು ಸ್ಥಳಗಳಲ್ಲಿ ಸುರಕ್ಷಾ ವಿಧಾನಗಳನ್ನು ಅಳವಡಿಸಲಾಗಿದ್ದು, ಯಾವುದೇ ರೀತಿಯ ಅನಾಹುತಗಳು ನಡೆಯದಂತೆ ಮುನ್ನೆಚ್ಚರಿಕೆ ಕೈಗೊಳ್ಳಲಾಗಿದೆ.
ಜಮ್ಮು ಮತ್ತು ಉಧಾಮಂಪುರ್ನಿಂದ ರಾಮ್ಬನ್, ಬನಿಹಾಲ್ ಮತ್ತು ಶ್ರೀನಗರ ನಡುವೆ ಸಂಚರಿಸುವ ಪ್ರಯಾಣಿಕರಿಗೆ ಸುರಕ್ಷಿತಯನ್ನು ಈ ಸುರಂಗಮಾರ್ಗ ಒದಗಿಸಿದೆ.
ಸಂತಸದ ವಿಚಾರವೇನೆಂದರೆ, ಎಲ್ಲ ಋತುಮಾನಗಳಲ್ಲೂ ಸಂಚಾರಕ್ಕೆ ಲಭ್ಯವಾಗಲಿರುವ ಈ ಸುರಂಗ ಮಾರ್ಗದಿಂದಾಗಿ ಸ್ಥಳೀಯರು ಯಾವುದೇ ತೊಂದರೆಗಳಿಲ್ಲದೆ ಸೇಬು ಹಣ್ಣಿನ ಸಾಗಾಟ ಮತ್ತು ಖರೀದಿ ನೆಡೆಸಬಹುದು.
ಭಾರತದ ಹೆಮ್ಮೆಯ ಪ್ರತೀಕವಾದ ಈ ಸುರಂಗಮಾರ್ಗವನ್ನು ಇಂದು ನಮ್ಮ ದೇಶದ ಪ್ರಧಾನಿ ಉದ್ಘಾಟನೆ ಮಾಡಿರುವುದು ನಮ್ಮೆಲರಿಗೂ ಖುಷಿ ನೀಡಿದ್ದು, ಸರ್ಕಾರ ಮತ್ತಷ್ಟು ಒಳ್ಳೆಯ ಯೋಜನೆಗಳನ್ನು ಕೈಗೆತ್ತಿಕೊಳ್ಳಲಿ ಎಂಬುದೇ ನಮ್ಮೆಲ್ಲರ ಆಶಯವಾಗಿದೆ.