Just In
- 1 hr ago ಯುವಕರಿಗೆ ಸಿಹಿಸುದ್ದಿ: ಕೈಗೆಟುಕುವ ಬೆಲೆ, ಮಾಸ್ ಲುಕ್ನಲ್ಲಿ ಬರುತ್ತಿದೆ ಹೊಸ ಬಜಾಜ್ ಪಲ್ಸರ್ 400 ಬೈಕ್
- 2 hrs ago Ola: ಓಲಾದಿಂದ ಕಡಿಮೆ ಬೆಲೆಯ 'ಎಸ್1 ಎಕ್ಸ್' ಎಲೆಕ್ಟ್ರಿಕ್ ಸ್ಕೂಟರ್ ಬಗ್ಗೆ ದೊಡ್ಡ ಘೋಷಣೆ.. ಏನದು?
- 3 hrs ago ಫೋಕ್ಸ್ವ್ಯಾಗನ್ ವರ್ಟಸ್ ಕಾರಿಗೆ ಮನಸೋತ ಗ್ರಾಹಕರು: ಭಾರೀ ಬೇಡಿಕೆ
- 4 hrs ago ಸಾಮಾನ್ಯರಂತೆ ಹಳ್ಳಿಯಲ್ಲಿರುವ ದೇಶದ 55ನೇ ಶ್ರೀಮಂತ ಶ್ರೀಧರ್ ವೆಂಬು: ಕಚೇರಿಗೆ ಹೋಗಲು ಎಲೆಕ್ಟ್ರಿಕ್ ಆಟೋ ಖರೀದಿ!
Don't Miss!
- News ಶಿವಮೊಗ್ಗ ಲೋಕಸಭಾ ಕ್ಷೇತ್ರ: ಶಾಂತಿಯುತ ಮತದಾನಕ್ಕಾಗಿ ಅಧಿಕಾರಿಗಳಿಗೆ ಖಡಕ್ ಸೂಚನೆ
- Movies Sathya : ತಾಜ್ ಮಹಲ್ ಎದುರು ನಿಂತ ಸತ್ಯಾ, ಪತಿ ಜೊತೆ ಗೌತಮಿ ಪ್ರವಾಸ...!
- Sports ಟಿ20 ವಿಶ್ವಕಪ್-2024: "ಬಾಗಿಲು ಮುಚ್ಚಿದ್ದೇನೆ" ಎಂದಿದ್ದೇಕೆ ಸ್ಪಿನ್ ಮಾಂತ್ರಿಕ ನರೈನ್
- Lifestyle ರೆಸಿಪಿ: ಮಾವಿನ ಕಾಯಿ ತುರಿದು ಮಾಡುವ ಉಪ್ಪಿನಕಾಯಿ, ಎಣ್ಣೆ ಬಳಸಿಲ್ಲ, ವರ್ಷದವರೆಗೆ ಇಡಲೂ ಬಹುದು
- Technology Google: ಗೂಗಲ್ ಪಿಕ್ಸೆಲ್ 8a ಬೆಲೆ ಮಾಹಿತಿ ಲೀಕ್! ಈ ಫೋನ್ ಫೀಚರ್ಸ್ ಏನು?
- Finance ಇನ್ಮುಂದೆ ನಿಮ್ಮ ಜಮೀನಿನಲ್ಲಿ ನೀವು ಮನೆ ಕಟ್ಟೋದಕ್ಕೂ ಸರ್ಕಾರದ ಅನುಮತಿ ಅಗತ್ಯ, ಏನಿದು ಹೋಸ ನಿಯಮ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಾರು ಅಪಘಾತದಲ್ಲಿ ಸತ್ತಿದ್ದು ನಟಿ ರೇಖಾ ಅಲ್ಲಾ- ರೂಪದರ್ಶಿ ರೇಖಾ..!!
ಬೆಂಗಳೂರಿನ ಬಾಣಸವಾಡಿ ನಿವಾಸಿ ರೇಖಾ ಸಿಂಧು ಜಾಹೀರಾತು ಒಂದರ ಚಿತ್ರೀಕರಣಕ್ಕಾಗಿ ಚೆನ್ನೈಗೆ ಹೋಗುತ್ತಿದ್ದಾಗ ಭೀಕರ ಅಪಘಾತ ಸಂಭವಿಸಿದೆ.
ರೂಪದರ್ಶಿ ಸಿಂಧು ಪ್ರಯಾಣಿಸುತ್ತಿದ್ದ ಕಾರು ಡಿವೈಡರ್ಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಐವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ತಮಿಳುನಾಡಿನ ವೆಲ್ಲೂರ್ ಬಳಿ ಭೀಕರ ಅಪಘಾತ ನಡೆದಿದ್ದು, ನಟಿ ರೇಖಾ ಸಿಂಧು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಚೆನ್ನೈ-ಬೆಂಗಳೂರು ಹೆದ್ದಾರಿಯಲ್ಲಿ ಬೆಳಗಿನ ಜಾವ 2.30ಕ್ಕೆ ಈ ಘಟನೆ ನಡೆದಿದ್ದು, ಕಾರು ಚಾಲಕನ ಅಜಾಗರೂಕತೆಯೇ ಘಟನೆಗೆ ಕಾರಣ ಎನ್ನಲಾಗಿದೆ.
ಇದೇ ಕಾರಿನಲ್ಲಿ ಇನ್ನಿಬ್ಬರು ಮಹಿಳಾ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಚೆನ್ನೈ ಹೈಟೆಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇನ್ನು ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ವೆಲ್ಲೂರು ಪೊಲೀಸರು ಘಟನೆಗೆ ನಿಖರ ಕಾರಣ ಕುರಿತು ತೀವ್ರ ತನಿಖೆ ಆರಂಭಿಸಿದ್ದಾರೆ.
ಚೆನ್ನೈ-ಬೆಂಗಳೂರು ಹೆದ್ದಾರಿಯಲ್ಲಿ ಬರುವ ಪೆರ್ನಾಂಬತ್ ಸಮೀಪದ ಸುನ್ಮುಂಪುಟೈ ಗ್ರಾಮದಲ್ಲಿ ಈ ಅಪಘಾತ ಸಂಭವಿಸಿದ್ದು, ರೇಖಾ ಸಿಂಧು ಗಂಭೀರವಾಗಿ ಗಾಯಗೊಂಡ ಹಿನ್ನೆಲೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಘಟನೆ ನಂತರ ರೂಪದರ್ಶಿ ರೇಖಾ ಸಿಂಧು ಸಾವಿನಲ್ಲಿ ಕೆಲವು ಗೊಂದಲಗಳು ಸೃಷ್ಠಿಯಾಗಿದ್ದವು. ರೇಖಾ ಸಿಂಧು ಬದಲಾಗಿ ಖ್ಯಾತ ನಟಿ ರೇಖಾ ಕೃಷ್ಣಪ್ಪ ಸಾವನ್ನಪ್ಪಿದ್ದಾರೆ ಎಂಬ ವದಂತಿಗಳು ಕೇಳಿಬಂದಿದ್ದವು.
ಟಿಟ್ವರ್ನಲ್ಲಿ ಸ್ಪಷ್ಟನೆ
ಮಾಧ್ಯಮಗಳಲ್ಲಿ ಸಿಂಧು ಕೃಷ್ಣಪ್ಪ ಸಾವಿನ ವಂದತಿಗಳು ಹಬ್ಬುತ್ತಿದ್ದಂತೆ ಟಿಟ್ವರ್ನಲ್ಲಿ ಸ್ಪಷ್ಟನೆ ನೀಡಿರುವ ನಟಿ ರೇಖಾ, ನಾನು ಚೆನ್ನಾಗಿದ್ದೇನೆ ಅಪಘಾತ ಸಾವನ್ನಪ್ಪಿದ್ದು ರೂಪದರ್ಶಿ ರೇಖಾ ಸಿಂಧು ಎಂದು ಸಂತಾಪ ಸೂಚಿಸಿದ್ದಾರೆ.
ಜಾಹೀರಾತು ಜಗತ್ತಿನಲ್ಲಿ ಮಿಂಚಿದ್ದ ಸಿಂಧು
ಇನ್ನು ಕನ್ನಡ ಮತ್ತು ತಮಿಳು ಚಿತ್ರರಂಗದಲ್ಲಿ ಈ ಹಿಂದೆ ಕಾಣಿಸಿಕೊಂಡಿದ್ದ ರೇಖಾ ಸಿಂಧು, ಹೆಚ್ಚಾಗಿ ಜಾಹೀರಾತುಗಳಲ್ಲಿ ಕಾಣಿಸಿಕೊಂಡು ಖ್ಯಾತರಾಗಿದ್ದರು.
ಸದ್ಯ ಚೆನ್ನೈನ ಹೈಟೆಕ್ ಆಸ್ಪತ್ರೆಯಲ್ಲಿ ಮೃತ ರೇಖಾ ಸಿಂಧು ಕಳೆಬರಹವಿದ್ದು, ಇಂದು ಸಂಜೆಯೊಳಗೆ ಬೆಂಗಳೂರಿಗೆ ತಲುಪಲಿದೆ.
ತಮಿಳುನಾಡು ನೋಂದಾಣಿಯಾಗಿರುವ ಟಿಎನ್-32, ಎಎಕ್ಸ್-6666 ನಿಸ್ಸಾನ್ ಕಾರಿನಲ್ಲಿ ಪ್ರಯಾಣಿಸುವಾಗ ಈ ದುರಂತ ನಡೆದಿದೆ.
ರೂಪದರ್ಶಿ ರೇಖಾ ಸಿಂಧು ಸಾವು ಹಿನ್ನೆಲೆ ಜನರಲ್ಲಿ ಗೊಂದಲಗಳು ಉಂಟಾಗಿದ್ದು, ಜನಪ್ರಿಯ ಕಿರುತೆರೆ ನಟಿ ರೇಖಾ ಪ್ರತಿಕ್ರಿಯೆ ನೀಡಿದ್ದಾರೆ.
ಸದ್ಯ ಶೃಂಗೇರಿಯಲ್ಲಿರುವ ರೇಖಾ ಕೃಷ್ಣಪ್ಪ, ತಾನು ಸುರಕ್ಷಿತವಾಗಿದ್ದೇನೆ ಎಂದು ಹೇಳಿಕೊಂಡಿದ್ದಾರೆ.
ರೇಖಾ ಸಿಂಧು ಸಾವಿಗೆ ಸಂತಾಪ
ಮಾಡೆಲಿಂಗ್ ಮೂಲಕ ಕನ್ನಡ ಹಾಗೂ ತಮಿಳು ಚಿತ್ರರಂಗಕ್ಕೆ ಪರಿಚಯವಾಗಿದ್ದ ರೇಖಾ ಸಿಂಧು ಸಾವಿಗೆ ಹಲವು ಗಣ್ಯಾತಿಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.
ನಿಜಕ್ಕೂ ಅಭಿನಯದಲ್ಲಿ ಸಾಕಷ್ಟು ಪರಿಣಿತೆ ಹೊಂದಿದ್ದ ರೇಖಾ ಸಿಂಧು, ಕಡಿಮೆ ಅವಧಿಯಲ್ಲೇ ಮಾಡೆಲಿಂಗ್ ಲೋಕದಲ್ಲಿ ಹೆಸರುವಾಸಿಯಾಗಿದ್ದರು. ಅವರ ಈ ಸಾವು ನಿಜಕ್ಕೂ ಮಾಡೆಲಿಂಗ್ ಲೋಕಕ್ಕೆ ತುಂಬಲಾದ ನಷ್ಟ.