Just In
- 4 hrs ago ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- 5 hrs ago ಕಂಪನಿಗೆ 140ರ ಸಂಭ್ರಮ: ಕೇವಲ 140 ವಿಶೇಷ ಆವೃತ್ತಿಗಳು ನಿರ್ಮಾಣ: ಬುಕಿಂಗ್ ಆರಂಭ
- 7 hrs ago ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
- 8 hrs ago ರಾಜ್ಯದಲ್ಲಿ ತಯಾರಾಗುವ ಟೊಯೊಟಾ ಇನ್ನೋವಾ ಹೈಕ್ರಾಸ್ಗೆ ಸೆಲೆಬ್ರಿಟಿಗಳು ಫಿಧಾ: ಈ ಕಾರು ಖರೀದಿಸಿದ ನಟಿ
Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Movies ಡಿ. ಕೆ ಸುರೇಶ್ ಪರ ನಟ ದರ್ಶನ್ ಪ್ರಚಾರ; ಆ 2 ವಿಧಾನಸಭಾ ಕ್ಷೇತ್ರಗಳಲ್ಲಿ ಮತಬೇಟೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಾರು ಅಪಘಾತದಲ್ಲಿ ಸತ್ತಿದ್ದು ನಟಿ ರೇಖಾ ಅಲ್ಲಾ- ರೂಪದರ್ಶಿ ರೇಖಾ..!!
ಬೆಂಗಳೂರಿನ ಬಾಣಸವಾಡಿ ನಿವಾಸಿ ರೇಖಾ ಸಿಂಧು ಜಾಹೀರಾತು ಒಂದರ ಚಿತ್ರೀಕರಣಕ್ಕಾಗಿ ಚೆನ್ನೈಗೆ ಹೋಗುತ್ತಿದ್ದಾಗ ಭೀಕರ ಅಪಘಾತ ಸಂಭವಿಸಿದೆ.
ರೂಪದರ್ಶಿ ಸಿಂಧು ಪ್ರಯಾಣಿಸುತ್ತಿದ್ದ ಕಾರು ಡಿವೈಡರ್ಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಐವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ತಮಿಳುನಾಡಿನ ವೆಲ್ಲೂರ್ ಬಳಿ ಭೀಕರ ಅಪಘಾತ ನಡೆದಿದ್ದು, ನಟಿ ರೇಖಾ ಸಿಂಧು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಚೆನ್ನೈ-ಬೆಂಗಳೂರು ಹೆದ್ದಾರಿಯಲ್ಲಿ ಬೆಳಗಿನ ಜಾವ 2.30ಕ್ಕೆ ಈ ಘಟನೆ ನಡೆದಿದ್ದು, ಕಾರು ಚಾಲಕನ ಅಜಾಗರೂಕತೆಯೇ ಘಟನೆಗೆ ಕಾರಣ ಎನ್ನಲಾಗಿದೆ.
ಇದೇ ಕಾರಿನಲ್ಲಿ ಇನ್ನಿಬ್ಬರು ಮಹಿಳಾ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಚೆನ್ನೈ ಹೈಟೆಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇನ್ನು ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ವೆಲ್ಲೂರು ಪೊಲೀಸರು ಘಟನೆಗೆ ನಿಖರ ಕಾರಣ ಕುರಿತು ತೀವ್ರ ತನಿಖೆ ಆರಂಭಿಸಿದ್ದಾರೆ.
ಚೆನ್ನೈ-ಬೆಂಗಳೂರು ಹೆದ್ದಾರಿಯಲ್ಲಿ ಬರುವ ಪೆರ್ನಾಂಬತ್ ಸಮೀಪದ ಸುನ್ಮುಂಪುಟೈ ಗ್ರಾಮದಲ್ಲಿ ಈ ಅಪಘಾತ ಸಂಭವಿಸಿದ್ದು, ರೇಖಾ ಸಿಂಧು ಗಂಭೀರವಾಗಿ ಗಾಯಗೊಂಡ ಹಿನ್ನೆಲೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಘಟನೆ ನಂತರ ರೂಪದರ್ಶಿ ರೇಖಾ ಸಿಂಧು ಸಾವಿನಲ್ಲಿ ಕೆಲವು ಗೊಂದಲಗಳು ಸೃಷ್ಠಿಯಾಗಿದ್ದವು. ರೇಖಾ ಸಿಂಧು ಬದಲಾಗಿ ಖ್ಯಾತ ನಟಿ ರೇಖಾ ಕೃಷ್ಣಪ್ಪ ಸಾವನ್ನಪ್ಪಿದ್ದಾರೆ ಎಂಬ ವದಂತಿಗಳು ಕೇಳಿಬಂದಿದ್ದವು.
ಟಿಟ್ವರ್ನಲ್ಲಿ ಸ್ಪಷ್ಟನೆ
ಮಾಧ್ಯಮಗಳಲ್ಲಿ ಸಿಂಧು ಕೃಷ್ಣಪ್ಪ ಸಾವಿನ ವಂದತಿಗಳು ಹಬ್ಬುತ್ತಿದ್ದಂತೆ ಟಿಟ್ವರ್ನಲ್ಲಿ ಸ್ಪಷ್ಟನೆ ನೀಡಿರುವ ನಟಿ ರೇಖಾ, ನಾನು ಚೆನ್ನಾಗಿದ್ದೇನೆ ಅಪಘಾತ ಸಾವನ್ನಪ್ಪಿದ್ದು ರೂಪದರ್ಶಿ ರೇಖಾ ಸಿಂಧು ಎಂದು ಸಂತಾಪ ಸೂಚಿಸಿದ್ದಾರೆ.
ಜಾಹೀರಾತು ಜಗತ್ತಿನಲ್ಲಿ ಮಿಂಚಿದ್ದ ಸಿಂಧು
ಇನ್ನು ಕನ್ನಡ ಮತ್ತು ತಮಿಳು ಚಿತ್ರರಂಗದಲ್ಲಿ ಈ ಹಿಂದೆ ಕಾಣಿಸಿಕೊಂಡಿದ್ದ ರೇಖಾ ಸಿಂಧು, ಹೆಚ್ಚಾಗಿ ಜಾಹೀರಾತುಗಳಲ್ಲಿ ಕಾಣಿಸಿಕೊಂಡು ಖ್ಯಾತರಾಗಿದ್ದರು.
ಸದ್ಯ ಚೆನ್ನೈನ ಹೈಟೆಕ್ ಆಸ್ಪತ್ರೆಯಲ್ಲಿ ಮೃತ ರೇಖಾ ಸಿಂಧು ಕಳೆಬರಹವಿದ್ದು, ಇಂದು ಸಂಜೆಯೊಳಗೆ ಬೆಂಗಳೂರಿಗೆ ತಲುಪಲಿದೆ.
ತಮಿಳುನಾಡು ನೋಂದಾಣಿಯಾಗಿರುವ ಟಿಎನ್-32, ಎಎಕ್ಸ್-6666 ನಿಸ್ಸಾನ್ ಕಾರಿನಲ್ಲಿ ಪ್ರಯಾಣಿಸುವಾಗ ಈ ದುರಂತ ನಡೆದಿದೆ.
ರೂಪದರ್ಶಿ ರೇಖಾ ಸಿಂಧು ಸಾವು ಹಿನ್ನೆಲೆ ಜನರಲ್ಲಿ ಗೊಂದಲಗಳು ಉಂಟಾಗಿದ್ದು, ಜನಪ್ರಿಯ ಕಿರುತೆರೆ ನಟಿ ರೇಖಾ ಪ್ರತಿಕ್ರಿಯೆ ನೀಡಿದ್ದಾರೆ.
ಸದ್ಯ ಶೃಂಗೇರಿಯಲ್ಲಿರುವ ರೇಖಾ ಕೃಷ್ಣಪ್ಪ, ತಾನು ಸುರಕ್ಷಿತವಾಗಿದ್ದೇನೆ ಎಂದು ಹೇಳಿಕೊಂಡಿದ್ದಾರೆ.
ರೇಖಾ ಸಿಂಧು ಸಾವಿಗೆ ಸಂತಾಪ
ಮಾಡೆಲಿಂಗ್ ಮೂಲಕ ಕನ್ನಡ ಹಾಗೂ ತಮಿಳು ಚಿತ್ರರಂಗಕ್ಕೆ ಪರಿಚಯವಾಗಿದ್ದ ರೇಖಾ ಸಿಂಧು ಸಾವಿಗೆ ಹಲವು ಗಣ್ಯಾತಿಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.
ನಿಜಕ್ಕೂ ಅಭಿನಯದಲ್ಲಿ ಸಾಕಷ್ಟು ಪರಿಣಿತೆ ಹೊಂದಿದ್ದ ರೇಖಾ ಸಿಂಧು, ಕಡಿಮೆ ಅವಧಿಯಲ್ಲೇ ಮಾಡೆಲಿಂಗ್ ಲೋಕದಲ್ಲಿ ಹೆಸರುವಾಸಿಯಾಗಿದ್ದರು. ಅವರ ಈ ಸಾವು ನಿಜಕ್ಕೂ ಮಾಡೆಲಿಂಗ್ ಲೋಕಕ್ಕೆ ತುಂಬಲಾದ ನಷ್ಟ.