Just In
- 3 min ago ಜಾವಾ ಮೋಟಾರ್ಸೈಕಲ್ ಮಾಲೀಕರಿಗೆ ಸಿಹಿಸುದ್ದಿ: ಈ ಅವಕಾಶ ಕಳೆದುಕೊಳ್ಳಬೇಡಿ!
- 22 min ago ದೊಡ್ಡ ಸಿಗ್ನಲ್ ಕೊಟ್ಟ ಫೋರ್ಡ್: ಭಾರತಕ್ಕೆ ಬರುತ್ತಿದೆ ಹೊಸ ಎಸ್ಯುವಿ... ಟಾಟಾಗೆ ಆತಂಕ ಶುರು
- 1 hr ago ಹಲವು ಆಯ್ಕೆಗಳಲ್ಲಿ ಸಿಗಲಿದೆ 5 ಡೋರ್ ಥಾರ್: ಸುದ್ದಿ ತಿಳಿದು ನಿಟ್ಟುಸಿರು ಬಿಟ್ಟ ಮಹೀಂದ್ರಾ ಫ್ಯಾನ್ಸ್!
- 1 hr ago ನಿಮ್ಮ ಬಳಿ 7 ಲಕ್ಷ ರೂಪಾಯಿ ಇದ್ದರೆ ಸಾಕು.. ಕನಸಿನ ಕಾರನ್ನು ಮನೆ ತರಬಹುದು!
Don't Miss!
- News Yaduveer Wadiyar: ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ಗೆ ಶಾಕ್ ಕೊಟ್ಟ ಒಕ್ಕಲಿಗರು!
- Finance Gold rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Movies ಹರ್ಷಿಕಾ ಪೂಣಚ್ಚ- ಭುವನ್ ಪೊನ್ನಣ್ಣ ಮೇಲೆ ಹಲ್ಲೆ; "ನಮ್ಮ ಬೆಂಗಳೂರಿನಲ್ಲಿ ನಾವು ಎಷ್ಟು ಸುರಕ್ಷಿತ?" ಎಂದ ನಟಿ
- Sports ಜೈಪುರ ವ್ಯಾಕ್ಸ್ ಮ್ಯೂಸಿಯಂನಲ್ಲಿ ವಿರಾಟ್ ಕೊಹ್ಲಿ ಮೇಣದ ಪ್ರತಿಮೆ; ದಿಗ್ಗಜರ ಸಾಲಿಗೆ ಸೇರಿದ ಶ್ರೇಷ್ಠ ಬ್ಯಾಟರ್
- Technology ಇಂದು ಸ್ಯಾಮ್ಸಂಗ್ ಗ್ಯಾಲಕ್ಸಿ F15 5G ಫೋನ್ ಸೇಲ್!..ಬೆಲೆ ಎಷ್ಟು?
- Lifestyle ಹೊಟ್ಟೆಯೇ ಇಲ್ಲದೆ ಬದುಕಿದ್ದ ನತಾಶಾ ದಿಡ್ಡಿ ನಿಧನ...! ಈಕೆ ಯಾರು ಗೊತ್ತಾ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಟ್ರಾಫಿಕ್ ಪೊಲೀಸ್ ಮಾಡಿದ ಯಡವಟ್ಟಿಗೆ ಮಹಿಳೆ ಬಲಿ : ವಿಡಿಯೋ ನೋಡಿ
ಪೊಲೀಸ್ ಬೈಕ್ ಕೀಲಿ ಕೈ ಕಸಿದ ಕಾರಣ ಮಹಿಳೆ ಸಾವು. ಅಂದ್ರ ಪ್ರದೇಶದಲ್ಲಿ ನೆಡೆದ ಈ ದುರ್ಘಟನೆಯ ಬಗ್ಗೆ ಮಾಹಿತಿ ಇಲ್ಲಿದೆ.
ಇತ್ತೀಚಿನ ದಿನಗಳಲ್ಲಿ ಅನಧಿಕೃತ ವಾಹನಗಳು ರಸ್ತೆಗಳ ಮೇಲೆ ಅಡ್ಡ ದಿಡ್ಡಿ ಸಂಚರಿಸಿ ಬಹಳಷ್ಟು ಅಪಘಾತಗಳಿಗೆ ಮೂಲ ಕಾರಣವಾಗುತ್ತಿದ್ದು, ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಂಚಾರಿ ಇಲಾಖೆ ಬಹಳಷ್ಟು ದಿನಗಳಿಂದಲೂ ಹಲವು ರೀತಿಯ ಕ್ರಮಗಳನ್ನು ಕೈಗೊಂಡಿದೆ ಎಂಬುದು ನಮ್ಮ ನಿಮ್ಮೆಲರಿಗೂ ತಿಳಿದಿರುವ ಸಂಗತಿ.
ಸವಾರರೂ ಸಹ ಯಾವುದೇ ರೀತಿಯ ನಿಯಮಗಳನ್ನು, ಧಾಖಲಾತಿಗಳನ್ನು ಹೊಂದಿರದೆ ವಾಹನ ಚಾಲನೆ ಮಾಡುತ್ತಿರುವುದು ದೊಡ್ಡ ತಲೆ ನೋವಾಗಿ ಪರಿಣಮಿಸಿದೆ. ಈ ಕಾರಣಕ್ಕೆ ಹೆಚ್ಚು ಸಿಬ್ಬಂದಿ ನೇಮಿಸಿ ಇದರ ವಿರುದ್ಧ ಕ್ರಮ ಕೈಗೊಳ್ಳುತ್ತಿದ್ದಾರೆ.
ಆದರೆ, ಈ ರೀತಿ ಸಂಚಾರಿ ದಾಖಲೆಗಳನ್ನು ಪರಿಶೀಲನೆ ಮಾಡುವುದೇ ದೊಡ್ಡ ಅನಾಹುತಕ್ಕೆ ಕಾರಣವಾಗಿದ್ದು, ಒಂದು ಜೀವವನ್ನೇ ಬಲಿ ತೆಗೆದುಕೊಂಡಿದೆ.
ಹೌದು, ಪೊಲೀಸರು ರಸ್ತೆಯ ಮೇಲೆ ಚಲಿಸುತ್ತಿದ್ದ ಬೈಕಿನ ಕೀಲಿ ಕೈ ಕಸಿದುಕೊಳ್ಳಲು ಹೋಗಿ ಆಯಾ ತಪ್ಪಿ ಬೈಕ್ ಸವಾರ ರಸ್ತೆ ಮೇಲೆ ಬಿದ್ದಿದ್ದು, ಹಿಂದಗಡೆ ಕುಳಿತಿದ್ದ ಮಹಿಳೆ ಸಾವನ್ನಪ್ಪಿದ್ದಾರೆ.
ಈ ಘಟನೆ ಆಂಧ್ರಪ್ರದೇಶದ ವೈಜಾಕ್ ನಗರದಲ್ಲಿ ನೆಡೆದಿದ್ದು, ಕೀಲಿ ಕೈ ಎಳೆದ ರಭಸಕ್ಕೆ ಬೈಕ್ ಹೆಚ್ಚಿನ ವೇಗವಾಗಿ ನೆಲಕ್ಕೆ ಅಪ್ಪಳಿಸಿದ್ದು, ಇದರ ಪರಿಣಾಮವಾಗಿ ಹಿಂದಗಡೆ ಕುಳಿತಿದ್ದ ಮಹಿಳೆಯ ಜೀವವನ್ನೇ ಕಳೆದುಕೊಳ್ಳಬೇಕಾಗಿದೆ.
ಹಿಂದಗಡೆ ಇಂದ ರಭಸವಾಗಿ ಬರುತ್ತಿದ್ದ ಲಾರಿ ಚಕ್ರಕ್ಕೆ ಮಹಿಳೆ ಸಿಲುಕಿದ್ದು, ತಲೆಗೆ ಪೆಟ್ಟು ಬಿದ್ದು ಹೆಚ್ಚಿನ ರಕ್ತಸ್ರಾವವಾಗಿ ಸ್ಥಳದಲ್ಲಿಯೇ ಮಹಿಳೆ ಪ್ರಾಣ ಬಿಟ್ಟಿದ್ದಾರೆ.
ಕಾರ್ಯನಿರತ ಸಂಚಾರಿ ಪೋಲೀಸ್ ಬೈಕ್ ಕೀಲಿ ಕೈ ಎಳೆದ ಪರಿಣಾಮ ಚಾಲಕ ನಿಯಂತ್ರಣವನ್ನು ಕಳೆದುಕೊಂಡ ಕರಣ ಅವಘಡ ಸಂಭವಿಸಿದೆ ಎನ್ನಲಾಗಿದೆ.
ಆಟೊ ನಗರದಲ್ಲಿರುವ ವಿಶಾಖಪಟ್ಟಣಂ ಪೊಲೀಸ್ ಚೆಕ್ ಪೋಸ್ಟ್ ಬಲಿ ಈ ಘಟನೆ ನೆಡೆದಿದ್ದು, ಚಾಲಕ ಹೆಲ್ಮೆಟ್ ಧರಿಸಿದ್ದರು ಎನ್ನಲಾಗಿದೆ. ಆತನಿಗೂ ಕೂಡ ಕೊಂಚ ಮಟ್ಟಿನ ಗಾಯಗಳಾಗಿವೆ.
ಸುಪ್ರೀಂ ಕೋರ್ಟ್ ಆದೇಶದಂತೆ ದಾಖಲೆಗಳನ್ನು ಪರಿಶೀಲಿಸಲು ಪೊಲೀಸರು ಕೀಲಿ ಕೈ ಕಿತ್ತುಕೊಳ್ಳುವ ಅಗತ್ಯ ಇಲ್ಲ ಎನ್ನುವ ವಿಚಾರ ಪೊಲೀಸರಿಗೆ ತಿಳಿದಿದ್ದರೂ ಸಹ ಈ ರೀತಿಯ ಕೃತ್ಯ ಎಸಗಿರುವುದು ಎಲ್ಲರ ಆಕ್ರೋಶಕ್ಕೆ ಕಾರಣವಾಗಿದೆ.
ಘಟನೆಗೆ ಸಂಬಂಧಿಸಿದಂತೆ ಬೈಕ್ ಕೀಲಿ ಕೈ ಎಳೆದ ಪೊಲೀಸ್ ಸದ್ಯ ಬಂಧಿಸಲಾಗಿದ್ದು, ಇನ್ನೂ ಹೆಚ್ಚಿನ ಮಾಹಿತಿಯನ್ನು ಸದ್ಯದರಲ್ಲೇ ಡ್ರೈವ್ ಸ್ಪಾರ್ಕ್ ತಿಳಿಸಲಿದೆ.