Just In
- 7 hrs ago ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- 8 hrs ago ಕಂಪನಿಗೆ 140ರ ಸಂಭ್ರಮ: ಕೇವಲ 140 ವಿಶೇಷ ಆವೃತ್ತಿಗಳು ನಿರ್ಮಾಣ: ಬುಕಿಂಗ್ ಆರಂಭ
- 10 hrs ago ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
- 10 hrs ago ರಾಜ್ಯದಲ್ಲಿ ತಯಾರಾಗುವ ಟೊಯೊಟಾ ಇನ್ನೋವಾ ಹೈಕ್ರಾಸ್ಗೆ ಸೆಲೆಬ್ರಿಟಿಗಳು ಫಿಧಾ: ಈ ಕಾರು ಖರೀದಿಸಿದ ನಟಿ
Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Movies ಡಿ. ಕೆ ಸುರೇಶ್ ಪರ ನಟ ದರ್ಶನ್ ಪ್ರಚಾರ; ಆ 2 ವಿಧಾನಸಭಾ ಕ್ಷೇತ್ರಗಳಲ್ಲಿ ಮತಬೇಟೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬೆಂಗಳೂರಿನಲ್ಲಿ ಭಾನುವಾರ ಅಂಧರಿಂದ ಕಾರ್ ರೇಸ್
ಬೆಂಗಳೂರು, ಜೂ 16: ಉದ್ಯಾನನಗರಿಯ ಅರಮನೆ ಮೈದಾನದ ಈಡನ್ ಗಾರ್ಡನಿನಲ್ಲಿ ಭಾನುವಾರ(ಜೂ 17) ಅಂಧರ ವಿಶೇಷ ಮೋಟರ್ ಕಾರ್ ರೇಸ್ ನಡೆಯಲಿದೆ. ರಾಷ್ಟ್ರೀಯ ಅಂಧತ್ವ ನಿವಾರಣೆ ಸಂಘ ಮತ್ತು ಇತರ ಸಂಸ್ಥೆಗಳು ಈ ವಿಶೇಷ ಕಾರ್ ರೇಸ್ ಮತ್ತು ಬೃಹತ್ ಮೆರವಣಿಗೆ ಆಯೋಜಿಸಿದೆ.
"ಬೃಹತ್ ಮೆರವಣಿಗೆ ನಂತರ ಈ ವಿಶೇಷ ಕಾರ್ ರೇಸ್ ನಡೆಯಲಿದೆ. ಅಂಧರು ಬ್ರೈಲ್ ಲಿಪಿ ನೆರವಿನೊಂದಿಗೆ ಸುಮಾರು 50 ಕಿ.ಮೀ. ದೂರದವರೆಗೆ ಕಾರ್ ರೇಸ್ ನಡೆಸಲಿದ್ದಾರೆ. ರಸ್ತೆ ಮಾಹಿತಿ, ಕಾರುಗಳ ವೇಗ ಸೇರಿದಂತೆ ಹಲವು ಮಾಹಿತಿಗಳು ಬ್ರೈಲ್ ಲಿಪಿಯಲ್ಲಿರಲಿವೆ. ಕಾರಿನಲ್ಲಿ ಮೂವರಿದ್ದು, ಒಬ್ಬರು ಕಣ್ಣಿನ ದೋಷ ಹೊಂದಿದ್ದು, ಅವರು ಬ್ರೈಲ್ ಲಿಪಿ ಮೂಲಕ ಮಾರ್ಗದರ್ಶನ ನೀಡಬೇಕಿದೆ" ಎಂದು ಬೆಂಗಳೂರು ನೈಟ್ಸ್ ರೌಂಡ್ ಟೇಬಲ್ ಸಂಸ್ಥೆಯ ಅಧ್ಯಕ್ಷರಾದ ರಾಜೀವ್ ದುಸೇಜಾ ಪತ್ರಿಕಾ ಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.
ಅಂಧತ್ವ ಸಮಸ್ಯೆ ಕುರಿತು ಜಾಗೃತಿ ಮೂಡಿಸುವುದು, ಅಂಧರ ಬಗೆಗಿನ ತಾತ್ಸಾರ ನಿವಾರಿಸುವುದು, ಅಂಧರು ಯಾವುದರಲ್ಲಿಯೂ ಕಡಿಮೆಯಿಲ್ಲವೆನ್ನುವುದನ್ನು ಜಗತ್ತಿಗೆ ಸಾಧರ ಪಡಿಸುವುದು ಈ ಕಾರ್ಯಕ್ರಮದ ಉದ್ದೇಶ ಎಂದು ಅವರು ಹೇಳಿದ್ದಾರೆ. ಸಂಜೆ ಅಂಧರ ಫ್ಯಾಷನ್ ಶೋ ಕೂಡ ನಡೆಯಲಿದೆ.
"ಸುಮಾರು 150 ಅಂಧರು ಕಾರ್ ರೇಸಿನಲ್ಲಿ ಪಾಲ್ಗೊಳ್ಳಲಿದ್ದಾರೆ. ಕಾರ್ ರೇಸ್ ಪ್ರವೇಶ ಶುಲ್ಕ 2 ಸಾವಿರ ರುಪಾಯಿ. ಈ ಹಣವನ್ನು ಬಡ ಮಕ್ಕಳಿಗಾಗಿ ನಿರ್ಮಿಸುತ್ತಿರುವ ಪ್ರಾಥಮಿಕ ಶಾಲಾ ಕಟ್ಟಡಕ್ಕಾಗಿ ಉಪಯೋಗಿಸಲಾಗುವುದು" ಎಂದು ರಾಜೀವ್ ಹೇಳಿದ್ದಾರೆ.