Just In
- 6 hrs ago ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- 7 hrs ago Suzuki Access Electric: ಸುಜುಕಿ ಆಕ್ಸೆಸ್ ಎಲೆಕ್ಟ್ರಿಕ್ ಸ್ಕೂಟರ್ ಈ ವರ್ಷ ಬಿಡುಗಡೆ ಸಾಧ್ಯತೆ!
- 8 hrs ago Royal Enfield Himalayan ಸುಲಭವಾಗಿ ಖರೀದಿಸುವುದು ಹೇಗೆ?: ಇಲ್ಲಿದೆ ಡೌನ್ಪೇಮೆಂಟ್, EMI ಮಾಹಿತಿಗಳು!
- 8 hrs ago ಮಿಂಚಿನ ವೇಗಕ್ಕೆ ಸರಿಸಾಟಿಯಾಗಿ ಬೆಂಗಳೂರಿನ ಹೊಸ ಅಲ್ಟ್ರಾವೈಲೆಟ್ ಬೈಕ್ ಬಿಡುಗಡೆ: 323KM ರೇಂಜ್
Don't Miss!
- Movies ನೀಲಿ ಪ್ರಪಂಚದ ಕರಾಳ ಸತ್ಯವನ್ನ ಹೇಳಿದ ಲಾನಾ ರೋಡ್ಸ್
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಿಎಂಡಬ್ಲ್ಯು ಹಿಟ್ ಆಂಡ್ ರನ್ ಅಪರಾಧಿ ಬಂಧನ
ನವದೆಹಲಿ, ಮೇ 15: ಗುರ್ ಗಾಂವ್ ಐಎಫ್ಎಫ್ಸಿಒ ಚೌಕದ ಸಮೀಪ ಇತ್ತೀಚೆಗೆ ಬಿಎಂಡಬ್ಲ್ಯು ಕಾರು ಅಪಘಾತ ನಡೆಸಿ ಗರ್ಭಿಣಿ ಮತ್ತು ಆಕೆಯ ಚಾಲಕನ ಸಾವಿಗೆ ಕಾರಣವಾಗಿದ್ದ "ನಿಜವಾದ" ಅಪರಾಧಿ ಕೊನೆಗೂ ನ್ಯಾಯಾಲಯಕ್ಕೆ ಶರಣಾಗತನಾಗಿದ್ದಾನೆ.
ವಿಶೇಷವೆಂದರೆ ಸೋಮವಾರ ರಾಜೇಶ್ ಎಂಬಾತ, ಕಾರಿನ ಚಾಲಕನಾದ ತಾನೇ ಅಪಘಾತ ನಡೆಸಿದ್ದನೆಂದು ಕೋರ್ಟಿನಲ್ಲಿ ಬೇಲ್ ಅರ್ಜಿ ಸಲ್ಲಿಸಿದ್ದ. ಆದರೆ ಚಾಣಾಕ್ಷ್ಯ ಗುರ್ ಗಾಂವ್ ಪೊಲೀಸರು ಆತನ ಬೇಲ್ ಅರ್ಜಿಗೆ ವಿರೋಧ ವ್ಯಕ್ತಪಡಿಸಿದ್ದರು. ಯಾಕೆಂದರೆ ಪೊಲೀಸರ ಆರಂಭಿಕ ತನಿಖೆಯಿಂದ ಬಂಧಿತ ವ್ಯಕ್ತಿ ಕಾರು ಚಾಲನೆ ಮಾಡಿಲ್ಲವೆಂದು ಸಾಬೀತಾಗಿತ್ತು.
ಮೇ 5ರಂದು ಅಪಘಾತ ನಡೆಸಿ ಇಬ್ಬರ ಸಾವಿಗೆ ಕಾರಣವಾದ ಬಿಎಂಡಬ್ಲ್ಯು ಕಾರಿನ ಸ್ಟಿಯರಿಂಗ್ ವೀಲ್ ನಲ್ಲಿದ್ದ ರಕ್ತದ ಕಲೆಗಳು ನಿಜವಾದ ಅಪರಾಧಿಯನ್ನು ಪತ್ತೆ ಹಚ್ಚಲು ಪೊಲೀಸರಿಗೆ ನೆರವಾಗಿತ್ತು. ಆ ರಕ್ತದ ಕಲೆಗಳನ್ನು ಕೇಂದ್ರ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗಿತ್ತು.
ವಿಧಿ ವಿಜ್ಞಾನ ಪರೀಕ್ಷೆಯಲ್ಲಿ ಈ ರಕ್ತದ ಕಲೆಗಳು ಬಂಧಿತ ರಾಜೇಶನದ್ದು ಅಲ್ಲವೆಂದು ಸಾಬೀತಾಗಿತ್ತು. ಇದೀಗ ಬಿಎಂಡಬ್ಲ್ಯು ಕಾರಿನ ಮಾಲಿಕನ ಪುತ್ರ ಸೂರಜ್ ಸಿಂಗ್ ನ್ಯಾಯಾಲಯಕ್ಕೆ ಶರಣಾಗಿದ್ದಾನೆ.
ಇತ್ತೀಚಿನ ದಿನಗಳಲ್ಲಿ ಬೆಂಗಳೂರು ಸೇರಿದಂತೆ ದೇಶದ ಹೆಚ್ಚಿನ ಭಾಗಗಳಲ್ಲಿ ಹಿಟ್ ಆಂಡ್ ರನ್ ಪ್ರಕರಣಗಳು ಹೆಚ್ಚಾಗುತ್ತಿವೆ. ಹಿಟ್ ಆಂಡ್ ರನ್ ಪ್ರಕರಣಗಳಲ್ಲಿ ಅಮಾಯಕರಿಗೆ ಅಪಘಾತ ನಡೆಸಿದರೂ ಪಾರಾಗಬಹುದೆಂದು ಭಾವಿಸುವರಿಗೆ ಈ ಮೂಲಕ ಗುರ್ ಗಾಂವ್ ಪೊಲೀಸರು ಸೂಕ್ತ ಉತ್ತರ ನೀಡಿದ್ದಾರೆ.