Just In
- 2 min ago ಎಲೆಕ್ಟ್ರಿಕ್ ಅವತಾರದಲ್ಲಿ ಬರಲಿದೆ ಹೋಂಡಾ ಆಕ್ಟಿವಾ: ಎಲೆಕ್ಟ್ರಿಕ್ ಸ್ಕೂಟರ್ಗಳ ರಾಜ ಆಗುತ್ತಾ?
- 2 min ago ಪ್ರೇರಣಾತ್ಮಕ ಕಥೆ: ಮನೆ ಕೆಲಸದಾಕೆಗೆ 'ಸೈಕಲ್' ಖರೀದಿಸಲು ಸಹಾಯ ಮಾಡಿದ ಮಾಲೀಕ.. ವಿಡಿಯೋ ವೈರಲ್
- 1 hr ago ಸಣ್ಣ ಕುಟುಂಬಗಳಿಗೆ ಬೆಸ್ಟ್ ಕಾರು... 5.36 ಲಕ್ಷ ರೂ. ಬೆಲೆ... 34 ಕಿ.ಮೀ ಮೈಲೇಜ್!
- 2 hrs ago ಭಾರತದ ರಸ್ತೆಯಲ್ಲಿ ಘರ್ಜಿಸುತ್ತಿರುವ ಪವರ್ಫುಲ್ ಎಪ್ರಿಲಿಯಾ ಬೈಕ್ಗಾಗಿ ಅಕ್ಸೆಸರೀಸ್ ಬಿಡುಗಡೆ
Don't Miss!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Sports ಧೋನಿ ಎದುರು ಬಂದಾಗ ಕೆ.ಎಲ್ ರಾಹುಲ್ ಕ್ಯಾಪ್ ತೆಗೆದಿದ್ದೇಕೆ?: ಕಾರಣವೇನು?
- News Lok Sabha Election 2024: ಮತದಾರರನ್ನು ಆಕರ್ಷಿಸಲು ಚುನಾವಣಾ ಆಯೋಗದ ವಿಭಿನ್ನ ಪ್ರಯತ್ನ
- Movies ನಿತೇಶ್ ತಿವಾರಿ 'ರಾಮಾಯಣ' ಚಿತ್ರದಲ್ಲಿ ರಣ್ಬೀರ್ ಅಲ್ಲ, ಯಶ್ ಹೀರೋ? ಏನಿದು ಟ್ವಿಸ್ಟ್!
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕನ್ನಡಿಗರಿಗೆ ಜಾಬ್ ನೀಡದಿದ್ರೆ ವಿನಾಯಿತಿ ವಾಪಸ್
ರಾಜ್ಯದ ಕೋಲಾರ ಜಿಲ್ಲೆಯ ನರ್ಸಪುರದಲ್ಲಿರುವ ಹೋಂಡಾ ಘಟಕ(ಎಚ್ಎಂಎಸ್ಐ)ದಿಂದ ಉತ್ಪಾದನೆಯಾಗುವ ವಾಹನಗಳಿಗೆ ನೋಂದಣಿ ಶುಲ್ಕ ವಿನಾಯಿತಿ ಮತ್ತು ವ್ಯಾಟ್ ವಿನಾಯಿತಿಯನ್ನು ಮುಂದೂಡಲು ಕರ್ನಾಟಕ ಸರಕಾರ ನಿರ್ಧರಿಸಿದೆ.
ಮುಂದಿನ ಹತ್ತು ವರ್ಷಗಳ ಕಾಲ ವ್ಯಾಟ್ ಪಾವತಿ ವಿನಾಯಿತಿ ಮುಂದೂಡಲು ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಸಮ್ಮತಿ ನೀಡಿದ್ದಾರೆ. ಅಂದರೆ ಹೋಂಡಾ ಮೋಟರ್ ಸೈಕಲ್ ಆಂಡ್ ಸ್ಕೂಟರ್ ಘಟಕದಿಂದ ಉತ್ಪಾದನೆಯಾಗುವ ವಾಹನಗಳಿಗೆ 10ವರ್ಷಗಳ ಕಾಲ ಶೇಕಡ 40ರಷ್ಟು ಕಡಿಮೆ ವ್ಯಾಟ್ ವಿಧಿಸಲಾಗಿದೆ.
ಇದರೊಂದಿಗೆ ಕೇಂದ್ರ ಮಾರಾಟ ತೆರಿಗೆಯಲ್ಲಿ ಶೇಕಡ 95ರಷ್ಟು ವಿನಾಯಿತಿ ಮತ್ತು ಎಚ್ಎಂಎಸ್ಐಗೆ ವಿತರಣೆ ಮಾಡಿರುವ 96 ಎಕರೆ ಘಟಕಕ್ಕೆ ರಿಜಿಸ್ಟ್ರೇಷನ್ ಶುಲ್ಕವನ್ನು ವಿನಾಯಿತಿ ಮಾಡಲಾಗಿದೆ.
"ಆದರೆ ಕಂಪನಿಯು ಶೇಕಡ 80ರಷ್ಟು ಸ್ಥಳೀಯ ಜನರಿಗೆ ಉದ್ಯೋಗ ನೀಡುವುದು ಕಡ್ಡಾಯ. ಇದಕ್ಕೆ ತಪ್ಪಿದರೆ ಈ ವಿನಾಯಿತಿಗಳನ್ನೆಲ್ಲ ವಾಪಸ್ ಪಡೆಯಲಾಗುವುದು" ಎಂದು ರಾಜ್ಯ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಸ್ ಸುರೇಶ್ ಕುಮಾರ್ ಹೇಳಿದ್ದಾರೆ.
ಹೋಂಡಾ ಮೋಟರ್ ಸೈಕಲ್ ಆಂಡ್ ಸ್ಕೂಟರ್ಸ್ ಇಂಡಿಯಾ ಲಿಮಿಟೆಡ್ ಕಂಪನಿಯು ಹೋಂಡಾ ಘಟಕಕ್ಕೆ ಸುಮಾರು 1,300 ಕೋಟಿ ರುಪಾಯಿ ಹೂಡಿಕೆ ಮಾಡಿದೆ. ಈ ಘಟಕವು ವರ್ಷಕ್ಕೆ 18 ಲಕ್ಷ ವಾಹನ ಉತ್ಪಾದನಾ ಸಾಮರ್ಥ್ಯ ಹೊಂದಿದೆ.
ಹೋಂಡಾ ಘಟಕವು 3,200 ಜನರಿಗೆ ನೇರ ಮತ್ತು ಕಡಿಮೆಯೆಂದರೂ 1,500 ಜನರಿಗೆ ಪರೋಕ್ಷ ಉದ್ಯೋಗ ನೀಡಲಿದೆ ಎಂದು ಸುರೇಶ್ ಕುಮಾರ್ ಹೇಳಿದ್ದಾರೆ. ಇತ್ತೀಚೆಗೆ ಹೋಂಡಾ ಘಟಕದ ಶಂಕುಸ್ಥಾಪನೆ ನಡೆದಿತ್ತು.