Just In
- 6 hrs ago ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- 7 hrs ago ಕಂಪನಿಗೆ 140ರ ಸಂಭ್ರಮ: ಕೇವಲ 140 ವಿಶೇಷ ಆವೃತ್ತಿಗಳು ನಿರ್ಮಾಣ: ಬುಕಿಂಗ್ ಆರಂಭ
- 8 hrs ago ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
- 9 hrs ago ರಾಜ್ಯದಲ್ಲಿ ತಯಾರಾಗುವ ಟೊಯೊಟಾ ಇನ್ನೋವಾ ಹೈಕ್ರಾಸ್ಗೆ ಸೆಲೆಬ್ರಿಟಿಗಳು ಫಿಧಾ: ಈ ಕಾರು ಖರೀದಿಸಿದ ನಟಿ
Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Movies ಡಿ. ಕೆ ಸುರೇಶ್ ಪರ ನಟ ದರ್ಶನ್ ಪ್ರಚಾರ; ಆ 2 ವಿಧಾನಸಭಾ ಕ್ಷೇತ್ರಗಳಲ್ಲಿ ಮತಬೇಟೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬೆಂಗ್ಳೂರು ಟ್ರಾಫಿಕ್ ಸಮಸ್ಯೆಗೆ 'ಬೆದರುಗೊಂಬೆ' ಪರಿಹಾರ?
ದೇಶದಲ್ಲಿ ಅತಿ ಹೆಚ್ಚು ವಾಹನ ದಟ್ಟಣೆ ಹೊಂದಿರುವ ಮಹಾನಗರಗಳ ಪೈಕಿ ನಮ್ಮ ಬೆಂಗಳೂರು ಕೂಡಾ ಒಂದಾಗಿದೆ. ಈ ನಿಟ್ಟಿನಲ್ಲಿ ಹೊಸ ಚಿಂತನೆಯೊಂದಿಗೆ ಮುಂದೆ ಬಂದಿರುವ ಬೆಂಗಳೂರು ಸಂಚಾರ ಪೊಲೀಸ್, ಟ್ರಾಫಿಕ್ಗಳಲ್ಲಿ ಕೃತಕ ಪೊಲೀಸ್ ಬೆದರುಗೊಂಬೆ ಸ್ಥಾಪಿಸುವ ಮೂಲಕ ಸಿಗ್ನಲ್ ಭೇಧಿಸುವವರನ್ನು ನಿಯಂತ್ರಿಸಲು ಹೊಸ ಯೋಜನೆ ಹೊರತಂದಿದೆ.
ಇತರ ನಗರಗಳಂತೆ ಬೆಂಗಳೂರು ವಾಹನ ದಟ್ಟಣೆ ನಿಭಾಯಿಸಲು ಪೊಲೀಸ್ ಸಿಬ್ಬಂದಿಗಳ ಕೊರತೆಯಿದೆ. ಹಾಗಾಗಿ ಟ್ರಾಫಿಕ್ ಪರಿಸ್ಥಿತಿ ಮೇಲೆ ಸಂಪೂರ್ಣ ನಿಗಾ ವಹಿಸುವ ನಿಟ್ಟಿನಲ್ಲಿ ಕೃತಕ ಪೊಲೀಸ್ ಗೊಂಬೆಗಳನ್ನು ಟ್ರಾಫಿಕ್ಗಳಲ್ಲಿ ಸ್ಥಾಪಿಸಲಾಗುತ್ತಿದೆ. ಬಹುಶ: ಇಡೀ ಜಗತ್ತಿನ ಪೈಕಿ ಬೆಂಗ್ಳೂರಲ್ಲೇ ಇದು ಮೊದಲ ಬಾರಿಗೆ ಆಳವಡಿಸುತ್ತಿರಬಹುದು.
ಚಿತ್ರದಲ್ಲಿ ತೋರಿಸಲಾಗಿರುವಂತೆಯೇ ಮೊದಲ ನೋಟಕ್ಕೆ ಅಸಲಿ ಪೊಲೀಸ್ ತರಹನೇ ಕಾಣಿಸುವ ಈ ಬೆದರುಗೊಂಬೆಗಳು ಲೇನ್ ತಪ್ಪಿಸಿ ಬರುವ ವಾಹನಗಳು ಅಥವಾ ಅತಿ ವೇಗದಿಂದ ಬರುವ ವಾಹನಗಳನ್ನು ದೂರದಿಂದಲೇ ಎಚ್ಚರಿಸಲಿದೆ. ಇದು ಚಾಲಕರು ನಿಧಾನವಾಗಿ ಲೇನ್ ನೀತಿ ಪಾಲಿಸಿ ಬರುವಂತೆ ಪ್ರೇರೆಪಿಸಲಿದೆ. ಇದರಿಂದ ಸಂಭವನೀಯ ಅಪಘಾತವನ್ನು ತಪ್ಪಿಸಬಹುದಾಗಿದೆ ಎಂದು ಅಧಿಕಾರಿಗಳು ತಿಳಿಸುತ್ತಾರೆ.
ಇಂತಹ ಬೆದರುಗೊಂಬೆಗಳು ವಾರದ ಏಳು ದಿನ ಕಾರ್ಯಾಚರಿಸಲಿದೆ. ಮಳೆಗಾಲದಲ್ಲಿ ಇದು ಕರ್ತವ್ಯ ನಿರತವಾಗಿರುವುದಿಲ್ಲ. ಆದರೆ ಪ್ರತಿ ದಿನವೂ ಚಾಲಕರನ್ನು ಹೇಗೆ ಮಂಗ ಮಾಡಲು ಸಾಧ್ಯ ಎಂಬುದಕ್ಕೆ ಅಧಿಕಾರಿಗಳೇ ಉತ್ತರ ನೀಡಬೇಕಾಗಿದೆ.
ಈಗಿನ ಪರಿಸ್ಥಿತಿಯಲ್ಲಿ ಬೆಂಗಳೂರು ಸಂಚಾರ ಪೊಲೀಸ್ಗೆ ಕನಿಷ್ಠ 500ರಷ್ಟು ಸಿಬ್ಬಂದಿಗಳ ನೇಮಕ ಮಾಡುವ ಅಗತ್ಯವಾಗಿದೆ. ಆದರೆ ಸರಕಾರ ಯಾವಾಗ ಈ ಹುದ್ದೆಗಳನ್ನು ಭರ್ತಿ ಮಾಡಲಿದೆ ಎಂಬುದು ತಿಳಿದು ಬಂದಿಲ್ಲ.