Just In
- 8 hrs ago Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- 8 hrs ago ಬಹುಕೋಟಿ ಬೆಲೆಯ ಕಾರುಗಳಿದ್ದರೂ ಸಾಮಾನ್ಯ ಮಾರುತಿ ಕಾರಿನಲ್ಲಿ ಓಡಾಡಿದ ರೋಹಿತ್ ಶರ್ಮಾ: ಕಾರಣವೇನು?
- 10 hrs ago HSRP ನಂಬರ್ ಪ್ಲೇಟ್ನಲ್ಲಿ ನಡೆಯುತ್ತಿದೆ ಭಾರೀ ಮೋಸ: ಬುಕ್ ಮಾಡದವರು ಇದನ್ನು ಗಮನಿಸಿ!
- 10 hrs ago Nissan Magnite: ಕಾಮಧೇನುವಾದ ನಿಸ್ಸಾನ್ ಮ್ಯಾಗ್ನೈಟ್.. 6 ಲಕ್ಷ ಬೆಲೆ, 20 ಕಿ.ಮೀ ಮೈಲೇಜ್
Don't Miss!
- Movies Shobha Shetty ; ನಿಶ್ಚಿತಾರ್ಥದ ಬಗ್ಗೆ ಮಾಹಿತಿ ನೀಡಿದ ನಟಿ ಶೋಭಾ ಶೆಟ್ಟಿ
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- News ಸಿಯಾಚಿನ್ ಬಳಿ ಚೀನಾ ಆಕ್ರಮಿತ ಕಾಶ್ಮೀರದಲ್ಲಿ ಹೊಸ ರಸ್ತೆ ನಿರ್ಮಾಣ; ಖಚಿತಪಡಿಸಿದ ಉಪಗ್ರಹ ಚಿತ್ರಗಳು
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಸ್ ದರ ಏರಿಕೆ; ಪ್ರಯಾಣಿಕರ ಗೋಳು ಕೇಳುವವರು ಯಾರು?
ದಿನಬಳಕೆಯ ಅಗತ್ಯ ಸಾಮಾನುಗಳ ಬೆಲೆಯೇರಿಕೆಯಿಂದಾಗಿ ಕಂಗೆಟ್ಟು ಹೋಗಿರುವ ಜನಸಾಮಾನ್ಯರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಹಾಗೂ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಪ್ರಯಾಣ ದರ ಏರಿಕೆ ಮಾಡುವ ಮೂಲಕ ಮತ್ತೊಂದು ಆಘಾತ ನೀಡಿದೆ.
ಎರಡೂ ಸಂಸ್ಥೆಗಳ ಏಕಕಾಲದಲ್ಲಿ ದರ ಏರಿಕೆ ಮಾಡಿರುವುದು ಜನರಲ್ಲಿ ಬೇಸರದ ಜತೆ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಕೆಎಸ್ಆರ್ಟಿಸಿಯು ವೇಗದೂತ ಮತ್ತು ರಾಜಹಂಸ ಪ್ರಯಾಣ ದರವನ್ನು ಶೇ. 10.50ರಷ್ಟು ಹೆಚ್ಚಳ ಮಾಡಿದ್ದರೆ ಬಿಎಂಟಿಸಿ ಸಾಮಾನ್ಯ ಬಸ್ ಟಿಕೆಟ್ ದರವನ್ನು ಶೇಕಡಾ 16ರಷ್ಟು ಹೆಚ್ಚಳಗೊಳಿಸಿತ್ತು.
ಪರಿಷ್ಕೃತ
ದರ
ಶನಿವಾರ
ಮಧ್ಯರಾತ್ರಿಯಿಂದಲೇ
ಜಾರಿಗೆ
ಬಂದಿದೆ.
ಅಷ್ಟಕ್ಕೂ
ದರ
ಏರಿಕೆಗೆ
ಸಂಸ್ಥೆಗಳು
ನೀಡುತ್ತಿರುವ
ಕಾರಣವಾದರೂ
ಏನು?
ಈ
ಬಗ್ಗೆ
ನಿಮ್ಮ
ಅನಿಸಿಕೆಗಳನ್ನು
ನಮ್ಮ
ಜತೆ
ಹಂಚಿಕೊಳ್ಳಿರಿ...
ಡೀಸೆಲ್ ದರ ಏರಿಕೆ ಹಾಗೂ ನಿರ್ವಹಣ ವೆಚ್ಚ ಹೆಚ್ಚಳದ ಕಾರಣ ದರ ಏರಿಕೆಗೊಳಿಸುವುದು ಅನಿವಾರ್ಯ. ಸಾರಿಗೆ ನಿಗಮಗಳಿಂದ ರಾಜ್ಯ ಸರ್ಕಾರಕ್ಕೆ ಸಬ್ಸಿಡಿ ದೊರಕುತ್ತಿಲ್ಲ. ಈ ಹಿನ್ನಲೆಯಲ್ಲಿ ನಿಗಮಕ್ಕೆ ಉಂಟಾಗುತ್ತಿರುವ ಆರ್ಥಿಕ ಹೊರೆ ಸರಿದೂಗಿಸಲು ಪ್ರಯಾಣ ದರ ಏರಿಕೆ ಅನಿವಾರ್ಯ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ.
ಬಿಎಂಟಿಸಿ ಕೆಲವು ದಿನಗಳ ಹಿಂದೆಯಷ್ಟೇ ಮಾಸಿಕ ಹಾಗೂ ದೈನಂದಿನ ಪಾಸುಗಳ ದರಗಳನ್ನು ಹೆಚ್ಚಳಗೊಳಿಸಿತ್ತು. ಇದರ ಬೆನ್ನಲ್ಲೇ ಸಾಮಾನ್ಯ ಬಸ್ಗಳ ಪ್ರಯಾಣ ದರದಲ್ಲಿ ಶೇ. 16ರಷ್ಟು ಹೆಚ್ಚಳ ಗೊಳಿಸಿದೆ.
ಕಳೆದ ಆರು ತಿಂಗಳಲ್ಲಿ ಡೀಸೆಲ್ ದರ ಐದು ಬಾರಿ ಏರಿಕೆಗೊಂಡಿದೆ. ಕೆಎಸ್ಆರ್ಟಿಸಿಗೆ ವರ್ಷಂಪ್ರತಿ 120.10 ಕೋಟಿ ಹೊರೆಯಾಗುತ್ತಿದೆ. ನಿಗಮದ ನೌಕರರ ತುಟ್ಟಿಭತ್ಯೆ ಕೂಡಾ ಪರಿಷ್ಕರಿಸಲಾಗಿದೆ. ಇದರಿಂದ ರು. 102.58 ಕೋಟಿ ಹೆಚ್ಚು ಹೊರೆಯಾಗುತ್ತಿದೆ. ಒಟ್ಟಾರೆಯಾಗಿ ಡೀಸೆರ್ ದರ ಹೆಚ್ಚಳ ಹಾಗೂ ಸಿಬ್ಬಂದಿಯ ವೇತನ ಪರಿಷ್ಕರಣೆಯಿಂದ ಸಂಸ್ಥೆಗೆ ವಾರ್ಷಿಕ 222.68 ಕೋಟಿ ರು. ಹೆಚ್ಚು ಹೊರೆಯಾಗುತ್ತಿದೆ ಎಂದು ಕೆಎಸ್ಆರ್ಟಿಸಿ ಸಮರ್ಥಿಸಿಕೊಂಡಿದೆ.
ಕನಿಷ್ಠ ಪಕ್ಷ ವಿದ್ಯಾರ್ಥಿ ರಿಯಾಯಿತಿ ದರಗಳಲ್ಲಿ ಹೆಚ್ಚಳ ಮಾಡದಿರುವುದು ಸಮಾಧಾನಕರ ಅಂಶವಾಗಿದೆ. ಇದೀಗ ನಿಮ್ಮ ಅನಿಸಿಕೆಗಳನ್ನು ನಮ್ಮ ಜತೆ ಹಂಚಿಕೊಳ್ಳಿರಿ...
ಈ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಲು ಈ ಲಿಂಕ್ ಕ್ಲಿಕ್ ಮಾಡಿರಿ