Just In
- 3 min ago ಫ್ಯಾಮಿಲಿ ಕಾರಾಗಿ ಜನರ ಮನಗೆದ್ದ ಹ್ಯುಂಡೈ ಅಲ್ಕಾಜರ್ ಎಸ್ಯುವಿಯ ಮೇಲೆ ಭರ್ಜರಿ ಡಿಸ್ಕೌಂಟ್
- 1 hr ago Elevate: ಶ್ರೀಸಾಮಾನ್ಯನ ಬಿಎಂಡಬ್ಲ್ಯೂ.. ಹೋಂಡಾ ಎಲಿವೇಟ್ ಖರೀದಿಸಬೇಕೇ? ಆನ್-ರೋಡ್ ಬೆಲೆ ಎಷ್ಟು, EMI ಏನು?
- 1 hr ago ಜಾವಾ ಮೋಟಾರ್ಸೈಕಲ್ ಮಾಲೀಕರಿಗೆ ಸಿಹಿಸುದ್ದಿ: ಈ ಅವಕಾಶ ಕಳೆದುಕೊಳ್ಳಬೇಡಿ!
- 2 hrs ago ದೊಡ್ಡ ಸಿಗ್ನಲ್ ಕೊಟ್ಟ ಫೋರ್ಡ್: ಭಾರತಕ್ಕೆ ಬರುತ್ತಿದೆ ಹೊಸ ಎಸ್ಯುವಿ... ಟಾಟಾಗೆ ಆತಂಕ ಶುರು
Don't Miss!
- Finance ಕಬ್ಬನ್ ಪಾರ್ಕ್ನಲ್ಲಿ ಮರ ಅಪ್ಪಿಕೊಳ್ಳುವ ಕಾರ್ಯಕ್ರಮಕ್ಕೆ ತಲಾ 1,500 ರೂ. ಶುಲ್ಕವಿಟ್ಟ ಕಂಪನಿ!
- Technology Itel: ಐಟೆಲ್ ಸೂಪರ್ ಗುರು 4G ಫೋನ್ ಲಾಂಚ್! ಯುಪಿಐ ಬೆಂಬಲ
- Movies ನಟಿ ಪ್ರೀತಿ ಜಿಂಟಾ ಮದುವೆ ಮುನ್ನವೇ 34 ಮಕ್ಕಳಿಗೆ ತಾಯಿ ಪ್ರೀತಿ ನೀಡಿದ ವಿಷಯ ನಿಮಗೆ ಗೊತ್ತೇ?
- News ರಜನಿಕಾಂತ್, ವಿಜಯ್ ಸೇತುಪಥಿ, ಧನುಷ್.. ಯಾರೆಲ್ಲಾ ವೋಟ್ ಹಾಕಿದ್ರು?
- Lifestyle ಸ್ವತಂತ್ರ ಭಾರತದ ಮೊದಲ ಮತದಾರನಿಲ್ಲದ ಮೊದಲ ಚುನಾವಣೆ ಇದು..! ಯಾರು ಈ ಮತದಾರ ಗೊತ್ತಾ?
- Sports IPL 2024: ಪಂಜಾಬ್ ಕಿಂಗ್ಸ್ ವಿರುದ್ಧ ಗೆದ್ದರೂ ಹಾರ್ದಿಕ್ ಪಾಂಡ್ಯಗೆ ಭಾರೀ ಮೊತ್ತದ ದಂಡ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತಿಂಗಳಿಗೊಮ್ಮೆ 'ಸೈಕಲ್ ದಿನಾಚರಣೆ'; ಇದು ಮೋದಿ ಮಂತ್ರ
ವರ್ಧಿಸುತ್ತಿರುವ ಇಂಧನ ಬಳಕೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕಚೇರಿ ಕಲಾಪಗಳಿಗೆ ತೆರಳುವವರು ತಿಂಗಳಿಗೊಮ್ಮೆಯಾದರೂ 'ಸೈಕಲ್ ದಿನಾಚರಣೆ' ಹಮ್ಮಿಕೊಳ್ಳಬೇಕು ಎಂದು ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಆಹ್ವಾನ ನೀಡಿದ್ದಾರೆ.
ಇಂದಿನ ದಿನಗಳಲ್ಲಿ ಕಾರುಗಳ ಬಳಕೆ ಹೆಚ್ಚಾಗುತ್ತಿದೆ. ಇದರಿಂದ ಇಂಧನ ಬಳಕೆಯು ವಿಪರೀತವಾಗಿದೆ. ಈ ಎಲ್ಲ ಪರಿಸ್ಥಿತಿಯನ್ನು ಸ್ವಲ್ಪ ಮಟ್ಟಿಗಾದರೂ ಹತೋಟಿಗೆ ತರುವ ನಿಟ್ಟಿನಲ್ಲಿ ಸೈಕಲ್ ಡೇ ಆಚರಿಸಲು ಮೋದಿ ವಿನಂತಿ ಮಾಡಿದ್ದಾರೆ.
ನಗರಾಭಿವೃದ್ಧಿ ವಿಚಾರ ಸಂಕಿರಣವೊಂದರಲ್ಲಿ ಮಾತನಾಡುತ್ತಿದ್ದ ಬಿಜೆಪಿ ಮುಂದಿನ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ, ಇಂದೊಂದು ಹೊಸ ಕಲ್ಪನೆಯಲ್ಲ. ಡೆನ್ಮಾಕ್ಗಳಂತಹ ರಾಷ್ಟ್ರಗಳಲ್ಲಿ ತೆರಿಗೆ ವಿನಾಯಿತಿ ನೀಡುವ ಮೂಲಕ ಸಾರ್ವಜನಿಕರು ಸೈಕಲ್ ಬಳಕೆ ಮಾಡುವಂತೆ ಉತ್ತೇಜನ ನೀಡಲಾಗುತ್ತಿದೆ ಎಂದು ವಿವರಿಸಿದ್ದಾರೆ.
ಈ ನಿಟ್ಟಿನಲ್ಲಿ ಸೈಕಲ್ಗಳ ಬಳಕೆ ಹಾಗೂ ಸುರಕ್ಷತೆಗಾಗಿ ಸರಿಯಾದ ರೀತಿಯಲ್ಲಿ ನಗರ ಮೂಲಸೌಕರ್ಯ ಅಭಿವೃದ್ಧಿಯಾಗಬೇಕಾದ ಅಗತ್ಯವಿದೆ ಎಂದು ಮೋದಿ ತಿಳಿಸಿದ್ದಾರೆ.
ತನ್ನ ಬಳಕೆಯ ಬಹುತೇಕ ಕಚ್ಚಾ ತೈಲವನ್ನು ವಿದೇಶದಿಂದ ಆಮದು ಮಾಡಿಕೊಳ್ಳುತ್ತಿರುವ ಭಾರತದಲ್ಲಿ ಜಾಗತಿಕ ಮಟ್ಟದಲ್ಲಿನ ಬೆಲೆ ಏರುಪೇರಿನ ಪರಿಸ್ಥಿತಿ ನೇರ ಹೊಡೆತ ನೀಡುತ್ತಿದ್ದು, ವಾರ್ಷಿಕವಾಗಿ 90,000 ಕೋಟಿ ರು.ಗಳಷ್ಟು ವೆಚ್ಚ ತಗಲುತ್ತಿದೆ.
ಹಾಗೆಯೇ ಜಾಗತಿಕವಾಗಿ ವಿದ್ಯುತ್ ಉಳಿಸುವ ನಿಟ್ಟಿನಲ್ಲಿ ಹುಣ್ಣಿಮೆ ದಿನಗಳಲ್ಲಿ ನಗರ ಬೀದಿ ಲೈಟ್ಗಳನ್ನು ಆಫ್ ಮಾಡಬೇಕು ಎಂದು ಸಲಹೆ ಮಾಡಿದ್ದಾರೆ.