Just In
- 14 min ago ಪ್ರಸಿದ್ಧ ಪುಣ್ಯಕ್ಷೇತ್ರ ಶೃಂಗೇರಿ ಶಾರದಾಂಬಾ ದರ್ಶನಕ್ಕೆ ತೆರಳಬೇಕೇ.. ಹಾಗಾದರೆ ಈ ಸ್ಟೋರಿ ನೋಡಿ
- 1 hr ago ಭರ್ಜರಿ ಸಿಹಿಸುದ್ದಿ: ಸ್ಕೋಡಾ ಕೊಡಿಯಾಕ್ ಎಸ್ಯುವಿಯ ಮೇಲೆ ಭರ್ಜರಿ ಡಿಸ್ಕೌಂಟ್
- 1 hr ago Maruti: ಜಪಾನ್ನಲ್ಲಿ ಗರಿಷ್ಟ ಗುಣಮಟ್ಟದ ಸ್ವಿಫ್ಟ್ ಕಾರು! ಭಾರತಕ್ಕೆ ಮಾತ್ರ ಕಳಪೆ ಗುಣಮಟ್ಟ ಏಕೆ?
- 2 hrs ago ಹೊಸ ಜೀಪ್ ರಾಂಗ್ಲರ್ ಸಂಪೂರ್ಣ ರಿವ್ಯೂ ವಿಡಿಯೋ: ಆಫ್ರೋಡ್ನಲ್ಲಿ ಇದನ್ನು ಮೀರಿಸುವವರಿಲ್ಲ!
Don't Miss!
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Lifestyle ಹನುಮಂತನ ಪವಾಡ: ಈ ದೇವಾಲಯದಲ್ಲಿ ಹನುಮಾನ್ ಮೂರ್ತಿ ವರ್ಷದಿಂದ ವರ್ಷಕ್ಕೆ ಎತ್ತರ ಬೆಳೆಯುತ್ತಿದೆ!
- News ಮೀಸಲಾತಿ ಅಸ್ತ್ರ ಪ್ರಯೋಗಿಸಿದ ಮೋದಿ; ಮುಸ್ಲಿಂ ಸಮುದಾಯಕ್ಕೆ 4% ಮೀಸಲಾತಿ: ಸಿದ್ದರಾಮಯ್ಯ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Technology Qubo InstaView ವಿಡಿಯೋ ಡೋರ್ ಫೋನ್ ಲಾಂಚ್!..ಬೆಲೆ ಎಷ್ಟು, ಫೀಚರ್ಸ್ ಏನಿವೆ?
- Movies ತಮನ್ನಾ ಪಾಲಿಗೆ 'ದುಬಾರಿ' ಆಯಿತು 'ಪ್ರಚಾರ' ; ಮಿಲ್ಕಿ ಬ್ಯೂಟಿಯನ್ನ ವಿಚಾರಣೆಗೆ ಕರೆದ ಸೈಬರ್ ಇಲಾಖೆ..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೇಂದ್ರ ಬಜೆಟ್; ವಾಹನೋದ್ಯಮದ ಮೇಲಿನ ಪರಿಣಾಮ ಏನು?
ನಿರೀಕ್ಷೆಯಂತೆಯೇ 2014ರ ಕೇಂದ್ರ ಬಜೆಟ್ ವಾಹನೋದ್ಯಮದ ಮೇಲೆ ಅಷ್ಟೊಂದು ಕೆಟ್ಟ ಪರಿಣಾಮವನ್ನುಂಟು ಮಾಡಿಲ್ಲ. ಅಬಕಾರಿ ಸುಂಕ ರಿಯಾಯಿತಿ ಡಿಸೆಂಬರ್ ವರೆಗೆ ಮುಂದುವರಿಸಿರುವುದು ವಾಹನೋದ್ಯಮದ ಪುನಶ್ಚೇತನಕ್ಕೆ ಸಹಕಾರಿಯಾಗುವ ಭರವಸೆಯಿದೆ.
ವಿತ್ತ ಸಚಿವ ಅರುಣ್ ಜೇಟ್ಲಿ ಮಂಡಿಸಿರುವ 2014-15ನೇ ಸಾಲಿನ ಕೇಂದ್ರ ಬಜೆಟ್ನಲ್ಲಿ ತೆರಿಗೆದಾರರಿಗೆ ಉಳಿತಾಯ ಆಯ್ಕೆಯನ್ನು ಹೆಚ್ಚಿಸಿರುವುದು ವಾಹನ ಜಗತ್ತಿನ ಮೇಲೆ ಸಕರಾತ್ಮಕ ಪರಿಣಾಮ ಬೀರುವ ಸಾಧ್ಯತೆಯಿದ್ದು, ಕಾರು ಹಾಗೂ ಬೈಕ್ ಮಾರಾಟದಲ್ಲಿ ಹೆಚ್ಚಳ ಕಂಡುಬರುವ ನಿರೀಕ್ಷೆಯಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಸಿಯಾಮ್ ಸಹ ನಿರ್ದೇಶಕ ಸುಗಾಟೊ ಸೆನ್, 'ತೆರಿಗೆದಾರರಿಗೆ ಉಳಿತಾಯ ಮಾಡುವ ಆಯ್ಕೆಯನ್ನು ತೆರೆಯುವ ಮೂಲಕ ವಾಹನಗಳ ಖರೀದಿಗೆ ಉತ್ತೇಜನ ತುಂಬಿದಂತಾಗಿದೆ' ಎಂದಿದ್ದಾರೆ.
ವಾಹನಗಳ ಮೇಲಿನ ಅಬಕಾರಿ ಸುಂಕ ರಿಯಾಯಿತಿಯನ್ನು ಮುಂದಿನ ಆರು ತಿಂಗಳ ವರೆಗೆ ಮುಂದುವರಿಸಿರುವುದರಿಂದ ಜುಲೈ ತಿಂಗಳಲ್ಲಿ ಯಾವುದೇ ದರ ಏರಿಕೆ ಕಂಡುಬದಿಲ್ಲ. ಇದು ಸಹ ವಾಹನಗಳ ಮಾರಾಟ ಏರಿಕೆಯಲ್ಲಿ ಧನಾತ್ಮಕ ಪರಿಣಾಮ ಬೀರಲಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.
ಈ ನಡುವೆ ಬಜೆಟ್ ಮುಂಗಡ ಪತ್ರದಲ್ಲಿ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳಿಗೆ 37,880 ಕೋಟಿ ರು. ಮೀಸಲಿಡಲಾಗಿದೆ. ಇದಲ್ಲದೆ ಪ್ರಧಾನ್ ಮಂತ್ರಿ ಗ್ರಾಮ್ ಸಡಕ್ ಯೋಜನೆಯಂಗವಾಗಿ ಗ್ರಾಮೀಣ ಪ್ರದೇಶದ ರಸ್ತೆ ಅಭಿವೃದ್ಧಿಗೆ ಹೆಚ್ಚುವರಿ 14,389 ಕೋಟಿ ರು.ಗಳನ್ನು ಬಿಡುಗಡೆಗೊಳಿಸಿತ್ತು.
ಏತನ್ಮಧ್ಯೆ ಪ್ರತಿಕ್ರಿಯಿಸಿರುವ ಮರ್ಸಿಡಿಸ್ ಬೆಂಝ್ ಎಂಡಿ ಹಾಗೂ ಸಿಇಒ ಎಬೆರ್ಹಾರ್ಡ್ ಕೆರ್ನ್, ಒಟ್ಟಾರೆ ಬೆಳವಣಿಗೆಗೆ ಬಜೆಟ್ ಪ್ರಸ್ತಾಪಿಸಲಾಗಿದೆ. ಮೂಲಸೌಲಭ್ಯ ಅಭಿವೃದ್ಧಿಗಳಿಗೆ ಅನೇಕ ಗಮನಾರ್ಹ ಯೋಜನೆಗಳನ್ನು ಪ್ರಕಟಿಸಲಾಗಿದೆ. ಈ ಎಲ್ಲ ವಿಚಾರಗಳು ದೀರ್ಘಾವಧಿಯಲ್ಲಿ ವಾಹನೋದ್ಯಮದ ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂದಿದ್ದಾರೆ. ಇವೆಲ್ಲದರ ನಡುವೆ ವಿದ್ಯುತ್ ಚಾಲಿತ ವಾಹನಗಳಿಗೆ ಉತ್ತೇಜನ ತುಂಬಲು 24 ಕೋಟಿ ರು. ಮೀಸಲಿಡಲಾಗಿದೆ.