Just In
- 1 hr ago Hyundai: ಹಳೆಯ ಹ್ಯುಂಡೈ ಕ್ರೆಟಾವನ್ನು ಮರೆತುಬಿಡಿ... ಹೊಸ ಕ್ರೆಟಾ ಈಗ ಮತ್ತಷ್ಟು ಪ್ರೀಮಿಯಂ SUV
- 14 hrs ago ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- 15 hrs ago ಕಂಪನಿಗೆ 140ರ ಸಂಭ್ರಮ: ಕೇವಲ 140 ವಿಶೇಷ ಆವೃತ್ತಿಗಳು ನಿರ್ಮಾಣ: ಬುಕಿಂಗ್ ಆರಂಭ
- 16 hrs ago ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
Don't Miss!
- Finance Bengaluru Traffic Police: ಬೆಂಗಳೂರಿನ ಈ ರಸ್ತೆ ಸಂಚಾರ ಮಾರ್ಗ ಬದಲಾವಣೆ, ವಿವರ
- Technology Samsung: ಭಾರತದಲ್ಲಿ ಹೊಸ ವೇರಿಯಂಟ್ನಲ್ಲಿ ಸ್ಯಾಮ್ಸಂಗ್ ಗ್ಯಾಲಕ್ಸಿ F15 5G! ಬೆಲೆ ಎಷ್ಟು?
- News ನೇಹಾ ಹಿರೇಮಠ್ ಹತ್ಯೆ ಪ್ರಕರಣ; ನಟ ಧ್ರುವ ಸರ್ಜಾ ಏನಂದ್ರು?
- Sports RCB: 'ಗೋ ಗ್ರೀನ್' ಭಾಗವಾಗಿ 3 ಕೆರೆಗಳ ಅಭಿವೃದ್ಧಿಪಡಿಸಿದ ಆರ್ಸಿಬಿ
- Movies Amruthadhaare ; ಪಾರ್ಥ ಮತ್ತು ಅಪೇಕ್ಷಾ ಪ್ರೀತಿ, ಕೆಂಡಾಮಂಡಲಗೊಂಡ ಶಕುಂತಲಾ..!
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಮ್ಮ ಬೆಂಗಳೂರಲ್ಲೂ ಮಹಿಳೆಯರಿಗೆ ರಕ್ಷಣೆಯಿಲ್ಲವೇ?
ಇದು ನಮ್ಮ ಉದ್ಯಾನ ನಗರಿ ಬೆಂಗಳೂರು. ಇಲ್ಲಿ ಎಲ್ಲ ಜಾತಿ, ಮತ, ಧರ್ಮ, ಪಂಥೀಯ ಭೇದ ಭಾವವಿಲ್ಲದೆ ಎಲ್ಲರೂ ಜೀವನವನ್ನು ನಡೆಸುತ್ತಾರೆ. ಕನ್ನಡಿಗರ ಹೃದಯ ವೈಶಾಲತೆಗೆ ಸಾಕ್ಷಿಯೆಂಬಂತೆ ಇಲ್ಲಿಗೆ ಆಗಮಿಸುವ ಎಲ್ಲರನ್ನು ತುಂಬು ಹೃದಯದಿಂದಲೇ ಸ್ವಾಗತಿಸುತ್ತೇವೆ.
ಅಂಥ
ಸಿಲಿಕಾನ್
ಸಿಟಿ
ಬೆಂಗಳೂರಿನಲ್ಲಿ
ಹೀಗಾಗಬಾರದಿತ್ತು.
ಹೌದು,
ದೆಹಲಿಯ
ಬಸ್
ಗ್ಯಾಂಗ್
ರೇಪ್
ಪ್ರಕರಣ
ಮಾಸುವ
ಮುನ್ನವೇ
ಬೆಂಗಳೂರಿನಲ್ಲೂ
ಯುವತಿ
ಮೇಲೆ
ಅತ್ಯಾಚಾರ
ಯತ್ನ
ನಡೆದಿದೆ.
ಇದು
ನಿಜಕ್ಕೂ
ಖಂಡನೀಯ.
ಅಷ್ಟಕ್ಕೂ
ಹದೆಗೆಟ್ಟಿದೆಯೇ
ನಮ್ಮ
ನಗರ.
ಇಲ್ಲಿ
ಮಹಿಳೆಯರಿಗೆ
ರಕ್ಷಣೆಯಿಲ್ಲವೇ?
ನಿಮ್ಮ
ಅನಿಸಿಕೆಗಳನ್ನು
ನಮ್ಮ
ಜತೆ
ಹಂಚಿಕೊಳ್ಳಿರಿ..
ಘಟನೆ ವಿವರ
ಬಿಎಂಟಿಸಿ ಬಸ್ ಚಾಲಕನೊಬ್ಬ ಬಸ್ಸಿನಲ್ಲೇ ಪಂಜಾಬ್ ಮೂಲದ ಯುವತಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಪ್ರಕರಣ ಸಂಬಂಧ ಚಾಮರಾಜಪೇಟೆ ಪೊಲೀಸರು ಸಿದ್ಧಾರ್ಥ್ ಎಂಬ ಚಾಲಕರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ನಗರದ ಖಾಸಗಿ ಕಂಪನಿಯಲ್ಲಿ ದುಡಿಯುತ್ತಿರುವ ಯುವತಿ, ಪುಷ್ಫಕ್ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಬಸ್ ಚಾಲಕ ಹಾಗೂ ನಿರ್ವಾಹಕನಾಗಿರುವ ಸಿದ್ಧಾರ್ಥ್ ತನ್ನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವುದಾಗಿ ಯುವತಿ ಪೊಲೀಸರಿಗೆ ದೂರು ನೀಡಿದ್ದಾರೆ.
ಮೆಜೆಸ್ಟಿಕ್ನಿಂದ ಪದ್ಮನಾಭನಗರಕ್ಕೆ ಹೋಗಲು ಬಸ್ ಹತ್ತಿದ್ದ ಈಕೆಯ ಮೇಲೆ ಚಾಲಕ ಲೈಂಗಿಕ ದೌರ್ಜನ್ಯ ನಡೆಸಲು ಯತ್ನಿಸಿದ್ದಾನೆ. ಈ ವೇಳೆ ಯುವತಿ ಆತ್ಮ ರಕ್ಷಣೆಗಾಗಿ ಚಾಲಕನ ಕೈ ಕಚ್ಚಿದ್ದು, ಇದರಿಂದ ಗಾಬರಿಗೊಂಡ ಚಾಲಕ ಮೊಬೈಲ್, ಬ್ಯಾಗ್, ಹಣ ಕಿತ್ತೊಗೆದು ಆಕೆಯನ್ನು ಬಸ್ಸಿನಿಂದ ಕೆಳಕ್ಕೆ ತಳ್ಳಿ ಪರಾರಿಯಾಗಿದ್ದಾರೆ ಎನ್ನಲಾಗಿದೆ.
ಒಟ್ಟಿನಲ್ಲಿ ನಮ್ಮ ನಗರದ ಬಸ್ಸಿನಲ್ಲಿ ಪಯಣಿಸುವ ಮಹಿಳಾ ಪ್ರಯಾಣಿಕರಿಗೆ ಸೂಕ್ತ ಭದ್ರತೆ ಇಲ್ಲದಂತಾಗಿದೆ. ಈ ನಿಟ್ಟಿನಲ್ಲಿ ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕಾಗಿದೆ.
ರಾತ್ರೆ ವೇಳೆಯಲ್ಲಿ ಬಸ್ಸಿನಲ್ಲಿ ಪ್ರಯಾಣಿಸುವ ಪ್ರಸಂಗವನ್ನು ಮಹಿಳೆಯರು ಸಾಧ್ಯವಾದಷ್ಟು ಕಡೆಗಣಿಸಿದರೆ ಒಳಿತು. ಹಾಗೆಯೇ ಇನ್ನು ಮುಂದೆಯಾದರೂ ಇಂತಹ ಘಟನೆ ಘಟಿಸದಿರಲಿ. ಈ ನಿಟ್ಟಿನಲ್ಲಿ ರಾಜ್ಯ ಸರಕಾರ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ ಎಂಬುದೇ ನಮ್ಮ ಆಶಯ.