Just In
- 9 hrs ago ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- 10 hrs ago ಟೊಯೊಟಾದ ಫಾರ್ಚ್ಯೂನರ್ನಲ್ಲೂ ಸಿಗಲಿದೆ ಹೈಬ್ರಿಡ್: ಇದರ ಮೈಲೇಜ್ ಕೇಳಿ ಸುಸ್ತಾದ ಗ್ರಾಹಕರು!
- 10 hrs ago ನಿಜವಾದ ಮಾನವತಾವಾದಿ: ನಟ ರಾಘವ ಲಾರೆನ್ಸ್ರಿಂದ ವಿಶೇಷ ಚೇತನ ಸಾಧಕರಿಗೆ 13 ಟಿವಿಎಸ್ ಸ್ಕೂಟರ್ ಗಿಫ್ಟ್
- 12 hrs ago ಜನ ಕ್ಯೂ ನಿಂತು ಖರೀದಿಸುತ್ತಿದ್ದ ಮಾರುತಿ ಸ್ವಿಫ್ಟ್ ಕಾರು ಮಾರಾಟದಲ್ಲಿ ಕುಸಿತ: ಕಾರಣವೇನು?
Don't Miss!
- Movies 'ಮಾರ್ಟಿನ್' ಚಿತ್ರದ ನಿರ್ಮಾಪಕ- ನಿರ್ದೇಶಕರ ಮಧ್ಯೆ ಕಿರಿಕ್: ಕೊನೆಗೂ ಸಿಕ್ತು ಸ್ಪಷ್ಟನೆ
- News 11 ಕೋಟಿ ಮಹಿಳೆಯರಿಗೆ ಅಡುಗೆ ಅನಿಲ: ಡಾ. ಕೆ. ಸುಧಾಕರ್
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಡಿಸೆಂಬರ್ ಅಂತ್ಯದ ವರೆಗೆ ಅಬಕಾರಿ ಸುಂಕ ಏರಿಕೆಯಿಲ್ಲ
ಗಮನಾರ್ಹ ಬೆಳವಣಿಗೆಯೊಂದರಲ್ಲಿ ವಾಹನಗಳ ಮೇಲಿನ ಅಬಕಾರಿ ಸುಂಕವನ್ನು 2014 ಡಿಸೆಂಬರ್ 31ರ ವರೆಗೆ ಏರಿಕೆ ಮಾಡದಿರಲು ನೂತನ ಕೇಂದ್ರ ಸರಕಾರ ನಿರ್ಧರಿಸಿದೆ. ಇದರಿಂದಾಗಿ ಭಾರತೀಯ ವಾಹನ ತಯಾರಕ ಸಂಸ್ಥೆಗಳ ಜೊತೆಗೆ ನೂತನ ಖರೀದಿಗಾರರು ನಿಟ್ಟುಸಿರು ಬಿಡುವಂತಾಗಿದೆ.
ಕಳೆದ ಕೇಂದ್ರ ಸರಕಾರ ಮಂಡಿಸಿದ್ದ ತಾತ್ಕಾಲಿಕ ಬಜೆಟ್ನಲ್ಲಿ ವಾಹನಗಳ ಮೇಲಿನ ಅಬಕಾರಿ ಸುಂಕವನ್ನು ಇಳಿಕೆಗೊಳಿಸಲಾಗಿತ್ತು. ಇದು ಜೂನ್ 30ರ ವರೆಗೆ ಜಾರಿಯಲ್ಲಿರಲಿದೆ. ಇದರಿಂದಾಗಿ ನೂತನ ಸರಕಾರ ದರ ಏರಿಕೆ ನೀತಿ ಅನುಸರಿಸಿತೇ ಎಂಬುದು ತೀವ್ರ ಕುತೂಹಲ ಕೆರಳಿಸಿತ್ತು.
ಆದರೆ ಈ ಸಂಬಂಧ ಹೇಳಿಕೆ ಹೊರಡಿಸಿರುವ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರಕಾರದ ವಿತ್ತ ಸಚಿವ ಅರುಣ್ ಜೇಟ್ಲಿ ವಾಹನಗಳ ಮೇಲಿನ ಅಬಕಾರಿ ಸುಂಕವು 2014 ಡಿಸೆಂಬರ್ 31ರ ವರೆಗೆ ಶೇಕಡಾ 3ರಿಂದ 6ರಂತೆಯೇ ಮುಂದುವರಿಯಲಿದೆ ಎಂದಿದ್ದಾರೆ.
ಕೇಂದ್ರ ಸರಕಾರದಿಂದ ವ್ಯಕ್ತವಾಗಿರುವ ಪೂರಕ ನಿಲುವನ್ನು ಸ್ವಾಗತಿಸಿರುವ ಭಾರತೀಯ ವಾಹನ ತಯಾರಕ ಸಂಸ್ಥೆಗಳ ಒಕ್ಕೂಟದ (ಸಿಯಾಮ್) ಅಧ್ಯಕ್ಷ ವಿಕ್ರಮ್ ಕಿರ್ಲೊಸ್ಕರ್, "ಅಬಕಾರಿ ಸುಂಕ ಇಳಿಕೆಯ ಕಾಲಾವಧಿಯನ್ನು ಮುಂದುವರಿಸಿರುವುದು ಗ್ರಾಹಕರ ಮನೋಭಾವದ ಮೇಲೆ ಧನಾತ್ಮಕ ಪರಿಣಾಮ ಬೀರಲಿದ್ದು, ಈ ಮೂಲಕ ಕಳೆದ ಎರಡು ವರ್ಷಗಳಿಂದ ಕುಸಿದು ಹೋಗಿರುವ ವಾಹನೋದ್ಯಮ ಕೈಗಾರಿಕಾ ಕ್ಷೇತ್ರದಲ್ಲಿ ನಿರಂತರ ಚೇತರಿಕೆ ಕಾಣಬಹುದಾಗಿದೆ" ಎಂಬ ಆಶಾಭಾವನೆ ವ್ಯಕ್ತಪಡಿಸಿದ್ದಾರೆ.
ಮಾತು ಮುಂದುವರಿಸಿದ ಅವರು, "ದೀರ್ಘಾವಧಿಯಲ್ಲಿ ವಾಹನ ಕ್ಷೇತ್ರದಲ್ಲಿ ಬೆಳವಣಿಗೆ ಮರು ತರುವಲ್ಲಿ ಇದರಿಂದ ಸಾಧ್ಯವಾಗಲಿದ್ದು, ಉದ್ಯಮದಲ್ಲಿ ಹೂಡಿಕೆ ಹೆಚ್ಚುವ ಮೂಲಕ ಹೆಚ್ಚಿನ ಉದ್ಯೋಗ ಉತ್ತೇಜಿಸಬಹುದಾಗಿದೆ. ಇಂತಹದೊಂದು ಕ್ರಮ ಕೈಗೊಂಡಿರುವ ಕೇಂದ್ರ ಸರಕಾರಕ್ಕೆ ಧನ್ಯವಾದ ಸಲ್ಲಿಸುತ್ತಿದ್ದೇವೆ" ಎಂದಿದ್ದಾರೆ.
ಅಬಕಾರಿ ಸುಂಕ ಕಡಿತಗೊಳಿಸಿರುವ ನಿಜವಾದ ಶ್ರೇಯ ಕಳೆದ ಯುಪಿಎ ಸರಕಾರದ ವಿತ್ತ ಸಚಿವರಾಗಿದ್ದ ಪಿ ಚಿದಂಬರಂ ಅವರಿಗೆ ಸಲ್ಲುತ್ತದೆ. ಅಂದಿನ ತಾತ್ಕಾಲಿಕ ಬಜೆಟ್ನಲ್ಲಿ ಎಸ್ಯುವಿ ಶೇಕಡಾ 24, ಮಧ್ಯ ಗಾತ್ರದ ವಾಹನಗಳಿಗೆ ಶೇಕಡಾ 20ರಿಂದ 24 ಹಾಗೆಯೇ ದ್ವಿಚಕ್ರ ವಾಹನಗಳಿಗೆ ಶೇಕಡಾ 8ರಷ್ಟು ಅಬಕಾರಿ ಸುಂಕ ವಿಧಿಸಲಾಗಿತ್ತು.