Just In
- 12 hrs ago ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- 13 hrs ago Suzuki Access Electric: ಸುಜುಕಿ ಆಕ್ಸೆಸ್ ಎಲೆಕ್ಟ್ರಿಕ್ ಸ್ಕೂಟರ್ ಈ ವರ್ಷ ಬಿಡುಗಡೆ ಸಾಧ್ಯತೆ!
- 14 hrs ago Royal Enfield Himalayan ಸುಲಭವಾಗಿ ಖರೀದಿಸುವುದು ಹೇಗೆ?: ಇಲ್ಲಿದೆ ಡೌನ್ಪೇಮೆಂಟ್, EMI ಮಾಹಿತಿಗಳು!
- 14 hrs ago ಮಿಂಚಿನ ವೇಗಕ್ಕೆ ಸರಿಸಾಟಿಯಾಗಿ ಬೆಂಗಳೂರಿನ ಹೊಸ ಅಲ್ಟ್ರಾವೈಲೆಟ್ ಬೈಕ್ ಬಿಡುಗಡೆ: 323KM ರೇಂಜ್
Don't Miss!
- News Namma Metro: ಬೆಂಗಳೂರಿನ ಮತದಾರರಿಗೆ ಸಿಹಿ ಸುದ್ದಿ ನೀಡಿದ ನಮ್ಮ ಮೆಟ್ರೋ
- Sports 'ಟಿ20 ವಿಶ್ವಕಪ್ಗೆ ಈತನನ್ನು ಆಯ್ಕೆ ಮಾಡಿ'; ಅಜಿತ್ ಅಗರ್ಕರ್ಗೆ ಬಂತು ದೊಡ್ಡ ಮನವಿ!
- Finance ಡಾ. ರಾಜ್ಕುಮಾರ್ ಜನ್ಮದಿನದಂದು ಹೊಸ ಉದ್ಯಮ ಆರಂಭಿಸಿದ ಅಶ್ವಿನಿ ಪುನೀತ್ ರಾಜ್ಕುಮಾರ್
- Lifestyle ಮಲೆನಾಡ ಶೈಲಿನ ಮೃದುವಾದ ಕಡುಬು ಮಾಡೋದು ಹೇಗೆ.? ಸಿಂಪಲ್ ತಿಂಡಿ ರೆಸಿಪಿ
- Movies ನೀಲಿ ಪ್ರಪಂಚದ ಕರಾಳ ಸತ್ಯವನ್ನ ಹೇಳಿದ ಲಾನಾ ರೋಡ್ಸ್
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮುಂಬರುವ 5 ವರ್ಷ ವಾಹನೋದ್ಯಮದ ಸುವರ್ಣ ಕಾಲ: ಸಿಯಾಮ್
ಮುಂದಿನ ಐದು ವರ್ಷಗಳ ಕಾಲ ವಾಹನೋದ್ಯಮದ ಪಾಲಿಗೆ ಸುವರ್ಣ ಕಾಲಘಟ್ಟವಾಗಿರಲಿದೆ ಎಂದು ಭಾರತೀಯ ವಾಹನ ತಯಾರಕರ ಒಕ್ಕೂಟ (ಸಿಯಾಮ್) ನಿರೀಕ್ಷೆ ವ್ಯಕ್ತಪಡಿಸಿದೆ. ಇತ್ತೀಚೆಗಷ್ಟೇ ನವದೆಹಲಿಯಲ್ಲಿ ಸೇರಿದ ಸಿಯಾಮ್ ವಾರ್ಷಿಕ ಸಮಾವೇಶದಲ್ಲಿ ಸಮಕಾಲೀನ ಪರಿಸ್ಥಿತಿಯಲ್ಲಿ ವಾಹನೋದ್ಯಮ ಎದುರಿಸುತ್ತಿರುವ ಸಮಸ್ಯೆ ಹಾಗೂ ಭವಿಷ್ಯದ ಯೋಜನೆಯ ಚರ್ಚೆ ನಡೆಸಲಾಯಿತು. ಈ ನಡುವೆ ಎಲ್ಲ ವಾಹನ ತಯಾರಕ ಸಂಸ್ಥೆಗಳು ವಾಹನ ಮಾರುಕಟ್ಟೆಯಲ್ಲಿ ಕ್ಷಿಪ್ರ ಗತಿಯಲ್ಲಿ ಬೆಳವಣಿಗೆ ಸಾಧಿಸುವ ಅಗತ್ಯವಿದೆ ಎಂಬ ಅಭಿಮತ ವ್ಯಕ್ತಪಡಿಸಿತ್ತು.
ಇದು ಸಿಯಾಮ್ನ 54ನೇ ವಾರ್ಷಿಕ ಸಮಾವೇಶವಾಗಿದ್ದು, ಆಟೋ ಜಗತ್ತಿನ ಅನೇಕ ಪ್ರಭಾವಿ ವ್ಯಕ್ತಿಗಳು ಭಾಗವಹಿಸಿದ್ದರು. ಅಲ್ಲದೆ ಭಾರತೀಯ ಆರ್ಥಿಕತೆ ವೃದ್ಧಿಯಲ್ಲಿ ವಾಹನೋದ್ಯಮದ ಪಾತ್ರ ದೊಡ್ಡದ್ದು ಎಂಬುದನ್ನು ಮನಗಂಡರು.
ಈ ಸಂದರ್ಭದಲ್ಲಿ ಪ್ರತಿಕ್ರಿಯಿಸಿದ ಸಿಯಾಮ್ ಅಧ್ಯಕ್ಷ ಹಾಗೂ ಟೊಯೊಟಾ ಕಿರ್ಲೊಸ್ಕರ್ ಮೋಟಾರು ಸಂಸ್ಥೆಯ ಉಪಾಧ್ಯಕ್ಷರಾಗಿರುವ ವಿಕ್ರಂ ಕಿರ್ಲೊಸ್ಕರ್, ಅನೇಕ ನಿರ್ಣಾಯಕ ಕಾಲಘಟ್ಟದಲ್ಲಿ ಸರಕಾರವು ಬೆಂಬಲ ಸೂಚಿಸಿರುವುದು ಸ್ವಾಗತಾರ್ಹವಾಗಿದೆ ಎಂದಿದ್ದಾರೆ.
ಅಲ್ಲದೆ ಐದು ಅಂಶಗಳನ್ನು ವಿಕ್ರಂ ಅವರು ಬೊಟ್ಟು ಮಾಡಿ ತೋರಿಸಿದರು. ಆರ್ಥಿಕ ನೀತಿ, ಎಮಿಷನ್, ಸೇಫ್ಟಿ ರೋಡ್ ಮ್ಯಾಪ್, ಸ್ಪರ್ಧಾತ್ಮಕ ನಿಯಮ ಜೊತೆ ವಾಹನ ತಂತ್ರಜ್ಞಾನ, ಇಂಧನ ಮತ್ತು ವಾಣಿಜ್ಯ ನೀತಿಗಳ ಬಗ್ಗೆ ಉಲ್ಲೇಖ ಮಾಡಿದರು.
ಏತನ್ಮಧ್ಯೆ ದೇಶವನ್ನು ವಾಹನ ಕೇಂದ್ರವಾಗಿ ಮಾರ್ಪಡಿಸುವ ನೂತನ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೀತಿಯನ್ನು ಶ್ಲಾಘಿಸಿದರು.