Just In
- 42 min ago ಸಾಮಾನ್ಯರಂತೆ ಹಳ್ಳಿಯಲ್ಲಿರುವ ದೇಶದ 55ನೇ ಶ್ರೀಮಂತ ಶ್ರೀಧರ್ ವೆಂಬು: ಕಚೇರಿಗೆ ಹೋಗಲು ಎಲೆಕ್ಟ್ರಿಕ್ ಆಟೋ ಖರೀದಿ!
- 3 hrs ago ಹ್ಯುಂಡೈ ವೆರ್ನಾ ಕಾರಿಗೆ ಭಾರೀ ಡಿಸ್ಕೌಂಟ್: ರಾಶಿ ಫೀಚರ್ನ ಕಾರಿಗೆ ಇಷ್ಟು ಆಫರ್ ಯಾಕೆಂದ ನೆಟ್ಟಿಗರು!
- 16 hrs ago ಮಾರುಕಟ್ಟೆಯಲ್ಲಿ ಸುನಾಮಿ ಎಬ್ಬಿಸಲು ಹೊಸ ಟೊಯೊಟಾ ಫಾರ್ಚುನರ್ ಲೀಡರ್ ಎಡಿಷನ್ ಅನಾವರಣ
- 18 hrs ago Air Taxi: ಬೆಂಗಳೂರು ಸೇರಿ ಈ ನಗರಗಳಲ್ಲಿ ಏರ್ ಟ್ಯಾಕ್ಸಿ.. ಆಕಾಶದಲ್ಲೇ ಆಫೀಸ್ಗೆ ಹೋಗಬಹುದು, ಕಡಿಮೆ ಖರ್ಚು!
Don't Miss!
- Lifestyle ಮೊಲದ ಜೊತೆ ಓಡಿ ಮತ್ತೊಮ್ಮೆ ರೇಸ್ ಗೆದ್ದ ಆಮೆ..! ಈ ಕಥೆ ನಿಜವಾಗಿದ್ದು ಹೇಗೆ ನೋಡಿ.!
- Finance Bangalore Karaga: ಇಂದು ಈ ರಸ್ತೆಗಳಲ್ಲಿ ಸಂಚಾರ ಬಂದ್, ಬದಲಿ ಮಾರ್ಗ ವಿವರ
- News Mysuru: ಏಪ್ರಿಲ್ 26ಕ್ಕೆ ಮೈಸೂರಿನ ಪ್ರವಾಸಿ ತಾಣಗಳು ಬಂದ್, ಕಾರಣ ಇಲ್ಲಿದೆ
- Movies "ರಾಘವೇಂದ್ರ ಸ್ವಾಮಿಗಳು ನನ್ನ ತಾತ"; ರಾಯರ ನೆನೆದು ಭಾವುಕರಾಗಿದ್ದೇಕೆ ಬೇಬಿ ಇಂದಿರಾ?
- Technology Google Chrome: ಗೂಗಲ್ ಕ್ರೋಮ್ ಬಳಕೆದಾರರು ಹ್ಯಾಕಿಂಗ್ ಅಪಾಯದಲ್ಲಿ! ಸುರಕ್ಷಿತವಾಗಿರೋದು ಹೇಗೆ?
- Sports IPL 2024: ವಿರಾಟ್ ಕೊಹ್ಲಿ ವಿವಾದಾತ್ಮಕ ಔಟ್; ಅಂಪೈರಿಂಗ್ ವಿರುದ್ಧ ಕೆಂಡಕಾರಿದ ಮೊಹಮ್ಮದ್ ಕೈಫ್!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಂಚಾರಿ ನಿಯಮ ಉಲ್ಲಂಘನೆ- ತಮಿಳುನಾಡಿನಲ್ಲಿ 9,489 ಡ್ರೈವಿಂಗ್ ಲೈಸೆನ್ಸ್ಗಳು ರದ್ದು..!!
ದುಬಾರಿ ದಂಡ, ಕಠಿಣ ನಿಯಮಗಳನ್ನು ಒಳಗೊಂಡ ಮೋಟಾರು ವಾಹನ ತಿದ್ದುಪಡಿ ವಿಧೇಯಕ ಜಾರಿಗೊಂಡ ಬೆನ್ನೆಲ್ಲೇ ರಸ್ತೆ ನಿಯಮಗಳನ್ನು ಉಲ್ಲಂಘನೆ ಮಾಡಿದ ಹಿನ್ನೆಲೆ ತಮಿಳುನಾಡಿನ ವಿವಿಧಡೆ 9,489 ಡ್ರೈವಿಂಗ್ ಲೈಸೆನ್ಸ್ಗಳನ್ನು ರದ್ದುಗೊಳಿಸಲಾಗಿದೆ.
ದುಬಾರಿ ದಂಡ, ಕಠಿಣ ನಿಯಮಗಳನ್ನು ಒಳಗೊಂಡ ಮೋಟಾರು ವಾಹನ ತಿದ್ದುಪಡಿ ವಿಧೇಯಕ ಜಾರಿಗೊಂಡ ಬೆನ್ನೆಲ್ಲೇ ರಸ್ತೆ ನಿಯಮಗಳನ್ನು ಉಲ್ಲಂಘನೆ ಮಾಡಿದ ಹಿನ್ನೆಲೆ ತಮಿಳುನಾಡಿನ ವಿವಿಧಡೆ 9,489 ಡ್ರೈವಿಂಗ್ ಲೈಸೆನ್ಸ್ಗಳನ್ನು ರದ್ದುಗೊಳಿಸಲಾಗಿದೆ.
ಸಂಚಾರಿ ನಿಯಮಗಳನ್ನು ಉಲ್ಲಂಘನೆ ಮಾಡುವರರ ವಿರುದ್ಧ ಕಠಿಣ ಕ್ರಮ ಕೈಗೊಂಡಿರುವ ತಮಿಳುನಾಡು ಸಂಚಾರಿ ಪೊಲೀಸರು ನಗರ ಪ್ರದೇಶಗಳಲ್ಲಿನ ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು 9,489 ಚಾಲನಾ ಪರವಾನಿಗೆಗಳನ್ನು ತಾತ್ಕಲಿಕವಾಗಿ ರದ್ದು ಮಾಡಿದೆ.
ಸುಪ್ರೀಂಕೋರ್ಟ್ ಸೂಚಿಸಿರುವ ಹೊಸ ಕಾಯ್ದೆ ಅನ್ವಯ ಸಂಚಾರಿ ನಿಯಮ ಉಲ್ಲಂಘನೆ ಮಾಡಿದವರ ಡ್ರೈವಿಂಗ್ ಲೈಸೆನ್ಸ್ಗಳು ರದ್ದು ಮಾಡಲಾಗಿದ್ದು, ಅಪರಾಧಗಳ ಸಂಖ್ಯೆಗಳನ್ನು ತಡೆಯಲು ಈ ಕ್ರಮ ಕೈಗೊಳ್ಳಲಾಗಿದೆ.
ಇದರ ಜೊತೆ ಇತ್ತೀಚೆಗೆ ಅಪಘಾತ ಪ್ರಕರಣಗಳು ಕೂಡಾ ಹೆಚ್ಚುತ್ತಿದ್ದು, ಇವುಗಳನ್ನು ಪರಿಣಾಮಕಾರಿ ತಗ್ಗಿಸುವ ಉದ್ದೇಶದಿಂದ ಅಪಘಾತ ಕೃತ್ಯಗಳಲ್ಲಿ ತೊಡಗಿದವರ ವಿರುದ್ಧವೂ ಈ ಕ್ರಮ ಜರಗಿಸಲಾಗಿದೆ.
ಕೆಲವು ವರದಿಗಳ ಪ್ರಕಾರ 2016ರಲ್ಲಿ ತಮಿಳುನಾಡು ರಾಜ್ಯದಲ್ಲಿ 71,437 ಅಪಘಾತ ಪ್ರಕರಣಗಳು ಸಂಭವಿಸಿದ್ದು, ಇವುಗಳಲ್ಲಿ 17,218 ಜನ ಪ್ರಾಣ ಕಳೆದುಕೊಂಡಿದ್ದಾರೆ.
Recommended Video
ಇದೇ ಕಾರಣಕ್ಕೆ ತಮಿಳುನಾಡು ಸಂಚಾರಿ ಪೊಲೀಸ್ ಇಲಾಖೆಗೆ ಖಡಕ್ ಸೂಚನೆ ನೀಡಿದ್ದ ಸುಪ್ರೀಂಕೋರ್ಟ್, ಅಪಘಾತ ಪ್ರಕರಣಗಳನ್ನು ತಗ್ಗಿಸುವ ನಿಟ್ಟಿನಲ್ಲಿ ತೆಗೆದುಕೊಂಡಿರುವ ಕ್ರಮಗಳ ತರಾಟೆಗೆ ತೆಗೆದುಕೊಂಡಿತ್ತು.
ಈ ಹಿನ್ನೆಲೆ ವಾಹನ ಸವಾರರಿಗೆ ಶಾಕ್ ನೀಡಿರುವ ಪೊಲೀಸರು ಅಪರಾಧ ಪ್ರಕರಣದಲ್ಲಿ ಸಿಲುಕಿದ ಎಲ್ಲಾ ವಾಹನಗಳ ಮಾಲೀಕರ ಚಾಲನಾ ಪರವಾನಿಗೆ ತಾತ್ಕಲಿಕವಾಗಿ ರದ್ದು ಮಾಡಿ ಆದೇಶ ಹೊರಡಿಸಿದ್ದು, ಪ್ರಕರಣಗಳ ವಿಚಾರಣೆ ನಂತರವಷ್ಟೇ ಮುಂದಿನ ಕ್ರಮ ಕೈಗೊಳ್ಳುವ ಬಗ್ಗೆ ಮಾಹಿತಿ ನೀಡಿದೆ.