ಲಾರಿ ಮತ್ತು ಬಸ್ ನಡುವೆ ಡಿಕ್ಕಿ- ಭೀಕರ ಅಪಘಾತದಲ್ಲಿ 22 ಮಂದಿ ಸಜೀವ ದಹನ
ಬಸ್ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿದ ಪರಿಣಾಮ 22 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉತ್ತರಪ್ರದೇಶದ ಬರೇಲಿ ಬೈಪಾಸ್ನಲ್ಲಿ ನಡೆದಿದೆ.
ಉತ್ತರ ಪ್ರದೇಶದ ಬರೇಲಿ ಬಳಿ ಲಾರಿ ಮತ್ತು ಬಸ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 22 ಜನರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, 15 ಮಂದಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ.

ಮಧ್ಯರಾತ್ರಿ 1 ಗಂಟೆಗೆ ಈ ಅಪಘಾತ ಸಂಭವಿಸಿದ್ದು, ಬಸ್ಗೆ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ 22 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನು 15 ಮಂದಿಗೆ ಗಂಭೀರ ಗಾಯಗಳಾಗಿವೆ.
ಚಿತ್ರ ಕೃಪೆ- ಹಿಂದೂಸ್ತಾನ್ ಟೈಮ್ಸ್

ಘಟನೆಗೆ ಬಸ್ ಚಾಲಕನ ಅತಿಯಾದ ವೇಗವೇ ಕಾರಣ ಎನ್ನಲಾಗಿದ್ದು, ವೇಗವಾಗಿ ಡಿಕ್ಕಿ ಹೊಡೆದ ಪರಿಣಾಮ ಬಸ್ ಹೊತ್ತಿ ಉರಿದಿದೆ.
ಚಿತ್ರ ಕೃಪೆ- ಎಬಿಪಿ ನ್ಯೂಸ್

ಬರೇಲಿ ಮತು ಶಾಹ್ಜಹಾನ್ಪುರ ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ನಿರ್ಮಾಣ ಪ್ರಗತಿಯಲ್ಲಿದ್ದು, ಲಾರಿ ಓವರ್ಟೆಕ್ ಮಾಡುವ ವೇಳೆ ಈ ದುರಂತ ನಡೆದಿದೆ.

ಅಪಘಾತದ ನಂತರ ಬಸ್ಸಿನ ಡೀಸೆಲ್ ಟ್ಯಾಂಕ್ ಸ್ಫೋಟಗೊಂಡಿದ್ದು, ಒಮ್ಮೆಲೆ ಬೆಂಕಿ ಹೊತ್ತಿಕೊಂಡಿದೆ. ಈ ವೇಳೆ ಬಸ್ ಪ್ರಯಾಣಿಕರು ನಿದ್ರೆಯಲ್ಲಿದ್ದಿದ್ದರಿಂದ ಬಸ್ನಿಂದ ಕೆಳಗಿಯಲು ಸಾಧ್ಯವಾಗಿಲ್ಲ.
ಚಿತ್ರ ಕೃಪೆ- ಅಮರ್ ಉಜಾಲಾ

ಇನ್ನು ಕೆಲ ಪ್ರಯಾಣಿಕರು ಕಿಟಕಿಯಿಂದ ಹೊರ ಬರಲು ಪ್ರಯತ್ನಿಸಿದ್ದು, ನಿದ್ರೆಗೆ ಜಾರಿದ್ದ ಕೆಲವರು ಬೆಂಕಿಗೆ ಆಹುತಿಯಾಗಿದ್ದಾರೆ.
ಚಿತ್ರ ಕೃಪೆ- ಜಾಗರಣ್

ಕೆಲ ವರದಿಯ ಪ್ರಕಾರ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಬರಲು ಸುಮಾರು ಒಂದೂವರೆ ಗಂಟೆ ಬೇಕಾಯ್ತು ಎನ್ನಲಾಗಿದ್ದು, ಘಟನೆ ನಂತರ ಬಸ್ ಮತ್ತು ಟ್ರಕ್ ಎರಡಕ್ಕೂ ಬೆಂಕಿ ಹೊತ್ತಿಕೊಂಡಿದೆ.
ಚಿತ್ರ ಕೃಪೆ- ಹಿಂದೂಸ್ತಾನ್ ಟೈಮ್ಸ್

ಉತ್ತರಪ್ರದೇಶ ರಾಜ್ಯ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ಇದಾಗಿದ್ದು, ನವದೆಹಲಿಯಿಂದ ಉತ್ತರಪ್ರದೇಶದ ಗೊಂಡಾ ಜಿಲ್ಲೆಯ ಕಡೆಗೆ ಹೋಗುತ್ತಿತ್ತು ಎನ್ನಲಾಗಿದೆ.

ಇನ್ನು ಹೊತ್ತಿ ಉರಿದ ಬಸ್ನಲ್ಲಿ ಒಟ್ಟು ಎಷ್ಟು ಜನ ಇದ್ದರು ಎಂಬುವುದು ಇದುವರೆಗೂ ಯಾವುದೇ ಸ್ಪಷ್ಟ ಮಾಹಿತಿ ಸಿಕ್ಕಿಲ್ಲ.
ಚಿತ್ರ ಕೃಪೆ- ದೈನಿಕ್ ಭಾಸ್ಕರ್

ಇನ್ನು ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಿಸಲಾಗುತ್ತಿದ್ದು, ಘಟನೆ ಕುರಿತಂತೆ ಉತ್ತರ ಪ್ರದೇಶ ಪೊಲೀಸರು ತೀವ್ರ ತನಿಖೆ ನಡೆದಿದ್ದಾರೆ.
ಚಿತ್ರ ಕೃಪೆ- ಎಬಿಪಿ ನ್ಯೂಸ್


Click it and Unblock the Notifications








