Just In
- 7 hrs ago ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- 9 hrs ago Kia Carens: ಗ್ಲೋಬಲ್ ಎನ್ಸಿಎಪಿ ಸುರಕ್ಷತಾ ಪರೀಕ್ಷೆ.. 3-ಸ್ಟಾರ್ ಪಡೆದ ಕಿಯಾ ಕ್ಯಾರೆನ್ಸ್
- 10 hrs ago ಈ ಬೈಕ್ಗಳನ್ನು ಗ್ರಾಹಕರು ಮುಗಿಬಿದ್ದು ಖರೀದಿಸುತ್ತಿದ್ದಾಗಲೇ ಬೆಲೆ ಏರಿಕೆ ಮಾಡಿ ಶಾಕ್ ಕೊಟ್ಟ ಟ್ರಯಂಫ್
- 11 hrs ago ಅಪ್ಪ-ಮಗಳ ಭಾಂದವ್ಯ.. ಪ್ರೀತಿಯ ಪುತ್ರಿಗೆ ತಂದೆಯಿಂದ 2 ಕೋಟಿಯ ಪೋರ್ಷೆ ಕಾರು ಗಿಫ್ಟ್
Don't Miss!
- Movies 'KGF-2' ಚಿತ್ರದಿಂದ ಸಿಕ್ಕಿದ್ದು 200 ಕೋಟಿ ರೂ.; 'ಟಾಕ್ಸಿಕ್', 'ರಾಮಾಯಣ'ಕ್ಕೆ ಯಶ್ 50-50 ಡೀಲ್!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬೆಂಗಳೂರಿನಲ್ಲಿ ಇಂದಿರಾ ಕ್ಯಾಂಟೀನ್ ಬಳಿಕ 'ಇಂದಿರಾ ಸಾರಿಗೆ' ಭಾಗ್ಯ..!!
ಹಸಿವು ಮುಕ್ತ ಕರ್ನಾಟಕ ಯೋಜನೆ ಅಡಿ ಬೃಹತ್ ಬೆಂಗಳೂರಿನಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಿರುವ ರಾಜ್ಯ ಸರ್ಕಾರವು ಇದೀಗ ಮತ್ತೊಂದು ಮಹತ್ವದ ಯೋಜನೆಗೆ ಮುಂದಾಗಿದ್ದು, ಇಂದಿರಾ ಸಾರಿಗೆ ಯೋಜನೆ ಆರಂಭಿಸಲು ಸಿದ್ಧತೆ ನಡೆಸಿದೆ.
ಹಸಿವು ಮುಕ್ತ ಕರ್ನಾಟಕ ಯೋಜನೆ ಅಡಿ ಬೃಹತ್ ಬೆಂಗಳೂರಿನಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಿರುವ ರಾಜ್ಯ ಸರ್ಕಾರವು ಇದೀಗ ಮತ್ತೊಂದು ಮಹತ್ವದ ಯೋಜನೆಗೆ ಮುಂದಾಗಿದ್ದು, ಇಂದಿರಾ ಸಾರಿಗೆ ಯೋಜನೆ ಆರಂಭಿಸಲು ಸಿದ್ಧತೆ ನಡೆಸಿದೆ.
ಸುದ್ಧಿ ಮೂಲಗಳ ಪ್ರಕಾರ ಇಂದಿರಾ ಸಾರಿಗೆ ಯೋಜನೆಯನ್ನು ಜಾರಿಗೊಳಿಸುವ ಮೂಲಕ ಮಹಿಳೆಯರಿಗೆ ಸೌಲಭ್ಯ ಕಲ್ಪಿಸುವ ಉದ್ದೇಶವಿದ್ದು, ವರ್ಷಾಂತ್ಯಕ್ಕೆ ಈ ಯೋಜನೆಯನ್ನು ಜಾರಿ ಮಾಡುವ ಬಗ್ಗೆ ಸಾರಿಗೆ ಸಚಿವ ಹೆಚ್ ಎಂ ರೇವಣ್ಣ ಸುಳಿವು ನೀಡಿದ್ದಾರೆ.
ಹೊಸ ಯೋಜನೆಯಲ್ಲಿ ಏನಿದೆ?
ಇಂದಿರಾ ಸಾರಿಗೆ ಯೋಜನೆ ಅನ್ವಯ ಈ ಇಂದಿರಾ ಸಾರಿಗೆ ಯೋಜನೆಯ ಬಸ್ ಗಳಲ್ಲಿ ಪ್ರಯಾಣಿಸುವ ಮಹಿಳೆಯರಿಗೆ ಶೇ.50 ಟಿಕೆಟ್ ದರ ರಿಯಾಯಿತಿ ನೀಡಲು ಮುಂದಾಗಿದೆ.
ಎಲ್ಲೆಲ್ಲಿ ಹೊಸ ಯೋಜನೆ?
ಕೆಲವು ವರದಿಗಳ ಪ್ರಕಾರ ಮೊದಲ ಹಂತವಾಗಿ ಬೆಂಗಳೂರಿನಲ್ಲಿ ಆರಂಭಿಸಲು ಗುರಿ ಹೊಂದಿದ್ದು, ತದ ನಂತರ ಯೋಜನೆಗೆ ಜನರ ಪ್ರತಿಕ್ರಿಯೆ ನೋಡಿಕೊಂಡು ಪ್ರತಿ ಜಿಲ್ಲಾ ಕೇಂದ್ರಗಳಲ್ಲೂ ಯೋಜನೆ ಆರಂಭಿಸಲಾಗುತ್ತಿದೆ.
ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆಸಿರುವ ಸಚಿವ ಹೆಚ್ ಎಂ ರೇವಣ್ಣ ಅವರು ಪ್ರಸ್ತುತ ಯೋಜನೆ ಕುರಿತು ಅಧಿಕಾರಗಳೊಂದಿಗೆ ಸಾಧಕ-ಭಾದಕಗಳನ್ನು ಚರ್ಚಿಸಲಾಗುತ್ತಿದ್ದು, ಯೋಜನೆಯ ವ್ಯಾಪ್ತಿ ಮತ್ತು ಇತರೆ ಅಂಶಗಳನ್ನು ಚರ್ಚಿಸಲಾಗುತ್ತಿದೆ ಎಂದಿದ್ದಾರೆ.
ಹೀಗಾಗಿ ಮುಂದಿನ 15 ದಿನಗಳದೊಳಗಾಗಿ ಅಂತಿಮ ಹಂತದ ನಿರ್ಧಾರ ಪ್ರಕಟಿಸುವ ಸಾಧ್ಯತೆಗಳಿದ್ದು, ಹೊಸ ಯೋಜನೆಯಿಂದ ನಗರಭಾಗದಲ್ಲಿನ ಮಹಿಳಾ ಕಾರ್ಮಿಕರಿಗೆ ಸಹಾಯಕವಾಗುವುದರಲ್ಲಿ ಯಾವುದೇ ಅನುಮಾವಿಲ್ಲ ಎನ್ನಬಹುದು.
ತಪ್ಪದೇ ಓದಿ- ನಂಬಿದರೆ ನಂಬಿ ಬಿಟ್ಟರೆ ಬಿಡಿ.. 10ನೇ ತರಗತಿ ಹುಡುಗ ಕಂಡು ಹಿಡಿದ ಈ ಬೈಕ್ ನೀರಿನಿಂದ ಚಲಿಸುತ್ತೆ !!
ಇನ್ನು ಈ ಹಿಂದೆ ಕೂಡಾ ಆರ್ ಅಶೋಕ್ ಅವರು ಸಾರಿಗೆ ಸಚಿವರಾಗಿದ್ದಾಗ ಅಟಲ್ ಸಾರಿಗೆ ಯೋಜನೆ ಪರಿಚಯಿಸುವ ಮೂಲಕ ಗ್ರಾಮೀಣ ಭಾಗದ ಜನತೆಗೆ ಅನುಕೂಲ ಮಾಡಿಕೊಟ್ಟಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದು.
ಆದ್ರೆ ಅದೇನೇ ಇರಲಿ ರಾಜ್ಯ ಸರ್ಕಾರವು ಜಾರಿಗೆ ತರಲು ಹೊರಟಿರುವ ಇಂದಿರಾ ಸಾರಿಗೆ ಯೋಜನೆ ಮಹತ್ವದಾಗಿದ್ದು, ನಿಗದಿತ ಅವಧಿಯೊಳಗೆ ಜಾರಿ ಮಾಡುವ ಮೂಲಕ ಮಹಿಳಾ ಪ್ರಯಾಣಿಕರಿಗೆ ಸೌಲಭ್ಯ ಒದಗಿಸಲಿ ಎನ್ನುವುದೇ ನಮ್ಮ ಆಶಯ.
Trending on DriveSpark Kannada:
ಯಾಕ್ರಿ ಲಂಚ ಕೊಡ್ತಿರಾ? ಇನ್ಮುಂದೆ ಸುಲಭದಲ್ಲೇ ಸಿಗಲಿದೆ ಡ್ರೈವಿಂಗ್ ಲೈಸೆನ್ಸ್..!!