Just In
- 9 hrs ago ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- 10 hrs ago ಕಂಪನಿಗೆ 140ರ ಸಂಭ್ರಮ: ಕೇವಲ 140 ವಿಶೇಷ ಆವೃತ್ತಿಗಳು ನಿರ್ಮಾಣ: ಬುಕಿಂಗ್ ಆರಂಭ
- 12 hrs ago ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
- 13 hrs ago ರಾಜ್ಯದಲ್ಲಿ ತಯಾರಾಗುವ ಟೊಯೊಟಾ ಇನ್ನೋವಾ ಹೈಕ್ರಾಸ್ಗೆ ಸೆಲೆಬ್ರಿಟಿಗಳು ಫಿಧಾ: ಈ ಕಾರು ಖರೀದಿಸಿದ ನಟಿ
Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Movies ಡಿ. ಕೆ ಸುರೇಶ್ ಪರ ನಟ ದರ್ಶನ್ ಪ್ರಚಾರ; ಆ 2 ವಿಧಾನಸಭಾ ಕ್ಷೇತ್ರಗಳಲ್ಲಿ ಮತಬೇಟೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಳ್ಳತನವಾಗಿದ್ದ ಸಿಎಂ ಕೇಜ್ರಿವಾಲ್ ಕಾರು ಪತ್ತೆ- ಹಾಗಾದ್ರೆ ಕದ್ದವರು ಯಾರು?
ಕಳೆದ 2 ದಿನಗಳ ಹಿಂದೆ ದೆಹಲಿ ಸಚಿವಾಲಯದ ಸಮೀಪ ನಿಲ್ಲಿಸಲಾಗಿದ್ದ ಸಿಎಂ ಕೇಜ್ರಿವಾಲ್ ಅವರ ವ್ಯಾಗನರ್ ಆರ್ ಕಾರು ನಾಪತ್ತೆಯಾಗಿತ್ತು. ಇದೀಗ ಉತ್ತರ ಪ್ರದೇಶದ ಗಾಜಿಯಾಬಾದ್ನಲ್ಲಿ ಪತ್ತೆಯಾಗಿರುವ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಕಳೆದ 2 ದಿನಗಳ ಹಿಂದೆ ದೆಹಲಿ ಸಚಿವಾಲಯದ ಸಮೀಪ ನಿಲ್ಲಿಸಲಾಗಿದ್ದ ಸಿಎಂ ಕೇಜ್ರಿವಾಲ್ ಅವರ ವ್ಯಾಗನರ್ ಆರ್ ಕಾರು ನಾಪತ್ತೆಯಾಗಿತ್ತು. ಇದೀಗ ಉತ್ತರ ಪ್ರದೇಶದ ಗಾಜಿಯಾಬಾದ್ನಲ್ಲಿ ಪತ್ತೆಯಾಗಿರುವ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
DL 9C G 9769 ನಂಬರ್ನ ವ್ಯಾಗನಾರ್ ಆರ್ ಕಾರು ಕೇಜ್ರಿವಾಲ್ ಅವರ ಅಚ್ಚುಮೆಚ್ಚಿನ ಕಾರ್ ಆಗಿದ್ದು, ದೆಹಲಿ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರವೂ ಸಹ ಇದೇ ಕಾರನ್ನು ಬಳಕೆ ಮಾಡುತ್ತಿದ್ದರು. ಆದ್ರೆ ಮುಂಜಾಗ್ರತ ಕ್ರಮ ವಹಿಸದ ಹಿನ್ನಲೆ ಕಳೆದ ಗುರುವಾರ ಕಳ್ಳರ ಪಾಲಾಗಿತ್ತು.
ಘಟನೆ ನಂತರ ಕಾರು ಪತ್ತೆಗೆ ಸಾಕಷ್ಟು ಶ್ರಮವಹಿಸಿರುವ ದೆಹಲಿ ಪೊಲೀಸರು ಕೊನೆಗೂ ಕದ್ದ ಕಾರನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದು, ಆದ್ರೆ ಕಾರು ಕಳ್ಳತನ ಮಾಡಿದ ಖದೀಮರು ಮಾತ್ರ ಪತ್ತೆಯಾಗಿಲ್ಲಾ.
ಗಾಯಾಜಿಬಾದ್ ನಗರದ ಕಾಲೋನಿ ಒಂದರ ಬಳಿ ಕಾರು ಬಿಟ್ಟು ತೆರಳಿರುವ ಖದೀಮರು ಯಾವುದೇ ಸುಳಿವು ನೀಡದಂತೆ ಪರಾರಿಯಾಗಿದ್ದು, ಚಾಣಾಕ್ಷ ಕಳ್ಳರ ಪತ್ತೆಗೆ ಗಾಜಿಯಾಬಾದ್ ಮತ್ತು ದೆಹಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ.
Recommended Video
ಜೊತೆಗೆ ಕಾರು ಕದ್ದ ಪ್ರದೇಶದಲ್ಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಹಾಗೂ ಕಾರು ಪತ್ತೆಯಾದ ಪ್ರದೇಶದಲ್ಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರೀಶಿಲನೆ ನಡೆಸಲಾಗುತ್ತಿದ್ದು, ಪ್ರಕರಣದಲ್ಲಿ ಅತಿದೊಡ್ಡ ಕಾರು ಕಳ್ಳತನದ ಜಾಲವೇ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಮಹತ್ವದ ಮಾಹಿತಿಗಳು ಲಭ್ಯವಾಗಿವೆ.
ಇನ್ನು ಸಚಿವಾಲಯದ ಸಮೀಪದಿಂದಲೇ ಕಾರು ಕಳ್ಳತವಾಗಿದ್ದ ಕುರಿತು ಲೆ.ಗವರ್ನರ್ ಅನಿಲ್ ಬೈಜಲ್ ಅವರಿಗೆ ಪತ್ರ ಬರೆದಿದ್ದ ಸಿಎಂ ಅರವಿಂದ್ ಕೇಜ್ರಿವಾಲ್, ರಾಷ್ಟ್ರ ರಾಜಧಾನಿಯಲ್ಲಿ ಕಾನೂನು ಸುವ್ಯವಸ್ಥೆ ಕ್ಷೀಣಿಸುತ್ತಿರುವುದರ ಪ್ರತೀಕ ಎಂದು ಅಸಹನೆ ವ್ಯಕ್ತಪಡಿಸಿದ್ದರು.
ಜೊತೆಗೆ ರಾಜಧಾನಿ ದೆಹಲಿ ಹಾಗೂ ಎನ್ಸಿಆರ್ಗಳಲ್ಲಿ ದಿನ ನಿತ್ಯ ಐದರಿಂದ ಹತ್ತು ಕಾರು ಕಳ್ಳತನ ಪ್ರಕರಣಗಳು ದಾಖಲಾಗುತ್ತಿದ್ದು, ಪ್ರಕರಣ ಭೇದಿಸಲು ದೆಹಲಿ ಪೊಲೀಸರು ಹರಸಾಹಸ ಪಡುವಂತಾಗಿದೆ.
ಅಲ್ಲದೇ ದೆಹಲಿಯಿಂದ ಕದ್ದ ಕಾರುಗಳನ್ನು ಗಾಜಿಯಾಬಾದ್, ಫರಿದಾಬಾದ್, ರೋಹ್ಟಕ್, ಮಿರತ್ಗಳಲ್ಲಿ ಬಿಡಿಭಾಗಗಳನ್ನಾಗಿ ಮಾರಾಟ ಮಾಡುವ ಗ್ಯಾಂಗ್ಗಳು ಸಕ್ರಿಯವಾಗಿದ್ದು, ಈ ನಿಟ್ಟಿನಲ್ಲಿ ಪ್ರಕರಣ ಭೇದಿಸಲು ವಿಶೇಷ ತನಿಖಾ ತಂಡಗಳನ್ನು ರಚಿಸಲಾಗಿದೆ.
ಕಾರು ಕಳ್ಳತನ ತಡೆ ಹೇಗೆ?
ಇದೀಗ ಮುಂದುವರಿರುವ ತಂತ್ರಜ್ಞಾನಗಳ ಸೌಲಭ್ಯಗಳ ಅಳವಡಿಕೆ ಮೂಲಕ ಇಂತಹ ಕೃತ್ಯಗಳಿಗೆ ಕಡಿವಾಣ ಹಾಕಬಹುದಾಗಿದ್ದು, ಆ್ಯಂಟಿ ಥೆಫ್ಟ್ ಟೆಕ್ನಾಲಜಿ ಮೂಲಕ ಕಾರು ಕಳ್ಳತನ ಪ್ರಕರಣಗಳನ್ನು ತಡೆಗಟ್ಟಬಹುದಾಗಿದೆ.
ಇದಕ್ಕಾಗಿ ಮಾರುಕಟ್ಟೆಯಲ್ಲಿ ಲಭ್ಯವಿರುವ ಇಮ್ ಮೊಬಿಲೈಸರ್ ಸಿಸ್ಟಂ, ಜಿಪಿಎಸ್ ಟ್ರಾಕಿಂಗ್ ಸಿಸ್ಟಂ, ಗೇರ್ ಆ್ಯಂಡ್ ಸ್ಟಿರಿಂಗ್ ವೀಲ್ಹ್ ಲಾಕ್ ಸೇರಿದಂತೆ ವಿವಿಧ ಸುರಕ್ಷಾ ತಂತ್ರಜ್ಞಾನಗಳನ್ನು ಬಳಸಿಕೊಳ್ಳಬಹುದಾಗಿದ್ದು, ಕಾರು ಕಳ್ಳತನ ತಡೆಯಲು ಇದು ಸೂಕ್ತ ಪರಿಹಾರ ಎನ್ನಬಹುದು.