Just In
- 12 min ago Bullet Train: ಭಾರತದಲ್ಲಿ ಮೊದಲ ಬಾರಿಗೆ ನವೀನ ರೀತಿಯ ಹಳಿ ಬಳಕೆ.. 320 ಕಿ.ಮೀ ವೇಗದಲ್ಲಿ ಓಡುತ್ತೆ ರೈಲು!
- 13 min ago ಬ್ರಿಟೀಷ್ ಮಾರುಕಟ್ಟೆಯನ್ನು ಆಳಲು ಹೊರಟ ಭಾರತೀಯ ಬೈಕ್: ಯುಕೆ ನಲ್ಲಿ ಟ್ರಯಂಫ್ಗೆ ನೇರ ಹಣಾಹಣಿ!
- 43 min ago Tata Curvv Vs Citroen Basalt: ಟಾಟಾಗೆ ಸೆಡ್ಡು ಹೊಡೆಯುವ ತಾಕತ್ತಿದೆಯೇ?
- 1 hr ago ಶಿಯೋಮಿಯ ಈ ಎಲೆಕ್ಟ್ರಿಕ್ ಕಾರು ಸ್ಮಾರ್ಟ್ಫೋನ್ಗಳಂತೆ ಅಗ್ಗದ ಬೆಲೆ: ರೇಂಜ್ ಕೇಳಿದ್ರೆ ತಲೆ ತಿರುಗುತ್ತೆ!
Don't Miss!
- Lifestyle ಬಾಯಲ್ಲಿ ನೀರು ತರಿಸುವ ಮಾವಿನ ಕಾಯಿ ಚಟ್ನಿ..! 5 ನಿಮಿಷದಲ್ಲಿ ರೆಡಿ..!
- Technology Motorola: ಮೊಟೊರೊಲಾ ಎಡ್ಜ್ 50 ಅಲ್ಟ್ರಾ ಸ್ಮಾರ್ಟ್ಫೋನ್ ಫೀಚರ್ಸ್ ಲೀಕ್! ವಿಶೇಷತೆ ಏನು?
- News RBI: ಬ್ಯಾಂಕ್ ಕೆಲಸ ಮುಗಿದಿಲ್ವಾ? ಭಯ ಬೇಡ ಮಾರ್ಚ್ 30, 31ಕ್ಕೂ ಓಪನ್ ಇರುತ್ತೆ ಆರ್ಬಿಐ ಕಚೇರಿಗಳು!
- Finance ಮೊದಲ ಬಾರಿಗೆ ಅಂಬಾನಿ ಅದಾನಿ ಸೇರಿ ವ್ಯಾಪಾರ ಒಪ್ಪಂದ, ಇಲ್ಲಿದೆ ಒಪ್ಪಂದ ವಿವರ
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- Movies "ಇವರು ಆಡೋ ಮಾತುಗಳಿಂದ ನಮ್ಮ ತಾಯಿ ಊಟ ಮಾಡ್ತಿಲ್ಲ"; ಕಣ್ಣೀರಿಟ್ಟ ವರ್ತೂರು ಸಂತೋಷ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಮ್ಮದೇ ಸ್ವಂತ ಆಪ್ ಬಿಡುಗಡೆ ಮಾಡ್ತೀವಿ !! ಓಲಾ, ಉಬರ್ಗೆ ಸೆಡ್ಡು ಹೊಡೆದ ಕಾರು ಚಾಲಕರು.
ಕೆಲವು ದಿನಗಳಿಂದ ದೇಶದಾದ್ಯಂತ ಉಗ್ರ ಪ್ರತಿಭಟನೆ ನಡೆಸುತ್ತಿರುವ ಕ್ಯಾಬ್ ಮಾಲಿಕರು ಮತ್ತು ಚಾಲಕರು ಇದೀಗ ತಮ್ಮದೇ ಆದ ಹೊಸ ಅ್ಯಪ್ ಸಿದ್ಧಪಡಿಸಿ ಕಾರ್ಯ ನಿರ್ವಹಿಸಲು ನಿರ್ಣಯ ಕೈಗೊಂಡಿದ್ದಾರೆ.
ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಕಳೆದ ಮೂರು ದಿನಗಳಿಂದ ಸ್ವಾತಂತ್ರ್ಯ ಉದ್ಯಾನದಲ್ಲಿ ಅನಿರ್ಧಿಷ್ಟಾವಧಿ ಧರಣಿ ನಡೆಸುತ್ತಿರುವ ಓಲಾ ಮತ್ತು ಉಬರ್ ಕ್ಯಾಬ್ ಚಾಲಕರು ಮತ್ತು ಮಾಲೀಕರು, ಸಂಸ್ಥೆಗೆ ಸೆಡ್ಡು ಹೊಡೆಯಲು ಕ್ಯಾಬ್ ಸೇವೆಗೆ ಚಾಲಕರದ್ದೆ ಆದ ಒಂದು ಮೊಬೈಲ್ ಆಪ್ ತಯಾರಿಸಲು ನಿರ್ಧರಿಸಿದ್ದಾರೆ.
ಕ್ಯಾಬ್ ಮಾಲಿಕರು ಮತ್ತು ಚಾಲಕರು ತಮ್ಮ ಮೇಲಿನ ದೌರ್ಜನ್ಯಗಳನ್ನು ಖಂಡಿಸಿ ಕಂಪನಿಗಳ ವಿರುದ್ಧ ಬೆಂಗಳೂರಿನಲ್ಲಿ ಕಳೆದ ಹಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದರು. ಇದಕ್ಕೆ ಸರಕಾರವಾಗಲೀ ಆ್ಯಪ್ ಆಧಾರಿತ ಸೇವೆ ನೀಡುವ ಕಂಪನಿಗಳಾಗಿ ಸ್ಪಂದಿಸಿರಲಿಲ್ಲ.
ಇದರಿಂದ ಬೇಸತ್ತು, ಪರ್ಯಾಯ ಮಾರ್ಗ ಕಂಡುಕೊಳ್ಳುವ ನಿರ್ಧಾರ ಕೈಗೊಂಡಿರುವ ಚಾಲಕರು ತಮ್ಮದೇ ಆದ ಮೊಬೈಲ್ ತಂತ್ರಾಂಶ ಸಿದ್ಧಪಡಿಸುವ ದಿಟ್ಟ ನಿರ್ಧಾರಕ್ಕೆ ಬಂದಿದ್ದಾರೆ.
ತಮ್ಮ ಮೇಲಾಗುತ್ತಿರುವ ದೌರ್ಜನ್ಯಗಳನ್ನು ಖಂಡಿಸಿ ಓಲಾ ಮತ್ತು ಉಬರ್ ಚಾಲಕರು ಬೆಂಗಳೂರಿನಲ್ಲಿ ಕಳೆದ ಹಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವುದು ನಮಗೆಲ್ಲರಿಗೂ ತಿಳಿದಿರುವ ವಿಚಾರ.
ಈ ವಿಚಾರವಾಗಿ ಸಾರಿಗೆ ಇಲಾಖೆ ಮಧ್ಯೆ ಪ್ರವೇಶಿಸುವವರೆಗೂ ಹೋರಾಟ ನಿಲ್ಲುವುದಿಲ್ಲ ಎಂದು ಪಟ್ಟು ಹಿಡಿದಿದ್ದರೂ ಸಹ ಈವರೆಗೆ ಯಾವುದೇ ಅಧಿಕಾರಿಗಳು, ಜನಪ್ರತಿನಿಧಿಗಳು ಸ್ಪಂದಿಸದೆ ಇರುವುದು ಈ ನಿರ್ಧಾರಕ್ಕೆ ಬರಲು ಪ್ರಮುಖ ಕಾರಣ ಎನ್ನಲಾಗಿದೆ.
ಓಲಾ, ಟಾಕ್ಸಿ ಫಾರ್ ಶೂರ್ ಮ್ತತು ಉಬರ್ ಚಾಲಕರ ಸಂಘದ ಅಧ್ಯಕ್ಷ ತನ್ವೀರ್ ಪಾಷಾ ಮಾತನಾಡಿ, " ಕೇವಲ 20 ರಿಂದ 30 ದಿನಗಳ ಒಳಗಾಗಿ ತಂತ್ರಾಂಶ ಸಿದ್ದವಾಗಲಿದ್ದು, ಇದರ ನಿರ್ವಹಣೆ ಬಗ್ಗೆ, ವೃದ್ಧಿಪಡಿಸುವ ಬಗ್ಗೆ ಮಾನ್ಯ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿಯವರ ಜೊತೆ ಮಾತುಕತೆ ನೆಡೆಸಲಾಗಿದೆ" ಎಂದರು.
ಸದ್ಯ ಇಲ್ಲಿವರೆಗೆ 8,000 ಚಾಲಕರು ಈ ಯೋಜನೆಗೆ ಬೆಂಬಲ ಸೂಚಿಸಿದ್ದಾರೆ. ಕಚೇರಿ ಎಲ್ಲಿ? ಹೇಗೆ ರಚನೆ ಮಾಡಬೇಕು? ಗ್ರಾಹಕ ಸೇವಾ ಪ್ರತಿನಿಧಿಗಳ ನೇಮಕ ಮುಂತಾದ ವಿಚಾರದಲ್ಲಿ ಚರ್ಚೆಗಳು ನಡೆಯುತ್ತಿವೆ ಎಂದು ಪಾಷಾ ಹೇಳಿದ್ದಾರೆ.
ಸದ್ಯ ಇಲ್ಲಿವರೆಗೆ 8,000 ಚಾಲಕರು ಈ ಯೋಜನೆಗೆ ಬೆಂಬಲ ಸೂಚಿಸಿದ್ದು, ಕಚೇರಿ ಬಗ್ಗೆ, ಮತ್ತು ತಂತ್ರಾಂಶ ರಚನೆ ಮಾಡವ ಬಗ್ಗೆ, ಗ್ರಾಹಕ ಸೇವಾ ಪ್ರತಿನಿಧಿಗಳ ನೇಮಕ ಮುಂತಾದ ವಿಚಾರದಲ್ಲಿ ಚರ್ಚೆಗಳು ನಡೆಯುತ್ತಿವೆ ಎಂದು ಪಾಷಾ ತಿಳಿಸಿದರು.