ಮದುವೆಗೆ ಹೋಗುತ್ತಿದ್ದವರು ಮಸಣಕ್ಕೆ- ಅಪಘಾತದಲ್ಲಿ 7 ಮಂದಿ ದುರ್ಮರಣ

ಮರ ಸಾಗಿಸುತ್ತಿದ್ದ ಲಾರಿ ಮತ್ತು ಇನ್ನೋವಾ ಮಧ್ಯೆ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ 7 ಮಂದಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

By Praveen

ಸ್ನೇಹಿತನೊಬ್ಬನ ವಿವಾಹ ಸಮಾಂರಭಕ್ಕೆ ತೆರಳುತ್ತಿದ್ದಾಗ ಇನ್ನೋವಾ ಕಾರು ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಒಟ್ಟು 7 ಮಂದಿ ದುರ್ಮಣಕ್ಕಿಡಾಗಿರುವ ಘಟನೆ ನಡೆದಿದೆ.

ಮದುವೆಗೆ ಹೋಗುತ್ತಿದ್ದವರು ಮಸಣಕ್ಕೆ- ಅಪಘಾತದಲ್ಲಿ 7 ಮಂದಿ ದುರ್ಮರಣ

ನಿನ್ನೆ ತಡರಾತ್ರಿ ಈ ದುರಂತ ನಡೆದಿದ್ದು, ಅಪಘಾತದ ತೀವ್ರತೆಗೆ ಲಾರಿಯಲ್ಲಿದ್ದ ಮರಗಳ ದಿಮ್ಮಿಗಳ ಅಡಿ ಕಾರು ಸಿಲುಕಿಕೊಂಡಿತ್ತು. ಬಳಿಕ ಕ್ರೇನ್ ಮೂಲಕ ಹೊರತೆಗೆಯಲಾಗಿದೆ.

ಮದುವೆಗೆ ಹೋಗುತ್ತಿದ್ದವರು ಮಸಣಕ್ಕೆ- ಅಪಘಾತದಲ್ಲಿ 7 ಮಂದಿ ದುರ್ಮರಣ

ಮೃತರನ್ನು ಬೆಂಗಳೂರಿನ ಮಾಗಡಿ ನಿವಾಸಿಗಳಾದ ಮಧು, ಪ್ರವೀಣ್, ಜಾಲಹಳ್ಳಿ ನಿವಾಸಿ ಶ್ರೀಧರ್, ಮಂಡ್ಯ ನಿವಾಸಿ ಮಲ್ಲೇಶ್, ಸೊರಬ ನಿವಾಸಿ ರಾಜಶೇಖರ್, ಶಿಕಾರಿಪುರದ ರಾಘವೇಂದ್ರ ಮತ್ತು ಚೋರಡಿಯ ಮಂಜುನಾಥ್ ಎಂದು ಗುರುತಿಸಲಾಗಿದೆ.

ಮದುವೆಗೆ ಹೋಗುತ್ತಿದ್ದವರು ಮಸಣಕ್ಕೆ- ಅಪಘಾತದಲ್ಲಿ 7 ಮಂದಿ ದುರ್ಮರಣ

ಇವರೆಲ್ಲರೂ ಶಿವಮೊಗ್ಗದ ಸಾಗರದಲ್ಲಿ ನಡೆಯುತ್ತಿದ್ದ ಸ್ನೇಹಿತನೊಬ್ಬನ ವಿವಾಹ ಸಮಾರಂಭಕ್ಕೆ ಆಗಮಿಸುತ್ತಿದ್ದರು, ಆದ್ರೆ ದುರ್ದೈವ ಮದುವೆ ಹೋಗಬೇಕಾಗಿದ್ದವರು ಮಸಣ ಸೇರಿದ್ದಾರೆ.

ಮದುವೆಗೆ ಹೋಗುತ್ತಿದ್ದವರು ಮಸಣಕ್ಕೆ- ಅಪಘಾತದಲ್ಲಿ 7 ಮಂದಿ ದುರ್ಮರಣ

ಸದ್ಯ ಘಟನಾ ಸ್ಥಳದಿಂದ ಕಾರು ತೆರವುಗೊಳಿಸಲಾಗಿದ್ದು, ಅತಿವೇಗದ ಕಾರು ಚಾಲನೆಯೇ ಘಟನೆಗೆ ಕಾರಣ ಎನ್ನಲಾಗುತ್ತಿದೆ.

ಮದುವೆಗೆ ಹೋಗುತ್ತಿದ್ದವರು ಮಸಣಕ್ಕೆ- ಅಪಘಾತದಲ್ಲಿ 7 ಮಂದಿ ದುರ್ಮರಣ

ಘಟನಾ ಸ್ಥಳಕ್ಕೆ ಎಎಸ್ಪಿ ಮುತ್ತುರಾಜ್ ಹಾಗೂ ಡಿವೈಎಸ್ಪಿ ಚಂದ್ರಶೇಖರ್ ಶೆಟ್ಟಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕುಂಶಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮದುವೆಗೆ ಹೋಗುತ್ತಿದ್ದವರು ಮಸಣಕ್ಕೆ- ಅಪಘಾತದಲ್ಲಿ 7 ಮಂದಿ ದುರ್ಮರಣ

ಮಧು ಹಾಗೂ ಶ್ರೀಧರ್ ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಡ್ರೈವರ್ ಗಳಾಗಿ ಕೆಲಸ ಮಾಡುತ್ತಿದ್ದು, ಪ್ರವೀಣ್ ಸಿನೆಮಾ ಕ್ಷೇತ್ರದಲ್ಲಿ ಮೇಕಪ್ ಕಲಾವಿದನಾಗಿ ಕಾರ್ಯ ನಿರ್ವಹಿಸುತ್ತಿದ್ದ.

ಮದುವೆಗೆ ಹೋಗುತ್ತಿದ್ದವರು ಮಸಣಕ್ಕೆ- ಅಪಘಾತದಲ್ಲಿ 7 ಮಂದಿ ದುರ್ಮರಣ

ಇನ್ನು ಮಂಜುನಾಥ್ ಹಾಗೂ ರಾಜೇಶ್, ಮಲ್ಲೇಶ್ ಮೂವರೂ ಬೆಂಗಳೂರಿನಲ್ಲಿ ಹೋಟೆಲೊಂದರಲ್ಲಿ ಕೆಲಸ ಮಾಡುತ್ತಿದ್ದು, ಘಟನೆಯಿಂದ ಪೋಷಕರು ಕಂಗಾಲಾಗಿದ್ದಾರೆ.

ಮದುವೆಗೆ ಹೋಗುತ್ತಿದ್ದವರು ಮಸಣಕ್ಕೆ- ಅಪಘಾತದಲ್ಲಿ 7 ಮಂದಿ ದುರ್ಮರಣ

ಇದಲ್ಲದೇ ಶಿವಮೊಗ್ಗ-ಬೆಂಗಳೂರು ಸಂಪರ್ಕ ಕಲ್ಪಿಸುವ ಈ ರಸ್ತೆಯಲ್ಲಿ ಆಗಾಗ ಇಂತಹ ಘಟನೆಗಳು ನಡೆಯುತ್ತಲೇ ಇದ್ದು, ಶಾಶ್ವತ ಪರಿಹಾರಕ್ಕೆ ಇಲ್ಲಿನ ಸ್ಥಳೀಯರ ಹಲವು ದಿನಗಳಿಂದ ಒತ್ತಾಯಿಸುತ್ತಲೇ ಇದ್ದಾರೆ.

ಮದುವೆಗೆ ಹೋಗುತ್ತಿದ್ದವರು ಮಸಣಕ್ಕೆ- ಅಪಘಾತದಲ್ಲಿ 7 ಮಂದಿ ದುರ್ಮರಣ

ಈಗಲಾದ್ರೂ ಎಚ್ಚೇತ್ತುಕೊಳ್ಳಬೇಕಿರುವ ಸಂಬಂಧಪಟ್ಟ ಅಧಿಕಾರಿಗಳು ಅಪಘಾತ ವಲಯದಲ್ಲಿ ಕೆಲವು ಮನ್ನೆಚ್ಚೆರಿಕೆ ಕ್ರಮಗಳನ್ನು ಕೈಗೊಳ್ಳಬೇಕಿದೆ.

ಮದುವೆಗೆ ಹೋಗುತ್ತಿದ್ದವರು ಮಸಣಕ್ಕೆ- ಅಪಘಾತದಲ್ಲಿ 7 ಮಂದಿ ದುರ್ಮರಣ

ಇದಲ್ಲದೇ ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ಈ ರಸ್ತೆಯನ್ನು ಜೋಡಿ ರಸ್ತೆ ಮಾಡಬೇಕೇಂಬ ಬಹುದಿನಗಳ ಬೇಡಿಕೆಗೆ ಸ್ಪಂದಿಸಬೇಕಿದೆ.

More from DriveSpark

Article Published On: Thursday, May 4, 2017, 14:51 [IST]
English summary
Car and Lorry accident in shivmogga near pasale village.
Read more on ಅಪಘಾತ accident
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+