Just In
- 12 hrs ago ಡಿ ಬಾಸ್ ಪತ್ನಿ ಖರೀದಿಸಿದ್ದು ಸಾಮಾನ್ಯ ಕಾರಲ್ಲ: ಬಂಗಲೆಯಂತಹ ಇಂಟೀರಿಯರ್!
- 12 hrs ago ಭಾರತದ ನಂ.1 ಕಾರು... ದಾಖಲೆಯ ಮಾರಾಟ... 5.5 ಲಕ್ಷ ಬೆಲೆ... 34 ಕಿ.ಮೀ ಮೈಲೇಜ್
- 13 hrs ago ಈ ಹ್ಯುಂಡೈ ಕಾರಿಗೆ ಭಾರತದಲ್ಲಿ ಭರ್ಜರಿ ಬೇಡಿಕೆ: ಇದು ನಿಮಗೆ ಬೇಕು ಅಂದ್ರೆ ಕಾಯಲೇಬೇಕು!
- 14 hrs ago ಈ ತಿಂಗಳಲ್ಲಿ ಕೈಗೆಟಕುವ ಬೆಲೆಯ ಎಸ್ಯುವಿಗಳು: ಮಿಸ್ ಮಾಡಬೇಡಿ, ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್
Don't Miss!
- News ಬೆಂಗಳೂರಲ್ಲಿ ಬೋರ್ವೆಲ್ ನಿರ್ವಹಣೆಗೆ ಆಧುನಿಕ ತಂತ್ರಜ್ಞಾನ ಅಳವಡಿಕೆ
- Technology Best Coolers: ಭಾರತದಲ್ಲಿ 5 ಸಾವಿರಕ್ಕಿಂತ ಕಡಿಮೆ ಬೆಲೆಯಲ್ಲಿ ಲಭ್ಯ ಇರುವ ಅತ್ಯುತ್ತಮ ಕೂಲರ್ಗಳು! ಫೀಚರ್ಸ್ ಏನಿದೆ?
- Sports IPL 2024: ಮುಂಬೈ ಇಂಡಿಯನ್ಸ್ಗೆ ಆಘಾತದ ಮೇಲೆ ಆಘಾತ; ಸ್ಟಾರ್ ಬೌಲರ್ ಔಟ್
- Movies 'ಹಿಟ್ಲರ್ ಕಲ್ಯಾಣ' ಧಾರಾವಾಹಿ ಅಂತ್ಯ: ಪ್ರೋತ್ಸಾಹ ನೀಡಿದ ವೀಕ್ಷಕರಿಗೆ ಧನ್ಯವಾದ ಎಂದ ನಟಿ ರಜಿನಿ
- Lifestyle ಫ್ಲ್ಯಾಟ್ನಲ್ಲಿ ವಾಸಿಸಲು ಹೋಗುವಾಗ ಸಮೃದ್ಧಿ, ಆರೋಗ್ಯಕ್ಕಾಗಿ ವಾಸ್ತು ಹೀಗಿದೆಯೇ ಎಂದು ನೋಡಬೇಕು
- Finance ಭಾರತದಲ್ಲಿ ಚಿನ್ನದ ಬೆಲೆ ಇಳಿಕೆ, ನಿಮ್ಮ ನಗರದಲ್ಲಿ 24 ಕ್ಯಾರೆಟ್ ಚಿನ್ನದ ದರ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಮೇಲಿನ ವ್ಯಾಟ್ ಕಡಿತ ಅಸಾಧ್ಯವೇ? ಹಾಗಾದ್ರೆ ಸಿಎಂ ಹೇಳಿದ್ದೇನು?
ಕಳೆದ ಒಂದು ವಾರದಿಂದ ದೇಶದ ಪ್ರಮುಖ ರಾಜ್ಯಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವ್ಯಾಟ್ ಪ್ರಮಾಣವನ್ನು ಕಡಿತಗೊಳಿಸಿ ಆದೇಶ ಹೊರಡಿಸುತ್ತಿದ್ದು, ಈ ಹಿನ್ನಲೆ ಕರ್ನಾಟಕದಲ್ಲೂ ವ್ಯಾಟ್ ಕಡಿಮೆ ಆಗಬಹುದೆಂಬ ನೀರಿಕ್ಷೆಗಳಿದ್ದವು.
ಕಳೆದ ಒಂದು ವಾರದಿಂದ ದೇಶದ ಪ್ರಮುಖ ರಾಜ್ಯಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವ್ಯಾಟ್ ಪ್ರಮಾಣವನ್ನು ಕಡಿತಗೊಳಿಸಿ ಆದೇಶ ಹೊರಡಿಸುತ್ತಿದ್ದು, ಈ ಹಿನ್ನಲೆ ಕರ್ನಾಟಕದಲ್ಲೂ ವ್ಯಾಟ್ ಕಡಿಮೆ ಆಗಬಹುದೆಂಬ ನೀರಿಕ್ಷೆಗಳಿದ್ದವು. ಆದ್ರೆ ಈ ಬಗ್ಗೆ ಸಿಎಂ ಸಿದ್ದರಾಮಯ್ಯನವರ ನೀಡಿರುವ ಹೇಳಿಕೆಯು ವ್ಯಾಟ್ ಇಳಿಕೆಯಾಗಬಹುದೆಂಬ ನೀರಿಕ್ಷೆಯನ್ನು ಹುಸಿಗೊಳಿಸಿದೆ.
ಕಳೆದ ವಾರ ಕೇಂದ್ರ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆ ಕಡಿತಗೊಳಿಸಿದ ಬೆನ್ನಲ್ಲೇ ಗುಜರಾತ್ ಮತ್ತು ಮಹಾರಾಷ್ಟ್ರ ರಾಜ್ಯಗಳು ತಮ್ಮ ಪಾಲಿನ ತೆರಿಗೆ ಪ್ರಮಾಣದಲ್ಲಿ ಕಡಿತಗೊಳಿಸಿದ್ದವು. ಇದೀಗ ಈ ಪಟ್ಟಿಗೆ ಮಧ್ಯಪ್ರದೇಶ ಸರ್ಕಾರ ಕೂಡ ಸೇರ್ಪಡೆಯಾಗಿದೆ.
ಮೂಲಗಳ ಪ್ರಕಾರ ಮಧ್ಯ ಪ್ರದೇಶ ಸರ್ಕಾರವು ಪೆಟ್ರೋಲ್ ಮೇಲಿನ ರಾಜ್ಯದ ತೆರಿಗೆ ಪ್ರಮಾಣದಲ್ಲಿ ಶೇ.5ರಷ್ಟು ಮತ್ತು ಡೀಸೆಲ್ ಮೇಲಿನ ತೆರಿಗೆ ಪ್ರಮಾಣದಲ್ಲಿ ಶೇ.3ರಷ್ಟು ಮೌಲ್ಯವರ್ಧಿತ ತೆರಿಗೆಯನ್ನ ಕಡಿತಗೊಳಿಸಿದೆ. ಜೊತೆಗೆ ನೂತನ ದರಗಳು ನಿನ್ನೆ ಮಧ್ಯರಾತ್ರಿಯಿಂದಲೇ ಜಾರಿಗೆ ಬಂದಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಪರಿಷ್ಕರಣೆಗೊಂಡಿವೆ.
Recommended Video
ಹೀಗಾಗಿ ಕರ್ನಾಟಕದಲ್ಲೂ ವ್ಯಾಟ್ ಇಳಿಕೆ ಬಗ್ಗೆ ನೀರಿಕ್ಷೆಗಳನ್ನು ಇಟ್ಟುಕೊಂಡಿದ್ದ ವಾಹನ ಸವಾರರಿಗೆ ರಾಜ್ಯ ಸರ್ಕಾರ ಶಾಕ್ ನೀಡಿದೆ. ಸದ್ಯಕ್ಕೆ ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವ್ಯಾಟ್ ಇಳಿಸುವ ಯಾವುದೇ ಚಿಂತನೆ ಇಲ್ಲವೆಂದು ಸಿಎಂ ಸಿದ್ಧರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಗುಜರಾತ್ ಮತ್ತು ಮಹಾರಾಷ್ಟ್ರ ಸರ್ಕಾರಗಳು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವ್ಯಾಟ್ ಇಳಿಸಿದ್ದು, ರಾಜ್ಯ ಸರ್ಕಾರದ ನಡೆಯ ಬಗ್ಗೆ ಪ್ರಶ್ನಿಸಿದಾಗ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಈ ರೀತಿ ಪ್ರತಿಕ್ರಿಯಿಸಿದ್ದಾರೆ.
ಇದಕ್ಕೆ ಮುಖ್ಯ ಕಾರಣ ರಾಜ್ಯಕ್ಕೆ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವ್ಯಾಟ್ ಪ್ರಮಾಣದಿಂದಲೇ ಬರೋಬ್ಬರಿ 11 ಸಾವಿರ ಕೋಟಿಗೂ ಹೆಚ್ಚು ಆದಾಯವಿದ್ದು, ವ್ಯಾಟ್ ಪ್ರಮಾಣ ಕಡಿತಗೊಳಿಸಿದ್ದಲ್ಲಿ ಆದಾಯಕ್ಕೆ ಧಕ್ಕೆಯಾಗಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ.
ಇನ್ನು ಕಳೆದ ಮೂರು ತಿಂಗಳಿನಿಂದ ಇಂಧನ ಬೆಲೆಯಲ್ಲಿ ಗಣನೀಯ ಪ್ರಮಾಣದ ಏರಿಕೆ ಕಂಡುಬಂದಿತ್ತು. ಅಲ್ಲದೇ ಕೇಂದ್ರ ಸರ್ಕಾರವು ಪೆಟ್ರೋಲ್ ಡೀಸೆಲ್ ಬೆಲೆಗಳನ್ನು ನಿತ್ಯ ಪರಿಷ್ಕರಣಿಗೆ ಒಳಪಡಿಸಿದಾಗಿನಿಂದಲೂ ಬೆಲೆಗಳು ಗಗನದತ್ತ ಮುಖ ಮಾಡಿದ್ದವು.
ಇದೇ ಕಾರಣಕ್ಕೆ ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಪೆಟ್ರೋಲ್ ಡೀಸೆಲ್ ಗೂ ಜಿಎಸ್ ಟಿ ಅಳವಡಿಸಬೇಕು ಎಂದು ಹೇಳಿದ್ದರು. ಇದರ ಬೆನ್ನಲ್ಲೇ ಕೇಂದ್ರ ಸರ್ಕಾರ ತನ್ನ ಪಾಲಿನ ತೆರಿಗೆ ಪ್ರಮಾಣದಲ್ಲಿ ಇಳಿಕೆ ಮಾಡಿತ್ತು. ಹೀಗಾಗಿಯೇ ರಾಜ್ಯ ಸರ್ಕಾರಗಳೂ ಕೂಡ ತಮ್ಮ ಪಾಲಿನ ತೆರಿಗೆ ಪ್ರಮಾಣದಲ್ಲಿ ಇಳಿಕೆ ಮಾಡಬೇಕು ಎಂದು ಕೇಳಿತ್ತು. ಆದ್ರೆ ಕರ್ನಾಟಕ ಸರ್ಕಾರವು ಇದಕ್ಕೆ ಸ್ಪಂದಿಸದಿರುವುದು ವಿಪರ್ಯಾಸ.