Just In
- 11 hrs ago ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- 12 hrs ago Suzuki Access Electric: ಸುಜುಕಿ ಆಕ್ಸೆಸ್ ಎಲೆಕ್ಟ್ರಿಕ್ ಸ್ಕೂಟರ್ ಈ ವರ್ಷ ಬಿಡುಗಡೆ ಸಾಧ್ಯತೆ!
- 13 hrs ago Royal Enfield Himalayan ಸುಲಭವಾಗಿ ಖರೀದಿಸುವುದು ಹೇಗೆ?: ಇಲ್ಲಿದೆ ಡೌನ್ಪೇಮೆಂಟ್, EMI ಮಾಹಿತಿಗಳು!
- 13 hrs ago ಮಿಂಚಿನ ವೇಗಕ್ಕೆ ಸರಿಸಾಟಿಯಾಗಿ ಬೆಂಗಳೂರಿನ ಹೊಸ ಅಲ್ಟ್ರಾವೈಲೆಟ್ ಬೈಕ್ ಬಿಡುಗಡೆ: 323KM ರೇಂಜ್
Don't Miss!
- Movies ನೀಲಿ ಪ್ರಪಂಚದ ಕರಾಳ ಸತ್ಯವನ್ನ ಹೇಳಿದ ಲಾನಾ ರೋಡ್ಸ್
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಮೇಲಿನ ವ್ಯಾಟ್ ಕಡಿತ ಅಸಾಧ್ಯವೇ? ಹಾಗಾದ್ರೆ ಸಿಎಂ ಹೇಳಿದ್ದೇನು?
ಕಳೆದ ಒಂದು ವಾರದಿಂದ ದೇಶದ ಪ್ರಮುಖ ರಾಜ್ಯಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವ್ಯಾಟ್ ಪ್ರಮಾಣವನ್ನು ಕಡಿತಗೊಳಿಸಿ ಆದೇಶ ಹೊರಡಿಸುತ್ತಿದ್ದು, ಈ ಹಿನ್ನಲೆ ಕರ್ನಾಟಕದಲ್ಲೂ ವ್ಯಾಟ್ ಕಡಿಮೆ ಆಗಬಹುದೆಂಬ ನೀರಿಕ್ಷೆಗಳಿದ್ದವು.
ಕಳೆದ ಒಂದು ವಾರದಿಂದ ದೇಶದ ಪ್ರಮುಖ ರಾಜ್ಯಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವ್ಯಾಟ್ ಪ್ರಮಾಣವನ್ನು ಕಡಿತಗೊಳಿಸಿ ಆದೇಶ ಹೊರಡಿಸುತ್ತಿದ್ದು, ಈ ಹಿನ್ನಲೆ ಕರ್ನಾಟಕದಲ್ಲೂ ವ್ಯಾಟ್ ಕಡಿಮೆ ಆಗಬಹುದೆಂಬ ನೀರಿಕ್ಷೆಗಳಿದ್ದವು. ಆದ್ರೆ ಈ ಬಗ್ಗೆ ಸಿಎಂ ಸಿದ್ದರಾಮಯ್ಯನವರ ನೀಡಿರುವ ಹೇಳಿಕೆಯು ವ್ಯಾಟ್ ಇಳಿಕೆಯಾಗಬಹುದೆಂಬ ನೀರಿಕ್ಷೆಯನ್ನು ಹುಸಿಗೊಳಿಸಿದೆ.
ಕಳೆದ ವಾರ ಕೇಂದ್ರ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆ ಕಡಿತಗೊಳಿಸಿದ ಬೆನ್ನಲ್ಲೇ ಗುಜರಾತ್ ಮತ್ತು ಮಹಾರಾಷ್ಟ್ರ ರಾಜ್ಯಗಳು ತಮ್ಮ ಪಾಲಿನ ತೆರಿಗೆ ಪ್ರಮಾಣದಲ್ಲಿ ಕಡಿತಗೊಳಿಸಿದ್ದವು. ಇದೀಗ ಈ ಪಟ್ಟಿಗೆ ಮಧ್ಯಪ್ರದೇಶ ಸರ್ಕಾರ ಕೂಡ ಸೇರ್ಪಡೆಯಾಗಿದೆ.
ಮೂಲಗಳ ಪ್ರಕಾರ ಮಧ್ಯ ಪ್ರದೇಶ ಸರ್ಕಾರವು ಪೆಟ್ರೋಲ್ ಮೇಲಿನ ರಾಜ್ಯದ ತೆರಿಗೆ ಪ್ರಮಾಣದಲ್ಲಿ ಶೇ.5ರಷ್ಟು ಮತ್ತು ಡೀಸೆಲ್ ಮೇಲಿನ ತೆರಿಗೆ ಪ್ರಮಾಣದಲ್ಲಿ ಶೇ.3ರಷ್ಟು ಮೌಲ್ಯವರ್ಧಿತ ತೆರಿಗೆಯನ್ನ ಕಡಿತಗೊಳಿಸಿದೆ. ಜೊತೆಗೆ ನೂತನ ದರಗಳು ನಿನ್ನೆ ಮಧ್ಯರಾತ್ರಿಯಿಂದಲೇ ಜಾರಿಗೆ ಬಂದಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಪರಿಷ್ಕರಣೆಗೊಂಡಿವೆ.
Recommended Video
ಹೀಗಾಗಿ ಕರ್ನಾಟಕದಲ್ಲೂ ವ್ಯಾಟ್ ಇಳಿಕೆ ಬಗ್ಗೆ ನೀರಿಕ್ಷೆಗಳನ್ನು ಇಟ್ಟುಕೊಂಡಿದ್ದ ವಾಹನ ಸವಾರರಿಗೆ ರಾಜ್ಯ ಸರ್ಕಾರ ಶಾಕ್ ನೀಡಿದೆ. ಸದ್ಯಕ್ಕೆ ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವ್ಯಾಟ್ ಇಳಿಸುವ ಯಾವುದೇ ಚಿಂತನೆ ಇಲ್ಲವೆಂದು ಸಿಎಂ ಸಿದ್ಧರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಗುಜರಾತ್ ಮತ್ತು ಮಹಾರಾಷ್ಟ್ರ ಸರ್ಕಾರಗಳು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವ್ಯಾಟ್ ಇಳಿಸಿದ್ದು, ರಾಜ್ಯ ಸರ್ಕಾರದ ನಡೆಯ ಬಗ್ಗೆ ಪ್ರಶ್ನಿಸಿದಾಗ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಈ ರೀತಿ ಪ್ರತಿಕ್ರಿಯಿಸಿದ್ದಾರೆ.
ಇದಕ್ಕೆ ಮುಖ್ಯ ಕಾರಣ ರಾಜ್ಯಕ್ಕೆ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವ್ಯಾಟ್ ಪ್ರಮಾಣದಿಂದಲೇ ಬರೋಬ್ಬರಿ 11 ಸಾವಿರ ಕೋಟಿಗೂ ಹೆಚ್ಚು ಆದಾಯವಿದ್ದು, ವ್ಯಾಟ್ ಪ್ರಮಾಣ ಕಡಿತಗೊಳಿಸಿದ್ದಲ್ಲಿ ಆದಾಯಕ್ಕೆ ಧಕ್ಕೆಯಾಗಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ.
ಇನ್ನು ಕಳೆದ ಮೂರು ತಿಂಗಳಿನಿಂದ ಇಂಧನ ಬೆಲೆಯಲ್ಲಿ ಗಣನೀಯ ಪ್ರಮಾಣದ ಏರಿಕೆ ಕಂಡುಬಂದಿತ್ತು. ಅಲ್ಲದೇ ಕೇಂದ್ರ ಸರ್ಕಾರವು ಪೆಟ್ರೋಲ್ ಡೀಸೆಲ್ ಬೆಲೆಗಳನ್ನು ನಿತ್ಯ ಪರಿಷ್ಕರಣಿಗೆ ಒಳಪಡಿಸಿದಾಗಿನಿಂದಲೂ ಬೆಲೆಗಳು ಗಗನದತ್ತ ಮುಖ ಮಾಡಿದ್ದವು.
ಇದೇ ಕಾರಣಕ್ಕೆ ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಪೆಟ್ರೋಲ್ ಡೀಸೆಲ್ ಗೂ ಜಿಎಸ್ ಟಿ ಅಳವಡಿಸಬೇಕು ಎಂದು ಹೇಳಿದ್ದರು. ಇದರ ಬೆನ್ನಲ್ಲೇ ಕೇಂದ್ರ ಸರ್ಕಾರ ತನ್ನ ಪಾಲಿನ ತೆರಿಗೆ ಪ್ರಮಾಣದಲ್ಲಿ ಇಳಿಕೆ ಮಾಡಿತ್ತು. ಹೀಗಾಗಿಯೇ ರಾಜ್ಯ ಸರ್ಕಾರಗಳೂ ಕೂಡ ತಮ್ಮ ಪಾಲಿನ ತೆರಿಗೆ ಪ್ರಮಾಣದಲ್ಲಿ ಇಳಿಕೆ ಮಾಡಬೇಕು ಎಂದು ಕೇಳಿತ್ತು. ಆದ್ರೆ ಕರ್ನಾಟಕ ಸರ್ಕಾರವು ಇದಕ್ಕೆ ಸ್ಪಂದಿಸದಿರುವುದು ವಿಪರ್ಯಾಸ.