Just In
- 13 hrs ago ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- 14 hrs ago ಟೊಯೊಟಾದ ಫಾರ್ಚ್ಯೂನರ್ನಲ್ಲೂ ಸಿಗಲಿದೆ ಹೈಬ್ರಿಡ್: ಇದರ ಮೈಲೇಜ್ ಕೇಳಿ ಸುಸ್ತಾದ ಗ್ರಾಹಕರು!
- 14 hrs ago ನಿಜವಾದ ಮಾನವತಾವಾದಿ: ನಟ ರಾಘವ ಲಾರೆನ್ಸ್ರಿಂದ ವಿಶೇಷ ಚೇತನ ಸಾಧಕರಿಗೆ 13 ಟಿವಿಎಸ್ ಸ್ಕೂಟರ್ ಗಿಫ್ಟ್
- 16 hrs ago ಜನ ಕ್ಯೂ ನಿಂತು ಖರೀದಿಸುತ್ತಿದ್ದ ಮಾರುತಿ ಸ್ವಿಫ್ಟ್ ಕಾರು ಮಾರಾಟದಲ್ಲಿ ಕುಸಿತ: ಕಾರಣವೇನು?
Don't Miss!
- Technology ಇಂದು ಮತ್ತೆ ಮೊಟೊರೊಲಾ ಎಡ್ಜ್ 50 ಪ್ರೊ ಫೋನಿನ ಸ್ಪೆಷಲ್ ಸೇಲ್!..ಡಿಸ್ಕೌಂಟ್ ಎಷ್ಟು?
- News ಐತಿಹಾಸಿಕ ಪ್ರಸಿದ್ಧ ವದ್ದಿಕೆರೆ ಸಿದ್ದಪ್ಪನ ಬಗ್ಗೆ ನಿಮಗೆಷ್ಟು ಗೊತ್ತು?-ಇಲ್ಲಿದೆ ಸಂಪೂರ್ಣ ವಿವರ
- Sports PBKS vs MI IPL 2024: ಮತ್ತೊಮ್ಮೆ ಕೊನೆಯ ಓವರ್ನಲ್ಲಿ ಮುಗ್ಗರಿಸಿದ ಪಂಜಾಬ್ ಕಿಂಗ್ಸ್ ಪ್ಲೇಆಫ್ ಸನ್ನಿವೇಶ ಹೇಗಿದೆ?
- Finance ಕಚ್ಚಾ ತೈಲ ಆಮದು ಗಣನೀಯ ಇಳಿಕೆ, ಪೆಟ್ರೋಲ್ ಡಿಸೇಲ್ ಬೆಲೆ ಹೆಚ್ಚಾಗುತ್ತಾ?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Movies 'ಮಾರ್ಟಿನ್' ಚಿತ್ರದ ನಿರ್ಮಾಪಕ- ನಿರ್ದೇಶಕರ ಮಧ್ಯೆ ಕಿರಿಕ್: ಕೊನೆಗೂ ಸಿಕ್ತು ಸ್ಪಷ್ಟನೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಇನ್ಮುಂದೆ ದಿನಂಪ್ರತಿ ತೈಲ ಬೆಲೆ ಪರಿಷ್ಕಣೆ- ಸಂಕಷ್ಟಕ್ಕೆ ಸಿಲುಕಿದ ಬಂಕ್ ಮಾಲೀಕರು
ಮೇ 16 ರಿಂದ ದಿನಂಪ್ರತಿ ತೈಲ ಬೆಲೆ ಪರಿಷ್ಕಣೆ ಕಾರ್ಯರೂಪಕ್ಕೆ ಬರುತ್ತಿದ್ದು, ಬಂಕ್ ಮಾಲೀಕರು ಹೊಸ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಮೇ 16 ರಿಂದ ದಿನಂಪ್ರತಿ ತೈಲ ಬೆಲೆ ಪರಿಷ್ಕಣೆ ಕಾರ್ಯರೂಪಕ್ಕೆ ಬರುತ್ತಿದ್ದು, ಬಂಕ್ ಮಾಲೀಕರು ಹೊಸ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯ ಕಚ್ಚಾ ತೈಲ ಬೆಲೆ ಆಧರಿಸಿ ಇನ್ಮುಂದೆ ದಿನಂಪ್ರತಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ನಿಗದಿಯಾಗಲಿದ್ದು, ಹೊಸ ಯೋಜನೆ ಮೇ 16ರಿಂದ ಅಧಿಕೃತವಾಗಿ ಕಾರ್ಯರೂಪ ಬರುತ್ತಿದೆ.
ಆದ್ರೆ ತೈಲ ಕಂಪನಿಗಳ ನಿರ್ಧಾರದಿಂದ ಬಂಕ್ ಮಾಲೀಕರು ಸಂಕಷ್ಟಕ್ಕೆ ಸಿಲುಕಿದ್ದು, ಪ್ರತಿ ದಿನವೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಪರಿಷ್ಕಣೆ ಮಾಡುವ ಬಗ್ಗೆ ಗೊಂದಲದಲ್ಲಿದ್ದಾರೆ.
ಸದ್ಯ ಪೆಟ್ರೋಲ್ ಮತ್ತು ಡಿಸೇಲ್ ಬೆಲೆಗಳು ಪ್ರತಿ 15 ದಿನಗಳಿಗೆ ಪರಿಷ್ಕಣೆಯಾಗುತ್ತಿದ್ದು, ಹೊಸ ಯೋಜನೆ ಕಾರ್ಯರೂಪಕ್ಕೆ ಬಂದ ನಂತರ ಯಾವ ರೀತಿ ಬೆಲೆ ನಿಗದಿ ಮಾಡಬೇಕೆಂಬ ಗೊಂದಲ ಸೃಷ್ಟಿಯಾಗಿದೆ.
ಇನ್ನು ಡೀಸೆಲ್ ಮತ್ತು ಪೆಟ್ರೋಲ್ ತುಂಬಿಸುವ ಮಷಿನ್ಗಳು ಇದುವರೆಗೆ ಯಾವುದೇ ರೀತಿಯ ನವೀಕರಣ ಕೂಡಾ ಆಗಿಲ್ಲ. ಈ ಹಿನ್ನೆಲೆ ಹೊಸ ಯೋಜನೆ ಕಾರ್ಯರೂಪಕ್ಕೆ ಬಂದರೇ ಅದರಿಂದ ನಷ್ಟವಾಗಲಿದೆ ಎಂಬುವುದು ಬಂಕ್ ಮಾಲೀಕರ ಅಳಲು.
ಹೀಗಾಗಿ ಹೊಸ ಯೋಜನೆ ಕಾರ್ಯರೂಪಕ್ಕೆ ತರುವ ಮುನ್ನ ದಿನಂಪ್ರತಿ ಬದಲಾವಣೆಯಾಗುವ ಬೆಲೆ ವ್ಯತ್ಯಾಸಗಳನ್ನು ನಿಯಂತ್ರಣ ಮಾಡಬಲ್ಲ ಸ್ವಯಂಚಾಲಿತ ಮಷಿನ್ ಅಳವಡಿಸುವಂತೆ ಒತ್ತಾಯಿಸಿದ್ದಾರೆ.
ಇಲ್ಲವಾದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಖರೀದಿ ಮಾಡದೇ ಮುಷ್ಕರ ನಡೆಸುವಾಗಿ ಬೆದರಿಕೆ ಹಾಕಿರುವ ಬಂಕ್ ಮಾಲೀಕರು, ಈ ಸಂಬಂಧ ತೈಲ ಸಚಿವಾಲಯಕ್ಕೆ ಪತ್ರ ಕೂಡಾ ಬರೆದಿದ್ದಾರೆ.
ಇನ್ನು ಮೊದಲ ಹಂತವಾಗಿ ಪುದುಚೇರಿ, ವೈಜಾಕ್, ಉದಯ್ಪುರ್, ಜಮಶೇಡ್ಪುರದಲ್ಲಿ ಮತ್ತು ಚಂಡಿಘರ್ ನಗರಗಳಲ್ಲಿ ಪ್ರತಿದಿನವೂ ತೈಲ ಪರಿಷ್ಕರಣೆ ಕಾರ್ಯರೂಪಕ್ಕೆ ಬರಲಿದ್ದು, ನಂತರ ದೇಶಾದ್ಯಂತ ಜಾರಿಗೆ ತರಲಾಗುತ್ತಿದೆ.