Just In
- 8 hrs ago ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- 9 hrs ago KTM Duke 125 ಬೆಲೆಗೆ ಯಾವೆಲ್ಲಾ ಬೈಕ್ಗಳು ಸಿಗುತ್ತೆ ಗೊತ್ತಾ?: ಪಲ್ಸರ್ನಿಂದ ಹಿಡಿದು MT 15 ವರೆಗೆ
- 10 hrs ago ಅಡ್ವೆಂಚರ್ ಬೈಕ್ ಪ್ರಿಯರಿಗೆ ಸಿಹಿಸುದ್ದಿ: ಬಿಡುಗಡೆಗೆ ಸಜ್ಜಾದ ಸುಜುಕಿ V-Strom 800 DE ಬೈಕ್
- 10 hrs ago Maruti Suzuki: 2024ರ ಮಾರುತಿ ಸ್ವಿಫ್ಟ್ ವಿಶೇಷತೆಗಳು: ಸನ್ರೂಫ್, 35 ಕಿ.ಮೀ ಮೈಲೇಜ್!
Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Movies "ನಾವು ದಕ್ಷಿಣ ಭಾರತದವರಾಗಿದ್ರೂ ಭಾಷೆ ಬರುತ್ತೆ, ಸುಂದರವಾಗಿಯೂ ಇದ್ದೇವೆ"; ನಟಿ ಪ್ರಿಯಾಮಣಿ
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮುಂದಿನ ವರ್ಷ ಜಾರಿಗೆ ಬರುತ್ತಿರುವ ಹೊಸ ಕಾರು ನಿಯಮಗಳ ಬಗ್ಗೆ ತಿಳ್ಕೊಳಿ
ಮುಂದಿನ ವರ್ಷದ ಏಪ್ರಿಲ್ ನಂತರ ಎಲ್ಲಾ ಕಾರುಗಳಲ್ಲಿ ಕೆಲವು ಮೂಲಭೂತ ಸೌಕರ್ಯಗಳನ್ನು ವಾಹನ ತಯಾರಕ ಸಂಸ್ಥೆಗಳು ಅಳವಡಿಸಬೇಕು ಎಂದು ಭಾರತೀಯ ಸರ್ಕಾರವು ಆದೇಶ ಹೊರಡಿಸಿದೆ.
ಮುಂದಿನ ವರ್ಷದ ಏಪ್ರಿಲ್ ನಂತರ ಎಲ್ಲಾ ಕಾರುಗಳಲ್ಲಿ ಕೆಲವು ಮೂಲಭೂತ ಸೌಕರ್ಯಗಳನ್ನು ವಾಹನ ತಯಾರಕ ಸಂಸ್ಥೆಗಳು ಅಳವಡಿಸಬೇಕು ಎಂದು ಭಾರತೀಯ ಸರ್ಕಾರವು ಆದೇಶ ಹೊರಡಿಸಿದೆ.
ಈ ನಿಯಮದ ಪ್ರಕಾರ ಏಪ್ರಿಲ್ ನಂತರ ನೋಂದಣಿಯಾಗುವ ಎಲ್ಲಾ ಕಾರುಗಳಲ್ಲಿ ಸೀಟ್ ಬೆಲ್ಟ್ ಎಚ್ಚರಿಕೆ ಸೂಚಕ, ವೇಗ ಎಚ್ಚರಿಕೆ ಸೂಚಕ, ಚಾಲಕನಿಗೆ ಕಡ್ಡಾಯ ಏರ್ಬ್ಯಾಗ್ ಮತ್ತು ರಿವರ್ಸ್ ಪಾರ್ಕಿಂಗ್ ಸಹಾಯ ವ್ಯವಸ್ಥೆಗಳನ್ನು ಅಳವಡಿಸಬೇಕೆಂದು ಭಾರತೀಯ ಸರ್ಕಾರ ಆದೇಶ ನೀಡಿದ್ದು, ಈಗಾಗಲೇ ಈ ನಿಯಮ ಪಾಲನೆಗೆ ಅಗತ್ಯ ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗಿದೆ.
ರಸ್ತೆ ಮತ್ತು ಸಾರಿಗೆ ಸಚಿವರಿಂದ ಹೊರಡಿಸಲಾದ ಕರಡು ನಿಯಮಗಳ ಪ್ರಕಾರ, ಮೇಲೆ ಸೂಚಿಸಲಾದ ಚಾಲಕ ಸ್ನೇಹಿ ಸೌಲಭ್ಯಗಳು ಆಟೊಮೋಟಿವ್ ಇಂಡಸ್ಟ್ರಿ ಸ್ಟ್ಯಾಂಡರ್ಡ್ (ಎಐಎಸ್) 145ರ ಪ್ರಕಾರ ಕಡ್ಡಾಯವಾಗಿ ಪಾಲಿಸಬೇಕಾಗುತ್ತದೆ.
ಎಐಎಸ್ 145 ನಿಯಮವು, ಭಾರತದ ರಸ್ತೆಗಳಲ್ಲಿ ಅಪಘಾತಗಳ ಸಂಖ್ಯೆಯನ್ನು ತಗ್ಗಿಸುವ ಕಡೆ ಗಮನಹರಿಸಲು ಮುಂದಾಗಿದ್ದು, ದೇಶದಲ್ಲಿ ರಸ್ತೆ ಸುರಕ್ಷತೆ ಸುಧಾರಣೆ ಮತ್ತು ರಿವರ್ಸ್ ಪಾರ್ಕಿಂಗ್ ಸಂದರ್ಭದಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಅರಿವು ಮೂಡಿಸಲು ಈ ಕ್ರಮಕ್ಕೆ ಮುಂದಾಗಿದೆ.
ಭಾರತದ ಅಪಘಾತ ಅಂಕಿಅಂಶಗಳನ್ನು ಬೆಗ್ಗೆ ಹೇಳುವುದಾದರೆ, ಪ್ರತಿ ವರ್ಷ ಸುಮಾರು 1.5 ಲಕ್ಷ ಮಂದಿ ರಸ್ತೆ ಅಪಘಾತಗಳಲ್ಲಿ ಸಾವನ್ನಪ್ಪುತ್ತಿದ್ದು, ಸುರಕ್ಷತಾ ಮಾನದಂಡಗಳು ಕಟ್ಟುನಿಟ್ಟಾಗಿ ಪಾಲಿಸಬೇಕಾದ ಅಗತ್ಯವಿದೆ.
ಮುಂದಿನ ಮೂರು ವರ್ಷಗಳಲ್ಲಿ ಭಾರತದಲ್ಲಿ ರಸ್ತೆ ಅಪಘಾತಗಳನ್ನು ಶೇಕಡಾ 50% ರಷ್ಟು ಕಡಿಮೆ ಮಾಡುವ ಗುರಿ ಹೊಂದಿದ್ದು, ಜಾಗತಿಕ ಮಟ್ಟದ ಸುರಕ್ಷತಾ ಮಾನದಂಡಗಳಿಗೆ ಸಮಾನವಾಗಿ ಭಾರತೀಯ ಕಾರು ಸುರಕ್ಷತಾ ಮಾನದಂಡಗಳನ್ನು ತರಲು ಸರ್ಕಾರ ಪ್ರಯತ್ನಿಸುತ್ತಿದೆ.
ಹೊಸ ನಿಯಮ ಜಾರಿಗೊಳಿಸುವ ಮೂಲಕ ಸರಕಾರವು ಅಪಘಾತಗಳ ಸಂಖ್ಯೆಯನ್ನು ಕಡಿಮೆಗೊಳಿಸಲು ಸಾಕಷ್ಟು ಪ್ರಯತ್ನ ನೆಡೆಸುತಿದ್ದು, ಸಾರ್ವಜನಿಕರೂ ಸಹ ದೇಶದ ರಸ್ತೆ ನಿಯಮಗಳನ್ನು ಪಾಲಿಸುವ ಮೂಲಕ ಸುರಕ್ಷತೆಗೆ ಹೆಚ್ಚು ಆದ್ಯತೆ ನೀಡುವ ಕಡೆ ಹೆಚ್ಚು ಗಮನಹರಿಸಬೇಕಾಗಿದೆ.