Just In
- 9 hrs ago ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- 10 hrs ago ಕಂಪನಿಗೆ 140ರ ಸಂಭ್ರಮ: ಕೇವಲ 140 ವಿಶೇಷ ಆವೃತ್ತಿಗಳು ನಿರ್ಮಾಣ: ಬುಕಿಂಗ್ ಆರಂಭ
- 12 hrs ago ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
- 12 hrs ago ರಾಜ್ಯದಲ್ಲಿ ತಯಾರಾಗುವ ಟೊಯೊಟಾ ಇನ್ನೋವಾ ಹೈಕ್ರಾಸ್ಗೆ ಸೆಲೆಬ್ರಿಟಿಗಳು ಫಿಧಾ: ಈ ಕಾರು ಖರೀದಿಸಿದ ನಟಿ
Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Movies ಡಿ. ಕೆ ಸುರೇಶ್ ಪರ ನಟ ದರ್ಶನ್ ಪ್ರಚಾರ; ಆ 2 ವಿಧಾನಸಭಾ ಕ್ಷೇತ್ರಗಳಲ್ಲಿ ಮತಬೇಟೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮುಂದಿನ ವರ್ಷ ಜಾರಿಗೆ ಬರುತ್ತಿರುವ ಹೊಸ ಕಾರು ನಿಯಮಗಳ ಬಗ್ಗೆ ತಿಳ್ಕೊಳಿ
ಮುಂದಿನ ವರ್ಷದ ಏಪ್ರಿಲ್ ನಂತರ ಎಲ್ಲಾ ಕಾರುಗಳಲ್ಲಿ ಕೆಲವು ಮೂಲಭೂತ ಸೌಕರ್ಯಗಳನ್ನು ವಾಹನ ತಯಾರಕ ಸಂಸ್ಥೆಗಳು ಅಳವಡಿಸಬೇಕು ಎಂದು ಭಾರತೀಯ ಸರ್ಕಾರವು ಆದೇಶ ಹೊರಡಿಸಿದೆ.
ಮುಂದಿನ ವರ್ಷದ ಏಪ್ರಿಲ್ ನಂತರ ಎಲ್ಲಾ ಕಾರುಗಳಲ್ಲಿ ಕೆಲವು ಮೂಲಭೂತ ಸೌಕರ್ಯಗಳನ್ನು ವಾಹನ ತಯಾರಕ ಸಂಸ್ಥೆಗಳು ಅಳವಡಿಸಬೇಕು ಎಂದು ಭಾರತೀಯ ಸರ್ಕಾರವು ಆದೇಶ ಹೊರಡಿಸಿದೆ.
ಈ ನಿಯಮದ ಪ್ರಕಾರ ಏಪ್ರಿಲ್ ನಂತರ ನೋಂದಣಿಯಾಗುವ ಎಲ್ಲಾ ಕಾರುಗಳಲ್ಲಿ ಸೀಟ್ ಬೆಲ್ಟ್ ಎಚ್ಚರಿಕೆ ಸೂಚಕ, ವೇಗ ಎಚ್ಚರಿಕೆ ಸೂಚಕ, ಚಾಲಕನಿಗೆ ಕಡ್ಡಾಯ ಏರ್ಬ್ಯಾಗ್ ಮತ್ತು ರಿವರ್ಸ್ ಪಾರ್ಕಿಂಗ್ ಸಹಾಯ ವ್ಯವಸ್ಥೆಗಳನ್ನು ಅಳವಡಿಸಬೇಕೆಂದು ಭಾರತೀಯ ಸರ್ಕಾರ ಆದೇಶ ನೀಡಿದ್ದು, ಈಗಾಗಲೇ ಈ ನಿಯಮ ಪಾಲನೆಗೆ ಅಗತ್ಯ ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗಿದೆ.
ರಸ್ತೆ ಮತ್ತು ಸಾರಿಗೆ ಸಚಿವರಿಂದ ಹೊರಡಿಸಲಾದ ಕರಡು ನಿಯಮಗಳ ಪ್ರಕಾರ, ಮೇಲೆ ಸೂಚಿಸಲಾದ ಚಾಲಕ ಸ್ನೇಹಿ ಸೌಲಭ್ಯಗಳು ಆಟೊಮೋಟಿವ್ ಇಂಡಸ್ಟ್ರಿ ಸ್ಟ್ಯಾಂಡರ್ಡ್ (ಎಐಎಸ್) 145ರ ಪ್ರಕಾರ ಕಡ್ಡಾಯವಾಗಿ ಪಾಲಿಸಬೇಕಾಗುತ್ತದೆ.
ಎಐಎಸ್ 145 ನಿಯಮವು, ಭಾರತದ ರಸ್ತೆಗಳಲ್ಲಿ ಅಪಘಾತಗಳ ಸಂಖ್ಯೆಯನ್ನು ತಗ್ಗಿಸುವ ಕಡೆ ಗಮನಹರಿಸಲು ಮುಂದಾಗಿದ್ದು, ದೇಶದಲ್ಲಿ ರಸ್ತೆ ಸುರಕ್ಷತೆ ಸುಧಾರಣೆ ಮತ್ತು ರಿವರ್ಸ್ ಪಾರ್ಕಿಂಗ್ ಸಂದರ್ಭದಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಅರಿವು ಮೂಡಿಸಲು ಈ ಕ್ರಮಕ್ಕೆ ಮುಂದಾಗಿದೆ.
ಭಾರತದ ಅಪಘಾತ ಅಂಕಿಅಂಶಗಳನ್ನು ಬೆಗ್ಗೆ ಹೇಳುವುದಾದರೆ, ಪ್ರತಿ ವರ್ಷ ಸುಮಾರು 1.5 ಲಕ್ಷ ಮಂದಿ ರಸ್ತೆ ಅಪಘಾತಗಳಲ್ಲಿ ಸಾವನ್ನಪ್ಪುತ್ತಿದ್ದು, ಸುರಕ್ಷತಾ ಮಾನದಂಡಗಳು ಕಟ್ಟುನಿಟ್ಟಾಗಿ ಪಾಲಿಸಬೇಕಾದ ಅಗತ್ಯವಿದೆ.
ಮುಂದಿನ ಮೂರು ವರ್ಷಗಳಲ್ಲಿ ಭಾರತದಲ್ಲಿ ರಸ್ತೆ ಅಪಘಾತಗಳನ್ನು ಶೇಕಡಾ 50% ರಷ್ಟು ಕಡಿಮೆ ಮಾಡುವ ಗುರಿ ಹೊಂದಿದ್ದು, ಜಾಗತಿಕ ಮಟ್ಟದ ಸುರಕ್ಷತಾ ಮಾನದಂಡಗಳಿಗೆ ಸಮಾನವಾಗಿ ಭಾರತೀಯ ಕಾರು ಸುರಕ್ಷತಾ ಮಾನದಂಡಗಳನ್ನು ತರಲು ಸರ್ಕಾರ ಪ್ರಯತ್ನಿಸುತ್ತಿದೆ.
ಹೊಸ ನಿಯಮ ಜಾರಿಗೊಳಿಸುವ ಮೂಲಕ ಸರಕಾರವು ಅಪಘಾತಗಳ ಸಂಖ್ಯೆಯನ್ನು ಕಡಿಮೆಗೊಳಿಸಲು ಸಾಕಷ್ಟು ಪ್ರಯತ್ನ ನೆಡೆಸುತಿದ್ದು, ಸಾರ್ವಜನಿಕರೂ ಸಹ ದೇಶದ ರಸ್ತೆ ನಿಯಮಗಳನ್ನು ಪಾಲಿಸುವ ಮೂಲಕ ಸುರಕ್ಷತೆಗೆ ಹೆಚ್ಚು ಆದ್ಯತೆ ನೀಡುವ ಕಡೆ ಹೆಚ್ಚು ಗಮನಹರಿಸಬೇಕಾಗಿದೆ.