ಹಳ್ಳಕ್ಕೆ ಉರುಳಿದ ಕೆಎಸ್‌ಆರ್‌ಟಿಸಿ ಬಸ್- ಪ್ರಯಾಣಿಕರನ್ನು ರಕ್ಷಿಸಿದ ಗ್ರಾಮಸ್ಥರು

ರಾಜ್ಯಾದ್ಯಂತ ಕಳೆದ 2 ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ಈ ಮಧ್ಯೆ ಕೆಎಸ್‌ಆರ್‌ಟಿಸಿ ಬಸ್‌ವೊಂದು ಹಳ್ಳ ದಾಟುವಾಗ ಉರುಳಿ ಬಿದ್ದಿರುವ ಘಟನೆ ನಡೆದಿದೆ.

By Praveen

ಗದಗ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ಈ ನಡುವೆ ನೀರಿನ ರಭಸಕ್ಕೆ ಕೆಎಸ್‍ಆರ್‍‌ಟಿಸಿ ಬಸ್ ಹಳ್ಳಕ್ಕೆ ಉರುಳಿ ಬಿದ್ದ ಘಟನೆ ಶಿರಹಟ್ಟಿ ತಾಲೂಕಿನ ದೊಡ್ಡೂರ ಗ್ರಾಮದ ಬಳಿ ನಡೆದಿದೆ.

ಹಳ್ಳಕ್ಕೆ ಉರುಳಿದ ಕೆಎಸ್‌ಆರ್‌ಟಿಸಿ ಬಸ್- ಪ್ರಯಾಣಿಕರನ್ನು ರಕ್ಷಿಸಿದ ಗ್ರಾಮಸ್ಥರು

ಚಾಲಕನಿಂದ ಆದ ಪ್ರಮಾದ

ಇನ್ನು ತುಂಬಿ ಹರಿಯುತ್ತಿದ್ದ ದೊಡ್ಡೂರ ಹಳ್ಳದಲ್ಲಿ ಕೆಎಸ್‌ಆರ್‌ಟಿಸಿ ಚಾಲಕ ಪ್ರಯಾಣಿಕರ ವಿರೋಧದ ನಡುವೆಯೂ ಬಸ್ ಚಲಾಯಿಸಿದ್ದಾನೆ. ಆದ್ರೆ ನೀರಿನ ರಭಸಕ್ಕೆ ಬಸ್ ಕೊಚ್ಚಿ ಹೋಗಿದೆ.

ಹಳ್ಳಕ್ಕೆ ಉರುಳಿದ ಕೆಎಸ್‌ಆರ್‌ಟಿಸಿ ಬಸ್- ಪ್ರಯಾಣಿಕರನ್ನು ರಕ್ಷಿಸಿದ ಗ್ರಾಮಸ್ಥರು

ಚಾಲಕನ್ನು ರಕ್ಷಣೆ ಮಾಡಿದ ಸ್ಥಳೀಯರು

ಸ್ಥಳೀಯರ ವಿರೋಧದ ನಡುವೆಯೂ ಚಾಲಕ ಹಳ್ಳದಲ್ಲಿ ಬಸ್ ಚಲಾಯಿಸಿದ ಪರಿಣಾಮ ನೀರಿನ ರಭಸಕ್ಕೆ ಬಸ್ ಹಳ್ಳಕ್ಕೆ ಉರುಳಿದ್ದು, ರಕ್ಷಣೆಗಾಗಿ ಪ್ರಯಾಣಿಕರು ಸ್ಥಳೀಯರನ್ನು ಕೂಗಿಕೊಂಡಿದ್ದಾರೆ.

ಹಳ್ಳಕ್ಕೆ ಉರುಳಿದ ಕೆಎಸ್‌ಆರ್‌ಟಿಸಿ ಬಸ್- ಪ್ರಯಾಣಿಕರನ್ನು ರಕ್ಷಿಸಿದ ಗ್ರಾಮಸ್ಥರು

ಪ್ರಯಾಣಿಕರ ಕೂಗಾಟ, ಚಿರಾಟ ಹಿನ್ನೆಲೆ ಸ್ಥಳೀಯರು ರಕ್ಷಣೆಗೆ ಧಾವಿಸಿ ಹಗ್ಗದ ಸಹಾಯದಿಂದ ಚಾಲಕ ಸೇರಿದಂತೆ ಐದು ಜನರನ್ನು ರಕ್ಷಣೆ ಮಾಡಿದ್ದಾರೆ.

ಹಳ್ಳಕ್ಕೆ ಉರುಳಿದ ಕೆಎಸ್‌ಆರ್‌ಟಿಸಿ ಬಸ್- ಪ್ರಯಾಣಿಕರನ್ನು ರಕ್ಷಿಸಿದ ಗ್ರಾಮಸ್ಥರು

ಶಿರಹಟ್ಟಿ ತಾಲೂಕಿನ ಲಕ್ಷ್ಮೇಶ್ವರ ದಿಂದ ಯಲ್ಲಾಪುರ ಕ್ಕೆ ಹೊರಟಿದ್ದ ಕೆಎ26 ಎಫ್81 ನಂಬರಿನ ಬಸ್ ಇದಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಹಳ್ಳಕ್ಕೆ ಉರುಳಿದ ಕೆಎಸ್‌ಆರ್‌ಟಿಸಿ ಬಸ್- ಪ್ರಯಾಣಿಕರನ್ನು ರಕ್ಷಿಸಿದ ಗ್ರಾಮಸ್ಥರು

ಬಸ್ ಚಾಲಕ ಎಂ.ಬಿ ತೂಬರಮಟ್ಟಿ, ನಿರ್ವಾಹಕ ಎ ಎಸ್ ಏಳಬಣವಿ, ಪ್ರಯಾಣಿಕರಾದ ರಾಮಪ್ಪ, ಕಿರಣ್, ಹಾಲಪ್ಪ ಎಂಬುವರನ್ನು ರಕ್ಷಣೆ ಮಾಡಲಾಗಿದೆ.

ಹಳ್ಳಕ್ಕೆ ಉರುಳಿದ ಕೆಎಸ್‌ಆರ್‌ಟಿಸಿ ಬಸ್- ಪ್ರಯಾಣಿಕರನ್ನು ರಕ್ಷಿಸಿದ ಗ್ರಾಮಸ್ಥರು

ಇನ್ನು ಗದಗ ಜಿಲ್ಲಾದ್ಯಂತ ವಿವಿಧ ಭಾರೀ ಮಳೆಯಾಗುತ್ತಿದ್ದು, ಜಿಲ್ಲೆಯ ಬಹುತೇಕ ಹಳ್ಳಕೊಳ್ಳಗಳು ತುಂಬಿಹರಿಯುತ್ತಿವೆ.

ಹಳ್ಳಕ್ಕೆ ಉರುಳಿದ ಕೆಎಸ್‌ಆರ್‌ಟಿಸಿ ಬಸ್- ಪ್ರಯಾಣಿಕರನ್ನು ರಕ್ಷಿಸಿದ ಗ್ರಾಮಸ್ಥರು

ಭಾರೀ ಪ್ರಮಾಣದ ಮಳೆ ಹಿನ್ನೆಲೆ ಅಲ್ಲಲ್ಲಿ ಬಸ್ ಸಂಚಾರಕ್ಕೆ ಅಡಚಣೆ ಉಂಟಾಗಿದ್ದು, ಹಳ್ಳಗಳಲ್ಲಿ ವಾಹನಗಳನ್ನು ದಾಟಿಸುವ ಮುನ್ನ ಎಚ್ಚರವಾಗಿರಬೇಕು.

ಹಳ್ಳಕ್ಕೆ ಉರುಳಿದ ಕೆಎಸ್‌ಆರ್‌ಟಿಸಿ ಬಸ್- ಪ್ರಯಾಣಿಕರನ್ನು ರಕ್ಷಿಸಿದ ಗ್ರಾಮಸ್ಥರು

ಕೇವಲ ಹಳ್ಳಗಳಲ್ಲಿ ಅಷ್ಟೇ ಅಲ್ಲ ಮಳೆ ರಭಸಕ್ಕೆ ಬೃಹತ್ ಮರಗಳು ನೆಲಕ್ಕೆ ಉರುಳಿ ಬಿದ್ದಿದ್ದು, ರಸ್ತೆ ಸಂಚಾರಕ್ಕೂ ತೊಂದರೆ ಉಂಟಾಗಿದೆ.

ಹಳ್ಳಕ್ಕೆ ಉರುಳಿದ ಕೆಎಸ್‌ಆರ್‌ಟಿಸಿ ಬಸ್- ಪ್ರಯಾಣಿಕರನ್ನು ರಕ್ಷಿಸಿದ ಗ್ರಾಮಸ್ಥರು

ಸದ್ಯ ರಸ್ತೆಯಲ್ಲಿ ಬಿದ್ದಿರುವ ಬೃಹತ್ ಮರಗಳನ್ನು ತೆರವುಗೊಳಿಸಲಾಗುತ್ತಿದ್ದು, ಕೆರೆ ಮತ್ತು ಹಳ್ಳಗಳನ್ನು ದಾಟುವಾಗ ಎಚ್ಚರ ವಹಿಸುವುದು ಒಳಿತು.

More from DriveSpark

Article Published On: Monday, May 15, 2017, 14:04 [IST]
English summary
KSRTC Bus Falls in Water due to Heavy rain fall.
Read more on ಬಸ್ bus
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+