Just In
- 5 min ago Bullet Train: ಭಾರತದಲ್ಲಿ ಮೊದಲ ಬಾರಿಗೆ ನವೀನ ರೀತಿಯ ಹಳಿ ಬಳಕೆ.. 320 ಕಿ.ಮೀ ವೇಗದಲ್ಲಿ ಓಡುತ್ತೆ ರೈಲು!
- 5 min ago ಬ್ರಿಟೀಷ್ ಮಾರುಕಟ್ಟೆಯನ್ನು ಆಳಲು ಹೊರಟ ಭಾರತೀಯ ಬೈಕ್: ಯುಕೆ ನಲ್ಲಿ ಟ್ರಯಂಫ್ಗೆ ನೇರ ಹಣಾಹಣಿ!
- 36 min ago Tata Curvv Vs Citroen Basalt: ಟಾಟಾಗೆ ಸೆಡ್ಡು ಹೊಡೆಯುವ ತಾಕತ್ತಿದೆಯೇ?
- 1 hr ago ಶಿಯೋಮಿಯ ಈ ಎಲೆಕ್ಟ್ರಿಕ್ ಕಾರು ಸ್ಮಾರ್ಟ್ಫೋನ್ಗಳಂತೆ ಅಗ್ಗದ ಬೆಲೆ: ರೇಂಜ್ ಕೇಳಿದ್ರೆ ತಲೆ ತಿರುಗುತ್ತೆ!
Don't Miss!
- Lifestyle ಬಾಯಲ್ಲಿ ನೀರು ತರಿಸುವ ಮಾವಿನ ಕಾಯಿ ಚಟ್ನಿ..! 5 ನಿಮಿಷದಲ್ಲಿ ರೆಡಿ..!
- Technology Motorola: ಮೊಟೊರೊಲಾ ಎಡ್ಜ್ 50 ಅಲ್ಟ್ರಾ ಸ್ಮಾರ್ಟ್ಫೋನ್ ಫೀಚರ್ಸ್ ಲೀಕ್! ವಿಶೇಷತೆ ಏನು?
- News RBI: ಬ್ಯಾಂಕ್ ಕೆಲಸ ಮುಗಿದಿಲ್ವಾ? ಭಯ ಬೇಡ ಮಾರ್ಚ್ 30, 31ಕ್ಕೂ ಓಪನ್ ಇರುತ್ತೆ ಆರ್ಬಿಐ ಕಚೇರಿಗಳು!
- Finance ಮೊದಲ ಬಾರಿಗೆ ಅಂಬಾನಿ ಅದಾನಿ ಸೇರಿ ವ್ಯಾಪಾರ ಒಪ್ಪಂದ, ಇಲ್ಲಿದೆ ಒಪ್ಪಂದ ವಿವರ
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- Movies "ಇವರು ಆಡೋ ಮಾತುಗಳಿಂದ ನಮ್ಮ ತಾಯಿ ಊಟ ಮಾಡ್ತಿಲ್ಲ"; ಕಣ್ಣೀರಿಟ್ಟ ವರ್ತೂರು ಸಂತೋಷ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸ್ವಾತಂತ್ರ್ಯ ದಿನದಂದು ಭಾರತದ ಪ್ರಥಮ ಜೈವಿಕ ಇಂಧನ ಬಸ್ ಬಿಡುಗಡೆ ಮಾಡಿದ ಗೋವಾ
ಸ್ವಾತಂತ್ರ್ಯ ದಿನ ಪ್ರಯುಕ್ತ ದೇಶದೆಲ್ಲೆಡೆ ವಿವಿಧ ರೀತಿಗಳಲ್ಲಿ ಸ್ವಾತಂತ್ರೋತ್ಸವ ಆಚರಿಸಲಾಯಿತು. ಆದರೆ, ಗೊವಾ ರಾಜ್ಯ ಮಾತ್ರ ವಿಶಿಷ್ಟ ರೀತಿಯಲ್ಲಿ ಸ್ವತಂತ್ರ ದಿನವನ್ನು ಆಚರಿಸಿತು ಎನ್ನಬಹುದು.
ಸ್ವಾತಂತ್ರ್ಯ ದಿನ ಪ್ರಯುಕ್ತ ದೇಶದೆಲ್ಲೆಡೆ ವಿವಿಧ ರೀತಿಗಳಲ್ಲಿ ಸ್ವಾತಂತ್ರೋತ್ಸವ ಆಚರಿಸಲಾಯಿತು. ಆದರೆ, ಗೊವಾ ರಾಜ್ಯ ಮಾತ್ರ ವಿಶಿಷ್ಟ ರೀತಿಯಲ್ಲಿ ಸ್ವತಂತ್ರ ದಿನವನ್ನು ಆಚರಿಸಿತು ಎನ್ನಬಹುದು.
ಹೌದು, ಟೂರಿಸಂ ವಿಚಾರದಲ್ಲಿ ತನ್ನ ಪ್ರಾಬಲ್ಯವನ್ನು ಮೆರೆದಿರುವ ಗೋವಾ ರಾಜ್ಯ ಸದ್ಯ ಮತ್ತೊಂದು ಪರಿಸರ ಸ್ನೇಹಿ ಸಾಹಸಕ್ಕೆ ಕೈಹಾಕಿದ್ದು, ಸ್ಕ್ಯಾನಿಯಾ ಸಂಸ್ಥೆ ಅಭಿವೃದ್ಧಿಪಡಿಸಿರುವ ಭಾರತದ ಮೊದಲ ಜೈವಿಕ ಇಂಧನ ಬಸ್ ಪ್ರಾರಂಭಿಸಿದೆ. ಈ ವಾಹನ ಒಂದು ಪೈಲಟ್ ಯೋಜನೆಯ ಭಾಗವಾಗಿ ಕಾರ್ಯ ನಿರ್ವಹಿಸಲಿದೆ.
ಗೊವಾ ರಾಜ್ಯದ ಗವರ್ನರ್ ಆದಂತಹ ಮೃದುಲಾ ಸಿನ್ಹಾ ಪಣಜಿಯಲ್ಲಿನ ಆದಿಲ್ ಷಾ ಅರಮನೆಯಿಂದ ಹಸಿರು ನಿಶಾನೆ ತೋರಿಸುವ ಮೂಲಕ 36 ಆಸನ ಹೊಂದಿರುವ ಈ ಬಸ್ಸನ್ನು ಪ್ರಾರಂಭಿಸಿದರು.
ಅಲ್ಲದೆ, ಎಥನಾಲ್ ಆಧಾರದ ಮೇಲೆ ಚಲಿಸುವ ಮತ್ತೆರಡು ಮಾದರಿಯ ಬಸ್ಸುಗಳನ್ನೂ ಸಹ ಈ ಸಂದರ್ಭದಲ್ಲಿ ಪ್ರಾರಂಬಿಸಲಾಗಿದ್ದು, ಒಟ್ಟು ಮೂರು ರೀತಿಯ ಮಾದರಿಗಳು ಬಿಡುಗಡೆ ಭಾಗ್ಯ ಕಂಡಿವೆ.
ಈ ಮೂರೂ ಮಾದರಿಯ ಬಸ್ಸುಗಳೂ ಸಹ ಗೋವಾದ ರಾಜ್ಯ ಸಾರಿಗೆ ವ್ಯವಸ್ಥೆ ಅಡಿಯಲ್ಲಿ ಇರುವಂತಹ ಕದಂಬ ಸಾರಿಗೆ ನಿಗಮ ಲಿಮಿಟೆಡ್ (ಕೆಟಿಸಿಎಲ್) ಭಾಗವಾಗಿ ಕಾರ್ಯ ನಿರ್ವಹಿಸಲಿವೆ ಎಂದು ಸರ್ಕಾರ ತಿಳಿಸಿದೆ.
ಮುಂಬರುವ ವರ್ಷದ ಫೆಬ್ರವರಿ ವೇಳೆಗೆ 40ಕ್ಕೂ ಹೆಚ್ಚು ಪರಿಸರ ಸ್ನೇಹಿ ಇಂಧನ ಬಳಸಿ ಚಲಿಸುವ ಬಸ್ಗಳನ್ನು ಸಾರಿಗೆ ಇಲಾಖೆಗೆ ಅಸ್ತಾಂತರಿಸುವ ಯೋಜನೆಯನ್ನು ಗೋವಾ ಸರ್ಕಾರ ಹೊಂದಿದೆ. ಸಾಲಿಗಾವ್ ಪ್ರದೇಶದಲ್ಲಿ ಇರಿಸಲಾಗಿರುವ ಘನ ತ್ಯಾಜ್ಯ ನಿರ್ವಹಣೆ ಘಟಕದಲ್ಲಿ ಉತ್ಪಾದನೆಗೊಳ್ಳುವ ಜೈವಿಕ ಅನಿಲದ ಮೂಲಕ ಇಂಧನ ಒದಗಿಸುವ ಕೆಲಸಕ್ಕೆ ಸರ್ಕಾರ ಕೈಹಾಕಲಿದೆ.
ರಾಜ್ಯ ಸಾರಿಗೆ ಬಸ್ ಮತ್ತು ಭಾರೀ ವಾಹನಗಳು ಸಾಮಾನ್ಯವಾಗಿ ವಾಯುಮಾಲಿನ್ಯ ಹೆಚ್ಚಿಸುವ ಕಡೆಗೆ ದೊಡ್ಡ ಮಟ್ಟದಲ್ಲಿ ಕೊಡುಗೆ ನೀಡಿರುವುದನ್ನು ನಾವೆಲ್ಲರೂ ಗಮನಿಸಬಹುದಾಗಿದೆ. ಇಂತಹ ಸಂದರ್ಭದಲ್ಲಿ ರಾಜ್ಯ ಸರ್ಕಾರಗಳು ಈ ರೀತಿಯ ಪರಿಸರ ಸ್ನೇಹಿ ವಾಹನಗಳತ್ತ ಮುಖ ಮಾಡುತ್ತಿರುವುದು ಒಳ್ಳೆಯ ಬೆಳವಣಿಗೆಯಾಗಿದೆ.