Just In
- just now ರಾಜ್ಯದಲ್ಲಿ ತಯಾರಾಗುವ ಟೊಯೊಟಾ ಇನ್ನೋವಾ ಹೈಕ್ರಾಸ್ಗೆ ಸೆಲೆಬ್ರಿಟಿಗಳು ಫಿಧಾ: ಈ ಕಾರು ಖರೀದಿಸಿದ ನಟಿ
- 8 min ago ಹ್ಯುಂಡೈನ ಈ ಕಾರಿಗೆ ಭಾರತದಲ್ಲಿ ಭರ್ಜರಿ ಡಿಸ್ಕೌಂಟ್: ಇದಕ್ಕಿಂತ ಉತ್ತಮ ಆಫರ್ ಸದ್ಯಕ್ಕಿಲ್ಲ!
- 18 min ago ರೈತರ ವಿಶ್ವಾಸದೊಂದಿಗೆ 40 ಲಕ್ಷ ಟ್ರ್ಯಾಕ್ಟರ್ ಮಾರಾಟ ಮೈಲಿಗಲ್ಲು ಸಾಧಿಸಿದ ಮಹೀಂದ್ರಾ
- 57 min ago Bangaluru: ನಮ್ಮ ಯಾತ್ರಿ ಕ್ಯಾಬ್ ಸೇವೆ ಆರಂಭ.. ಎಷ್ಟಿದೆ ದರ?
Don't Miss!
- News Bengaluru Rain: ಸುದೀರ್ಘ ಕಾಯುವಿಕೆ ಅಂತ್ಯ: ಬೆಂಗಳೂರಿಗೆ ಎಂಟ್ರಿ ಕೊಟ್ಟ ಮಳೆ; ವಿಡಿಯೋ ನೋಡಿ
- Movies ತಾರಕ್ ಪೊನ್ನಪ್ಪ 'ಉಧೋ ಉಧೋ ಶ್ರೀ ರೇಣುಕಾ ಯಲ್ಲಮ್ಮ' ಧಾರಾವಾಹಿಯಿಂದ ಹೊರಬಂದಿದ್ದೇಕೆ?
- Lifestyle 5 ನಿಮಿಷದಲ್ಲಿ ಪಾತ್ರೆಯನ್ನು ಹೊಳೆಯುವಂತೆ ಮಾಡಿ..! ಸುಲಭದ ಟಿಪ್ಸ್ ಇಲ್ಲಿದೆ
- Technology oneplus: ಒನ್ಪ್ಲಸ್ನಿಂದ ಫ್ಲ್ಯಾಗ್ಶಿಪ್ ಕ್ಯಾಮೆರಾ ಸೌಲಭ್ಯದೊಂದಿಗೆ ಫ್ಲಿಪ್ ಫೋನ್!
- Sports LSG vs CSK IPL 2024: ಲಕ್ನೋ vs ಚೆನ್ನೈ ಪಂದ್ಯದ ವರದಿ, ಫ್ಯಾಂಟಸಿ ಡ್ರೀಮ್ ಟೀಂ, ಸಂಭಾವ್ಯ ಆಡುವ 11ರ ಬಳಗ
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಿಡಿಯೋ- ಬಸ್ ಮತ್ತು ಕಾರು ನಡುವೆ ಡಿಕ್ಕಿ- ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು
ರಸ್ತೆ ದಾಟುವ ಮುನ್ನ ಒಂದಲ್ಲ ಹತ್ತು ಬಾರಿ ಎಚ್ಚರಿಕೆ ವಹಿಸಿದ್ರು ತಪ್ಪಲ್ಲ. ಯಾಕೇಂದ್ರೆ ವಿರುದ್ಧ ದಿಕ್ಕಿನಲ್ಲಿ ಬರುವ ವಾಹನಗಳು ಯಾವ ವೇಗದಲ್ಲಿ ಚಲಿಸುತ್ತಿರುತ್ತವೆ ಎಂಬುವುದು ನಮಗೆ ತಿಳಿದಿವುದಿಲ್ಲ.
ರಸ್ತೆ ದಾಟುವ ಮುನ್ನ ಒಂದಲ್ಲ ಹತ್ತು ಬಾರಿ ಎಚ್ಚರಿಕೆ ವಹಿಸಿದ್ರು ತಪ್ಪಲ್ಲ. ಯಾಕೇಂದ್ರೆ ವಿರುದ್ಧ ದಿಕ್ಕಿನಲ್ಲಿ ಬರುವ ವಾಹನಗಳು ಯಾವ ವೇಗದಲ್ಲಿ ಚಲಿಸುತ್ತಿರುತ್ತವೆ ಎಂಬುವುದು ನಮಗೆ ತಿಳಿದಿವುದಿಲ್ಲ. ಹೀಗಾಗಿ ಸ್ವಲ್ಪವೇ ಎಚ್ಚರ ತಪ್ಪಿದ್ರು ಅನಾಹುತ ತಪ್ಪಿದ್ದಲ್ಲ.
ಇಂತದೆ ಒಂದು ಘಟನೆ ಕೇರಳದಲ್ಲೂ ನಡೆದಿದ್ದು, ಪೆಟ್ರೋಲ್ ಬಂಕ್ ಒಂದರ ಬಳಿ ಕಾರು ಮತ್ತು ಸಾರಿಗೆ ಬಸ್ ನಡುವೆ ಡಿಕ್ಕಿ ಸಂಭವಿಸಿದೆ. ಬಸ್ನಲ್ಲಿದ್ದ ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದು, ಅಪಘಾತದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ.
ಕೇರಳದ ಕೊಟ್ಟಾಯಂನ ಎಂಜಿ ರೋಡ್ನಲ್ಲಿ ಈ ಘಟನೆ ನಡೆದಿದ್ದು, ಮರ್ಸಿಡಿಸ್ ಬೆಂಝ್ ಕಾರು ಚಾಲಕ ಮಾಡಿದ ಒಂದು ತಪ್ಪಿನಿಂದಾಗಿ ಇಂತದೊಂದು ಭೀಕರ ಅಪಘಾತಕ್ಕೆ ಕಾರಣವಾಗಿದೆ.
ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಮರ್ಸಿಡಿಸ್ ಬೆಂಝ್ ಕಾರು ಚಾಲಕ ಪೆಟ್ರೋಲ್ ಬಂಕ್ಗೆ ಹೊಗುವ ಉದ್ದೇಶದಿಂದ ತಿರುವು ಪಡೆದುಕೊಂಡಿದ್ದಾನೆ. ಆದ್ರೆ ಇದೇ ವೇಳೆ ವಿರುದ್ಧ ದಿಕ್ಕಿನಿಂದ ವೇಗವಾಗಿ ಬರುತ್ತಿದ್ದ ಕೆಎಸ್ಆರ್ಟಿಸಿ(ಕೇರಳ ರಾಜ್ಯ ಸಾರಿಗೆ ಸಂಸ್ಥೆ)ಯ ಬಸ್ ಕಾರಿಗೆ ರಭಸವಾಗಿ ಗುದ್ದಿದೆ.
ಕಾರಿಗೆ ಬಸ್ ಗುದ್ದಿದ ಪರಿಣಾಮ ಬೆಂಝ್ ಕಾರು ಸಂಪೂರ್ಣ ಜಖಂಗೊಂಡಿದ್ದು, ಕಾರಿನಲ್ಲಿ ಚಾಲಕನನ್ನು ಹೊರತು ಪಡಿಸಿ ಯಾರು ಇಲ್ಲದ ಪರಿಣಾಮ ಯಾವುದೇ ದೊಡ್ಡ ಅನುಹಾತು ನಡೆದಿಲ್ಲ. ಇದಲ್ಲದೇ ಬಸ್ನಲ್ಲಿದ್ದ ಕೆಲವು ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಇನ್ನು ಘಟನೆ ನಂತರ ಅಪಘಾತಗೊಂಡಿದ್ದ ಬಸ್ ಮತ್ತು ಕಾರನ್ನು ತೆರವುಗೊಳಿಸಿದ ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ. ಪೆಟ್ರೋಲ್ ಬಂಕ್ನಲ್ಲಿದ್ದ ಸಿಸಿಟಿವಿ ಪರಿಶೀಲಿಸಿದ ನಂತರ ಮೇಲ್ನೋಟಕ್ಕೆ ಇದು ಕಾರು ಚಾಲಕನದ್ದೇ ತಪ್ಪು ಎಂದು ಗುರುತಿಸಲಾಗಿದ್ದು, ಯಾವುದೇ ಮುಂಜಾಗ್ರತಾ ಸೂಚನೆ ನೀಡದೆ ರಸ್ತೆ ತಿರುವು ಪಡೆದುಕೊಳ್ಳುತ್ತಿರುವುದೇ ಅನಾಹುತಕ್ಕೆ ಕಾರಣವಾಗಿದೆ.
ಸಿಸಿಟಿವಿಯಲ್ಲಿ ಸೆರೆಯಾದ ಕೇರಳ ಸಾರಿಗೆ ಬಸ್ ಮತ್ತು ಮರ್ಸಿಡಿಸ್ ಬೆಂಝ್ ಕಾರಿನ ನಡುವೆ ನಡೆದ ಅಪಘಾತ ದೃಶ್ಯಗಳು ಇಲ್ಲಿದೆ ನೋಡಿ.