Just In
- 31 min ago ಭಾರತದ ರಸ್ತೆಯಲ್ಲಿ ಘರ್ಜಿಸುತ್ತಿರುವ ಪವರ್ಫುಲ್ ಎಪ್ರಿಲಿಯಾ ಬೈಕ್ಗಾಗಿ ಅಕ್ಸೆಸರೀಸ್ ಬಿಡುಗಡೆ
- 39 min ago Mahindra Thar: ಸುಲಭವಾಗಿ ಆಫ್ರೋಡ್ ಕಿಂಗ್ ಖರೀದಿಸಬೇಕೆ?: ಆನ್ರೊಡ್ ಬೆಲೆ, EMI ಸಂಪೂರ್ಣ ಮಾಹಿತಿ!
- 51 min ago Mahindra: ಫ್ಯಾಮಿಲಿ ಕಾರು ಮಹೀಂದ್ರಾ ಎಕ್ಸ್ಯುವಿ700 ಖರೀದಿಸುವವರಿಗೆ ಸಿಹಿಸುದ್ದಿ.. ಇನ್ನೂ ತಿಂಗಳೇ ಸಾಕು!
- 2 hrs ago Mahindra: ದೊಡ್ಡ ಅಪಘಾತ ತಪ್ಪಿಸಿತು XUV700 ಕಾರಿನ ಈ ಸೇಫ್ಟಿ ಫೀಚರ್: ಎಲ್ಲರೂ ಸೇಫ್!
Don't Miss!
- News Lok Sabha Election: ರಾಜಕೀಯ ಅಖಾಡದಲ್ಲಿ ನಕಲಿ ಅಭ್ಯರ್ಥಿಗಳ ಸೌಂಡ್ ಜೋರು: ಅಖಾಡದಲ್ಲಿ ನಕಲಿ ರಾಹುಲ್ ಗಾಂಧಿ, ಪಿಎಸ್ ಯಡಿಯೂರಪ್ಪ
- Technology ಒಪ್ಪೋ ಸಂಸ್ಥೆಯ ಈ ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ; ಆಫರ್ಗೆ ಗ್ರಾಹಕರು ಫಿದಾ!
- Sports ಐಪಿಎಲ್ನಿಂದ ದೂರವುಳಿದಿದ್ದ ಟೀಮ್ ಇಂಡಿಯಾ ವೇಗಿ ಟಿ20 ವಿಶ್ವಕಪ್ ಆಡುತ್ತಾರಾ?: ಆಟಗಾರ ಹೇಳಿದ್ದೇನು?
- Movies Sathya ; ಸತ್ಯಾ ತವರು ಮನೆಗೆ ಅವಮಾನ ಮಾಡಿದ ಕೀರ್ತನ..!
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಾರುತಿ ನೆಕ್ಸಾ ಶೋರಂನಲ್ಲಿ ಅಗ್ನಿ ಅವಘಡ- ಇಬ್ಬರು ಸಜೀವ ದಹನ
ಆಕಸ್ಮಿಕ ಅಗ್ನಿ ಅವಘಡ ಹಿನ್ನೆಲೆ ಮಾರುತಿ ನೆಕ್ಸಾ ಕಾರು ಶೋರಂ ಹೊತ್ತಿ ಉರಿದಿರುವ ಘಟನೆ ಮುಂಬೈನಲ್ಲಿ ನಡೆದಿದೆ.
ಮಾರುತಿ ನೆಕ್ಸಾ ಕಾರು ಶೋರಂನಲ್ಲಿ ಸಂಭವಿಸಿದ ಅಗ್ನಿಅವಘಡದಲ್ಲಿ ಇಬ್ಬರು ಕಾರ್ಮಿಕರು ಸಜೀವ ದಹನವಾಗಿರುವ ಘಟನೆ ಮುಂಬೈನಲ್ಲಿ ನಡೆದಿದ್ದು, ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಬೆಳ್ಳಂಬೆಳಗ್ಗೆ 5 ಗಂಟೆಗೆ ಈ ಘಟನೆ ನಡೆದಿದ್ದು, ಕಾರು ಶೋರಂನಲ್ಲಿ ತಂಗಿದ್ದ ಇಬ್ಬರು ಕಾರ್ಮಿಕರು ಅಗ್ನಿ ಅವಘಡದಲ್ಲಿ ಸಿಲುಕಿ ಸಾವನ್ನಪ್ಪಿದ್ದಾರೆ.
ಪ್ರಾಥಮಿಕ ವರದಿಗಳ ಪ್ರಕಾರ ಘಟನೆಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ಹೇಳಲಾಗುತ್ತಿದ್ದು, ತನಿಖೆ ಪೂರ್ಣಗೊಂಡ ನಂತರವೇ ಘಟನೆಗೆ ನಿಖರ ಕಾರಣ ತಿಳಿಯಲಿದೆ.
ಇನ್ನು ಬೆಂಕಿಯ ಕೆನ್ನಾಲಿಗೆಯನ್ನು ತಡೆಯಲು ಹರಸಾಹಸ ಪಟ್ಟ ಅಗ್ನಿಶಾಮಕ ದಳ ಸಿಬ್ಬಂದಿ, ಬೆಂಕಿ ಅವಘಡದಲ್ಲಿ ಸಿಲುಕಿದ್ದ ಕಾರ್ಮಿಕರನ್ನು ರಕ್ಷಿಸಲು ಪಟ್ಟ ಸಾಹಸ ಅಷ್ಟಿಷ್ಟಲ್ಲ.
ಅದರ ಹೊರತಾಗಿಯೂ ಇಬ್ಬರು ಕಾರ್ಮಿಕರು ಬೆಂಕಿ ಜ್ವಾಲೆಗೆ ಶೋರಂ ಒಳಭಾಗದಲ್ಲೇ ಬೆಂದು ಹೋಗಿದ್ದು, ಸಾವನ್ನಪ್ಪಿದ ಕಾರ್ಮಿಕರು ಯಾರು ಎಂಬುದು ಇನ್ನು ಪತ್ತೆಯಾಗಿಲ್ಲವಾದರೂ ಸೆಕ್ಯೂರಿಟಿ ಗಾರ್ಡ್ ಎಂಬುವುದು ಮಾತ್ರ ತಿಳಿದು ಬಂದಿದೆ.
ಈ ಮಧ್ಯೆ ಘಟನೆ ನಡೆಯುತ್ತಿದ್ದಂತೆ ಶೋರಂ ಮಾಲೀಕನನ್ನು ವಶಕ್ಕೆ ಪಡೆದಿರುವ ಪೊಲೀಸರು, ಸುರಕ್ಷಾ ಕ್ರಮಗಳನ್ನು ಕೈಗೊಳ್ಳದಿರುವ ಬಗ್ಗೆ ತನಿಖೆ ನಡೆಸಿದ್ದಾರೆ. ಹೀಗಾಗಿ ಘಟನೆಗೆ ಮಾಲೀಕನ್ನೇ ಹೊಣೆ ಮಾಡಲಾಗಿದ್ದು, ಕಠಿಣ ಕ್ರಮ ಕೈಗೊಳ್ಳುವ ಸಾಧ್ಯತೆಗಳಿವೆ.
ಆದ್ರೆ ಅದೇನೇ ಇರಲಿ ಶೋರಂನಲ್ಲಿ ಸರಿಯಾದ ಸುರಕ್ಷಾ ಕ್ರಮ ಇದ್ದಿದ್ದರೇ ಇಬ್ಬರು ಅಮಾಯಕರ ಜೀವ ಉಳಿಯುತ್ತಿತ್ತು. ಹೀಗಾಗಿ ಇಗಲಾದ್ರೂ ಸುರಕ್ಷಾ ಕ್ರಮಗಳನ್ನು ಕೈಗೊಳ್ಳುವಂತೆ ಹೊಸ ಮಾರ್ಗಸೂಚಿಗಳನ್ನು ರೂಪಿಸಬೇಕಿರುವ ಪೊಲೀಸರು, ಇಂತವರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕಿದೆ.