Just In
- 38 min ago ಪ್ರಸಿದ್ಧ ಪುಣ್ಯಕ್ಷೇತ್ರ ಶೃಂಗೇರಿ ಶಾರದಾಂಬಾ ದರ್ಶನಕ್ಕೆ ತೆರಳಬೇಕೇ.. ಹಾಗಾದರೆ ಈ ಸ್ಟೋರಿ ನೋಡಿ
- 1 hr ago ಭರ್ಜರಿ ಸಿಹಿಸುದ್ದಿ: ಸ್ಕೋಡಾ ಕೊಡಿಯಾಕ್ ಎಸ್ಯುವಿಯ ಮೇಲೆ ಭರ್ಜರಿ ಡಿಸ್ಕೌಂಟ್
- 2 hrs ago Maruti: ಜಪಾನ್ನಲ್ಲಿ ಗರಿಷ್ಟ ಗುಣಮಟ್ಟದ ಸ್ವಿಫ್ಟ್ ಕಾರು! ಭಾರತಕ್ಕೆ ಮಾತ್ರ ಕಳಪೆ ಗುಣಮಟ್ಟ ಏಕೆ?
- 2 hrs ago ಹೊಸ ಜೀಪ್ ರಾಂಗ್ಲರ್ ಸಂಪೂರ್ಣ ರಿವ್ಯೂ ವಿಡಿಯೋ: ಆಫ್ರೋಡ್ನಲ್ಲಿ ಇದನ್ನು ಮೀರಿಸುವವರಿಲ್ಲ!
Don't Miss!
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Lifestyle ಹನುಮಂತನ ಪವಾಡ: ಈ ದೇವಾಲಯದಲ್ಲಿ ಹನುಮಾನ್ ಮೂರ್ತಿ ವರ್ಷದಿಂದ ವರ್ಷಕ್ಕೆ ಎತ್ತರ ಬೆಳೆಯುತ್ತಿದೆ!
- News ಮೀಸಲಾತಿ ಅಸ್ತ್ರ ಪ್ರಯೋಗಿಸಿದ ಮೋದಿ; ಮುಸ್ಲಿಂ ಸಮುದಾಯಕ್ಕೆ 4% ಮೀಸಲಾತಿ: ಸಿದ್ದರಾಮಯ್ಯ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Technology Qubo InstaView ವಿಡಿಯೋ ಡೋರ್ ಫೋನ್ ಲಾಂಚ್!..ಬೆಲೆ ಎಷ್ಟು, ಫೀಚರ್ಸ್ ಏನಿವೆ?
- Movies ತಮನ್ನಾ ಪಾಲಿಗೆ 'ದುಬಾರಿ' ಆಯಿತು 'ಪ್ರಚಾರ' ; ಮಿಲ್ಕಿ ಬ್ಯೂಟಿಯನ್ನ ವಿಚಾರಣೆಗೆ ಕರೆದ ಸೈಬರ್ ಇಲಾಖೆ..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
2017ರ ಮಾರುತಿ ಸುಜುಕಿ ದಕ್ಷಿಣ ಡೇರ್ ರ್ಯಾಲಿ- ಪ್ರಶಸ್ತಿಗಾಗಿ ಅಂತಿಮ ಹಂತದಲ್ಲಿ ರೋಚಕ ಹಣಾಹಣಿ
ಮೊಬಿಲ್ ಒನ್ ಸಂಸ್ಥೆಯ ನೇತೃತ್ವದಲ್ಲಿ ನಡೆಯುತ್ತಿರುವ 2017ರ ಮಾರುತಿ ಸುಜುಕಿ ದಕ್ಷಿಣ ಡೇರ್ ಮೋಟಾರ್ ರ್ಯಾಲಿಯು ಹಲವು ವಿಶೇಷತೆಗಳಿಗೆ ಕಾರಣವಾಗಿದ್ದು, ನಾಲ್ಕನೇ ದಿನ ನಡೆದ ಮೋಟಾರ್ ಸ್ಪರ್ಧೆಯ ಮಹತ್ವದ ಮಾಹಿತಿ ಇಲ್ಲಿದೆ.
ಮೊಬಿಲ್ ಒನ್ ಸಂಸ್ಥೆಯ ನೇತೃತ್ವದಲ್ಲಿ ನಡೆಯುತ್ತಿರುವ 2017ರ ಮಾರುತಿ ಸುಜುಕಿ ದಕ್ಷಿಣ ಡೇರ್ ಮೋಟಾರ್ ರ್ಯಾಲಿಯು ಹಲವು ವಿಶೇಷತೆಗಳಿಗೆ ಕಾರಣವಾಗಿದ್ದು, ನಾಲ್ಕನೇ ದಿನ ನಡೆದ ಮೋಟಾರ್ ಸ್ಪರ್ಧೆಯ ಮಹತ್ವದ ಮಾಹಿತಿ ಇಲ್ಲಿದೆ.
ಬೆಂಗಳೂರಿನಿಂದ ಆರಂಭವಾಗಿರುವ 15ನೇ ಆವೃತ್ತಿಯ ದಕ್ಷಿಣ ಡೇರ್ ಮೋಟಾರ್ ರ್ಯಾಲಿಯು ಐದನೇ ದಿನಕ್ಕೆ ಕಾಲಿಟ್ಟಿದ್ದು, ನಾಲ್ಕನೇ ದಿನ ಅಂತ್ಯಕ್ಕೆ ಸೂಪರ್ ಸ್ಪೆಷಲ್ ಸ್ಪೇಜ್ ವಿಭಾಗದಲ್ಲಿ ನಡೆದ ಸ್ಪರ್ಧೆಗಳು ಭಾರೀ
ರೊಚಕತೆಯಿಂದ ಕೂಡಿದ್ದವು.
ಈ ಮೂಲಕ ಕರ್ನಾಟಕ ಗಡಿದಾಟಿರುವ ಮೋಟಾರ್ ಸ್ಪೋರ್ಟ್ ಸ್ಪರ್ಧಿಗಳು ಸದ್ಯ ಮಹಾರಾಷ್ಟ್ರದ ಕೊಲ್ಲಾಪುರ ತಲುಪಿದ್ದು, ಕುದುರೆಮಾಣಿಯಲ್ಲಿ ನಡೆದ ಕೆಸರು ಸ್ಪರ್ಧೆಗಳು ಮೋಟಾರ್ ರೇಸ್ ಸ್ಪರ್ಧಿಗಳಿಗೆ ಕುತೂಹಲ ಹುಟ್ಟಿಸಿದ್ದು ಸುಳ್ಳಲ್ಲ.
ಅಲ್ಟಿಮೆಟ್ ಕಾರು ರೇಸ್ ವಿಭಾಗ ಮತ್ತು ಅಲ್ಟಿಮೆಟ್ ಬೈಕ್ ರೇಸ್ ವಿಭಾಗಗಳಲ್ಲಿ ಸ್ಪರ್ಧೆಗಳ ನಡುವೆ ತೀವ್ರ ಹಣಾಹಣಿ ನಡೆಯುತ್ತಿದ್ದು, ನಾಲ್ಕನೇ ದಿನದ ಅಂತ್ಯಕ್ಕೆ ಒಟ್ಟು 329 ಕಿಮಿ ದೂರವನ್ನು ಕ್ರಮಿಸಿರುವ ರ್ಯಾಲಿಯು ಇಂದು ನಿಗದಿತ ಗುರಿ ತಲುಪಲಿದೆ.
ಅಲ್ಟಿಮೇಟ್ ಕಾರುಗಳು ವಿಭಾಗದಲ್ಲಿ ಮಾರುತಿ ಸುಜುಕಿ ತಂಡದ ಸುರೇಶ್ ರಾಣಾ, ಅಶ್ವಿನ್ ನಾಯ್ಕ್ ಪ್ರಥಮ ಸ್ಥಾನದಲ್ಲೇ ಮುನ್ನಡೆ ಕಾಯ್ದುಕೊಂಡಿದ್ದು, ಎನ್ಎಸ್ ನಿಜಾಮಿ, ಸಮರ್ಥ್ ಯಾದವ್ ಎರಡನೇ ಸ್ಥಾನಕ್ಕೆ ಮತ್ತು ಸಂದೀಪ್ ಶರ್ಮಾ, ಕರಣ್ ಆಚಾರ್ಯ ಮೂರನೇ ಸ್ಥಾನದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಅದೇ ರೀತಿಯಾಗಿ ಅಲ್ಟಿಮೆಟ್ ಬೈಕ್ ವಿಭಾಗದಲ್ಲಿ ಆರ್.ನಟರಾಜ್ ಪ್ರಥಮ ಸ್ಥಾನದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಎರಡನೇ ಸ್ಥಾನದಲ್ಲಿ ಅಬ್ದುಲ್ ವಾಹೀದ್ ಮತ್ತು ಮೂರನೇ ಸ್ಥಾನದಲ್ಲಿ ಸಂಜಯ್ ಕುಮಾರ್ ಮುನ್ನಡೆ ಸಾಧಿಸಿದ್ದಾರೆ.
ಇನ್ನು ಹತ್ತು ಹಲವು ಕಸರತ್ತುಗಳ ಮೂಲಕ ಸ್ಪರ್ಧೆಯ ಆರಂಭದ ಸ್ಥಳದಿಂದ 2 ಸಾವಿರ ಕಿ.ಮಿ ಸಾಗಿರುವ ಮೋಟಾರ್ ಸ್ಪರ್ಧಿಗಳು ಇಂದು ಅಂತಿಮ ಹಂತವನ್ನು ತಲುಪಲಿದ್ದು, ದಿನದ ಅಂತ್ಯಕ್ಕೆ ಮಹತ್ವದ ಫಲೀತಾಂಶ ಹೊರಬಿಳಲಿದೆ.