Just In
- 16 min ago ಅಡ್ವೆಂಚರ್ ಬೈಕ್ ಪ್ರಿಯರಿಗೆ ಸಿಹಿಸುದ್ದಿ: ಬಿಡುಗಡೆಗೆ ಸಜ್ಜಾದ ಸುಜುಕಿ V-Strom 800 DE ಬೈಕ್
- 18 min ago Maruti Suzuki: 2024ರ ಮಾರುತಿ ಸ್ವಿಫ್ಟ್ ವಿಶೇಷತೆಗಳು: ಸನ್ರೂಫ್, 35 ಕಿ.ಮೀ ಮೈಲೇಜ್!
- 1 hr ago Hyundai Creta: ಜನಪ್ರಿಯ ಹ್ಯುಂಡೈ ಕ್ರೆಟಾ ಕಾರನ್ನು ಮನೆಗೆ ತರಬೇಕೇ.. ಆನ್-ರೋಡ್ ಬೆಲೆ ಎಷ್ಟು? EMI ಏನು?
- 1 hr ago ಯುಎಸ್ಎ, ಕೆನಡಾಗೂ ಕಾಲಿಟ್ಟ ಭಾರತೀಯ ಬೈಕ್: ಮುಂದುವರೆದ ವಿಶ್ವಗುರು ಭಾರತದ ನಾಗಾಲೋಟ
Don't Miss!
- News DK Shivakumar: ಕಾಂಗ್ರೆಸ್ ಭವಿಷ್ಯದಲ್ಲಿ ನನ್ನನ್ನು ಸಿಎಂ ಮಾಡಲಿದೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Lifestyle ವಿಭಿನ್ನ ಶೈಲಿಯಲ್ಲಿ ಮೊಟ್ಟೆ ಸಾಂಬಾರ್ ಮಾಡಿ..! ಇಲ್ಲಿದೆ ಸಿಂಪಲ್ ಅಡುಗೆ
- Movies STD ಬೂತ್ನಲ್ಲಿ ಕೆಲಸ ಮಾಡುವಾಗ 500 ರೂ. ಸಂಬಳ; ಶೋ ಆರಂಭಿಸಿದ ಮೇಲೆ ಗಳಿಸಿದ್ದೆಷ್ಟು ಕೋಟಿ?
- Sports IPL 2024: ಕೆಕೆಆರ್ ವಿರುದ್ಧದ ಪಂದ್ಯಕ್ಕೂ ಮುನ್ನ ಕ್ರಿಕೆಟ್ ಬಿಟ್ಟು ಆರ್ಸಿಬಿ ಆಟಗಾರರು ಮಾಡಿದ್ದೇನು?
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಾಳೆ 'ನಮ್ಮ ಟೈಗರ್' ಕ್ಯಾಬ್ ಆ್ಯಪ್ ಸೇವೆ ಲೋಕಾರ್ಪಣೆ; ಎಚ್.ಡಿ.ಕುಮಾರಸ್ವಾಮಿ
ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರ ಮಾರ್ಗದರ್ಶನದಲ್ಲಿ ಹೊರಬರುತ್ತಿರುವ ನೂತನ ಕ್ಯಾಬ್ ಸೇವೆ 'ನಮ್ಮ ಟೈಗರ್ ಕ್ಯಾಬ್' ಈ ತಿಂಗಳ 29ಕ್ಕೆ ಬಿಡುಗಡೆಯಾಗುತ್ತಿದೆ.
ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರ ಮಾರ್ಗದರ್ಶನದಲ್ಲಿ ಹೊರಬರುತ್ತಿರುವ ನೂತನ ಕ್ಯಾಬ್ ಸೇವೆ 'ನಮ್ಮ ಟೈಗರ್ ಕ್ಯಾಬ್' ಈ ತಿಂಗಳ 29ಕ್ಕೆ ಬಿಡುಗಡೆಯಾಗುತ್ತಿದೆ.
ಸದ್ಯ, ಮೊಬೈಲ್ ಆ್ಯಪ್ ಆಧಾರಿತ ಕ್ಯಾಬ್ ಸೇವೆ ನೀಡುತ್ತಿರುವ ಓಲಾ ಹಾಗೂ ಉಬರ್ ಸಂಸ್ಥೆಗಳಿಗೆ ಸೆಡ್ಡು ಹೊಡೆದು ಎಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಆರಂಭಿಸಿರುವ ಹುಲಿ ಟೆಕ್ನಾಲಜೀಸ್ ಪ್ರೈವೆಟ್ ಲಿಮಿಟೆಡ್ ಸಂಸ್ಥೆಯ ‘ನಮ್ಮ ಟೈಗರ್ ಕ್ಯಾಬ್ ಆ್ಯಪ್' ಲೋಕಾರ್ಪಣೆ ಕಾರ್ಯಕ್ರಮ ನ. 29 ರಂದು ನಡೆಯಲಿದೆ.
29ರಂದು ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಪುರಭವನದಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ನೂತನ ಆ್ಯಪ್ ಲೋಕಾರ್ಪಣೆಗೊಳಿಸಲಿದ್ದಾರೆ.
ನಗರದ ಹೆಣ್ಣೂರು ರಸ್ತೆಯಲ್ಲಿ ಈಗಾಗಲೇ ಕಚೇರಿ ನಿರ್ಮಾಣಕಾರ್ಯ ಮುಗಿದಿದ್ದು, ‘ಹುಲಿ ಟೆಕ್ನಾಲಜೀಸ್' ಎಂಬ ಹೊಸ ಕಂಪನಿಯು, ಕ್ಯಾಬ್ ಸೇವೆ ಒದಗಿಸುತ್ತಿರುವ ಓಲಾ ಹಾಗೂ ಉಬರ್ ಕಂಪೆನಿಗಳಿಗೆ ಪೈಪೋಟಿ ನೀಡಲು ಮುಂದಾಗಿದೆ.
ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಸಂಸ್ಥೆಯ ಲಾಂಛನ ಅನಾವರಣಗೊಳಿಸಲಿದ್ದು, ಕಾರ್ಯಕ್ರಮದಲ್ಲಿ ಜೆಡಿಎಸ್ ರಾಷ್ಟ್ರೀಯ ವಕ್ತಾರ ಜಫ್ರುಲ್ಲಾಖಾನ್, ಉಪಮೇಯರ್ ಪದ್ಮಾವತಿ ನರಸಿಂಹಮೂರ್ತಿ, ಡಿಸಿಪಿ ಅಜಯ್ ಹಿಲೊರಿ ಮತ್ತಿತರರು ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಚಾಲಕರ ನಿತ್ಯದ ದುಡಿಮೆಯಲ್ಲಿ ಶೇ 12ರಷ್ಟು ಕಮಿಷನ್ ಪಡೆಯಲು 'ನಮ್ಮ ಟೈಗರ್' ಆಡಳಿತ ಮಂಡಳಿ ತೀರ್ಮಾನಿಸಿದೆ.'ಚಾಲಕರಿಗೆ ತಲಾ ₹5 ಲಕ್ಷ ಮೊತ್ತದ ವಿಮೆ, ಅಪಘಾತ ವಿಮೆ ಹಾಗೂ ₹2 ಲಕ್ಷ ವೈದ್ಯಕೀಯ ವಿಮೆ ಮಾಡಿಸಲಿದೆ.
ನಗರದಲ್ಲಿ ಓಲಾ ಹಾಗೂ ಉಬರ್ ಟ್ಯಾಕ್ಸಿ ಸೇವೆ ಆರಂಭಗೊಳ್ಳುತ್ತಿದ್ದಂತೆ ಬಹುತೇಕ ಟ್ಯಾಕ್ಸಿ ಮಾಲೀಕರು ತಮ್ಮ ತಮ್ಮ ಕ್ಯಾಬ್ಗಳನ್ನು ಈ ಆ್ಯಪ್ ಆಧಾರಿತ ಸಂಸ್ಥೆಯೊಂದಿಗೆ ಅಟ್ಯಾಚ್ ಮಾಡಿಕೊಂಡಿದ್ದರು. ಆರಂಭದಲ್ಲಿ ಸಂತಸದಿಂದಲೇ ಸೇವೆ ನೀಡುತ್ತಿದ್ದ ಕ್ಯಾಬ್ ಡ್ರೈವರ್ಗಳು ಇದೀಗ ಸಂಸ್ಥೆಯ ಆರ್ಥಿಕ ಕಿರುಕುಳದಿಂದ ಬೇಸತ್ತು ಹೊಸ ಸಂಸ್ಥೆಯನ್ನೇ ಹುಟ್ಟುಹಾಕಲು ಮುಂದಾಗಿರುವುದು ಮೆಚ್ಚುವಂತ ಸಂಗತಿ.
ಮೊದಲ ಹಂತವಾಗಿ ಬೆಂಗಳೂರಿನಲ್ಲಿ ಮಾತ್ರ ಈ ಕಂಪನಿ ಕಾರ್ಯ ನಿರ್ವಹಿಸಲಿದ್ದು, ಇಷ್ಟು ಮಾತ್ರವಲ್ಲದೇ ದೇಶದ ಪ್ರಮುಖ ಐಟಿ ನಗರಗಳಲ್ಲಿನ ಸೇವೆ ಬಳಿಕ ತಮ್ಮ ವ್ಯವಹಾರವನ್ನು ಅಂತಾರಾಷ್ಟ್ರೀಯ ಮಟ್ಟಕ್ಕೂ ವಿಸ್ತರಿಸಲು ಚಿಂತನೆ ನಡೆಸಿದೆ.