ವಾಹನಗಳ ಇನ್ಶುರೆನ್ಸ್ ನವೀಕರಣಕ್ಕೆ ಹೊಸ ರೂಲ್ಸ್ ಜಾರಿ ಮಾಡಿದ ಸುಪ್ರೀಂ
ನಗರ ಪ್ರದೇಶಗಳಲ್ಲಿ ಹೆಚ್ಚುತ್ತಿರುವ ಮಾಲಿನ್ಯ ತಡೆ ಉದ್ದೇಶದಿಂದ ಇನ್ಶುರೆನ್ಸ್ ಕಂಪನಿಗಳಿಗೆ ಕಟ್ಟುನಿಟ್ಟಿನ ಆದೇಶ ಹೊರಡಿಸಿರುವ ಸುಪ್ರೀಂಕೋರ್ಟ್, ಮಾಲಿನ್ಯ ಪರೀಕ್ಷೆ ಕೈಗೊಳ್ಳದ ವಾಹನ ಮಾಲೀಕರಿಗೆ ಬಿಸಿ ಮುಟ್ಟಿಸಿದೆ.
ನಗರ ಪ್ರದೇಶಗಳಲ್ಲಿ ಹೆಚ್ಚುತ್ತಿರುವ ಮಾಲಿನ್ಯ ತಡೆ ಉದ್ದೇಶದಿಂದ ಇನ್ಶುರೆನ್ಸ್ ಕಂಪನಿಗಳಿಗೆ ಕಟ್ಟುನಿಟ್ಟಿನ ಆದೇಶ ಹೊರಡಿಸಿರುವ ಸುಪ್ರೀಂಕೋರ್ಟ್, ಮಾಲಿನ್ಯ ಪರೀಕ್ಷೆ ಕೈಗೊಳ್ಳದ ವಾಹನ ಮಾಲೀಕರಿಗೆ ಬಿಸಿ ಮುಟ್ಟಿಸಿದೆ.

ಇನ್ಮುಂದೆ ಯಾವುದೇ ಕಾರಣಕ್ಕೂ ನೀವು ಪೊಲ್ಯೂಷನ್ ಅಂಡರ್ ಕಂಟ್ರೋಲ್ ಸರ್ಟಿಫಿಕೇಟ್ ಇಲ್ಲದೇ ವಾಹನಗಳ ಇನ್ಶುರೆನ್ಸ್ ನವೀಕರಣ ಮಾಡಿಸಲು ಸಾಧ್ಯವೇ ಇಲ್ಲ. ಯಾಕೇಂದ್ರೆ ಇನ್ಶುರೆನ್ಸ್ ನವೀಕರಣಕ್ಕೆ ಪೊಲ್ಯೂಷನ್ ಅಂಡರ್ ಕಂಟ್ರೋಲ್ ಸರ್ಟಿಫಿಕೇಟ್ ಕಡ್ಡಾಯ ಮಾಡಲಾಗಿದೆ.

ಹೀಗಾಗಿ ಪೊಲ್ಯೂಷನ್ ಅಂಡರ್ ಕಂಟ್ರೋಲ್ ಸರ್ಟಿಫಿಕೇಟ್ ಇಲ್ಲದೇ ಇನ್ಶುರೆನ್ಸ್ ಕಂಪೆನಿಗಳು ಇನ್ಮುಂದೆ ಇನ್ಶುರೆನ್ಸ್ ನವೀಕರಣ ಮಾಡಬಾರದು ಎಂದು ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ ನೀಡಿದೆ.

ಇದಲ್ಲದೇ ಪ್ರತಿಯೊಂದು ಪೆಟ್ರೋಲ್ ಬಂಕ್ಗಳು ಕಡ್ಡಾಯವಾಗಿ ಪೊಲ್ಯೂಷನ್ ಅಂಡರ್ ಕಂಟ್ರೋಲ್ ಸೆಂಟರ್ಗಳನ್ನು ಹೊಂದಿರಬೇಕೆಂದಿರುವ ಸುಪ್ರೀಂಕೋರ್ಟ್, ನಾಲ್ಕು ವಾರಗಳ ಒಳಗಾಗಿ ಹೊಸ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಕೇಂದ್ರಕ್ಕೆ ಸೂಚನೆ ನೀಡಿದೆ.

ಹೊಸ ನಿಯಮ ಯಾಕೆ?
ನಗರ ಪ್ರದೇಶಗಳಲ್ಲಿ ದಿನದಿಂದ ದಿನಕ್ಕೆ ಮಾಲಿನ್ಯ ಪ್ರಮಾಣ ಹೆಚ್ಚುತ್ತಿದ್ದು, ಪರಿಸರ ಮಾಲಿನ್ಯ ಮಂಡಳಿ ನೀಡಿದ ಸಲಹೆ ಮೇರೆಗೆ ಸುಪ್ರೀಂಕೋರ್ಟ್ ಈ ಆದೇಶ ನೀಡಿದೆ.
Recommended Video


ಇನ್ನು ಹೊಸ ಆದೇಶವು ಸದ್ಯ ದೆಹಲಿ ಮತ್ತು ದೆಹಲಿ ಎನ್ಸಿಆರ್ ಪ್ರದೇಶಗಳಿಗೆ ಮಾತ್ರ ಅನ್ವಯವಾಗಲಿದ್ದು, ತದನಂತರವಷ್ಟೇ ದೇಶದ ಪ್ರಮುಖ ನಗರಗಳಿಗೂ ಹೊಸ ಕಾಯ್ದೆಯನ್ನು ಅನುಷ್ಠಾನ ಮಾಡುವ ಗುರಿಹೊಂದಲಾಗಿದೆ.

ಡ್ರೈವ್ ಸ್ಪಾರ್ಕ್ ಅಭಿಪ್ರಾಯ
ಪರಿಸರ ಮಾಲಿನ್ಯ ತಡೆ ಉದ್ದೇಶಕ್ಕಾಗಿ ಸುಪ್ರೀಂಕೋರ್ಟ್ ಸೂಚಿಸಿರುವ ಹೊಸ ನಿಯಮ ಮಹತ್ವದ್ದಾಗಿದ್ದು, ದೆಹಲಿಯಲ್ಲಿ ಅಷ್ಟೇ ಅಲ್ಲದೇ ಇತರೆ ಪ್ರಮುಖಗಳಲ್ಲೂ ಕೂಡಲೇ ಹೊಸ ನಿಯಮವನ್ನು ಕಡ್ಡಾಯಗೊಳಿಸುವ ಅಗತ್ಯವಿದೆ.


Click it and Unblock the Notifications








