Just In
- 1 hr ago Triber: 7 ಜನ ಹೋಗಬಹುದಾದ ರೆನಾಲ್ಟ್ ಟ್ರೈಬರ್ ಖರೀದಿಸಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
- 14 hrs ago ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- 17 hrs ago Kia Carens: ಗ್ಲೋಬಲ್ ಎನ್ಸಿಎಪಿ ಸುರಕ್ಷತಾ ಪರೀಕ್ಷೆ.. 3-ಸ್ಟಾರ್ ಪಡೆದ ಕಿಯಾ ಕ್ಯಾರೆನ್ಸ್
- 17 hrs ago ಈ ಬೈಕ್ಗಳನ್ನು ಗ್ರಾಹಕರು ಮುಗಿಬಿದ್ದು ಖರೀದಿಸುತ್ತಿದ್ದಾಗಲೇ ಬೆಲೆ ಏರಿಕೆ ಮಾಡಿ ಶಾಕ್ ಕೊಟ್ಟ ಟ್ರಯಂಫ್
Don't Miss!
- Finance April 24 Gold Rate: ಚಿನ್ನದ ಬೆಲೆ ಇಳಿಕೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Technology Infinix: ನಾಳೆ ಇನ್ಫಿನಿಕ್ಸ್ ನೋಟ್ 40 ಪ್ರೊ+ 5G ಫೋನ್ ಖರೀದಿಗೆ ಲಭ್ಯ..108ಎಂಪಿ ಕ್ಯಾಮೆರಾ!
- News Gold Rates Today: ನಿನ್ನೆಗಿಂತ ಕೊಂಚ ಇಳಿಕೆಯಾದ ಚಿನ್ನದ ಬೆಲೆ, ಯಾವ ನಗರದಲ್ಲಿ ಎಷ್ಟು?
- Lifestyle ಹೋಟೆಲ್ ರುಚಿಯ ಪನೀರ್ ಪೆಪ್ಪರ್ ಫ್ರೈ ಮನೆಯಲ್ಲೇ ಮಾಡಿ..! 10 ನಿಮಿಷದಲ್ಲಿ ರೆಡಿ..!
- Sports CSK vs LSG IPL 2024: ಐಪಿಎಲ್ನಲ್ಲಿ ಈ ದಾಖಲೆ ಮಾಡಿದ ಮೊದಲ ಸಿಎಸ್ಕೆ ನಾಯಕ ರುತುರಾಜ್ ಗಾಯಕ್ವಾಡ್
- Movies 'KGF-2' ಚಿತ್ರದಿಂದ ಸಿಕ್ಕಿದ್ದು 200 ಕೋಟಿ ರೂ.; 'ಟಾಕ್ಸಿಕ್', 'ರಾಮಾಯಣ'ಕ್ಕೆ ಯಶ್ 50-50 ಡೀಲ್!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಾಹನಗಳ ಇನ್ಶುರೆನ್ಸ್ ನವೀಕರಣಕ್ಕೆ ಹೊಸ ರೂಲ್ಸ್ ಜಾರಿ ಮಾಡಿದ ಸುಪ್ರೀಂ
ನಗರ ಪ್ರದೇಶಗಳಲ್ಲಿ ಹೆಚ್ಚುತ್ತಿರುವ ಮಾಲಿನ್ಯ ತಡೆ ಉದ್ದೇಶದಿಂದ ಇನ್ಶುರೆನ್ಸ್ ಕಂಪನಿಗಳಿಗೆ ಕಟ್ಟುನಿಟ್ಟಿನ ಆದೇಶ ಹೊರಡಿಸಿರುವ ಸುಪ್ರೀಂಕೋರ್ಟ್, ಮಾಲಿನ್ಯ ಪರೀಕ್ಷೆ ಕೈಗೊಳ್ಳದ ವಾಹನ ಮಾಲೀಕರಿಗೆ ಬಿಸಿ ಮುಟ್ಟಿಸಿದೆ.
ನಗರ ಪ್ರದೇಶಗಳಲ್ಲಿ ಹೆಚ್ಚುತ್ತಿರುವ ಮಾಲಿನ್ಯ ತಡೆ ಉದ್ದೇಶದಿಂದ ಇನ್ಶುರೆನ್ಸ್ ಕಂಪನಿಗಳಿಗೆ ಕಟ್ಟುನಿಟ್ಟಿನ ಆದೇಶ ಹೊರಡಿಸಿರುವ ಸುಪ್ರೀಂಕೋರ್ಟ್, ಮಾಲಿನ್ಯ ಪರೀಕ್ಷೆ ಕೈಗೊಳ್ಳದ ವಾಹನ ಮಾಲೀಕರಿಗೆ ಬಿಸಿ ಮುಟ್ಟಿಸಿದೆ.
ಇನ್ಮುಂದೆ ಯಾವುದೇ ಕಾರಣಕ್ಕೂ ನೀವು ಪೊಲ್ಯೂಷನ್ ಅಂಡರ್ ಕಂಟ್ರೋಲ್ ಸರ್ಟಿಫಿಕೇಟ್ ಇಲ್ಲದೇ ವಾಹನಗಳ ಇನ್ಶುರೆನ್ಸ್ ನವೀಕರಣ ಮಾಡಿಸಲು ಸಾಧ್ಯವೇ ಇಲ್ಲ. ಯಾಕೇಂದ್ರೆ ಇನ್ಶುರೆನ್ಸ್ ನವೀಕರಣಕ್ಕೆ ಪೊಲ್ಯೂಷನ್ ಅಂಡರ್ ಕಂಟ್ರೋಲ್ ಸರ್ಟಿಫಿಕೇಟ್ ಕಡ್ಡಾಯ ಮಾಡಲಾಗಿದೆ.
ಹೀಗಾಗಿ ಪೊಲ್ಯೂಷನ್ ಅಂಡರ್ ಕಂಟ್ರೋಲ್ ಸರ್ಟಿಫಿಕೇಟ್ ಇಲ್ಲದೇ ಇನ್ಶುರೆನ್ಸ್ ಕಂಪೆನಿಗಳು ಇನ್ಮುಂದೆ ಇನ್ಶುರೆನ್ಸ್ ನವೀಕರಣ ಮಾಡಬಾರದು ಎಂದು ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ ನೀಡಿದೆ.
ಇದಲ್ಲದೇ ಪ್ರತಿಯೊಂದು ಪೆಟ್ರೋಲ್ ಬಂಕ್ಗಳು ಕಡ್ಡಾಯವಾಗಿ ಪೊಲ್ಯೂಷನ್ ಅಂಡರ್ ಕಂಟ್ರೋಲ್ ಸೆಂಟರ್ಗಳನ್ನು ಹೊಂದಿರಬೇಕೆಂದಿರುವ ಸುಪ್ರೀಂಕೋರ್ಟ್, ನಾಲ್ಕು ವಾರಗಳ ಒಳಗಾಗಿ ಹೊಸ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಕೇಂದ್ರಕ್ಕೆ ಸೂಚನೆ ನೀಡಿದೆ.
ಹೊಸ ನಿಯಮ ಯಾಕೆ?
ನಗರ ಪ್ರದೇಶಗಳಲ್ಲಿ ದಿನದಿಂದ ದಿನಕ್ಕೆ ಮಾಲಿನ್ಯ ಪ್ರಮಾಣ ಹೆಚ್ಚುತ್ತಿದ್ದು, ಪರಿಸರ ಮಾಲಿನ್ಯ ಮಂಡಳಿ ನೀಡಿದ ಸಲಹೆ ಮೇರೆಗೆ ಸುಪ್ರೀಂಕೋರ್ಟ್ ಈ ಆದೇಶ ನೀಡಿದೆ.
Recommended Video
ಇನ್ನು ಹೊಸ ಆದೇಶವು ಸದ್ಯ ದೆಹಲಿ ಮತ್ತು ದೆಹಲಿ ಎನ್ಸಿಆರ್ ಪ್ರದೇಶಗಳಿಗೆ ಮಾತ್ರ ಅನ್ವಯವಾಗಲಿದ್ದು, ತದನಂತರವಷ್ಟೇ ದೇಶದ ಪ್ರಮುಖ ನಗರಗಳಿಗೂ ಹೊಸ ಕಾಯ್ದೆಯನ್ನು ಅನುಷ್ಠಾನ ಮಾಡುವ ಗುರಿಹೊಂದಲಾಗಿದೆ.
ಡ್ರೈವ್ ಸ್ಪಾರ್ಕ್ ಅಭಿಪ್ರಾಯ
ಪರಿಸರ ಮಾಲಿನ್ಯ ತಡೆ ಉದ್ದೇಶಕ್ಕಾಗಿ ಸುಪ್ರೀಂಕೋರ್ಟ್ ಸೂಚಿಸಿರುವ ಹೊಸ ನಿಯಮ ಮಹತ್ವದ್ದಾಗಿದ್ದು, ದೆಹಲಿಯಲ್ಲಿ ಅಷ್ಟೇ ಅಲ್ಲದೇ ಇತರೆ ಪ್ರಮುಖಗಳಲ್ಲೂ ಕೂಡಲೇ ಹೊಸ ನಿಯಮವನ್ನು ಕಡ್ಡಾಯಗೊಳಿಸುವ ಅಗತ್ಯವಿದೆ.