Just In
- 21 min ago Tata: ಒಬ್ಬರೇ ಬಂದು 2 ಸಾವಿರ ಟಾಟಾ ಎಲೆಕ್ಟ್ರಿಕ್ ಕಾರುಗಳನ್ನು ಖರೀದಿಸಿ ಹೋಗಿಬಿಟ್ಟರು!
- 1 hr ago ಪ್ರಸಿದ್ಧ ಪುಣ್ಯಕ್ಷೇತ್ರ ಶೃಂಗೇರಿ ಶಾರದಾಂಬಾ ದರ್ಶನಕ್ಕೆ ತೆರಳಬೇಕೇ.. ಹಾಗಾದರೆ ಈ ಸ್ಟೋರಿ ನೋಡಿ
- 3 hrs ago ಭರ್ಜರಿ ಸಿಹಿಸುದ್ದಿ: ಸ್ಕೋಡಾ ಕೊಡಿಯಾಕ್ ಎಸ್ಯುವಿಯ ಮೇಲೆ ಭರ್ಜರಿ ಡಿಸ್ಕೌಂಟ್
- 3 hrs ago Maruti: ಜಪಾನ್ನಲ್ಲಿ ಗರಿಷ್ಟ ಗುಣಮಟ್ಟದ ಸ್ವಿಫ್ಟ್ ಕಾರು! ಭಾರತಕ್ಕೆ ಮಾತ್ರ ಕಳಪೆ ಗುಣಮಟ್ಟ ಏಕೆ?
Don't Miss!
- Lifestyle ಮಳೆ ನಿರೀಕ್ಷೆಯಲ್ಲಿದ್ದವರಿಗೆ ಶಾಕ್ ಕೊಟ್ಟ ಹವಾಮಾನ ಇಲಾಖೆ..!
- News ಕರ್ನಾಟಕಕ್ಕೆ ವಸೂಲಿಗೆ ಬಂದಿದ್ದ ರಣದೀಪ್ ಸುರ್ಜೇವಾಲ: ಪ್ರಹ್ಲಾದ್ ಜೋಶಿ
- Movies Lok Sabha Election 2024: ಕನ್ನಡ ತಾರೆಯರು ನಾಳೆಏಪ್ರಿಲ್ 26 ಎಲ್ಲೆಲ್ಲಿ ತಮ್ಮ ಹಕ್ಕು ಚಲಾಯಿಸುತ್ತಾರೆ?
- Technology ಮೇ 1 ರಂದು ವಿವೋ T3x 5G ಮೊಬೈಲ್ ಮತ್ತೆ ಖರೀದಿಗೆ ಲಭ್ಯ!..ಅಗ್ಗದ ಬೆಲೆ ಇದೆ!
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಾಹನಗಳ ಇನ್ಶುರೆನ್ಸ್ ನವೀಕರಣಕ್ಕೆ ಹೊಸ ರೂಲ್ಸ್ ಜಾರಿ ಮಾಡಿದ ಸುಪ್ರೀಂ
ನಗರ ಪ್ರದೇಶಗಳಲ್ಲಿ ಹೆಚ್ಚುತ್ತಿರುವ ಮಾಲಿನ್ಯ ತಡೆ ಉದ್ದೇಶದಿಂದ ಇನ್ಶುರೆನ್ಸ್ ಕಂಪನಿಗಳಿಗೆ ಕಟ್ಟುನಿಟ್ಟಿನ ಆದೇಶ ಹೊರಡಿಸಿರುವ ಸುಪ್ರೀಂಕೋರ್ಟ್, ಮಾಲಿನ್ಯ ಪರೀಕ್ಷೆ ಕೈಗೊಳ್ಳದ ವಾಹನ ಮಾಲೀಕರಿಗೆ ಬಿಸಿ ಮುಟ್ಟಿಸಿದೆ.
ನಗರ ಪ್ರದೇಶಗಳಲ್ಲಿ ಹೆಚ್ಚುತ್ತಿರುವ ಮಾಲಿನ್ಯ ತಡೆ ಉದ್ದೇಶದಿಂದ ಇನ್ಶುರೆನ್ಸ್ ಕಂಪನಿಗಳಿಗೆ ಕಟ್ಟುನಿಟ್ಟಿನ ಆದೇಶ ಹೊರಡಿಸಿರುವ ಸುಪ್ರೀಂಕೋರ್ಟ್, ಮಾಲಿನ್ಯ ಪರೀಕ್ಷೆ ಕೈಗೊಳ್ಳದ ವಾಹನ ಮಾಲೀಕರಿಗೆ ಬಿಸಿ ಮುಟ್ಟಿಸಿದೆ.
ಇನ್ಮುಂದೆ ಯಾವುದೇ ಕಾರಣಕ್ಕೂ ನೀವು ಪೊಲ್ಯೂಷನ್ ಅಂಡರ್ ಕಂಟ್ರೋಲ್ ಸರ್ಟಿಫಿಕೇಟ್ ಇಲ್ಲದೇ ವಾಹನಗಳ ಇನ್ಶುರೆನ್ಸ್ ನವೀಕರಣ ಮಾಡಿಸಲು ಸಾಧ್ಯವೇ ಇಲ್ಲ. ಯಾಕೇಂದ್ರೆ ಇನ್ಶುರೆನ್ಸ್ ನವೀಕರಣಕ್ಕೆ ಪೊಲ್ಯೂಷನ್ ಅಂಡರ್ ಕಂಟ್ರೋಲ್ ಸರ್ಟಿಫಿಕೇಟ್ ಕಡ್ಡಾಯ ಮಾಡಲಾಗಿದೆ.
ಹೀಗಾಗಿ ಪೊಲ್ಯೂಷನ್ ಅಂಡರ್ ಕಂಟ್ರೋಲ್ ಸರ್ಟಿಫಿಕೇಟ್ ಇಲ್ಲದೇ ಇನ್ಶುರೆನ್ಸ್ ಕಂಪೆನಿಗಳು ಇನ್ಮುಂದೆ ಇನ್ಶುರೆನ್ಸ್ ನವೀಕರಣ ಮಾಡಬಾರದು ಎಂದು ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ ನೀಡಿದೆ.
ಇದಲ್ಲದೇ ಪ್ರತಿಯೊಂದು ಪೆಟ್ರೋಲ್ ಬಂಕ್ಗಳು ಕಡ್ಡಾಯವಾಗಿ ಪೊಲ್ಯೂಷನ್ ಅಂಡರ್ ಕಂಟ್ರೋಲ್ ಸೆಂಟರ್ಗಳನ್ನು ಹೊಂದಿರಬೇಕೆಂದಿರುವ ಸುಪ್ರೀಂಕೋರ್ಟ್, ನಾಲ್ಕು ವಾರಗಳ ಒಳಗಾಗಿ ಹೊಸ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಕೇಂದ್ರಕ್ಕೆ ಸೂಚನೆ ನೀಡಿದೆ.
ಹೊಸ ನಿಯಮ ಯಾಕೆ?
ನಗರ ಪ್ರದೇಶಗಳಲ್ಲಿ ದಿನದಿಂದ ದಿನಕ್ಕೆ ಮಾಲಿನ್ಯ ಪ್ರಮಾಣ ಹೆಚ್ಚುತ್ತಿದ್ದು, ಪರಿಸರ ಮಾಲಿನ್ಯ ಮಂಡಳಿ ನೀಡಿದ ಸಲಹೆ ಮೇರೆಗೆ ಸುಪ್ರೀಂಕೋರ್ಟ್ ಈ ಆದೇಶ ನೀಡಿದೆ.
Recommended Video
ಇನ್ನು ಹೊಸ ಆದೇಶವು ಸದ್ಯ ದೆಹಲಿ ಮತ್ತು ದೆಹಲಿ ಎನ್ಸಿಆರ್ ಪ್ರದೇಶಗಳಿಗೆ ಮಾತ್ರ ಅನ್ವಯವಾಗಲಿದ್ದು, ತದನಂತರವಷ್ಟೇ ದೇಶದ ಪ್ರಮುಖ ನಗರಗಳಿಗೂ ಹೊಸ ಕಾಯ್ದೆಯನ್ನು ಅನುಷ್ಠಾನ ಮಾಡುವ ಗುರಿಹೊಂದಲಾಗಿದೆ.
ಡ್ರೈವ್ ಸ್ಪಾರ್ಕ್ ಅಭಿಪ್ರಾಯ
ಪರಿಸರ ಮಾಲಿನ್ಯ ತಡೆ ಉದ್ದೇಶಕ್ಕಾಗಿ ಸುಪ್ರೀಂಕೋರ್ಟ್ ಸೂಚಿಸಿರುವ ಹೊಸ ನಿಯಮ ಮಹತ್ವದ್ದಾಗಿದ್ದು, ದೆಹಲಿಯಲ್ಲಿ ಅಷ್ಟೇ ಅಲ್ಲದೇ ಇತರೆ ಪ್ರಮುಖಗಳಲ್ಲೂ ಕೂಡಲೇ ಹೊಸ ನಿಯಮವನ್ನು ಕಡ್ಡಾಯಗೊಳಿಸುವ ಅಗತ್ಯವಿದೆ.