Just In
- 4 hrs ago ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- 5 hrs ago ಎಲೆಕ್ಟ್ರಿಕ್ ಅವತಾರದಲ್ಲಿ ಬರಲಿದೆ ಹೋಂಡಾ ಆಕ್ಟಿವಾ: ಎಲೆಕ್ಟ್ರಿಕ್ ಸ್ಕೂಟರ್ಗಳ ರಾಜ ಆಗುತ್ತಾ?
- 5 hrs ago ಪ್ರೇರಣಾತ್ಮಕ ಕಥೆ: ಮನೆ ಕೆಲಸದಾಕೆಗೆ 'ಸೈಕಲ್' ಖರೀದಿಸಲು ಸಹಾಯ ಮಾಡಿದ ಮಾಲೀಕ.. ವಿಡಿಯೋ ವೈರಲ್
- 6 hrs ago ಸಣ್ಣ ಕುಟುಂಬಗಳಿಗೆ ಬೆಸ್ಟ್ ಕಾರು... 5.36 ಲಕ್ಷ ರೂ. ಬೆಲೆ... 34 ಕಿ.ಮೀ ಮೈಲೇಜ್!
Don't Miss!
- Movies ಯಾರಿಗೂ ಹೇಳ್ಬೇಡಿ ; ಬಾಲಿವುಡ್ ಯಾರಿಗೂ ಸುರಕ್ಷಿತವಲ್ಲ ಎಂದ ಪ್ರೀತಿ ಜಿಂಟಾ..!
- Sports DC vs SRH: ಟ್ರಾವಿಸ್ ಹೆಡ್, ಅಭಿಷೇಕ್ ದಾಖಲೆಯ ಜೊತೆಯಾಟ: ಡೆಲ್ಲಿ ಗೆಲುವಿಗೆ ಬೃಹತ್ ಗುರಿ
- News ಕಲೆ ಮತ್ತು ಕಲೆಗಾರ! ಪ್ರಧಾನಿ ನರೇಂದ್ರ ಮೋದಿ ಕಾಲೆಳೆದ ಸಿಎಂ ಸಿದ್ದರಾಮಯ್ಯ
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಿಂಗಾಪುರನಲ್ಲಿ 2018ರ ತನಕ ಹೊಸ ಕಾರುಗಳ ನೋಂದಣಿ ಪ್ರಕ್ರಿಯೆಗೆ ಬ್ರೇಕ್
ವಿಶ್ವಾದ್ಯಂತ ಪ್ರತಿ ದಿನ ಸಾವಿರಾರು ಹೊಸ ಹೊಸ ಕಾರುಗಳು ರಸ್ತೆಗಿಳಿಯುತ್ತಿದ್ದು, ಈ ನಡುವೆ ಹೊಸ ಕಾರುಗಳ ನೋಂದಣಿ ಪ್ರಕ್ರಿಯೆಗೆ ಸಿಂಗಾಪುರ ಸರ್ಕಾರವು ಬ್ರೇಕ್ ಹಾಕುವ ಮೂಲಕ ಭಾರೀ ಚರ್ಚೆಗೆ ಕಾರಣವಾಗಿದೆ.
ವಿಶ್ವಾದ್ಯಂತ ಪ್ರತಿ ದಿನ ಸಾವಿರಾರು ಹೊಸ ಹೊಸ ಕಾರುಗಳು ರಸ್ತೆಗಿಳಿಯುತ್ತಿದ್ದು, ಈ ನಡುವೆ ಹೊಸ ಕಾರುಗಳ ನೋಂದಣಿ ಪ್ರಕ್ರಿಯೆಗೆ ಸಿಂಗಾಪುರ ಸರ್ಕಾರವು ಬ್ರೇಕ್ ಹಾಕುವ ಮೂಲಕ ಭಾರೀ ಚರ್ಚೆಗೆ ಕಾರಣವಾಗಿದೆ.
2030ರ ವೇಳೆಗೆ ಡೀಸೆಲ್ ಮತ್ತು ಪೆಟ್ರೋಲ್ ಕಾರುಗಳನ್ನು ಸಂಪೂರ್ಣ ನಿಷೇಧಗೊಳಿಸುವ ನಿಟ್ಟಿನಲ್ಲಿ ಹೊಸ ಹೊಸ ಕ್ರಮಗಳನ್ನು ಜಾರಿಗೊಳಿಸಲಾಗುತ್ತಿದ್ದು, ಇದೀಗ ಕಾರುಗಳ ಪ್ರಮಾಣವನ್ನು ತಗ್ಗಿಸುವ ನಿಟ್ಟಿನಲ್ಲಿ ಸಿಂಗಾಪುರ ಸರ್ಕಾರವು ಮಹತ್ವದ ನಿರ್ಧಾರವನ್ನು ಕೈಗೊಂಡಿದೆ.
2018ರ ಮಾರ್ಚ್ ತನಕ ಒಂದೇ ಒಂದು ಕಾರಿನ ನೋಂದಣಿ ಪ್ರಕ್ರಿಯೆಯನ್ನು ನಡೆಸದಿರಲು ನಿರ್ಧರಿಸುವ ಸಿಂಗಾಪುರ ಸಾರಿಗೆ ಇಲಾಖೆಯು ಸಾರ್ವಜನಿಕ ಸಾರಿಗೆ ವ್ಯವಸ್ಥೆಗಳನ್ನು ಬಳಕೆ ಮಾಡುವಂತೆ ಉತ್ತೇಜನ ನೀಡುತ್ತಿದೆ.
ಇನ್ನು ಸಿಂಗಾಪುರ ಸರ್ಕಾರವು ಹೊಸ ಕಾರು ನೋಂದಣಿ ಪ್ರಕ್ರಿಯೆಗೆ ಬ್ರೇಕ್ ಹಾಕುವುದಕ್ಕೂ ಹಲವು ಕಾರಣವಾಗಿವೆ. ಯಾಕೇಂದ್ರೆ ಅಂತರ್ರಾಷ್ಟ್ರಿಯ ಮಟ್ಟದ ವಾಣಿಜ್ಯ ಚಟುವಟಿಕೆಗಳ ಕೇಂದ್ರವಾಗಿರುವ ಸಿಂಗಾಪುರನಲ್ಲಿ ದಿನಂಪ್ರತಿ ಸಾವಿರಾರು ಹೊಸ ರಸ್ತೆಗಿಳಿಯುತ್ತಿದ್ದು, ಟ್ರಾಫಿಕ್ ಸಮಸ್ಯೆ ದೊಡ್ಡ ತಲೆನೋವಾಗಿ ಪರಿಣಿಮಿಸಿದೆ.
ಜೊತೆಗೆ ಕಾರ್ ಪಾರ್ಕಿಂಗ್ ಸಮಸ್ಯೆ ಕೂಡಾ ದಿನದಿಂದ ಹೆಚ್ಚುತ್ತಿದ್ದು, ಈ ಹಿನ್ನೆಲೆ ಹೆಚ್ಚುತ್ತಿರುವ ಕಾರುಗಳ ಸಂಖ್ಯೆಯನ್ನು ತಗ್ಗಿಸಲು ಸೂಕ್ತ ಕ್ರಮಕೈಗೊಳ್ಳುವ ಅನಿವಾರ್ಯತೆ ಎದುರಾಗಿತ್ತು. ಇದರಿಂದಾಗಿ ವಿರೋಧದ ನಡುವೆಯೂ ಇಂತದೊಂದು ಕ್ರಮವನ್ನು ಜಾರಿಗೊಳಿಸಲಾಗಿದೆ.
ಹೀಗಾಗಿ ಸರ್ಕಾರಿ ಬಸ್, ಮೆಟ್ರೋ, ರೈಲ್ವೆಗಳನ್ನು ಬಳಸುವಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಬಿತ್ತರಿಸುತ್ತಿದ್ದು, ಸಾರ್ವಜನಿಕರು ಕೂಡಾ ಸರ್ಕಾರ ಕ್ರಮಕ್ಕೆ ಪರ-ವಿರೋಧ ವ್ಯಕ್ತಪಡಿಸಿದ್ದಾರೆ.
ಓದಿರಿ-
ಆದರೂ ಟ್ರಾಫಿಕ್ ಸಮಸ್ಯೆ ಹಾಗೂ ಮಾಲಿನ್ಯ ಪ್ರಮಾಣ ತಗ್ಗಿಸುವ ದೃಷ್ಠಿಯಿಂದ ಇಂತದೊಂದು ಕಠಿಣ ಕ್ರಮ ಅವಶ್ಯಕತೆಯಿದ್ದು, ಸಿಂಗಾಪುರ ಸರ್ಕಾರ ಕ್ರಮದಿಂದ ಆಟೋ ಉತ್ಪಾದಕರು ಧರ್ಮಸಂಕಟದಲ್ಲಿ ಸಿಲುಕುವಂತಾಗಿದೆ.
ಡ್ರೈವ್ ಸ್ಪಾರ್ಕ್ ಅಭಿಪ್ರಾಯ
ಹೆಚ್ಚುತ್ತಿರುವ ವಾಹನಗಳ ತಡೆಗೆ ಇಂತದೊಂದು ಕ್ರಮ ಎಲ್ಲಾ ರಾಷ್ಟ್ರಗಳಲ್ಲೂ ಅವಶ್ಯಕತೆಯಿದ್ದು, ಸಿಂಗಾಪುರ ಸರ್ಕಾರ ಜಾರಿಗೆ ತಂದಿರುವ ಕಠಿಣ ನಿರ್ಧಾರಕ್ಕೆ ಜಾಗತಿಕ ಮಟ್ಟದಲ್ಲೂ ಬೆಂಬಲ ವ್ಯಕ್ತವಾಗಿದೆ.
Trending in kannada Drivespark :
ಹಿಂಬದಿ ಬೈಕ್ ಸವಾರಿಯನ್ನು ಬ್ಯಾನ್ ಮಾಡಿದ ಕರ್ನಾಟಕ ಸರ್ಕಾರ