Just In
- 28 min ago ಪೆಟ್ರೋಲ್ಗೆ ಹೆಚ್ಚು ಹಣ ಖರ್ಚು ಮಾಡುತ್ತಿದ್ದೀರಾ?.. ಇಲ್ಲಿವೆ ಉತ್ತಮ ಎಲೆಕ್ಟ್ರಿಕ್ ಸ್ಕೂಟರ್ಗಳು, ಜಾಸ್ತಿ ಓಡುತ್ತವೆ!
- 2 hrs ago Hyundai: ಹಳೆಯ ಹ್ಯುಂಡೈ ಕ್ರೆಟಾವನ್ನು ಮರೆತುಬಿಡಿ... ಹೊಸ ಕ್ರೆಟಾ ಈಗ ಮತ್ತಷ್ಟು ಪ್ರೀಮಿಯಂ SUV
- 14 hrs ago ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- 15 hrs ago ಕಂಪನಿಗೆ 140ರ ಸಂಭ್ರಮ: ಕೇವಲ 140 ವಿಶೇಷ ಆವೃತ್ತಿಗಳು ನಿರ್ಮಾಣ: ಬುಕಿಂಗ್ ಆರಂಭ
Don't Miss!
- Movies ಪಶ್ಚಾತಾಪದ ಅಗ್ನಿಕುಂಡದಲ್ಲಿ ಪರಿಣಿತಿ ಚೋಪ್ರಾ ; ನನ್ನೆಲ್ಲ ಸೋಲುಗಳಿಗೆ ಆ ವ್ಯಕ್ತಿಗಳೇ ಕಾರಣ ಎಂದ ನಟಿ..!
- News ಮಳೆ.. ಮಳೆ.. ಗುಡುಗು ಸಹಿತ ಭರ್ಜರಿ ಮಳೆಗೆ ತತ್ತರಿಸಿದ ಕರ್ನಾಟಕ!
- Finance Bengaluru Traffic Police: ಬೆಂಗಳೂರಿನ ಈ ರಸ್ತೆ ಸಂಚಾರ ಮಾರ್ಗ ಬದಲಾವಣೆ, ವಿವರ
- Technology Samsung: ಭಾರತದಲ್ಲಿ ಹೊಸ ವೇರಿಯಂಟ್ನಲ್ಲಿ ಸ್ಯಾಮ್ಸಂಗ್ ಗ್ಯಾಲಕ್ಸಿ F15 5G! ಬೆಲೆ ಎಷ್ಟು?
- Sports RCB: 'ಗೋ ಗ್ರೀನ್' ಭಾಗವಾಗಿ 3 ಕೆರೆಗಳ ಅಭಿವೃದ್ಧಿಪಡಿಸಿದ ಆರ್ಸಿಬಿ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
"ಎಲೆಕ್ಟ್ರಿಕ್ ಕಾರು ಚಲಾಯಿಸಲು ಕಲ್ಲಿದ್ದಲಿನಿಂದ ಉತ್ಪಾದಿಸಿದ ವಿದ್ಯುತ್ ಉಪಯೋಗಿಸಿ" - ಗಡ್ಕರಿ
ಭಾರತದಲ್ಲಿ 'ವಿದ್ಯುತ್ ಕಾರುಗಳನ್ನು ಚಲಾಯಿಸಲು ಕಲ್ಲಿದ್ದಲಿನಿಂದ ಉತ್ಪಾದಿಸುವ ಅಗ್ಗದ ವಿದ್ಯುತ್ ಬಳಸಿಕೊಳ್ಳಬೇಕು' ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಸೂಚಿಸಿದ್ದಾರೆ.
ಭಾರತದಲ್ಲಿ 'ವಿದ್ಯುತ್ ಕಾರುಗಳನ್ನು ಚಲಾಯಿಸಲು ಕಲ್ಲಿದ್ದಲಿನಿಂದ ಉತ್ಪಾದಿಸುವ ಅಗ್ಗದ ವಿದ್ಯುತ್ ಬಳಸಿಕೊಳ್ಳಬೇಕು' ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಸೂಚಿಸಿದ್ದಾರೆ.
ಇಂಡಿಯನ್ ಸ್ಕೂಲ್ ಆಫ್ ಬಿಸಿನೆಸ್ ಆಯೋಜಿಸಿದ್ದ ಐಎಸ್ಬಿ ಲೀಡರ್ಶಿಪ್ ಶೃಂಗಸಭೆಯಲ್ಲಿ ಈ ವಿಚಾರವನ್ನು ಸಚಿವ ನಿತಿನ್ ಗಡ್ಕರಿ ಪ್ರಸ್ತಾಪಿಸಿದ್ದು , ಭಾರತದಂತಹ ದೊಡ್ಡ ರಾಷ್ಟ್ರದಲ್ಲಿ ಶಕ್ತಿಯ ಮಿತಿ ಹೆಚ್ಚಿಗೆ ಇರುವುದರಿಂದ ಬ್ಯಾಟರಿ ಶಕ್ತಿಯ ಸಹಾಯದಿಂದ ಚಲಿಸುವ ಕಾರುಗಳು ಕಲ್ಲಿದ್ದಲಿನಿಂದ ಉತ್ಪಾದಿಸುವ ಶಕ್ತಿಯನ್ನು ಉಪಯೋಗಿಸಿ ಎಂದು ಸಲಹೆ ನೀಡಿದರು.
"ಈಗ ಭಾರತದಲ್ಲಿ ಕಲ್ಲಿದ್ದಲು ಹೆಚ್ಚಿನ ಮಟ್ಟದಲ್ಲಿ ದೊರಕುತ್ತಿದ್ದು, ಇದು ತುಂಬಾ ಅಗ್ಗವಾಗಿದೆ. ಆದ್ದರಿಂದ ಜನರು ಇದರ ಲಾಭ ಪಡೆಯಬೇಕು ಮತ್ತೆ ಇದಕ್ಕೆ ಹೆಚ್ಚು ಪ್ರಾಶಸ್ತ್ಯ ನೀಡಬೇಕು" ಎಂದು ಹೇಳಿಕೆ ನೀಡುವ ಮೂಲಕ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ.
ಪರಮಾಣು, ಗಾಳಿ ಮತ್ತು ಜಲವಿದ್ಯುತ್ ಸೇರಿದಂತೆ ವಿದ್ಯುತ್ ಉತ್ಪಾದನೆಯ ಇತರ ಪ್ರಕಾರಗಳಿಗೆ ಹೋಲಿಸಿದರೆ ಕಲ್ಲಿದ್ದಲಿಗಿಂತ ಕಡಿಮೆ ಮಾಲಿನ್ಯ ಉತ್ಪಾದನೆ ಮಾಡುತ್ತದೆ, ಆದರೆ ಸಚಿವರ ಈ ಹೇಳಿಕೆ ವಿವಾದ ಸೃಷ್ಟಿಸಿದೆ.
ವಿದ್ಯುತ್ ಉತ್ಪಾದನೆಗೆ ಕಲ್ಲಿದ್ದಲನ್ನು ಬಳಸಿ, ಉತ್ಪಾದಿಸಿದ ವಿದ್ಯುತ್ತನ್ನು ಎಲೆಕ್ಟ್ರಿಕ್ ಮೋಟಾರ್ ವಾಹನಗಳನ್ನು ಚಲಾಯಿಸಲು ಉಪಯೋಗಿಸುವುದರಿಂದ ಮಾಲಿನ್ಯ ಕಡಿಮೆಯಾಗುತ್ತದೆ, ಎನ್ನುವುದು ಎಷ್ಟರಮಟ್ಟಿಗೆ ಸರಿ ಎಂದು ತಜ್ಞರ ಪ್ರೆಶ್ನೆಯಾಗಿದೆ.
ಕಲ್ಲಿದ್ದಲನ್ನು ಹೆಚ್ಚು ಕೊಳಕು ಉತ್ಪಾದಿಸುವ ವಿದ್ಯುತ್ ಉತ್ಪಾದಿಸುವ ಪ್ರಕಾರ ಎಂದು ಪರಿಗಣಿಸಲಾಗಿದೆ, ಮತ್ತು ಅತ್ಯಂತ ಅಪ್ರಯೋಜನಕಾರಿಯಾದ ಉತ್ಪಾದನೆಯ ಸ್ವರೂಪವಾಗಿದೆ. ಈ ಪ್ರಕಾರದ ವಿದ್ಯುತ್ ಉತ್ಪಾದನೆಗೆ ವಿದ್ಯುತ್ ಸ್ಥಾವರಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಕಲ್ಲಿದ್ದಲು ಬಳಕೆಯಾಗುತ್ತಿದೆ.
ಇತ್ತೀಚೆಗೆ ಅಸಂಬದ್ಧ ಹೇಳಿಕೆಗಳ ಮೂಲಕ ಹೆಚ್ಚು ಪ್ರಚಾರ ಗಿಟ್ಟಿಸಿಕೊಳ್ಳುತ್ತಿರುವ ನಿತಿನ್ ಗಡ್ಕರಿ, ಮತ್ತೊಂದು ಹೇಳಿಕೆ ನೀಡುವ ಮೂಲಕ 'ನಾನಿರುವುದೇ ಹೀಗೆ' ಎಂಬಂತೆ ಬಿಂಬಿಸಿಕೊಳ್ಳುವುತ್ತಿರುವುದು ಮೋದಿಗೆ ಮುಂದೆ ತಲೆನೋವಾಗಿ ಪರಿಣಮಿಸದೇ ಇರಲಾರದು.