Just In
- 10 hrs ago ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- 12 hrs ago Kia Carens: ಗ್ಲೋಬಲ್ ಎನ್ಸಿಎಪಿ ಸುರಕ್ಷತಾ ಪರೀಕ್ಷೆ.. 3-ಸ್ಟಾರ್ ಪಡೆದ ಕಿಯಾ ಕ್ಯಾರೆನ್ಸ್
- 13 hrs ago ಈ ಬೈಕ್ಗಳನ್ನು ಗ್ರಾಹಕರು ಮುಗಿಬಿದ್ದು ಖರೀದಿಸುತ್ತಿದ್ದಾಗಲೇ ಬೆಲೆ ಏರಿಕೆ ಮಾಡಿ ಶಾಕ್ ಕೊಟ್ಟ ಟ್ರಯಂಫ್
- 14 hrs ago ಅಪ್ಪ-ಮಗಳ ಭಾಂದವ್ಯ.. ಪ್ರೀತಿಯ ಪುತ್ರಿಗೆ ತಂದೆಯಿಂದ 2 ಕೋಟಿಯ ಪೋರ್ಷೆ ಕಾರು ಗಿಫ್ಟ್
Don't Miss!
- Movies 'KGF-2' ಚಿತ್ರದಿಂದ ಸಿಕ್ಕಿದ್ದು 200 ಕೋಟಿ ರೂ.; 'ಟಾಕ್ಸಿಕ್', 'ರಾಮಾಯಣ'ಕ್ಕೆ ಯಶ್ 50-50 ಡೀಲ್!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಳೆ ನೀರು ಮಿಶ್ರಿತ ಡೀಸೆಲ್ ಬಳಕೆ- ಕೆಟ್ಟು ನಿಂತ 30ಕ್ಕೂ ಹೆಚ್ಚು ಬಿಎಂಟಿಸಿ ವೊಲ್ವೋ ಬಸ್ಗಳು
ಮಳೆ ನೀರು ಮಿಶ್ರಿತ ಡೀಸೆಲ್ ಬಳಿಕೆಯಿಂದಾಗಿ 30ಕ್ಕೂ ಹೆಚ್ಚು ಬಿಎಂಟಿಸಿ ವೊಲ್ಪೋ ಬಸ್ಗಳು ಕೆಟ್ಟುನಿಂತಿರುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದ್ದು, ಎಡೆಬಿಡದೆ ಸುರಿಯುತ್ತಿರುವ ಮಳೆಯೇ ಇಷ್ಟೇಲ್ಲಾ ಅವಾಂತರಕ್ಕೆ ಕಾರಣವಾಗಿದೆ.
ಮಳೆ ನೀರು ಮಿಶ್ರಿತ ಡೀಸೆಲ್ ಬಳಿಕೆಯಿಂದಾಗಿ 30ಕ್ಕೂ ಹೆಚ್ಚು ಬಿಎಂಟಿಸಿ ವೊಲ್ಪೋ ಬಸ್ಗಳು ಕೆಟ್ಟುನಿಂತಿರುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದ್ದು, ಎಡೆಬಿಡದೆ ಸುರಿಯುತ್ತಿರುವ ಮಳೆಯೇ ಇಷ್ಟೇಲ್ಲಾ ಅವಾಂತರಕ್ಕೆ ಕಾರಣವಾಗಿದೆ.
ಕಳೆದ 15 ದಿನಗಳಿಂದ ರಾಜಧಾನಿ ಬೆಂಗಳೂರಿನಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಅಪಾರ ಪ್ರಮಾಣದ ಹಾನಿಯಾಗಿಲ್ಲದೆ ಹತ್ತಾರು ಜನ ಪ್ರಾಣಕಳೆದುಕೊಳ್ಳುವಂತಹ ಪರಿಸ್ಥಿತಿ ನಿರ್ಮಾಣ ಮಾಡಿದೆ. ಇದೇ ವೆೇಳೆ ಬೃಹತ್ ಬೆಂಗಳೂರು ನಗರ ಸಾರಿಗೆ ಇಲಾಖೆಗೂ ಅಪಾರ ನಷ್ಟ ಉಂಟಾಗಿದ್ದು, 30ಕ್ಕೂ ಹೆಚ್ಚು ವೊಲ್ವೋ ಬಸ್ಗಳು ಕೆಟ್ಟು ನಿಂತಿವೆ.
ಬೆಂಗಳೂರಿನ ಕತ್ರಿಗುಪ್ಪೆಯಲ್ಲಿ ನಿನ್ನೆಯಷ್ಟೇ ಈ ಘಟನೆ ನಡೆದಿದ್ದು, ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಬಂಕ್ನಲ್ಲಿರುವ ನೆಲದಡಿ ಪೆಟ್ರೋಲ್ ಮತ್ತು ಡೀಸೆಲ್ ಟ್ಯಾಂಕರ್ಗಳಿಗಳಲ್ಲಿ ಕಲುಷಿತ ನೀರು ನುಗ್ಗಿದೆ.
ಆದ್ರೆ ಈ ಬಗ್ಗೆ ಪೆಟ್ರೋಲ್ ಬಂಕ್ ಸಿಬ್ಬಂದಿಯೂ ಮುನ್ನೆಚ್ಚೆರಿಕೆ ವಹಿಸದ ಹಿನ್ನೆಲೆ ಬಸ್ಗಳು ಕೆಟ್ಟು ನಿಲ್ಲುವಂತಹ ಪರಿಸ್ಥಿತಿ ಬಂದೊಗಿದ್ದು, ಕಲುಷಿತ ಡೀಸೆಲ್ ತುಂಬಿಸಿಕೊಂಡಿದ್ದ 30ಕ್ಕೂ ಹೆಚ್ಚು ವೊಲ್ವೊ ಬಸ್ಗಳ ಎಂಜಿನ್ಗಳ ಕಾರ್ಯನಿರ್ವಹಣೆ ಸ್ಥಗಿತಗೊಂಡಿದೆ.
ಇನ್ನು ಘಟನೆಗೂ ಮುನ್ನ ಎಂದಿನಂತೆ ಕತ್ತಿಗುಪ್ಪೆಯಲ್ಲಿರುವ ಭಾರತ್ ಪೆಟ್ರೋಲಿಯಂನಲ್ಲಿ ವೊಲ್ವೋ ಬಸ್ಗಳು ಡೀಸೆಲ್ ಟ್ಯಾಂಕರ್ ಅನ್ನು ಭರ್ತಿ ಮಾಡಿಸಿಕೊಂಡಿವೆ. ಆದ್ರೆ ಡೀಸೆಲ್ ತುಂಬಿಸಿದ ಕೇವಲ 5 ನಿಮಿಷದಲ್ಲಿ ಬಸ್ಗಳು ಕೆಟ್ಟು ನಿಂತಿವೆ.
ಆದ್ರೆ ಬಸ್ಗಳ ಎಂಜಿನ್ ಸ್ಥಗಿತಕ್ಕೆ ಮೂಲ ಕಾರಣ ಏನು ಎನ್ನುವ ಬಗ್ಗೆ ಗೊಂದಲದಲ್ಲಿದ್ದ ಬಸ್ ಚಾಲಕರು ಹಾಗೂ ನಿರ್ವಾಹಕರು ತದನಂತರ ಪೆಟ್ರೋಲ್ ಬಂಕ್ ಸಿಬ್ಬಂದಿ ಜೊತೆ ವಾಗ್ವಾದ ಮಾಡಿದ್ದಾರೆ. ಆಗಲೇ ಡಿಸೇಲ್ನಲ್ಲಿ ಮಳೆ ನೀರು ನುಗ್ಗಿರುವ ಅಂಶ ಪತ್ತೆಯಾಗಿದೆ.
ಸದ್ಯ ಕೆಟ್ಟು ನಿಂತಿರುವ ವೊಲ್ಪೋ ಬಸ್ಗಳ ರಿಪೇರಿ ಕಾರ್ಯ ನಡೆಯುತ್ತಿದ್ದು, ಬಿಎಂಟಿಸಿ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಾಹಿತಿಗಳ ಪ್ರಕಾರ ಇನ್ನು ಎರಡು ಮೂರು ದಿನಗಳಲ್ಲಿ ಕೆಟ್ಟ ಬಸ್ಗಳ ಎಂಜಿನ್ ಸರಿಪಡಿಸುವಿಕೆ ಪೂರ್ಣಗೊಳ್ಳಲಿದ್ದು, ಶೀಘ್ರದಲ್ಲೇ ಸೇವೆಗೆ ಲಭ್ಯವಾಗಲಿವೆ.
ಇನ್ನು ಕೆಟ್ಟ ಬಸ್ ರಿಪೇರಿ ಕಾರ್ಯಕ್ಕಾಗಿ ಪ್ರತಿ ಬಸ್ಗೆ ರೂ. 8 ರಿಂದ 10 ಲಕ್ಷ ಖರ್ಚು ತಗಲುತ್ತದೆ ಎನ್ನಲಾಗಿದ್ದು, ಕುಲುಷಿತ ನೀರು ಹೊಕ್ಕಿರುವ ಎಂಜಿನ್, ಪಿಸ್ಟನ್ ಭಾಗಗಳನ್ನು ಹೊಸದಾಗಿ ಅಳವಡಿಕೆ ಮಾಡಿದಾಗಲೇ ಬಸ್ಗಳನ್ನು ಮೂಲ ಸ್ಥಿತಿಗೆ ತರಬಹುದಾಗಿದೆ.