Just In
- 21 min ago ಕ್ರ್ಯಾಶ್ ಟೆಸ್ಟ್ನಲ್ಲಿ ಕಳಪೆ ಪ್ರದರ್ಶನ ನೀಡಿ ನಿರಾಸೆ ಮೂಡಿಸಿದ ಮಧ್ಯಮ ವರ್ಗದ ಮೆಚ್ಚಿನ ಸ್ವದೇಶಿ ಕಾರು
- 1 hr ago ಕ್ರ್ಯಾಶ್ಟೆಸ್ಟ್ನಲ್ಲಿ ಈ ಹೋಂಡಾ ಕಾರಿಗೆ ಕೇವಲ 2 ಸ್ಟಾರ್: ಆದರೂ ಭಾರತೀಯರಿಗೆ ಈ ಕಾರು ಅಚ್ಚುಮೆಚ್ಚು!
- 1 hr ago ಹ್ಯುಂಡೈ ಕ್ರೆಟಾಗೆ ಪೈಪೋಟಿ ನೀಡಲು ಬರಲಿವೆ ಟಾಟಾ, ಸಿಟ್ರಸ್ ಕಾರುಗಳು.. ಇವೇ ಜನಸಾಮಾನ್ಯರ ಲ್ಯಾಂಬೋರ್ಗಿನಿಗಳು!
- 3 hrs ago Triber: 7 ಜನ ಹೋಗಬಹುದಾದ ರೆನಾಲ್ಟ್ ಟ್ರೈಬರ್ ಖರೀದಿಸಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
Don't Miss!
- Lifestyle ವೋಟರ್ ಐಡಿ ಇಲ್ಲದೆಯೂ ಮತ ಚಲಾಯಿಸಬಹುದು.! ಹೇಗೆ ಗೊತ್ತಾ?
- Technology SmartGlass: ಮೆಟಾ ರೇ-ಬ್ಯಾನ್ ಸ್ಮಾರ್ಟ್ ಗ್ಲಾಸ್ ಬಳಕೆದಾರರು ಇನ್ಮುಂದೆ ವಿಡಿಯೋ ಕಾಲ್ ಮಾಡಬಹುದು!
- Sports 2025ರ ಚಾಂಪಿಯನ್ಸ್ ಟ್ರೋಫಿಗಾಗಿ ಭಾರತ ತಂಡ ಪಾಕಿಸ್ತಾನಕ್ಕೆ ಪ್ರಯಾಣಿಸಲಿದೆಯೇ?; ಬಿಸಿಸಿಐ ಹೇಳಿದ್ದೇನು?
- Movies ಅದ್ಧೂರಿ 'ರಾಮಾಯಣ' ಚಿತ್ರದ ಬಗ್ಗೆ ರಾಕಿಂಗ್ ಸ್ಟಾರ್ ಯಶ್ ಮೊದಲ ಮಾತು
- News ಮೋದಿ ಯಾರ ಪರ; ಪ್ರಧಾನಿಯಾಗಿ 16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದ್ದು ಯಾರದ್ದು? ಸಿದ್ದರಾಮಯ್ಯ
- Finance ಬೆಂಗಳೂರಿನಲ್ಲಿ ಈ ಮೂರು ದಿನಗಳ ಕಾಲ ಮದ್ಯ ಮಾರಾಟ ನಿಷೇಧ, ದಿನಾಂಕ, ಸಮಯ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಏರ್ಬ್ಯಾಗ್ ಇದ್ರು ಕೆಲಸ ಮಾಡ್ಲಿಲ್ಲಾ- ಮಹೀಂದ್ರಾ ವಿರುದ್ಧ ಕಾರು ಮಾಲೀಕನ ಆಕ್ರೋಶ
ದೇಶದಲ್ಲಿ ದಿನಂಪ್ರತಿ ಹತ್ತಾರು ಭೀಕರ ಅಪಘಾತಗಳು ನಡೆಯುತ್ತಲೇ ಇರುತ್ತವೆ. ಆದ್ರೆ ಬಹುತೇಕ ವಾಹನಗಳಲ್ಲಿ ಸುರಕ್ಷಾ ಸೌಲಭ್ಯಗಳು ಇಲ್ಲದ ಹಿನ್ನೆಲೆಯಲ್ಲಿ ಅಪಘಾತದ ತೀವ್ರತೆ ಹೆಚ್ಚುತ್ತಿದ್ದು, ಕೆಲವು ವಾಹನಗಳಲ್ಲಿ ಸುರಕ್ಷಾ ಸೌಲಭ್ಯಗಳಿದ್ದರೂ ಸರಿಯಾದ ಸಮಯಕ್ಕೆ ಕಾರ್ಯನಿರ್ವಹಣೆ ಮಾಡದಿರುವುದು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ.
ಹೌದು, ಕಳೆದ ಎರಡು ದಿನಗಳ ಹಿಂದಷ್ಟೇ ಮಹೀಂದ್ರಾ ಎಕ್ಸ್ಯುವಿ500 2013ರ ಎಸ್ಯುವಿ ಮಾಡೆಲ್ ಒಂದು ದೆಹಲಿ ಹೊರವಲಯದಲ್ಲಿ ಭೀಕರ ಅಪಘಾತದಲ್ಲಿ ಸಿಲುಕಿತ್ತು. ಈ ವೇಳೆ ಕಾರಿನಲ್ಲಿದ್ದ ಏರ್ಬ್ಯಾಗ್ ಸೌಲಭ್ಯವು ಕಾರ್ಯನಿರ್ವಹಣೆ ಮಾಡದ ಪರಿಣಾಮ ಕಾರು ಚಾಲನಕ ತಲೆ ಭಾಗಕ್ಕೆ ತ್ರೀವ ಪೆಟ್ಟಾಗಿದ್ದು, ದುಬಾರಿ ಕಾರಿನಲ್ಲೂ ಕಳಪೆ ಗುಟ್ಟದ ಸೌಲಭ್ಯಗಳನ್ನು ಒದಗಿಸಿರುವ ಮಹೀಂದ್ರಾ ವಿರುದ್ಧ ಕಾರು ಮಾಲೀಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಈ ಬಗ್ಗೆ ಮಹೀಂದ್ರಾ ವಿರುದ್ಧ ಪತ್ರ ಬರೆದಿರುವ ಕಾರು ಮಾಲೀಕ ಅರವಿಂದ್ ಅವರು, ಮಹೀಂದ್ರಾ ಸಂಸ್ಥೆಯ ಕಳಪೆ ಗುಣಮಟ್ಟದ ಉತ್ಪನ್ನದಿಂದಾಗಿಯೇ ನನ್ನ ಮಗ ಇಂದು ಸಾವು-ಬದುಕಿನ ಮಧ್ಯೆ ಹೋರಾಟ ಮಾಡಬೇಕಾದ ಪರಿಸ್ಥಿತಿ ಬಂದಿದ್ದು, ಒಂದು ವೇಳೆ ಕಾರಿನಲ್ಲಿರುವ ಏರ್ಬ್ಯಾಗ್ ಸೌಲಭ್ಯವು ಸರಿಯಾಗಿ ಕಾರ್ಯನಿರ್ವಹಣೆ ಮಾಡದ್ದರೇ ಈ ಪರಿಸ್ಥಿತಿ ಬರುತ್ತಿರಲಿಲ್ಲ ಎಂದಿದ್ದಾರೆ.
ಜೊತೆಗೆ ಗ್ರಾಹಕರಿಗೆ ತಪ್ಪು ಮಾಹಿತಿ ನೀಡಿ ಕಾರು ಉತ್ಪನ್ನಗಳನ್ನು ಮಾರಾಟ ಮಾಡುತ್ತಿರುವ ಮಹೀಂದ್ರಾ ನಡೆ ಸರಿಯಲ್ಲ ಎಂದಿರುವ ಅರವಿಂದ್ ಅವರು, ಪ್ರಕರಣದ ಸತ್ಯಾಂಶ ತಿಳಿಯಲು ಥರ್ಡ್ ಪಾರ್ಟಿ ಇನ್ವೆಸ್ಟಿಗೇಷನ್ ನಡೆಸುವಂತೆ ಆಗ್ರಹಿಸಿದ್ದಾರೆ.
ಇನ್ನು ಅಪಘಾತದಲ್ಲಿ ತಲೆಗೆ ತೀವ್ರ ಹೊಡೆತ ಬಿದ್ದಿರುವ ಹಿನ್ನೆಲೆಯಲ್ಲಿ ಕಾರು ಮಾಲೀಕ ಅರವಿಂದ್ ಅವರ ಪುತ್ರನ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ್ದು, ಸುರಕ್ಷೆತೆ ಸಿಗುತ್ತೆ ಅಂತಾ ಲಕ್ಷ ಲಕ್ಷ ಖರ್ಚು ಮಾಡಿ ದುಬಾರಿ ಕಾರು ಖರೀದಿ ಮಾಡಿದ್ರು ತೊಂದರೆ ತಪ್ಪಿದ್ದಲ್ಲ ಎನ್ನುವುದು ಇಲ್ಲಿ ಸ್ಪಷ್ಟವಾಗುತ್ತೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಮಹೀಂದ್ರಾ ಸಂಸ್ಥೆಯು ಸಹ ತನ್ನ ಹೇಳಿಕೆಯನ್ನು ಬಿಡುಗಡೆ ಮಾಡಿದ್ದು,ನಡೆದ ಘಟನೆ ಬಗ್ಗೆ ವಿಷಾದ ವ್ಯಕ್ತಪಡಿಸಿರುವುದಲ್ಲದೇ ಘಟನೆ ಕುರಿತು ಸಂಸ್ಥೆಯ ಮಟ್ಟದಲ್ಲೂ ತನಿಖೆ ನಡೆಸಿ ಪರಿಹಾರ ನೀಡುವ ಭರವಸೆ ನೀಡಿದೆ.
ಆದ್ರೆ ಎಲ್ಲಾ ಆದ ಮೇಲೆ ಪರಿಹಾರ ನೀಡಿದ್ರೆ ಏನ್ ಪ್ರಯೋಜನ ಹೇಳಿ? ಪ್ರಯಾಣದ ವೇಳೆ ಸುರಕ್ಷೆತೆ ಬೇಕು ಅಂತಾನೆ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ದುಬಾರಿ ಕಾರುಗಳನ್ನು ಖರೀದಿ ಮಾಡಿದ್ರು ಯಾವುದೇ ಪ್ರಯೋಜನವಾಗಲಿಲ್ಲ.
ಇನ್ನೊಂದು ಪ್ರಮುಖ ವಿಚಾರ ಅಂದ್ರೆ 2011 ರಲ್ಲಿ ಮೊದಲ ಬಾರಿಗೆ ಬಿಡುಗಡೆಯಾಗಿದ್ದ ಮಹೀಂದ್ರಾ ಎಕ್ಸ್ಯುವಿ500 ಎಸ್ಯುವಿ ಕಾರುಗಳ ಪ್ರತಿ ವೆರಿಯೆಂಟ್ಗಳಲ್ಲೂ ಸಹ 6 ಏರ್ಬ್ಯಾಗ್, ಎಬಿಎಸ್ ಮತ್ತು ಆಲ್ ವೀಲ್ಹ್ ಡಿಸ್ಕ್ ಬ್ರೇಕ್ ಸೌಲಭ್ಯವನ್ನು ಒದಗಿಸಿದ್ದರೂ ಯಾವುದೇ ಪ್ರಯೋಜನವಾಗುತ್ತಿಲ್ಲ.
ಏರ್ಬ್ಯಾಗ್ ಸೌಲಭ್ಯವು ಸರಿಯಾಗಿ ಕಾರ್ಯನಿರ್ವಹಣೆ ಮಾಡದಿರುವುದಕ್ಕೆ ಪ್ರಮುಖ ಕಾರಣ ಅಂದ್ರೆ ಕಾರು ಉತ್ಪಾದನೆ ವೇಳೆ ಆಗುವ ತಾಂತ್ರಿಕ ದೋಷಗಳಿಂದಾಗಿ ಸರಿಯಾಗಿ ಜೋಡಣೆ ಮಾಡದಿರುವುದೇ ಇಂತಹ ದುರಂತಗಳಿಗೆ ಕಾರಣವಾಗುತ್ತವೆ. ಹೀಗಾಗಿ ಈ ಘಟನೆಯಿಂದ ಎಚ್ಚೇತ್ತುಕೊಳ್ಳಬೇಕಿರುವ ಮಹೀಂದ್ರಾ ಸಂಸ್ಥೆಯು ಇನ್ನು ಮುಂದೆ ಆದ್ರೂ ಗ್ರಾಹಕರ ವಿಶ್ವಾಸಕ್ಕೆ ದ್ರೋಹವಾಗದಂತೆ ಎಚ್ಚರವಹಿಸಬೇಕಿದೆ.
ಜೀವರಕ್ಷಕ ಏರ್ಬ್ಯಾಗ್ ಹೇಗೆ ಕಾರ್ಯನಿರ್ವಹಿಸುತ್ತೆ?
ಸೆಂಟ್ರಲ್ ಏರ್ ಬ್ಯಾಗ್ ಕಂಟ್ರೋಲ್ ಯುನಿಟ್ (ಎಸಿಯು) ವಾಹನಗಳಲ್ಲಿ ಅನೇಕ ಸಂಬಂಧಿ ಸೆನ್ಸಾರುಗಳನ್ನು ಮಾನಿಟರ್ ಮಾಡುತ್ತದೆ. ಏರ್ ಬ್ಯಾಗ್ಗಳು ಸ್ಟೀರಿಂಗ್ ಒಳಗಡೆ ಪ್ಲಾಸ್ಟಿಕ್ ಪೊರೆಯಲ್ಲಿ ಲಗತ್ತಿಸಲಾಗಿರುತ್ತದೆ. ಇದರ ಬಳಕೆ ತುಂಬಾ ಸರಳವಾಗಿದ್ದು, ಅಪಘಾತ ವೇಳೆ ತಕ್ಷಣ ಹೊರಚಿಮ್ಮುವಂತೆ ವ್ಯವಸ್ಥೆ ಮಾಡಲಾಗಿರುತ್ತದೆ. ಇದು ಸ್ಟೀರಿಂಗ್ ಮೇಲೆ ಬಂದಪ್ಪಳಿಸುವ ಪ್ರಯಾಣಿಕರ ಮುಖಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತದೆ. ಅಲ್ಲದೆ ತೆರೆಯಲ್ಪಟ್ಟ ಕ್ಷಣಾರ್ಧದಲ್ಲೇ ಮುದುಡಿಕೊಳ್ಳುತ್ತದೆ. ವಾಹನದ ಮುಂಭಾಗದ ಬಂಪರ್ನಲ್ಲಿರುವ ಸೆನ್ಸಾರ್ ಮೇಲೆ ಕೊಂಚ ಒತ್ತಡದ ಸ್ಪರ್ಶ ಬಿದ್ದರೂ ಏರ್ ಬ್ಯಾಗ್ ತೆರೆದುಕೊಳ್ಳುವಂತೆ ಜೋಡಣೆ ಮಾಡಲಾಗಿರುತ್ತದೆ.
ಏರ್ ಬ್ಯಾಗ್ ವಿಧಗಳು
ಸಂಭವನೀಯ ಕಾರು ಅಪಘಾತದಲ್ಲಿ ಮಾನವ ದೇಹವನ್ನು ಗಾಯದಿಂದ ಪಾರು ಮಾಡುವುದು ಏರ್ ಬ್ಯಾಗ್ ಗುರಿಯಾಗಿದೆ. ಹಾಗೆಯೇ ಅನೇಕ ವಿಧ ಹಾಗೂ ಆಕಾರಗಳಲ್ಲಿ ಏರ್ ಬ್ಯಾಗ್ ಲಭ್ಯವಿರುತ್ತದೆ. ಅಷ್ಟೇ ಯಾಕೆ ಆಧುನಿಕ ತಂತ್ರಗಾರಿಕೆಯ ಅಭಿವೃದ್ಧಿಯಾದಂತೆ ಪಾದಚಾರಿಗಳನ್ನು ರಕ್ಷಿಸುವ ಏರ್ ಬ್ಯಾಗ್ಗಳನ್ನು ಸಹ ಅಭಿವೃದ್ಧಿಪಡಿಸಲಾಗಿದೆ.
ಫ್ರಂಟ್ ಏರ್ ಬ್ಯಾಗ್
ಏರ್ ಬ್ಯಾಗ್ಗಳ ಪೈಕಿ ಮುಂಭಾಗದ ಏರ್ಬ್ಯಾಗ್ಗೆ ಅತಿ ಹೆಚ್ಚಿನ ಪ್ರಾಮುಖ್ಯತೆಯಿದೆ. 1987ರ ಪೋರ್ಷೆ 944 ಟರ್ಬೊ ಕಾರು ಡ್ಯುಯಲ್ ಏರ್ ಬ್ಯಾಗ್ ಹೊಂದಿರುವ ಮೊದಲ ಕಾರೆನಿಸಿಕೊಂಡಿದೆ. ಇದರಲ್ಲಿ ಚಾಲಕ ಸೇರಿದಂತೆ ಪಕ್ಕದ ಪ್ರಯಾಣಿಕರಿಗೂ ಸ್ಟಾಂಡರ್ಡ್ ಆಗಿ ಬಳಕೆ ಮಾಡಲಾಗಿತ್ತು. ಇದು ಸ್ಟೀರಿಂಗ್ ವೀಲ್ನಲ್ಲಿ ಆಳವಡಿಸಲಾಗಿದ್ದು, ಅಪಘಾತದ ವೇಳೆ ಪ್ರಯಾಣಿಕರಿಗೆ ಪೆಟ್ಟಾಗದಂತೆ ನೋಡಿಕೊಳ್ಳುತ್ತದೆ.
ಸೈಡ್ ಏರ್ ಬ್ಯಾಗ್
ಹೆಸರಲ್ಲೇ ಸೂಚಿಸಿರುವಂತೆಯೇ ಸೈಡ್ ಏರ್ ಬ್ಯಾಗ್ಗಳು ಬದಿಯಿಂದ ಢಿಕ್ಕಿಯಾದ ಸಂದರ್ಭದಲ್ಲಿ ಸಮರ್ಥವಾಗಿ ಕಾರ್ಯನಿರ್ವಹಿಸುತ್ತದೆ. ಸೈಡ್ ಏರ್ ಬ್ಯಾಗ್ ಎರಡು ವಿಧಗಳಲ್ಲಿರುತ್ತದೆ. ಇದರಲ್ಲಿ ಮೊದಲನೆಯದ್ದು ಸೈಡ್ ಟಾರ್ಸೊ (ದೇಹ) ಏರ್ ಬ್ಯಾಗ್ ಆಗಿದೆ. ಇದು ಸಾಮಾನ್ಯವಾಗಿ ಸೀಟಿನ ಬದಿಯಲ್ಲಿ ಲಗತ್ತಿಸಲಾಗಿದ್ದು, ಅಪಘಾತ ಸಂದರ್ಭದಲ್ಲಿ ಚಾಲಕ ಹಾಗೂ ಬಾಗಿಲು ನಡುವೆ ತೆರೆದುಕೊಳ್ಳುತ್ತದೆ.
ಕರ್ಟೈನ್ ಏರ್ ಬ್ಯಾಗ್
ಸೈಡ್ ಏರ್ ಬ್ಯಾಗ್ನಲ್ಲಿ ಎರಡನೇಯದ್ದು ಕರ್ಟೈನ್ ಏರ್ ಬ್ಯಾಗ್ ಆಗಿದೆ. ಇದು ಕಾರಿನ ಒಳಮೈಯಲ್ಲಿ ಮೇಲ್ಬಾಗದಲ್ಲಿ ಲಗತ್ತಿಸಲಾಗುತ್ತಿದ್ದು, ಸಂಪೂರ್ಣ ರಕ್ಷಣೆಯನ್ನು ನೀಡುವಲ್ಲಿ ಬದ್ಧವಾಗಿದೆ. ವರದಿಗಳ ಪ್ರಕಾರ ಕರ್ಟೈನ್ ಏರ್ ಬ್ಯಾಗ್ಗಳು ಮೆದುಳಿಗೆ ಅಥವಾ ಶೇಕಡಾ 45ರಷ್ಟು ಪೆಟ್ಟಾಗುವ ಸಾಧ್ಯತೆಯನ್ನು ಕಡಿಮೆ ಮಾಡುತ್ತದೆ. ನಿಮ್ಮ ಮಾಹಿತಿಗಾಗಿ ಕೆಲವು ವಾಹನಗಳಲ್ಲಿ ಎಲ್ಲ ಮೂರು ಸಾಲುಗಳಲ್ಲೂ ಸೈಡ್ ಕರ್ಟೈನ್ ಏರ್ ಬ್ಯಾಗ್ ಲಭ್ಯವಿರುತ್ತದೆ.
ಏರ್ ಬ್ಯಾಗ್ ಅಪಾಯವೇ?
ಅತ್ಯಂತ ವಿರಳ ಪ್ರಕರಣಗಳಲ್ಲಿ ಮಾತ್ರ ಏರ್ ಬ್ಯಾಗ್ಗಳು ಪ್ರಯಾಣಿಕರಿಗೆ ಮಾರಕವಾಗಿಯೂ ಪರಿಣಮಿಸಿದೆ. ಇಲ್ಲಿ ಅತ್ಯಂತ ತೀಕ್ಷ್ಣವಾಗಿ ಬಂದಪ್ಪಳಿಸುವ ಏರ್ ಬ್ಯಾಗ್ ಒತ್ತಡವನ್ನು ನಿರ್ವಹಿಸಲು ಪ್ರಯಾಣಿಕರು ವಿಫಲವಾಗುತ್ತಾರೆ. ಇದೇ ಕಾರಣಕ್ಕಾಗಿ ಮಕ್ಕಳನ್ನು ಏರ್ ಬ್ಯಾಗ್ನಿಂದ ದೂರವಿಡಲಾಗುತ್ತದೆ. ಇನ್ನು ಸೀಟು ಬೆಲ್ಟ್ ಆಳವಡಿಸದಿದ್ದರೆ ಏರ್ ಬ್ಯಾಗ್ ಕಾರ್ಯ ನಿರ್ವಹಣೆ ವಿಫಲವಾದಿತು.