Just In
- 1 hr ago Hyundai: ಹಳೆಯ ಹ್ಯುಂಡೈ ಕ್ರೆಟಾವನ್ನು ಮರೆತುಬಿಡಿ... ಹೊಸ ಕ್ರೆಟಾ ಈಗ ಮತ್ತಷ್ಟು ಪ್ರೀಮಿಯಂ SUV
- 14 hrs ago ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- 14 hrs ago ಕಂಪನಿಗೆ 140ರ ಸಂಭ್ರಮ: ಕೇವಲ 140 ವಿಶೇಷ ಆವೃತ್ತಿಗಳು ನಿರ್ಮಾಣ: ಬುಕಿಂಗ್ ಆರಂಭ
- 16 hrs ago ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
Don't Miss!
- News ನೇಹಾ ಹಿರೇಮಠ್ ಹತ್ಯೆ ಪ್ರಕರಣ; ನಟ ಧ್ರುವ ಸರ್ಜಾ ಏನಂದ್ರು?
- Sports RCB: 'ಗೋ ಗ್ರೀನ್' ಭಾಗವಾಗಿ 3 ಕೆರೆಗಳ ಅಭಿವೃದ್ಧಿಪಡಿಸಿದ ಆರ್ಸಿಬಿ
- Finance ನಾಳೆ ಬೆಂಗಳೂರಿನಲ್ಲಿ ಚಿಕನ್, ಮಟನ್ ಮಾರಾಟಕ್ಕೆ ನಿಷೇಧ
- Movies Amruthadhaare ; ಪಾರ್ಥ ಮತ್ತು ಅಪೇಕ್ಷಾ ಪ್ರೀತಿ, ಕೆಂಡಾಮಂಡಲಗೊಂಡ ಶಕುಂತಲಾ..!
- Technology ಆನ್ಲೈನ್ ಶಾಪಿಂಗ್ ಮಾಡಲು ಇಲ್ಲಿವೇ ನೋಡಿ ಬೆಸ್ಟ್ ವೆಬ್ಸೈಟ್ಗಳು!
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಾರು ಚಾಲನೆ ವೇಳೆ ಗಂಡ-ಹೆಂಡತಿ ಜಗಳದಿಂದಾಗಿ ನಾಲ್ವರು ದುರ್ಮರಣ
ತಾಂತ್ರಿಕ ಅಂಶಗಳು ಕೆಲವೊಮ್ಮೆ ಕೈಕೊಟ್ಟಾಗ ಇಲ್ಲವೇ ಟಾಫ್ರಿಕ್ ನಿಯಮಗಳನ್ನು ಮಿರಿ ವಾಹನ ಚಾಲನೆ ಮಾಡುವಾಗ ಅಪಘಾತಗಳು ಸಂಭವಿಸುವುದು ಸಾಮಾನ್ಯ. ಆದ್ರೆ ಇಲ್ಲೊಂದು ಅಪಘಾತ ಪ್ರಕರಣವನ್ನು ನೋಡಿದ್ರೆ ನಿಮಗೆ ಶಾಕ್ ಆಗದೆ ಇರಲಾರದು.
ಸಾಮಾನ್ಯವಾಗಿ ವಾಹನ ಚಾಲನೆ ವೇಳೆ ತಾಂತ್ರಿಕ ಅಂಶಗಳು ಕೆಲವೊಮ್ಮೆ ಕೈಕೊಟ್ಟಾಗ ಇಲ್ಲವೇ ಟಾಫ್ರಿಕ್ ನಿಯಮಗಳನ್ನು ಮಿರಿ ವಾಹನ ಚಾಲನೆ ಮಾಡುವಾಗ ಅಪಘಾತಗಳು ಸಂಭವಿಸುವುದು ಸಾಮಾನ್ಯ. ಆದ್ರೆ ಇಲ್ಲೊಂದು ಅಪಘಾತ ಪ್ರಕರಣವನ್ನು ನೋಡಿದ್ರೆ ನಿಮಗೆ ಶಾಕ್ ಆಗದೆ ಇರಲಾರದು..
ಹೌದು, ಕಾರು ಚಾಲನೆ ವೇಳೆ ಗಂಡ-ಹೆಂಡತಿ ಜಗಳವು ದುರಂತದಲ್ಲಿ ಅಂತ್ಯವಾಗಿದ್ದು, ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರು ಚಾಲನೆ ವೇಳೆ ಬೇರೆಡೆ ಗಮನ ಹರಿಸಿದ್ದೇ ಈ ದುರಂತಕ್ಕೆ ಕಾರಣ ಎನ್ನಲಾಗಿದ್ದು, ಆಟೋ ರಿಕ್ಷಾ ಗುದ್ದಿದ ಪರಿಣಾಮ ಸ್ವಿಫ್ಟ್ ಕಾರಿನಲ್ಲಿದ್ದ ಇಬ್ಬರು ಮತ್ತು ಆಟೋದಲ್ಲಿದ್ದ ಇಬ್ಬರು ಮಹಿಳೆಯರು ಕೂಡಾ ಪ್ರಾಣಕಳೆದುಕೊಂಡಿದ್ದಾರೆ.
ಅಂದಹಾಗೆ ಈ ಘಟನೆ ನಡೆದಿರುವುದು ರಾಜಸ್ತಾನದ ಬಿಕಾನೇರ್ ಜಿಲ್ಲೆಯಲ್ಲಿ. ಮಾರುತಿ ಸುಜುಕಿ ಸ್ವಿಫ್ಟ್ನಲ್ಲಿ ಹೋಗುತ್ತಿದ್ದ ದಂಪತಿಗಳಿಬ್ಬರು ವೈಯಕ್ತಿಕ ಕಾರಣಗಳಿಂದ ಜಗಳಕ್ಕಿಳಿದ್ದಾರೆ. ಈ ವೇಳೆ ಗಮನ ಬೇರೆಡೆ ಹೋದ ಪರಿಣಾಮ ವೇಗದಲ್ಲಿದ್ದ ಆಟೋ ರಿಕ್ಷಾಗೆ ಸ್ವಿಫ್ಟ್ ಕಾರು ಅಡ್ಡ ಬಂದಿದೆ.
ಆಟೋ ರಿಕ್ಷಾ ವೇಗದಲ್ಲಿದ್ದ ಕಾರಣ ಕಾರಿನಲ್ಲಿದ್ದ ದಂಪತಿಗಳಿಬ್ಬರು ಸೇರಿ ಆಟೋ ರಿಕ್ಷಾದಲ್ಲಿದ್ದ ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದು, ಮಾರುತಿ ಸುಜುಕಿ ಸ್ವಿಫ್ಟ್ ಕಾರು ಮತ್ತು ಆಟೋ ರಿಕ್ಷಾ ಎರಡು ಸಹ ಸಂಪೂರ್ಣ ಜಖಂಗೊಂಡಿದೆ.
ಇನ್ನು ಘಟನೆಗೂ ಮುನ್ನ ದಂಪತಿಯ ಜಗಳ ನೋಡಿದ್ದ ಮತ್ತೊಬ್ಬ ಕಾರು ಮಾಲೀಕ ಮುಂದೆ ನೋಡಿಕೊಂಡು ಸರಿಯಾಗಿ ಕಾರು ಚಾಲನೆ ಮಾಡುವಂತೆ ಎಚ್ಚರಿಕೆ ನೀಡಿದ್ದನಂತೆ. ಆದಾಗಿ 5 ನಿಮಿಷದಲ್ಲೇ ಈ ದುರಂತ ನಡೆದಿದೆ ಎಂದು ರಾಜಸ್ತಾನ ಪ್ರತಿಕಾ ವರದಿ ಮಾಡಿದೆ.
ವರದಿಗಳ ಪ್ರಕಾರ, ಆಟೋ ರಿಕ್ಷಾದಲ್ಲಿ ಚಾಲನಕನು ಸೇರಿ ಒಟ್ಟು 7 ಜನ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎನ್ನಲಾಗಿದ್ದು, ವೇಗದಲ್ಲಿದ್ದ ಆಟೋ ರಿಕ್ಷಾ ಗುದ್ದಿದ ಪರಿಣಾಮ ಆಟೋದಲ್ಲಿದ್ದ ಇಬ್ಬರು ವೃದ್ಧ ಮಹಿಳೆಯರು ಸೇರಿ ಕಾರಿನಲ್ಲಿದ್ದ ದಂಪತಿ ಸಹ ಮೃತಪಟ್ಟಿದ್ದಾರೆ.
ಜೊತೆಗೆ ಆಟೋ ಚಾಲಕ ಮತ್ತು ಒಬ್ಬ ಬಾಲಕನಿಗೆ ಗಂಭೀರ ಪ್ರಮಾಣದ ಗಾಯಗಳಾಗಿದ್ದು, ಮೃತ ದಂಪತಿಯನ್ನು ದೇವ್ ಪ್ರತಾಪ್(28) ಮತ್ತು ಪ್ರಿಯಾಂಕ್ ಪ್ರತಾಪ್(25) ಎಂದು ಗುರುತಿಸಲಾಗಿದೆ. ಈ ದಂಪತಿಗಳು ವರ್ಷದ ಹಿಂದಷ್ಟೇ ವಿವಾಹವಾಗಿದ್ದರಂತೆ.
ಇಂಡಿಯನ್ ನೆವಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ದೇವ್ ಪ್ರತಾಪ್ ಕಳೆದ ವಾರವಷ್ಟೇ ರಜೆ ಮೇಲೆ ಸ್ವಗ್ರಾಮಕ್ಕೆ ಬಂದಿದ್ದ. ಈ ವೇಳೆ ಸಂಬಂಧಿಯೊಬ್ಬರ ವಿವಾಹಕ್ಕೆ ಹೊರಡುವಾಗ ಗಂಡ-ಹೆಂಡತಿ ನಡುವೆ ಮಾತಿನ ಚಕಮಕಿ ನಡೆದಿದೆ.
ಈ ವೇಳೆ ಕಾರು ಚಾಲನೆ ಮಾಡುತ್ತಲೇ ಜಗಳವಾಡುತ್ತಿದ್ದ ದೇವ್ ಪ್ರತಾಪ್, ವೇಗದಲ್ಲಿದ್ದ ಆಟೋ ರಿಕ್ಷಾಗೆ ಕಾರು ಅಡ್ಡ ತಂದಿದ್ದಾನೆ. ಈ ವೇಳೆ ಕಾರು ಮುಂದೆಯೇ ಇದ್ದ ಪರಿಣಾಮ ನಿಯಂತ್ರಣ ಸಿಗದ ರಿಕ್ಷಾ ಕಾರಿನ ಮಧ್ಯೆ ಭಾಗಕ್ಕೆ ರಭಸಕ್ಕೆ ಗುದ್ದಿದೆ.
ಅಪಘಾತದ ವೇಳೆ ಕಾರಿನಲ್ಲಿದ್ದ ಸುರಕ್ಷಾ ಸಾಧನಗಳು (ಏರ್ಬ್ಯಾಗ್,ಎಬಿಎಸ್) ಸಹ ಯಾವುದೇ ಪ್ರಯೋಜನಕ್ಕೆ ಬಂದಿಲ್ಲಾ. ಜೊತೆಗೆ ಅತಿಯಾಗಿ ಜನರನ್ನು ತುಂಬಿಕೊಂಡ ಹೊರಟಿದ್ದ ಆಟೋ ರಿಕ್ಷಾ ಸಹ ತುರ್ತು ಸಂದರ್ಭದಲ್ಲಿ ನಿಯಂತ್ರಣಕ್ಕೆ ಬರದಿರುವುದು ಅಪಘಾತದ ಭೀಕರತೆಯನ್ನು ಹೆಚ್ಚಿಸಿದೆ ಎನ್ನಬಹುದು.
ಒಟ್ಟಿನಲ್ಲಿ ಗಂಡ ಹೆಂಡತಿಯ ಜಗಳ ಭೀಕರ ಅಪಘಾತದಲ್ಲಿ ಅಂತ್ಯವಾಗಿದ್ದು, ಯಾವುದೇ ಕಾರಣಕ್ಕೂ ಚಾಲನೆ ವೇಳೆ ಇಂತಹ ತಪ್ಪುಗಳನ್ನು ಮಾಡಬೇಡಿ. ಇದು ನಿಮಗೆ ಅಷ್ಟೇ ಅಲ್ಲದೇ ಇತರರ ಜೀವ ಕುತ್ತು ತರುವುದರಲ್ಲಿ ಯಾವುದೇ ಅನುಮಾನವಿಲ್ಲ ಎನ್ನವುದಕ್ಕೆ ಈ ಘಟನೆಯೇ ಸಾಕ್ಷಿ..
ಡ್ರೈವ್ಸ್ಪಾರ್ಕ್ ಕನ್ನಡ ವಿಭಾಗದಲ್ಲಿನ ಟಾಪ್ ಸ್ಟೋರಿಗಳು:
ಅಪ್ರಾಪ್ತರ ಕೈಗೆ ಬೈಕ್ ಕೊಟ್ಟಿದ್ದಕ್ಕೆ ಜೈಲು ಪಾಲಾದ 26 ಪೋಷಕರು
ಮಗು ಮಾಡಿದ ಒಂದು ಸಣ್ಣ ತಪ್ಪಿನಿಂದಾಗಿ ಕಾರಿನಲ್ಲಿದ್ದ 7 ಮಂದಿ ದುರ್ಮರಣ....
ಬಿಡುಗಡೆಯಾಗಲಿರುವ ವಿನೂತನ 7 ಸೀಟರ್ ವ್ಯಾಗನರ್ ಬೆಲೆ ಎಷ್ಟು ಗೊತ್ತಾ?
ಹೆಲ್ಮೆಟ್ ಹಾಕದ ಬೈಕ್ ಸವಾರನ ಮೇಲೆ ಶೂ ಎಸೆದ ಟ್ರಾಫಿಕ್ ಪೊಲೀಸ್....
ಮರು ನೋಂದಣಿಗಾಗಿ ಬರೋಬ್ಬರಿ 60 ಲಕ್ಷ ತೆರಿಗೆ ಪಾವತಿಸಿದ ಬೆಂಟ್ಲಿ ಕಾರು ಮಾಲೀಕ..