Just In
- 1 hr ago ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- 2 hrs ago Suzuki Access Electric: ಸುಜುಕಿ ಆಕ್ಸೆಸ್ ಎಲೆಕ್ಟ್ರಿಕ್ ಸ್ಕೂಟರ್ ಈ ವರ್ಷ ಬಿಡುಗಡೆ ಸಾಧ್ಯತೆ!
- 3 hrs ago Royal Enfield Himalayan ಸುಲಭವಾಗಿ ಖರೀದಿಸುವುದು ಹೇಗೆ?: ಇಲ್ಲಿದೆ ಡೌನ್ಪೇಮೆಂಟ್, EMI ಮಾಹಿತಿಗಳು!
- 3 hrs ago ಮಿಂಚಿನ ವೇಗಕ್ಕೆ ಸರಿಸಾಟಿಯಾಗಿ ಬೆಂಗಳೂರಿನ ಹೊಸ ಅಲ್ಟ್ರಾವೈಲೆಟ್ ಬೈಕ್ ಬಿಡುಗಡೆ: 323KM ರೇಂಜ್
Don't Miss!
- News Kotak Mahindra Bank: ಕೋಟಕ್ ಮಹಿಂದ್ರಾ ಬ್ಯಾಂಕ್ ಮೇಲೆ ಆರ್ಬಿಐ ನಿರ್ಬಂಧ: ಗ್ರಾಹಕರ ಮೇಲೆ ಪರಿಣಾಮಗಳೇನು?
- Movies Swathi Royal; ಒಂಬತ್ತನೇ ಕ್ಲಾಸ್ ನಲ್ಲೇ ಲವ್ವಲ್ಲಿ ಬಿದ್ದ ಅಮೃತಧಾರೆ ಅಪರ್ಣಾ..!
- Sports DC vs GT IPL 2024: ಡೆಲ್ಲಿ ಕೋಟೆಯಲ್ಲಿ ವಿಜಯದ ಪತಾಕೆ ಹಾರಿಸುತ್ತಾ ಗುಜರಾತ್?; ಟಾಸ್ ವರದಿ, ಆಡುವ ಬಳಗ
- Lifestyle 5 ಸೆಕೆಂಡ್ನಲ್ಲಿ ಈ ಚಿತ್ರದಲ್ಲಿರುವ ಮೇಕೆ ಮಾಲೀಕನ ಹುಡುಕಿ..! ಎಲ್ಲಿದ್ದಾನೆ ಗೊತ್ತಾ?
- Technology Bengaluru: ಆ ಆಪ್ ಇನ್ಸ್ಟಾಲ್ ಮಾಡಿದ್ದೇ ತಡ 5.2 ಕೋಟಿ ರೂ. ಮಾಯ.. ನೀವು ಎಚ್ಚರ
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಾಹನ ಸವಾರರೇ ಇತ್ತ ಗಮನಿಸಿ- ಬಿಎಸ್-4 ವಾಹನಗಳ ನಿಷೇಧಕ್ಕೆ ದಿನಗಣನೆ ಶುರು..!
ದೇಶಾದ್ಯಂತ ಸದ್ಯ ಬಿಎಸ್-4 ಮತ್ತು ಅದಕ್ಕೂ ಹೆಚ್ಚಿನ ಮಟ್ಟದ ತಾಂತ್ರಿಕ ಗುಣವೈಶಿಷ್ಟ್ಯ ಹೊಂದಿರುವ ವಾಹನಗಳಿಗೆ ಮಾತ್ರವೇ ಉತ್ಪಾದನೆ ಮತ್ತು ಮಾರಾಟಕ್ಕೆ ಅವಕಾಶವಿದ್ದು, ಇದು ಕೂಡಾ ಮುಂದಿನ ಕೆಲವೇ ದಿನಗಳಲ್ಲಿ ನಿಷೇಧವಾಗುವುದು ಖಚಿತವಾಗಿದೆ.
ಈ ಹಿಂದೆ ಕೇಂದ್ರ ಸರ್ಕಾರವು 2017ರ ಏಪ್ರಿಲ್ 1ರಿಂದ ಅನ್ವಯವಾಗುವಂತೆ ದೇಶಾದ್ಯಂತ ಬಿಎಸ್-3 (ಭಾರತ್ ಸ್ಟೇಜ್) ಸೌಲಭ್ಯಗಳನ್ನು ಒಳಗೊಂಡ ವಾಹನಗಳ ಉತ್ಪಾದನೆ ಮತ್ತು ಮಾರಾಟ ಪ್ರಕ್ರಿಯೆ ಮೇಲೆ ನಿಷೇಧ ನಿಷೇಧ ಹೇರಿದ್ದಲ್ಲದೆ ಬಿಎಸ್-4 ಮತ್ತು ಅದಕ್ಕೂ ಮೇಲ್ಪಟ್ಟ ವಾಹನ ಮಾದರಿಗಳ ಮಾರಾಟಕ್ಕೆ ಮಾತ್ರವೇ ಅವಕಾಶ ನೀಡಿತ್ತು.
ಇದೀಗ ಮತ್ತೊಂದು ಮಹತ್ವದ ಹೆಜ್ಜೆಯಿಡುತ್ತಿರುವ ಕೇಂದ್ರ ಸರ್ಕಾರವು ಸುಪ್ರೀಂಕೋರ್ಟ್ ಸೂಚನೆಯೆಂತೆ 2020ರ ಏಪ್ರಿಲ್ 1ರಿಂದ ಬಿಎಸ್-4 ವಾಹನಗಳ ಉತ್ಪಾದನೆ ಮತ್ತು ಮಾರಾಟ ಮೇಲೆ ನಿಷೇಧ ಹೇರುವುದು ಖಚಿತವಾಗಿದ್ದು, ಬಿಎಸ್-6 ವಾಹನಗಳು ಮತ್ತು ಅದಕ್ಕೂ ಹೆಚ್ಚಿನ ಮಟ್ಟದ ವಾಹನ ಮಾದರಿಗಳಿಗೆ ಮಾತ್ರವೇ ಅವಕಾಶ ನೀಡಲಿದೆ.
ಹೊಸ ನಿಯಮ ಜಾರಿ ಉದ್ದೇಶ ಏನು?
ವಿಶ್ವಾದ್ಯಂತ ಈಗಾಗಲೇ ಪರಿಸರ ಮಾಲಿನ್ಯ ಪ್ರಮಾಣವನ್ನು ತಗ್ಗಿಸುವ ಉದ್ದೇಶದಿಂದ ಹೆಚ್ಚು ಹೊಗೆ ಉಗುಳುವ ವಾಹನಗಳಿಗೆ ಬ್ರೇಕ್ ಹಾಕಲು ಯುರೋಪ್ನಲ್ಲಿ ಯುರೋ-6, ಇತರೆ ಖಂಡಗಳಲ್ಲಿ ವಿವಿಧ ಮಾದರಿಯ ಗುಣಮಟ್ಟದ ವಾಹನಗಳಿಗೆ ಮಾತ್ರವೇ ಅವಕಾಶವಿದ್ದು, ಇದರ ಭಾಗವಾಗಿ ಭಾರತದಲ್ಲಿ ಬಿಎಸ್-6 ವಾಹನಗಳು ರಸ್ತೆಗಿಳಿಯಲಿವೆ.
ಯುರೋಪ್ನಲ್ಲಿ ಈ ಹಿಂದೆ 2016ರಿಂದಲೇ ಯುರೋ-6 ತಾಂತ್ರಿಕ ಅಂಶಗಳನ್ನು ಹೊಂದಿರುವ ವಾಹನಗಳಿಗೆ ಮಾತ್ರವೇ ಉತ್ಪಾದನೆ ಮತ್ತು ಮಾರಾಟಕ್ಕೆ ಅವಕಾಶ ನೀಡಲಾಗುತ್ತಿದ್ದು, ಇದು ಬಿಎಸ್-6 ವೈಶಿಷ್ಟ್ಯತೆಗೆ ಸರಿಸಮನಾಗಿದೆ.
ಹೊಸ ನಿಯಮ ಜಾರಿಯಿಂದಾಗಿ ವಾಹನ ಎಂಜಿನ್ ಮಾದರಿಗಳಲ್ಲಿ ಭಾರೀ ಬದಲಾವಣೆಯಾಗಲಿದ್ದು, ಸದ್ಯ ಮಾರುಕಟ್ಟೆಯಲ್ಲಿರುವ ಎಂಜಿನ್ ಮಾದರಿಗಿಂತಲೂ ಬಿಎಸ್-6 ಹೆಚ್ಚಿನ ಗುಣಮಟ್ಟದೊಂದಿಗೆ ಹೊಗೆ ಉಗುಳುವ ಪ್ರಮಾಣದಲ್ಲಿ ಪರಿಣಾಮಕಾರಿ ತಗ್ಗಿಸಲಿದೆ.
ಹೀಗಿರುವಾಗ ಮಾಲಿನ್ಯದಲ್ಲಿ ಬಹುದೊಡ್ಡ ಕೊಡುಗೆ ಹೊಂದಿರುವ ಭಾರತದಲ್ಲಿ ಬಿಎಸ್-6 ವೈಶಿಷ್ಟ್ಯತೆಯ ವಾಹನಗಳ ಉತ್ಪಾದನೆ ಮತ್ತು ಮಾರಾಟಕ್ಕೆ ಹೆಚ್ಚಿನ ಒತ್ತಡಗಳಿದ್ದು, ಇದೀಗ ಸುಪ್ರೀಂಕೋರ್ಟ ಕೂಡಾ ಈ ಕುರಿತಂತೆ ಮಹತ್ವದ ಆದೇಶವನ್ನು ಹೊರಡಿಸಿರುವುದು ಕೇಂದ್ರ ಸರ್ಕಾರವು ಪಾಲನೆ ಮಾಡಲೇಬೇಕಾದ ಅನಿವಾರ್ಯತೆಯಲ್ಲಿದೆ.
ಸುಪ್ರೀಂಕೋರ್ಟ್ ತ್ರಿಸದಸ್ಯ ಪೀಠದ ತೀರ್ಪಿನ ಪ್ರಕಾರ, ಮುಂಬರುವ ದಿನಗಳಲ್ಲಿ ಮಾಲಿನ್ಯ ತಡೆಯಲು ಬಿಎಸ್-6 ತಾಂತ್ರಿಕ ಅಂಶಗಳ ಅಳವಡಿಕೆ ಅವಶ್ಯವಿದ್ದು, 2020ರ ಏಪ್ರಿಲ್ 1ರಿಂದಲೇ ಹೊಸ ನಿಯಮ ಜಾರಿಗೆ ಸಿದ್ದತೆ ಮಾಡಿಕೊಳ್ಳುವಂತೆ ಕೇಂದ್ರಕ್ಕೆ ಖಡಕ್ ಸೂಚನೆ ನೀಡಿದೆ.
ಇದರಲ್ಲಿ ಗಮನಿಸಬೇಕಾದ ಮತ್ತೊಂದು ಪ್ರಮುಖ ವಿಚಾರ ಅಂದ್ರೆ, ಭಾರೀ ಗಾತ್ರದ ವಾಣಿಜ್ಯ ಬಳಕೆಯ ವಾಹನಗಳಿಗೆ ಕೆಲವು ವಿನಾಯ್ತಿ ನೀಡಲಾಗಿದ್ದು, 2020ರ ಏಪ್ರೀಲ್ 1ರ ಬದಲಾಗಿ 2020ರ ಸೆಪ್ಟೆಂಬರ್ 1ರಿಂದ ಭಾರೀ ಗಾತ್ರದ ಬಿಎಸ್-4 ವಾಹನಗಳಿಗೆ ಹೊಸ ನೀತಿ ಅನ್ವಯವಾಗಲಿದೆ.
ಇದಕ್ಕೆ ಕಾರಣ, ಭಾರೀ ಗಾತ್ರದ ವಾಣಿಜ್ಯ ವಾಹನಗಳ ಮಾರಾಟ ಪ್ರಕ್ರಿಯೆಯು ಪ್ರಯಾಣಿಕ ವಾಹನಗಳಿಂತ ಕಡಿಮೆ ಪ್ರಮಾಣದಿಂದಾಗಿ ಸುಪ್ರೀಂ ಡೆಡ್ಲೈನ್ ಒಳಗಾಗಿ ಸ್ಟಾಕ್ ಮಾರಾಟ ಸಾಧ್ಯವಾದು. ಇದರಿಂದ ಇಂತಹ ಬಿಎಸ್-4 ವಾಹನಗಳನ್ನು ಮಾರಾಟ ಮಾಡಲು ಹೆಚ್ಚುವರಿ ಅವಕಾಶ ನೀಡಲಾಗಿದೆ.
125 ಸಿಸಿ ಬೈಕ್ಗಳಿಗೂ ಎಬಿಎಸ್..!
ವಾಹನ ಜಗತ್ತಿನ ಕ್ರಾಂತಿಕಾರಿ ಬೆಳವಣಿಗೆಯೊಂದರಲ್ಲಿ ದೇಶದಲ್ಲೂ 125 ಸಿಸಿ ಹಾಗೂ ಮೇಲ್ಪಟ್ಟ ಬೈಕ್ಗಳಿಗೆ ಆ್ಯಂಟಿ ಲಾಕ್ ಬ್ರೇಕಿಂಗ್ ಸಿಸ್ಟಂ (ಎಬಿಎಸ್) ಬಳಕೆ ಕೂಡಾ ಕಡ್ಡಾಯವಾಗಲಿದೆ. ದೇಶದಲ್ಲಿ ರಸ್ತೆ ಅಪಘಾತದಿಂದಾಗಿ ಸಂಭವಿಸುತ್ತಿರುವ ಸಾವಿನ ಸಂಖ್ಯೆ ಹೆಚ್ಚುತ್ತಿರುವ ಇಂತಹದೊಂದು ಗಮನಾರ್ಹ ಬೆಳವಣೆಗೆ ಕಂಡುಬಂದಿದೆ.
MOST READ: ಇನ್ಮುಂದೆ ಬೇರೆಯವರ ಕೈಗೆ ನಿಮ್ಮ ವಾಹನಗಳನ್ನು ನೀಡುವುದಕ್ಕೂ ಮುನ್ನ ಹತ್ತು ಬಾರಿ ಯೋಚಿಸಿ..!
ಸಾರಿಗೆ ಇಲಾಖೆಯು 2019ರ ಮಾರ್ಚ್ನಿಂದಲೇ 125ಸಿಸಿ ಮೇಲ್ಪಟ್ಟ ಬೈಕ್ಗಳಿಗೆ ಎಬಿಎಸ್ ಕಡ್ಡಾಯ ಬಳಕೆಯನ್ನು ಜಾರಿಗೆ ತರುತ್ತಿದ್ದು, ನಿಮಗೆಲ್ಲರಿಗೂ ತಿಳಿದಿರುವಂತೆಯೇ ಭಾರತೀಯ ಮಧ್ಯಮ ವರ್ಗದ ಜನರು ಮೋಟಾರುಸೈಕಲ್ಗಳನ್ನೇ ಅತಿ ಹೆಚ್ಚು ನೆಚ್ಚಿಕೊಂಡಿದ್ದಾರೆ. ಇದರಿಂದಲೇ ಮೋಟಾರುಸೈಕಲ್ ಮಾರುಕಟ್ಟೆ ಆಗಾಧವಾಗಿ ಬೆಳೆದು ನಿಂತಿದೆ.
ಇನ್ನೊಂದೆಡೆ ಸುರಕ್ಷತೆಯತ್ತ ಗಮನ ಹಾಯಿಸಿದಾಗ ಅತ್ಯಂತ ಕಳಮೆ ಮಟ್ಟದಲ್ಲಿದ್ದು, ಸಾರಿಗೆ ಸಚಿವಾಲಯದ 2017ರ ಮಾಹಿತಿ ಪ್ರಕಾರ ದೇಶಾದ್ಯಂತ ರಸ್ತೆ ಅಪಘಾತಗಳಲ್ಲಿ 40 ಸಾವಿರಕ್ಕೂ ಹೆಚ್ಚು ದ್ವಿಚಕ್ರ ವಾಹನ ಸವಾರರು ಸಾವೀಗೀಡಾಗಿದ್ದರು.
MOST READ: ಅತಿ ಕಡಿಮೆ ಬೆಲೆಯಲ್ಲಿ ಬಿಡುಗಡೆಯಾದ ಹ್ಯುಂಡೈ ಹೊಸ ಸ್ಯಾಂಟ್ರೋ
ಅಂದರೆ ದೇಶದ ರಸ್ತೆಯಲ್ಲಿ ನಡೆಯುವ ಒಟ್ಟು ಅಪಘಾತದ ಶೇಕಡಾ 60ರಷ್ಟು ದ್ವಿಚಕ್ರ ಸವಾರರೇ ಹೆಚ್ಚು ಪ್ರಾಣಕಳೆದುಕೊಳ್ಳುತ್ತಿದ್ದು, ಇಂತಹ ಬಹುತೇಕ ಪ್ರಕರಣಗಳಲ್ಲಿ ಸವಾರರು ಕನಿಷ್ಠ ಹೆಲ್ಮೆಟ್ ಕೂಡಾ ಧರಿಸುವುದಿಲ್ಲವೆಂಬುದು ಕಂಡುಬಂದಿದೆ.
ಇದರಿಂದ ಪ್ರಯಾಣಿಕ ಅಪಾಯದಿಂದ ಪಾರಾಗುವ ಎಲ್ಲ ಸಾಧ್ಯತೆಗಳು ಕ್ಷೀಣಿಸುತ್ತದೆ. ಈಗ ಯುರೋಪ್ ರಸ್ತೆ ಕಾನೂನಿಂದ ಪ್ರೇರಣೆ ಪಡೆದಿರುವ ಭಾರತದ ಸಾರಿಗೆ ಅಧಿಕಾರಿಗಳು ದೇಶದಲ್ಲೂ 125 ಸಿಸಿ ಹಾಗೂ ಮೇಲ್ಪಟ್ಟ ದ್ವಿಚಕ್ರ ವಾಹನಗಳಿಗೆ ಎಬಿಎಸ್ ಬಳಕೆ ಕಡ್ಡಾಯಗೊಳಿಸಲು ನಿರ್ಧರಿಸಿದೆ. ಇದನ್ನು ಹಂತ ಹಂತವಾಗಿ ಜಾರಿಗೆ ತರಲಾಗುವುದು.
ಅಷ್ಟಕ್ಕೂ ಎಬಿಎಸ್ ಎಂದರೇನು? ಹೇಗೆ ಕೆಲಸ ಮಾಡುತ್ತದೆ?
ಎಬಿಎಸ್ ಪೂರ್ಣ ರೂಪ ಆ್ಯಂಟಿ ಲಾಕ್ ಬ್ರೇಕಿಂಗ್ ಸಿಸ್ಟಂ (ಎಬಿಎಸ್). ಸಾಮಾನ್ಯವಾಗಿ ಹಠಾತ್ ಆಗಿ ಬ್ರೇಕ್ ಒತ್ತಿದಾಗ ಚಕ್ರದ ಚಲನೆ ಒಮ್ಮೆಲೇ ನಿಲುಗಡೆಯಾಗುತ್ತದೆ. ಇದರ ಪರಿಣಾಮ ಸ್ಟೀರಿಂಗ್ ಹಾಗೂ ಹ್ಯಾಂಡಲ್ ಲಾಕ್ ಆಗಿ ಗಾಡಿ ಸ್ಕಿಡ್ ಆಗುವ ಸಾಧ್ಯತೆ ಇದ್ದು, ಈ ವೇಳೆ ಚಾಲಕರಿಗೆ ಅಪಘಾತದಿಂದ ತಪ್ಪಿಸಿಕೊಳ್ಳಲು ಅವಕಾಶವಿರುವುದಿಲ್ಲ.
ಇಂತಹ ಅವಘಡ ಸಾಧ್ಯತೆಗಳನ್ನು ತಪ್ಪಿಸುವ ಹಾಗೂ ಬ್ರೇಕಿಂಗ್ ಅಂತರವನ್ನು ಸಾಕಷ್ಟು ಕಡಿಮೆ ಮಾಡುವ ನಿಟ್ಟಿನಲ್ಲಿ ಆಟೋ ಎಂಜಿನಿಯರ್ಗಳು ಆ್ಯಂಟಿ ಲಾಕ್ ಬ್ರೇಕಿಂಗ್ ಸಿಸ್ಟಂ (ಎಬಿಎಸ್) ಎಂಬ ಬ್ರೇಕಿಂಗ್ ತಂತ್ರಜ್ಞಾನವನ್ನು ಪರಿಚಯಿಸಿರುವುದು.
ಬ್ರೇಕ್ ಒತ್ತಿದ ಸಂದರ್ಭದಲ್ಲಿ ಚಕ್ರ ಹಠಾತ್ ಆಗಿ ಬಂದ್ ಆಗುವುದಿಲ್ಲ. ಬದಲಾಗಿ ವೇಗವನ್ನು ಕಡಿತಗೊಳಿಸಿ, ತಿರುಗಿಸುತ್ತಲೇ ಇರುತ್ತದೆ. ಇದರಿಂದ ಅಪಘಾತ ಸಂದರ್ಭದಲ್ಲಿ ಸವಾರರು ತಮ್ಮ ವಾಹನದ ದಿಕ್ಕನ್ನು ಬದಲಾಯಿಸುವ ಅವಕಾಶವಿರುತ್ತದೆ. ಈ ಮೂಲಕ ಆಗಬಹುದಾದ ದುರಂತಗಳನ್ನು ತಪ್ಪಿಸಬಹುದಾಗಿದೆ.