Just In
- 3 hrs ago ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- 4 hrs ago Suzuki Access Electric: ಸುಜುಕಿ ಆಕ್ಸೆಸ್ ಎಲೆಕ್ಟ್ರಿಕ್ ಸ್ಕೂಟರ್ ಈ ವರ್ಷ ಬಿಡುಗಡೆ ಸಾಧ್ಯತೆ!
- 5 hrs ago Royal Enfield Himalayan ಸುಲಭವಾಗಿ ಖರೀದಿಸುವುದು ಹೇಗೆ?: ಇಲ್ಲಿದೆ ಡೌನ್ಪೇಮೆಂಟ್, EMI ಮಾಹಿತಿಗಳು!
- 5 hrs ago ಮಿಂಚಿನ ವೇಗಕ್ಕೆ ಸರಿಸಾಟಿಯಾಗಿ ಬೆಂಗಳೂರಿನ ಹೊಸ ಅಲ್ಟ್ರಾವೈಲೆಟ್ ಬೈಕ್ ಬಿಡುಗಡೆ: 323KM ರೇಂಜ್
Don't Miss!
- News ಕುಡುಕರಿಗೆ ಎಣ್ಣೆ ಸಿಗುತ್ತಿಲ್ಲ, ಪರದಾಟ ನೋಡಲು ಆಗುತ್ತಿಲ್ಲ!
- Movies Bhagyalakshmi: ಶ್ರೇಷ್ಠಾ-ತಾಂಡವ್ ಮದುವೆಗೆ ಕುಸುಮಾ ಹಾರೈಕೆ; ಸತ್ಯ ಗೊತ್ತಾದ್ರೆ ಐತೆ ಮಾರಿ ಹಬ್ಬ!
- Sports DC vs GT IPL 2024: ಅಕ್ಷರ್, ಪಂತ್ ಭರ್ಜರಿ ಬ್ಯಾಟಿಂಗ್; ಗುಜರಾತ್ಗೆ ಸವಾಲಿನ ಗುರಿ ನೀಡಿದ ಡೆಲ್ಲಿ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಪಘಾತದಲ್ಲಿ ಮೃತಪಟ್ಟವರ ಪರಿಹಾರದ ಮೊತ್ತವನ್ನ 10 ಪಟ್ಟು ಹೆಚ್ಚಳ ಮಾಡಿದ ಕೇಂದ್ರ ಸರ್ಕಾರ...
ಮೃತರ ಕುಟುಂಬಗಳ ನೆರವಿಗೆ ಧಾವಿಸಿರುವ ಕೇಂದ್ರ ಸರ್ಕಾರವು ಸದ್ಯ ಪಾವತಿ ಮಾಡಲಾಗುತ್ತಿರುವ ಪರಿಹಾರದ ಮೊತ್ತವನ್ನು ಹತ್ತು ಪಟ್ಟು ಹೆಚ್ಚಳ ಮಾಡಿದೆ.
ದೇಶಾದ್ಯಂತ ಪ್ರತಿದಿನ ಹತ್ತಾರು ಭೀಕರ ಅಪಘಾತ ಪ್ರಕರಣಗಳು ನಡೆಯುತ್ತಲೇ ಇರುತ್ತವೆ. ಬಹುತೇಕ ಪ್ರಕರಣಗಳಲ್ಲಿ ರಸ್ತೆ ಸುರಕ್ಷಾ ನಿಯಮಗಳನ್ನು ಪಾಲಿಸದ ಹಿನ್ನೆಲೆ ಅನೇಕ ವಾಹನ ಸವಾರರು ಮತ್ತು ಪ್ರಯಾಣಿಕರು ತಮ್ಮ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಈ ಹಿನ್ನೆಲೆ ಮೃತರ ಕುಟುಂಬಗಳ ನೆರವಿಗೆ ಧಾವಿಸಿರುವ ಕೇಂದ್ರ ಸರ್ಕಾರವು ಸದ್ಯ ಪಾವತಿ ಮಾಡಲಾಗುತ್ತಿರುವ ಪರಿಹಾರದ ಮೊತ್ತವನ್ನು ಹತ್ತು ಪಟ್ಟು ಹೆಚ್ಚಳ ಮಾಡಿದೆ.
ಅಪಘಾತದಲ್ಲಿ ಸಾವನ್ನಪ್ಪಿದ ಮತ್ತು ಗಂಭೀರವಾಗಿ ಗಾಯಗೊಂಡ ಸಂತ್ರಸ್ತರಿಗೆ ಇದುವರೆಗೆ ಒದಗಿಸಲಾಗುತ್ತಿದ್ದ ಪರಿಹಾರದ ಮೊತ್ತವನ್ನು ಹತ್ತು ಪಟ್ಟು ಹೆಚ್ಚಳ ಮಾಡಿರುವ ಕೇಂದ್ರ ಸರ್ಕಾರವು, ಪರಿಹಾರದ ಮೊತ್ತವನ್ನು ಪಡೆಯುವಲ್ಲಿ ಇದುವರೆಗೆ ಇದ್ದ ಕೆಲವು ನಿಯಮಗಳನ್ನು ಸಡಿಸಲಾಗಿರುವುದು ಮತ್ತೊಂದು ಪ್ರಮುಖ ವಿಚಾರ.
ಸದ್ಯ ಅಪಘಾತದಲ್ಲಿ ಮೃತರ ಕುಟುಂಬಗಳಿಗೆ ಕೇಂದ್ರ ಸರ್ಕಾರವು ರೂ. 50 ಸಾವಿರ ಪರಿಹಾರ ನೀಡುತ್ತಿದ್ದು, ಅಪಘಾತಗಳಲ್ಲಿ ಗಂಭೀರ ಪ್ರಮಾಣದಲ್ಲಿ ಗಾಯಗೊಂಡ ಸಂತ್ರಸ್ತರಿಗೆ ರೂ.25 ಸಾವಿರ ಪರಿಹಾರ ಒದಗಿಸುತ್ತಿದೆ.
ಆದ್ರೆ ಕೆಲವು ಅಪಘಾತ ಪ್ರಕರಣಗಳಲ್ಲಿ ಮೃತರ ಕುಟುಂಬಗಳಿಗೆ ಒದಗಿಸಲಾಗುವ ರೂ. 50 ಸಾವಿರ ಅಥವಾ ಗಾಯಾಳುಗಳಿಗೆ ಒದಗಿಸಲಾಗುವ ರೂ. 25 ಸಾವಿರ ಪರಿಹಾರ ಯಾವುದಕ್ಕೂ ಸಾಲದು. ಕಾರಣ, ಮೃತ ವ್ಯಕ್ತಿಯನ್ನು ನಂಬಿಕೊಂಡ ಕುಟುಂಬಸ್ಥರ ಪಾಡು ಹೇಳತಿರದು.
ಇದನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರವು ಪರಿಹಾರ ಮೊತ್ತವನ್ನು 50 ಸಾವಿರದಿಂದ 5 ಲಕ್ಷ ಹೆಚ್ಚಿಸಿದ್ದು, ಗಾಯಾಳುಗಳಿಗೆ 25 ಸಾವಿರದಿಂದ 2.5 ಲಕ್ಷ ಪರಿಹಾರ ಒದಗಿಸುವ ಸುತ್ತೋಲೆಗೆ ಸಹಿ ಹಾಕಿದೆ. ಜೊತೆಗೆ ಹೊಸ ನಿಯಮವು ಈ ಕೂಡಲೇ ಜಾರಿಗೆ ಬರುವಂತೆ ನಿರ್ದೇಶನ ನೀಡಲಾಗಿದೆ.
ಕೇಂದ್ರ ಸರ್ಕಾರ ಹೊಸ ನಿಯಮದಂತೆ, ಅಪಘಾತದಲ್ಲಿ ಮೃತಪಟ್ಟ ಪ್ರತಿಯೊಬ್ಬರು 5 ಲಕ್ಷ ಪರಿಹಾರಕ್ಕೆ ಅರ್ಹರಾಗಿದ್ದು, ಕೆಲವು ಅಪಘಾತ ಪ್ರಕರಣಗಳಲ್ಲಿ ಸಂತ್ರಸ್ತರ ಕುಟುಂಬಗಳು ಇನ್ನು ಹೆಚ್ಚಿನ ಪರಿಹಾರ ಕೋರಿ ಅರ್ಜಿ ಸಲ್ಲಿಸಲು ಅವಕಾಶ ನೀಡಿದೆ.
ಮೃತರ ಕುಟಂಬಗಳಿಗೆ ಕೇಂದ್ರ ಸರ್ಕಾರವು ಒದಗಿಸುವ ರೂ. 5 ಲಕ್ಷ ಪರಿಹಾರವಲ್ಲದೇ ಇನ್ನು ಹೆಚ್ಚಿನ ಪರಿಹಾರ ಬಯಸಿದ್ದಲ್ಲಿ ಮೃತ ವ್ಯಕ್ತಿಯ ವಯಸ್ಸು 24ಕ್ಕಿಂತ ಹೆಚ್ಚು ಇರಬೇಕೆಂಬ ನಿಯಮವನ್ನು ಉಲ್ಲೇಖ ಮಾಡಿದ್ದು, ಅಂತವರು ಮಾತ್ರ ಮೋಟಾರ್ ಆಕ್ಸಿಡೆಂಟ್ ಕ್ಲೈಮ್ ಟ್ರಿಬ್ಯೂನಲ್(ಎಂಎಸಿಟಿ)ನಲ್ಲಿ ಹೆಚ್ಚಿನ ಪರಿಹಾರಕ್ಕಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ರೂ. 5 ಲಕ್ಷಕ್ಕಿಂತ ಹೆಚ್ಚಿನ ಪರಿಹಾರ ಬೇಕಿದ್ದಲ್ಲಿ ಅಪಘಾತದಲ್ಲಿ ಮೃತ ವ್ಯಕ್ತಿಯ ವಯಸ್ಸು, ಆರ್ಥಿಕ ಹಿನ್ನೆಲೆ, ಮೃತ ವ್ಯಕ್ತಿಯ ಆದಾಯವನ್ನೇ ನಂಬಿಕೊಂಡವರ ಸಂಖ್ಯೆಯ ಆಧಾರದ ಮೇಲೆ ಹೆಚ್ಚಿನ ಪರಿಹಾರ ಸಿಗಲಿದ್ದು, ಇದಕ್ಕಾಗಿ ಕಾನೂನಾತ್ಮಾಕವಾಗಿ ಸೂಕ್ತ ದಾಖಲೆ ಒದಗಿಸಬೇಕಾಗುತ್ತದೆ.
ಒಟ್ಟಿನಲ್ಲಿ ಕೇಂದ್ರ ಸರ್ಕಾರವು ಅಪಘಾತದಲ್ಲಿ ಮೃತ ಪಟ್ಟ ವ್ಯಕ್ತಿ ಕುಟುಂಬಕ್ಕೆ ಮತ್ತು ಗಂಭೀರವಾಗಿ ಗಾಯಗೊಂಡ ಸಂತ್ರಸ್ತರ ಕುಟುಂಬಗಳಿಗೆ ಆರ್ಥಿಕವಾಗಿ ಧೈರ್ಯ ತುಂಬುವ ಪ್ರಯತ್ನ ಮಾಡಿದ್ದು, ಅಷ್ಟೇ ಪ್ರಮಾಣದಲ್ಲಿ ಅಪಘಾತಗಳ ಸಂಖ್ಯೆಗಳನ್ನು ತಗ್ಗಿಸುವ ನಿಟ್ಟಿನಲ್ಲಿ ಹಲವು ಕಠಿಣ ರಸ್ತೆ ನಿಯಮಗಳನ್ನು ಜಾರಿಗೆ ತರುತ್ತಿದೆ.
ವಾಹನಗಳ ವಿಮಾ ಪ್ರಿಯಿಮಂ ಮೊತ್ತ ಹೆಚ್ಚಳ?
ಕೇಂದ್ರ ಸರ್ಕಾರವು ಅಪಘಾತದಲ್ಲಿ ಮೃತ ಕುಟುಂಬಗಳಿಗೆ ದೊಡ್ಡ ಮೊತ್ತದ ಪರಿಹಾರ ಒದಗಿಸುವ ಸಲುವಾಗಿ ಪರಿಹಾರದ ಮೊತ್ತವನ್ನು ಹತ್ತು ಪಟ್ಟು ಹೆಚ್ಚಿಸಿದ್ದು, ಅತ್ತ ವಾಹನಗಳ ಮೇಲೆ ನಿಗದಿಪಡಿಸುವ ವಿಮಾ ಪ್ರಿಯಿಯಂ ಮೊತ್ತವನ್ನು ಹೆಚ್ಚಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ. ಆದರೂ ಈ ಬಗ್ಗೆ ಯಾವುದೇ ನಿಖರ ಮಾಹಿತಿಯಿಲ್ಲ.
ಇನ್ನು ಮೃತರ ಕುಟುಂಬಗಳಿಗೆ ಕೇಂದ್ರ ಸರ್ಕಾರವು ಒದಗಿಸುವ 5 ಲಕ್ಷ ಪರಿಹಾರ ಮೊತ್ತವನ್ನು ಹೊರತುಪಡಿಸಿ ವಾಹನ ಮಾಲೀಕರು ಪಾವತಿಸುವ ವಿಮಾ ಮೊತ್ತದ ಆಧಾರ ಮೇಲೂ ಸಂತ್ರಸ್ತರ ಪರಿಹಾರವು ನಿಗದಿಯಾಗಲಿದ್ದು, ಇದು ವಾಹನ ಮಾಲೀಕರು ವಿಮಾ ಸಂಸ್ಥೆಗೊಂದಿಗೆ ಮಾಡಿಕೊಂಡ ಥರ್ಡ್ ಪಾರ್ಟಿ ಇನ್ಸುರೆನ್ಸ್ ಮೇಲೆ ನಿರ್ಧಾರವಾಗುತ್ತೆ.
ಇದರಲ್ಲಿ ಕೆೇವಲ ಮೃತರ ಕುಟುಂಬಗಳಿಗೆ ಮಾತ್ರವಲ್ಲದೇ ಹಾನಿಗೊಳಗಾದ ವಾಹನಗಳಿಗೂ ಪರಿಹಾರ ಸಿಗಲಿದ್ದು, ಪ್ರತಿಯೊಬ್ಬ ವಾಹನ ಮಾಲೀಕರು ಕೂಡಾ ತಪ್ಪದೇ ಥರ್ಡ್ ಪಾರ್ಟಿ ಇನ್ಸುರೆನ್ಸ್ ಹೊಂದಿರಲೇಬೇಕು. ಆದ್ರೆ ಅದೇನೇ ಇರಲಿ ಸುರಕ್ಷಿತವಾಗಿ ವಾಹನೆ ಚಾಲನೆ ಮಾಡಿದಲ್ಲಿ ನಿಮಗೆ ಅಷ್ಟೇ ಅಲ್ಲದೇ ಇತರಿಗೂ ಒಳ್ಳೆಯದು. ಇಲ್ಲಿ ಭಾರೀ ಪ್ರಮಾಣದ ಪರಿಹಾರ ಮೊತ್ತ ದೊಡ್ಡ ವಿಚಾರವಲ್ಲ. ನೀವು ಚೆನ್ನಾಗಿದಲ್ಲಿ ಪರಿಹಾರದ ಹಣಕ್ಕಿಂತ ಹತ್ತು ಪಟ್ಟು ಗಳಿಕೆ ಮಾಡಬಹುದು.
ಹ್ಯಾಪಿ ಜರ್ನಿ.....