Just In
- 16 min ago Bengaluru: ಇಂದಿನಿಂದ ಹೆಬ್ಬಾಳ ಮೇಲ್ಸೇತುವೆ ಮೇಲೆ ಈ ವಾಹನಗಳ ಸಂಚಾರ ಬಂದ್.. ಪರ್ಯಾಯ ಮಾರ್ಗಗಳಾವುವು?
- 2 hrs ago ಮಹೀಂದ್ರಾ ಬೊಲೆರೋ ನಿಯೋ ಪ್ಲಸ್ 9-ಸೀಟರ್ ಎಸ್ಯುವಿ ಬೆಲೆ, ವಿಶೇಷತೆಗಳು!
- 15 hrs ago ಪೆಟ್ರೋಲ್ ಎಂಜಿನ್ಗಳಲ್ಲಿ ಮಾತ್ರ ಬರಲಿದೆ ರೆನಾಲ್ಟ್ನ ಬ್ರಹ್ಮಾಸ್ತ್ರ ಡಸ್ಟರ್
- 16 hrs ago Nissan Magnite: ನಿಸ್ಸಾನ್ ಮ್ಯಾಗ್ನೆಟ್ನ ಈ ಮಾದರಿಗಳನ್ನು ಹಿಂಪಡೆಯಲು ನಿರ್ಧಾರ.. ಕಾರಣವೇನು?
Don't Miss!
- Finance ಐಪಿಎಲ್ನಲ್ಲಿ ಸಂಚಲನ ಸೃಷ್ಟಿಸುತ್ತಿರುವ ಕಾವ್ಯಾ ಮಾರನ್ ಯಾರು, ಅವರ ಹಿನ್ನೆಲೆ ತಿಳಿಯಿರಿ
- News ಶಾಸಕ ವಸಂತ್ ಆಸ್ನೋಟಿಕರ್ ಶೌಟೌಟ್ ಕೇಸ್: ಆರೋಪಿಗೆ ಜೀವಾವಧಿ ಶಿಕ್ಷೆ ಕಾಯಂ
- Technology OnePlus: ಒನ್ಪ್ಲಸ್ 11R ಸೋಲಾರ್ ರೆಡ್ ವೇರಿಯಂಟ್ ಏಪ್ರಿಲ್ 18 ರಿಂದ ಸೇಲ್! ಆಫರ್ ಏನಿದೆ?
- Sports KKR vs RR: ಐಪಿಎಲ್ನ ಶತಕಗಳ ಪಟ್ಟಿಯಲ್ಲಿ ಕ್ರಿಸ್ ಗೇಲ್ ದಾಖಲೆ ಹಿಂದಿಕ್ಕಿದ ಜೋಸ್ ಬಟ್ಲರ್
- Movies ದ್ವಾರಕೀಶ್ ನಿಧನಕ್ಕೆ ಪಿಎಂ ಮೋದಿ ಸಂತಾಪ.. ಶಿವಣ್ಣ ಅಂತಿಮ ದರ್ಶನ; ಇಲ್ಲಿದೆ 'ಪ್ರಚಂಡ ಕುಳ್ಳ'ನ ಅಂತ್ಯಕ್ರಿಯೆ ಡಿಟೈಲ್ಸ್
- Lifestyle ಹಾಲು ಜೇನಿನಂತಿರುವ ಸಂಬಂಧ ಹಾಳಾಗುತ್ತಿರುವ ಲಕ್ಷಣಗಳಿವು..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಎಲೆಕ್ಟ್ರಿಕ್ ಚಾರ್ಜಿಂಗ್ ಸ್ಟೇಷನ್ ಸ್ಥಾಪಿಸಲು ಯುವ ಉದ್ಯಮಿಗಳಿಗೆ ಸುವರ್ಣಾವಕಾಶ
ದೇಶದಲ್ಲಿ ಅಧಿಕವಾಗುತ್ತಿರುವ ಇಂಧನಗಳ ಬೆಲೆ ಬಗ್ಗೆ ಕೇಂದ್ರ ಸರ್ಕಾರವು ಇನ್ನೂ ಸರಿಯಾದ ನಿರ್ಣಯವನ್ನು ತೆಗೆದುಕೊಳ್ಳದ ಕಾರಣ ಜನಸಾಮಾನ್ಯರು ಗೊಂದಲದಲ್ಲಿದ್ದಾರೆ. ಭವಿಷ್ಯದಲ್ಲಿ ಇಂಧನ ಬೆಲೆಗಳು ರೂ.100 ದಾಟಬಹುದಾದ ಎಲ್ಲಾ ಸಾಧ್ಯತೆಗಳಿದ್ದು, ಎಲೆಕ್ಟ್ರಿಕ್ ವಾಹನಗಳನ್ನು ಹೆಚ್ಚಿಸಲು ಕೇಂದ್ರವು ಮಹತ್ವದ ನಿರ್ಧಾರ ಕೈಗೊಂಡಿದೆ.
ಹೆಚ್ಚುತ್ತಿರುವ ಇಂಧನ ಬೆಲೆಗಳ ಬಗ್ಗೆ ತಲೆ ಕೇಡಿಸಿಕೊಳ್ಳುವುದು ಬಿಡಬೇಕು ಎಂದರೆ ಮೊದಲಿಗೆ ಜನರು ಎಲೆಕ್ಟ್ರಿಕ್ ವಾಹನಗಳನ್ನು ಬಳಸುವುದನ್ನು ಪ್ರಾರಂಭಿಸಬೇಕು. ಇಂಧನದ ಬೆಲೆಯ ಬಗ್ಗೆ ಇರುವ ಚರ್ಚೆಗಳ ಬಗ್ಗೆ ಬಿಟ್ಟರೆ ಕೆಂದ್ರ ಸರ್ಕಾರವು ಎಲೆಕ್ಟ್ರಿಕ್ ವಾಹನಗಳನ್ನು ಅಧಿಕವಾಗಿ ಉತ್ಪಾದನೆಯನ್ನು ಮಾಡಲು ಎಲ್ಲಾ ವಾಹನ ತಯಾರಕ ಸಂಸ್ಥೆಗಳಿಗೆ ಆದೇಶಿಸಲಾಗಿದೆ.
ಈ ನಿಟ್ಟಿನಲ್ಲಿ ಹಲವಾರು ವಾಹನ ತಯಾರಕ ಸಂಸ್ಥೆಗಳು ಎಲೆಕ್ಟ್ರಿಕ್ ವಾಹನಗಳನ್ನು ತಯಾರಿಸಲು ಮುಂದಾಗಿದ್ದು, 2020ರ ನಂತರ ದೇಶದ ರಸ್ತೆಗಳಲ್ಲಿ ಬಹುತೇಕವಾಗಿ ಎಲೆಕ್ಟ್ರಿಕ್ ವಾಹನಗಳೆ ಸಂಚರಿಸುವುದು ಮಾತ್ರ ಕಂಡಿತ. ಆದರೆ ಪ್ರಸ್ಥುತ ಇರುವ ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸಲು ಗ್ರಾಹಕರು ಹಿಂದೇಟು ಹಾಕುತ್ತಿದ್ದಾರೆ.
ಇದಕ್ಕೆ ಕಾರಣವೆಂದರೆ ಹೆಚ್ಚಿನ ಸಾಮರ್ಥ್ಯ ಇರುವ ಮತ್ತು ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಸರಿಯಾದ ವಾಹನಗಳು ನಿರ್ಮಾಣ ಆಗುತ್ತಿಲ್ಲ ಹಾಗು ದೇಶದಲ್ಲಿ ಎಲೆಕ್ಟ್ರಿಕ್ ಸ್ಟೇಷನ್ಗಳ ಕೊರತೆಯಿಂದಾಗಿ ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸಲು ಹಿಂದೇಟು ಹಾಕುತ್ತಿದ್ದಾರೆ.
ಈಗಾಗಲೇ ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ಚಾರ್ಜಿಂಗ್ ಸ್ಟೇಷನ್ಗಳನ್ನು ನಿರ್ಮಾಣ ಮಾಡಲು ಮುಂದಾಗಿದ್ದು, ಇದನ್ನು ನಿರ್ಮಾಣ ಮಾಡಲು ಹೆಚ್ಚಿನ ಮಟ್ಟದಲ್ಲಿ ಖರ್ಚಾಗಲಿದೆ ಎಂದು ಸಹ ಚಿಂತಿಸುತ್ತಿದೆ. ಆದ್ದರಿಂದ ಕೆಂದ್ರ ಸರ್ಕಾರವು ಯುವಉದ್ಯಮಿಗಳಿಗೆ ಒಂದು ಸುವರ್ಣ ಅವಕಾಶವನ್ನು ನೀಡುತ್ತಿದೆ.
ಹೌದು, ಕೇಂದ್ರ ಸರ್ಕಾರವು ಇಂಧನ ಆಧಾರಿತ ವಾಹನಗಳನ್ನು ಕಡಿಮೆ ಮಾಡಲು ಮತ್ತು ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಹೆಚ್ಚಿಸಲು, ಜನರು ತಮ್ಮದೇ ಸ್ಥಳದಲ್ಲಿ ಯಾವುದೇ ಲೈಸನ್ಸ್ ಇಲ್ಲದೆಯೆ ಎಲೆಕ್ಟ್ರಿಕ್ ಚಾರ್ಜಿಂಗ್ ಸ್ಟೇಷನ್ಗಳನ್ನು ತೆರೆಯಬಹುದಾಗಿದೆ.
ಪ್ರಸ್ಥುತ ಈ ಯೋಜನೆಯು ರಾಷ್ಟ್ರದ ರಾಜಧಾನಿಯಾದ ದೆಹಲಿಯಲ್ಲಿ ಪರವಾನಗಿಗಾಗಿ ಅರ್ಜಿ ಹಾಕದೆ ಜನರು ಶೀಘ್ರದಲ್ಲೇ ಸಾರ್ವಜನಿಕ ವಿದ್ಯುತ್ ವಾಹನ ಚಾರ್ಜಿಂಗ್ ಕೇಂದ್ರಗಳನ್ನು ತೆರೆಯಲು ಸಾಧ್ಯ ಮಾಡಿಕೊಡಲಾಗುತ್ತಿದ್ದು, ಆದಾಗ್ಯೂ ಇ.ವಿ. ಮಾಲೀಕರಿಂದ ತೆರಿಗೆ ಸಂಗ್ರಹಿಸಬಹುದು.
ಸಾರ್ವಜನಿಕ ಚಾರ್ಜಿಂಗ್ ಕೇಂದ್ರಗಳನ್ನು ತೆರೆಯಲು ಯಾವುದೇ ಅರ್ಹತಾ ಮಾನದಂಡವನ್ನು ಸರ್ಕಾರವು ಸ್ಥಾಪಿಸಿಲ್ಲ ಆದರೆ ಇವುಗಳನ್ನು ಮೇಲ್ವಿಚಾರಣೆ ಮಾಡಲಾಗುವುದು ಮತ್ತು ವಿದ್ಯುತ್ ಇಲಾಖೆಯು ನಿರ್ದಿಷ್ಟಪಡಿಸಿದ ವಿಶೇಷಣಗಳು ಮತ್ತು ಕಾರ್ಯಕ್ಷಮತೆಯ ಮಾನದಂಡಗಳನ್ನು ಪೂರೈಸಬೇಕು ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮಹೀಂದ್ರಾ ಆಂಡ್ ಮಹೀಂದ್ರಾ ಮತ್ತು ಟಾಟಾ ಮೋಟಾರ್ಸ್ ಮತ್ತು ಕ್ಯಾಬ್-ಹೀಲಿಂಗ್ ಕಂಪೆನಿಗಳಾದ ಓಲಾ ಮತ್ತು ಉಬರ್ ಸೇರಿದಂತೆ ಹಲವು ಕಂಪನಿಗಳು ಮತ್ತು ಸ್ಟಾರ್ಟ್-ಅಪ್ ವಾಹನ ತಯಾರಕ ಸಂಸ್ಥೆಗಳು ದೇಶದಲ್ಲಿ ವಿದ್ಯುತ್ ವಾಹನಕ್ಕಾಗಿ ಪ್ರತ್ಯೇಕವಾಗಿ ಚಾರ್ಜಿಂಗ್ ಮೂಲಭೂತ ಸೌಕರ್ಯಗಳನ್ನು ಸ್ಥಾಪಿಸುವಲ್ಲಿ ಆಸಕ್ತಿ ತೋರಿಸುತ್ತಿದ್ದಾರೆ.
"ಲೈಸೆನ್ಸ್ ಇಲ್ಲದೆಯೆ ಸಾರ್ವಜನಿಕ ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸುವುದು ಮತ್ತು ಯಾವುದೇ ವ್ಯಕ್ತಿಯು ಉಚಿತ ಇಲಾಖೆ (ಅವುಗಳನ್ನು ಸ್ಥಾಪಿಸಲು) ಕೇಂದ್ರಗಳು ಇಲಾಖೆಯ ಮಾನದಂಡಗಳನ್ನು ಪೂರೈಸುವಂತಿರಬೇಕು. ವ್ಯಕ್ತಿಯು ಎಲೆಕ್ಟ್ರಿಕ್ ಸ್ಟೇಷನ್ ಅನ್ನು ಸ್ಥಾಪಿಸಲು ಅರ್ಜಿ ಸಲ್ಲಿಸಬೇಕು ಮತ್ತು ನಂತರ ವಿತರಣಾ ಕಂಪೆನಿ ಸಂಪರ್ಕವನ್ನು ಒದಗಿಸಲು ಬದ್ಧವಾಗಿರುತ್ತದೆ.
ಸರಕಾರಿ ವಿದ್ಯುತ್ ನಿಯಂತ್ರಕ ಆಯೋಗಗಳು (ಎಸ್ಇಆರ್ಸಿಗಳು) ವಿತರಣಾ ಕಂಪೆನಿಗಳಿಂದ ವಿದ್ಯುತ್ ಸರಬರಾಜಿಗೆ ಚಾರ್ಜಿಂಗ್ ಕೇಂದ್ರಗಳಿಗೆ ಸರಬರಾಜಿನ ಸರಾಸರಿ ವೆಚ್ಚಕ್ಕಿಂತ 15% ನಷ್ಟು ಸೀಲಿಂಗ್ನಲ್ಲಿ ಸುಂಕವನ್ನು ನಿಗದಿಪಡಿಸುತ್ತದೆ. ವಿದ್ಯುತ್ ವಾಹನ ಮಾಲೀಕರಿಂದ ಕೇಂದ್ರಗಳನ್ನು ಚಾರ್ಜ್ ಮಾಡುವ ಸುಂಕವನ್ನು ರಾಜ್ಯ ಸರಕಾರವು ಮುಂದೂಡಲಿದೆ ಎಂದು ಅಧಿಕಾರುಗಳು ಹೇಳಿಕೊಂಡಿದ್ದಾರೆ.
ಮತ್ತು ಈ ವರ್ಷದ ಆರಂಭದಲ್ಲಿ ವಿದ್ಯುತ್ ಇಲಾಖೆಯು ಎಲೆಕ್ಟ್ರಿಕ್ ವಾಹನಗಳಿಗೆ ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸಲು 2003ರ ವಿದ್ಯುತ್ ಆಕ್ಟ್ ಅಡಿಯಲ್ಲಿ ಒಂದು ಪ್ರತ್ಯೇಕ ಪರವಾನಗಿ ಅಗತ್ಯವಿರುವುದಿಲ್ಲ ಎಂದು ಸ್ಪಷ್ಟೀಕರಣ ನೀಡಿದೆ.
Source: ETAuto